Daali Dhananjay: ಡಾಲಿ ಧನಂಜಯ್ ಅವರನ್ನು ಲಿಡ್ಕರ್ ಬ್ರ್ಯಾಂಡ್ ರಾಯಭಾರಿಯಾಗಿ ಘೋಷಿಸಿದ ಸಿಎಂ ಸಿದ್ದರಾಮಯ್ಯ

|

Updated on: Dec 06, 2023 | 12:31 PM

ನಟನಾಗಿ ಮಾತ್ರವಲ್ಲದೇ ನಿರ್ಮಾಪಕನಾಗಿಯೂ ಡಾಲಿ ಧನಂಜಯ್​ ಅವರು ಬ್ಯುಸಿ ಆಗಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಅವರು ಕೊಡುಗೆ ನೀಡುತ್ತಿದ್ದಾರೆ. ಇದರ ಜೊತೆಗೆ ಅವರಿಗೆ ಹೊಸ ಜವಾಬ್ದಾರಿ ಸೇರ್ಪಡೆ ಆಗಿದೆ. ಲಿಡ್ಕರ್ ಬ್ರ್ಯಾಂಡ್​ಗೆ ಡಾಲಿ ಧನಂಜಯ್​ ಅವರು ರಾಯಭಾರಿಯಾಗಿ ನೇಮಕಗೊಂಡಿದ್ದಾರೆ.

1 / 7
ನಟ ಡಾಲಿ ಧನಂಜಯ್​ ಅವರು ಸಾಕಷ್ಟು ಖ್ಯಾತಿ ಗಳಿಸಿದ್ದಾರೆ. ದಿನದಿಂದ ದಿನಕ್ಕೆ ಅವರ ಪ್ರಸಿದ್ಧಿ ಹೆಚ್ಚಾಗುತ್ತಿದೆ. ಕೆಲವು ಉತ್ಪನ್ನಗಳಿಗೆ ಅವರು ಪ್ರಚಾರ ರಾಯಭಾರಿ ಆಗಿದ್ದಾರೆ. ಸರ್ಕಾರದ ಲಿಡ್ಕರ್​ ಬ್ರ್ಯಾಂಡ್​ಗೂ ಅವರು ರಾಯಭಾರಿ ಆಗಿರುವುದು ವಿಶೇಷ. ಇದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ.

ನಟ ಡಾಲಿ ಧನಂಜಯ್​ ಅವರು ಸಾಕಷ್ಟು ಖ್ಯಾತಿ ಗಳಿಸಿದ್ದಾರೆ. ದಿನದಿಂದ ದಿನಕ್ಕೆ ಅವರ ಪ್ರಸಿದ್ಧಿ ಹೆಚ್ಚಾಗುತ್ತಿದೆ. ಕೆಲವು ಉತ್ಪನ್ನಗಳಿಗೆ ಅವರು ಪ್ರಚಾರ ರಾಯಭಾರಿ ಆಗಿದ್ದಾರೆ. ಸರ್ಕಾರದ ಲಿಡ್ಕರ್​ ಬ್ರ್ಯಾಂಡ್​ಗೂ ಅವರು ರಾಯಭಾರಿ ಆಗಿರುವುದು ವಿಶೇಷ. ಇದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ.

2 / 7
ವಿಧಾನ ಸೌಧದ ಮುಂಭಾಗದಲ್ಲಿ ಇಂದು (ಡಿಸೆಂಬರ್​ 6) ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನವನ್ನು ಆಚರಿಸಲಾಗಿದೆ. ಇದರಲ್ಲಿ ನಟ ಡಾಲಿ ಧನಂಜಯ್​ ಕೂಡ ಭಾಗಿ ಆಗಿದ್ದಾರೆ. ಈ ವೇಳೆ ಲಿಡ್ಕರ್​ ಬ್ರ್ಯಾಂಡ್​ಗೆ ಧನಂಜಯ್​ ಅವರನ್ನು ರಾಯಭಾರಿ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.

