
ಇತ್ತೀಚೆಗೆ ಹಸೆಮಣೆ ಏರಿರುವ ನಟ ದುಷ್ಯಂತ್ ಮತ್ತು ರಚನಾ ಅವರು ಬೆಂಗಳೂರಿನಲ್ಲಿ ಆರತಕ್ಷತೆ ಕಾರ್ಯಕ್ರಮ ಮಾಡಿದ್ದಾರೆ. ಸಿನಿಮಾ, ರಾಜಕೀಯ ಮುಂತಾದ ಕ್ಷೇತ್ರಗಳ ಅನೇಕ ಗಣ್ಯರು ಆಗಮಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯದ ಕೆಲಸಗಳ ನಡುವೆ ಬಿಡುವು ಮಾಡಿಕೊಂಡು ಆರತಕ್ಷತೆ ಕಾರ್ಯಕ್ರಮಕ್ಕೆ ಬಂದಿದ್ದಾರೆ. ಅವರ ಆಗಮನದಿಂದ ದುಷ್ಯಂತ್ ಮತ್ತು ರಚನಾ ಖುಷಿಯಾಗಿದ್ದಾರೆ.

ಬಹಳ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಮಾತ್ರವಲ್ಲದೇ ಡಿಕೆ ಸುರೇಶ್, ಆರ್. ಅಶೋಕ ಮುಂತಾದ ಗಣ್ಯರು ಆರಕ್ಷತೆಗೆ ಬಂದು ಶುಭ ಕೋರಿದ್ದಾರೆ.

ದುಷ್ಯಂತ್ ಅವರು ಗುಬ್ಬಿ ಕ್ಷೇತ್ರದ ಶಾಸಕ ಎಸ್.ಆರ್. ಶ್ರೀನಿವಾಸ್ ಅವರ ಪುತ್ರ. ಹಾಗಾಗಿ ರಾಜಕೀಯ ಕ್ಷೇತ್ರದ ಹಲವರು ಈ ಮದುವೆಗೆ ಹಾಜರಿ ಹಾಕಿದ್ದಾರೆ. ಫೋಟೋಗಳು ವೈರಲ್ ಆಗಿವೆ.

‘ಗತ ವೈಭವ’ ಸಿನಿಮಾದ ಮೂಲಕ ದುಷ್ಯಂತ್ ಅವರು ಗುರುತಿಸಿಕೊಂಡಿದ್ದಾರೆ. ಸಿಂಪಲ್ ಸುನಿ ನಿರ್ದೇಶನದ ಆ ಸಿನಿಮಾ 2025ರಲ್ಲಿ ಬಿಡುಗಡೆ ಆಗಿತ್ತು. ಬಳಿಕ ಒಟಿಟಿಯಲ್ಲೂ ಮೆಚ್ಚುಗೆ ಪಡೆಯಿತು.