Daali Dhananjay: ಡಾಲಿ ಧನಂಜಯ್ ಅವರನ್ನು ಲಿಡ್ಕರ್ ಬ್ರ್ಯಾಂಡ್ ರಾಯಭಾರಿಯಾಗಿ ಘೋಷಿಸಿದ ಸಿಎಂ ಸಿದ್ದರಾಮಯ್ಯ

Updated on: Dec 06, 2023 | 12:31 PM

ನಟನಾಗಿ ಮಾತ್ರವಲ್ಲದೇ ನಿರ್ಮಾಪಕನಾಗಿಯೂ ಡಾಲಿ ಧನಂಜಯ್​ ಅವರು ಬ್ಯುಸಿ ಆಗಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಅವರು ಕೊಡುಗೆ ನೀಡುತ್ತಿದ್ದಾರೆ. ಇದರ ಜೊತೆಗೆ ಅವರಿಗೆ ಹೊಸ ಜವಾಬ್ದಾರಿ ಸೇರ್ಪಡೆ ಆಗಿದೆ. ಲಿಡ್ಕರ್ ಬ್ರ್ಯಾಂಡ್​ಗೆ ಡಾಲಿ ಧನಂಜಯ್​ ಅವರು ರಾಯಭಾರಿಯಾಗಿ ನೇಮಕಗೊಂಡಿದ್ದಾರೆ.

1 / 7
ನಟ ಡಾಲಿ ಧನಂಜಯ್​ ಅವರು ಸಾಕಷ್ಟು ಖ್ಯಾತಿ ಗಳಿಸಿದ್ದಾರೆ. ದಿನದಿಂದ ದಿನಕ್ಕೆ ಅವರ ಪ್ರಸಿದ್ಧಿ ಹೆಚ್ಚಾಗುತ್ತಿದೆ. ಕೆಲವು ಉತ್ಪನ್ನಗಳಿಗೆ ಅವರು ಪ್ರಚಾರ ರಾಯಭಾರಿ ಆಗಿದ್ದಾರೆ. ಸರ್ಕಾರದ ಲಿಡ್ಕರ್​ ಬ್ರ್ಯಾಂಡ್​ಗೂ ಅವರು ರಾಯಭಾರಿ ಆಗಿರುವುದು ವಿಶೇಷ. ಇದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ.

ನಟ ಡಾಲಿ ಧನಂಜಯ್​ ಅವರು ಸಾಕಷ್ಟು ಖ್ಯಾತಿ ಗಳಿಸಿದ್ದಾರೆ. ದಿನದಿಂದ ದಿನಕ್ಕೆ ಅವರ ಪ್ರಸಿದ್ಧಿ ಹೆಚ್ಚಾಗುತ್ತಿದೆ. ಕೆಲವು ಉತ್ಪನ್ನಗಳಿಗೆ ಅವರು ಪ್ರಚಾರ ರಾಯಭಾರಿ ಆಗಿದ್ದಾರೆ. ಸರ್ಕಾರದ ಲಿಡ್ಕರ್​ ಬ್ರ್ಯಾಂಡ್​ಗೂ ಅವರು ರಾಯಭಾರಿ ಆಗಿರುವುದು ವಿಶೇಷ. ಇದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ.

2 / 7
ವಿಧಾನ ಸೌಧದ ಮುಂಭಾಗದಲ್ಲಿ ಇಂದು (ಡಿಸೆಂಬರ್​ 6) ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನವನ್ನು ಆಚರಿಸಲಾಗಿದೆ. ಇದರಲ್ಲಿ ನಟ ಡಾಲಿ ಧನಂಜಯ್​ ಕೂಡ ಭಾಗಿ ಆಗಿದ್ದಾರೆ. ಈ ವೇಳೆ ಲಿಡ್ಕರ್​ ಬ್ರ್ಯಾಂಡ್​ಗೆ ಧನಂಜಯ್​ ಅವರನ್ನು ರಾಯಭಾರಿ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.