ವಿಧಾನ ಸೌಧದ ಮುಂಭಾಗದಲ್ಲಿ ಇಂದು (ಡಿಸೆಂಬರ್​ 6) ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನವನ್ನು ಆಚರಿಸಲಾಗಿದೆ. ಇದರಲ್ಲಿ ನಟ ಡಾಲಿ ಧನಂಜಯ್​ ಕೂಡ ಭಾಗಿ ಆಗಿದ್ದಾರೆ. ಈ ವೇಳೆ ಲಿಡ್ಕರ್​ ಬ್ರ್ಯಾಂಡ್​ಗೆ ಧನಂಜಯ್​ ಅವರನ್ನು ರಾಯಭಾರಿ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.

3 / 7
ಸಂವಿಧಾನ ಶಿಲ್ಪಿ ಡಾ. ಬಿ.ಆರ್​. ಅಂಬೇಡ್ಕರ್​ ಅವರ ಪ್ರತಿಮೆಗೆ ಡಾಲಿ ಧನಂಜಯ್​ ಅವರು ಪುಷ್ಪ ನಮನ ಸಲ್ಲಿಸಿದ್ದಾರೆ. ಈ ವೇಳೆ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಮಾಜಿ ಸಚಿವ ಹೆಚ್. ಆಂಜನೇಯ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.

ಸಂವಿಧಾನ ಶಿಲ್ಪಿ ಡಾ. ಬಿ.ಆರ್​. ಅಂಬೇಡ್ಕರ್​ ಅವರ ಪ್ರತಿಮೆಗೆ ಡಾಲಿ ಧನಂಜಯ್​ ಅವರು ಪುಷ್ಪ ನಮನ ಸಲ್ಲಿಸಿದ್ದಾರೆ. ಈ ವೇಳೆ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಮಾಜಿ ಸಚಿವ ಹೆಚ್. ಆಂಜನೇಯ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.

4 / 7
ಬುಧವಾರ (ಡಿ.6) ಬೆಳಗ್ಗೆ ಈ ಕಾರ್ಯಕ್ರಮ ನಡೆಯಿತು. ಲಿಡ್ಕರ್​ ಉತ್ಪನ್ನಗಳಿಗೆ ರಾಯಭಾರಿ ಆದ ಧನಂಜಯ್​ ಅವರಿಗೆ ಎಲ್ಲರೂ ಅಭಿನಂದನೆ ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರ ನೀಡಿರುವ ಈ ಜವಾಬ್ದಾರಿಯನ್ನು  ಧನಂಜಯ್​ ಅವರು ಖುಷಿಯಿಂದ ಸ್ವೀಕರಿಸಿದ್ದಾರೆ.

ಬುಧವಾರ (ಡಿ.6) ಬೆಳಗ್ಗೆ ಈ ಕಾರ್ಯಕ್ರಮ ನಡೆಯಿತು. ಲಿಡ್ಕರ್​ ಉತ್ಪನ್ನಗಳಿಗೆ ರಾಯಭಾರಿ ಆದ ಧನಂಜಯ್​ ಅವರಿಗೆ ಎಲ್ಲರೂ ಅಭಿನಂದನೆ ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರ ನೀಡಿರುವ ಈ ಜವಾಬ್ದಾರಿಯನ್ನು ಧನಂಜಯ್​ ಅವರು ಖುಷಿಯಿಂದ ಸ್ವೀಕರಿಸಿದ್ದಾರೆ.

5 / 7
‘ಕಾಯಕ ವರ್ಗದ ಕುಶಲಕರ್ಮಿಗಳ ಅದ್ಭುತ ಕಲಾಕೃತಿಗಳನ್ನು ರಾಜ್ಯದ ಜನರಿಗೆ ವ್ಯಾಪಕವಾಗಿ ತಲುಪಿಸುವ #Lidkar ಸಂಸ್ಥೆಯ ಪ್ರಚಾರ ರಾಯಭಾರಿ ಆಗಲು ನನಗೆ ತುಂಬಾ ಹೆಮ್ಮೆಯಿದೆ’ ಎಂದು ಡಾಲಿ ಧನಂಜಯ್​ ಅವರು ಸಂತಸ ಹಂಚಿಕೊಂಡಿದ್ದಾರೆ.

‘ಕಾಯಕ ವರ್ಗದ ಕುಶಲಕರ್ಮಿಗಳ ಅದ್ಭುತ ಕಲಾಕೃತಿಗಳನ್ನು ರಾಜ್ಯದ ಜನರಿಗೆ ವ್ಯಾಪಕವಾಗಿ ತಲುಪಿಸುವ #Lidkar ಸಂಸ್ಥೆಯ ಪ್ರಚಾರ ರಾಯಭಾರಿ ಆಗಲು ನನಗೆ ತುಂಬಾ ಹೆಮ್ಮೆಯಿದೆ’ ಎಂದು ಡಾಲಿ ಧನಂಜಯ್​ ಅವರು ಸಂತಸ ಹಂಚಿಕೊಂಡಿದ್ದಾರೆ.

6 / 7
‘ಈ ತರಹದ ಒಳ್ಳೆಯ ಕೆಲಸಕ್ಕೆ ನನ್ನನ್ನು ಭಾಗಿಯಾಗಿಸಿದ ವ್ಯವಸ್ಥಾಪಕ ನಿರ್ದೇಶಕರಾದ ವಸುಂಧರ ಅವರಿಗೂ, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೂ, ಸಮಾಜ ಕಲ್ಯಾಣ ಸಚಿವರಾದ ಹೆಚ್.ಸಿ. ಮಹದೇವಪ್ಪನವರಿಗೂ, ಗೆಳೆಯರಾದ ಕಿರಣ್ ಹಾಗೂ ಸೂರ್ಯ ಅವರಿಗೂ ಧನ್ಯವಾದಗಳು’ ಎಂದು ಡಾಲಿ ಪೋಸ್ಟ್​ ಮಾಡಿದ್ದಾರೆ.

‘ಈ ತರಹದ ಒಳ್ಳೆಯ ಕೆಲಸಕ್ಕೆ ನನ್ನನ್ನು ಭಾಗಿಯಾಗಿಸಿದ ವ್ಯವಸ್ಥಾಪಕ ನಿರ್ದೇಶಕರಾದ ವಸುಂಧರ ಅವರಿಗೂ, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೂ, ಸಮಾಜ ಕಲ್ಯಾಣ ಸಚಿವರಾದ ಹೆಚ್.ಸಿ. ಮಹದೇವಪ್ಪನವರಿಗೂ, ಗೆಳೆಯರಾದ ಕಿರಣ್ ಹಾಗೂ ಸೂರ್ಯ ಅವರಿಗೂ ಧನ್ಯವಾದಗಳು’ ಎಂದು ಡಾಲಿ ಪೋಸ್ಟ್​ ಮಾಡಿದ್ದಾರೆ.

7 / 7
ನಟನಾಗಿ ಮಾತ್ರವಲ್ಲದೇ ನಿರ್ಮಾಪಕನಾಗಿಯೂ ಡಾಲಿ ಧನಂಜಯ್​ ಅವರು ಬ್ಯುಸಿ ಆಗಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಅವರು ಕೊಡುಗೆ ನೀಡುತ್ತಿದ್ದಾರೆ. ಅವರು ನಿರ್ಮಾಣ ಮಾಡಿದ ‘ಟಗರು ಪಲ್ಯ’ ಸಿನಿಮಾ ಈ ವರ್ಷ ಬಿಡುಗಡೆ ಆಗಿ ಜನಮೆಚ್ಚುಗೆ ಗಳಿಸಿತು. ‘ಪುಷ್ಪ 2’ ಸಿನಿಮಾದಲ್ಲೂ ಅವರು ನಟಿಸುತ್ತಿದ್ದಾರೆ.

ನಟನಾಗಿ ಮಾತ್ರವಲ್ಲದೇ ನಿರ್ಮಾಪಕನಾಗಿಯೂ ಡಾಲಿ ಧನಂಜಯ್​ ಅವರು ಬ್ಯುಸಿ ಆಗಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಅವರು ಕೊಡುಗೆ ನೀಡುತ್ತಿದ್ದಾರೆ. ಅವರು ನಿರ್ಮಾಣ ಮಾಡಿದ ‘ಟಗರು ಪಲ್ಯ’ ಸಿನಿಮಾ ಈ ವರ್ಷ ಬಿಡುಗಡೆ ಆಗಿ ಜನಮೆಚ್ಚುಗೆ ಗಳಿಸಿತು. ‘ಪುಷ್ಪ 2’ ಸಿನಿಮಾದಲ್ಲೂ ಅವರು ನಟಿಸುತ್ತಿದ್ದಾರೆ.