ವಿಧಾನ ಸೌಧದ ಮುಂಭಾಗದಲ್ಲಿ ಇಂದು (ಡಿಸೆಂಬರ್​ 6) ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನವನ್ನು ಆಚರಿಸಲಾಗಿದೆ. ಇದರಲ್ಲಿ ನಟ ಡಾಲಿ ಧನಂಜಯ್​ ಕೂಡ ಭಾಗಿ ಆಗಿದ್ದಾರೆ. ಈ ವೇಳೆ ಲಿಡ್ಕರ್​ ಬ್ರ್ಯಾಂಡ್​ಗೆ ಧನಂಜಯ್​ ಅವರನ್ನು ರಾಯಭಾರಿ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.

3 / 7
ಸಂವಿಧಾನ ಶಿಲ್ಪಿ ಡಾ. ಬಿ.ಆರ್​. ಅಂಬೇಡ್ಕರ್​ ಅವರ ಪ್ರತಿಮೆಗೆ ಡಾಲಿ ಧನಂಜಯ್​ ಅವರು ಪುಷ್ಪ ನಮನ ಸಲ್ಲಿಸಿದ್ದಾರೆ. ಈ ವೇಳೆ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಮಾಜಿ ಸಚಿವ ಹೆಚ್. ಆಂಜನೇಯ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.

ಸಂವಿಧಾನ ಶಿಲ್ಪಿ ಡಾ. ಬಿ.ಆರ್​. ಅಂಬೇಡ್ಕರ್​ ಅವರ ಪ್ರತಿಮೆಗೆ ಡಾಲಿ ಧನಂಜಯ್​ ಅವರು ಪುಷ್ಪ ನಮನ ಸಲ್ಲಿಸಿದ್ದಾರೆ. ಈ ವೇಳೆ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಮಾಜಿ ಸಚಿವ ಹೆಚ್. ಆಂಜನೇಯ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.

4 / 7
ಬುಧವಾರ (ಡಿ.6) ಬೆಳಗ್ಗೆ ಈ ಕಾರ್ಯಕ್ರಮ ನಡೆಯಿತು. ಲಿಡ್ಕರ್​ ಉತ್ಪನ್ನಗಳಿಗೆ ರಾಯಭಾರಿ ಆದ ಧನಂಜಯ್​ ಅವರಿಗೆ ಎಲ್ಲರೂ ಅಭಿನಂದನೆ ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರ ನೀಡಿರುವ ಈ ಜವಾಬ್ದಾರಿಯನ್ನು  ಧನಂಜಯ್​ ಅವರು ಖುಷಿಯಿಂದ ಸ್ವೀಕರಿಸಿದ್ದಾರೆ.

ಬುಧವಾರ (ಡಿ.6) ಬೆಳಗ್ಗೆ ಈ ಕಾರ್ಯಕ್ರಮ ನಡೆಯಿತು. ಲಿಡ್ಕರ್​ ಉತ್ಪನ್ನಗಳಿಗೆ ರಾಯಭಾರಿ ಆದ ಧನಂಜಯ್​ ಅವರಿಗೆ ಎಲ್ಲರೂ ಅಭಿನಂದನೆ ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರ ನೀಡಿರುವ ಈ ಜವಾಬ್ದಾರಿಯನ್ನು ಧನಂಜಯ್​ ಅವರು ಖುಷಿಯಿಂದ ಸ್ವೀಕರಿಸಿದ್ದಾರೆ.

5 / 7
‘ಕಾಯಕ ವರ್ಗದ ಕುಶಲಕರ್ಮಿಗಳ ಅದ್ಭುತ ಕಲಾಕೃತಿಗಳನ್ನು ರಾಜ್ಯದ ಜನರಿಗೆ ವ್ಯಾಪಕವಾಗಿ ತಲುಪಿಸುವ #Lidkar ಸಂಸ್ಥೆಯ ಪ್ರಚಾರ ರಾಯಭಾರಿ ಆಗಲು ನನಗೆ ತುಂಬಾ ಹೆಮ್ಮೆಯಿದೆ’ ಎಂದು ಡಾಲಿ ಧನಂಜಯ್​ ಅವರು ಸಂತಸ ಹಂಚಿಕೊಂಡಿದ್ದಾರೆ.

‘ಕಾಯಕ ವರ್ಗದ ಕುಶಲಕರ್ಮಿಗಳ ಅದ್ಭುತ ಕಲಾಕೃತಿಗಳನ್ನು ರಾಜ್ಯದ ಜನರಿಗೆ ವ್ಯಾಪಕವಾಗಿ ತಲುಪಿಸುವ #Lidkar ಸಂಸ್ಥೆಯ ಪ್ರಚಾರ ರಾಯಭಾರಿ ಆಗಲು ನನಗೆ ತುಂಬಾ ಹೆಮ್ಮೆಯಿದೆ’ ಎಂದು ಡಾಲಿ ಧನಂಜಯ್​ ಅವರು ಸಂತಸ ಹಂಚಿಕೊಂಡಿದ್ದಾರೆ.

6 / 7
‘ಈ ತರಹದ ಒಳ್ಳೆಯ ಕೆಲಸಕ್ಕೆ ನನ್ನನ್ನು ಭಾಗಿಯಾಗಿಸಿದ ವ್ಯವಸ್ಥಾಪಕ ನಿರ್ದೇಶಕರಾದ ವಸುಂಧರ ಅವರಿಗೂ, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೂ, ಸಮಾಜ ಕಲ್ಯಾಣ ಸಚಿವರಾದ ಹೆಚ್.ಸಿ. ಮಹದೇವಪ್ಪನವರಿಗೂ, ಗೆಳೆಯರಾದ ಕಿರಣ್ ಹಾಗೂ ಸೂರ್ಯ ಅವರಿಗೂ ಧನ್ಯವಾದಗಳು’ ಎಂದು ಡಾಲಿ ಪೋಸ್ಟ್​ ಮಾಡಿದ್ದಾರೆ.

‘ಈ ತರಹದ ಒಳ್ಳೆಯ ಕೆಲಸಕ್ಕೆ ನನ್ನನ್ನು ಭಾಗಿಯಾಗಿಸಿದ ವ್ಯವಸ್ಥಾಪಕ ನಿರ್ದೇಶಕರಾದ ವಸುಂಧರ ಅವರಿಗೂ, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೂ, ಸಮಾಜ ಕಲ್ಯಾಣ ಸಚಿವರಾದ ಹೆಚ್.ಸಿ. ಮಹದೇವಪ್ಪನವರಿಗೂ, ಗೆಳೆಯರಾದ ಕಿರಣ್ ಹಾಗೂ ಸೂರ್ಯ ಅವರಿಗೂ ಧನ್ಯವಾದಗಳು’ ಎಂದು ಡಾಲಿ ಪೋಸ್ಟ್​ ಮಾಡಿದ್ದಾರೆ.

7 / 7
ನಟನಾಗಿ ಮಾತ್ರವಲ್ಲದೇ ನಿರ್ಮಾಪಕನಾಗಿಯೂ ಡಾಲಿ ಧನಂಜಯ್​ ಅವರು ಬ್ಯುಸಿ ಆಗಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಅವರು ಕೊಡುಗೆ ನೀಡುತ್ತಿದ್ದಾರೆ. ಅವರು ನಿರ್ಮಾಣ ಮಾಡಿದ ‘ಟಗರು ಪಲ್ಯ’ ಸಿನಿಮಾ ಈ ವರ್ಷ ಬಿಡುಗಡೆ ಆಗಿ ಜನಮೆಚ್ಚುಗೆ ಗಳಿಸಿತು. ‘ಪುಷ್ಪ 2’ ಸಿನಿಮಾದಲ್ಲೂ ಅವರು ನಟಿಸುತ್ತಿದ್ದಾರೆ.

ನಟನಾಗಿ ಮಾತ್ರವಲ್ಲದೇ ನಿರ್ಮಾಪಕನಾಗಿಯೂ ಡಾಲಿ ಧನಂಜಯ್​ ಅವರು ಬ್ಯುಸಿ ಆಗಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಅವರು ಕೊಡುಗೆ ನೀಡುತ್ತಿದ್ದಾರೆ. ಅವರು ನಿರ್ಮಾಣ ಮಾಡಿದ ‘ಟಗರು ಪಲ್ಯ’ ಸಿನಿಮಾ ಈ ವರ್ಷ ಬಿಡುಗಡೆ ಆಗಿ ಜನಮೆಚ್ಚುಗೆ ಗಳಿಸಿತು. ‘ಪುಷ್ಪ 2’ ಸಿನಿಮಾದಲ್ಲೂ ಅವರು ನಟಿಸುತ್ತಿದ್ದಾರೆ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us