Lalbagh Flower Show: ಲಾಲ್ ಬಾಗ್ ಪ್ಲವರ್ ಶೋಗೆ ಸಿಎಂ ಸಿದ್ದರಾಮಯ್ಯ ಚಾಲನೆ, ಅಂಬೇಡ್ಕರ್ ಮೊಮ್ಮಗ ಭಾಗಿ

ಸಸ್ಯಕಾಶಿ ಲಾಲ್ ಬಾಗ್ ನಲ್ಲಿ‌ ಇಂದಿನಿಂದ ಫ್ಲವರ್ ಶೋ ಆರಂಭವಾಗುತ್ತಿದ್ದು, ಆಗಸ್ಟ್​ 19ರ ವರೆಗೆ ಫ್ಲವರ್ ಶೋ ಇರಲಿದೆ. 216ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ತೋಟಗಾರಿಕೆ ಇಲಾಖೆ ವತಿಯಿಂದ ಈ ಬಾರಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ವಿಷಯಾಧಾರಿತವಾಗಿ ಫ್ಲವರ್​ಶೋ ಪ್ರದರ್ಶನ ಆಯೋಜನೆ ಮಾಡಲಾಗಿದೆ.

| Updated By: ಆಯೇಷಾ ಬಾನು

Updated on: Aug 08, 2024 | 1:15 PM

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಇಂದು ಲಾಲ್​ಬಾಗ್​ನ ಗಾಜಿನಮನೆಯಲ್ಲಿ ಫ್ಲವರ್​ಶೋಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಮೊಮ್ಮಗ ಯಶವಂತ್ ಅಂಬೇಡ್ಕರ್ ಅವರು ಕೂಡ ಭಾಗಿಯಾಗಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಇಂದು ಲಾಲ್​ಬಾಗ್​ನ ಗಾಜಿನಮನೆಯಲ್ಲಿ ಫ್ಲವರ್​ಶೋಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಮೊಮ್ಮಗ ಯಶವಂತ್ ಅಂಬೇಡ್ಕರ್ ಅವರು ಕೂಡ ಭಾಗಿಯಾಗಿದ್ದಾರೆ.

1 / 7
ಈ ವರ್ಷ ಸಂವಿಧಾನ ಶಿಲ್ಪಿ ಡಾ ಬಿ.ಆರ್. ಅಂಬೇಡ್ಕರ್ ಅವರ ಕಾನ್ಸೆಪ್ಟ್ ನಲ್ಲಿ ಫ್ಲವರ್ ಶೋ ಮೂಡಿಬಂದಿದ್ದು, ಆಗಸ್ಟ್ 19ರವರೆಗೂ ನಲ್ಲಿ ಫ್ಲವರ್ ಶೋ ಇರಲಿದೆ. ಸಂಸತ್, ಭೀಮ ಸ್ಮರಾಕ, ಅಂಬೇಡ್ಕರ್ ಅವರು ಹುಟ್ಟಿದ ಜಾಗ, ಅವರು ಹುಟ್ಟಿ ಬೆಳೆದು ಬಂದಂತಹ ಹಾದಿ ಹೇಗಿತ್ತು ಎನ್ನುವುದು ಪ್ಲವರ್ ಶೋ ನ ಪ್ರಮುಖ ಆಕರ್ಷಣೆಗಳಾಗಿವೆ.‌

ಈ ವರ್ಷ ಸಂವಿಧಾನ ಶಿಲ್ಪಿ ಡಾ ಬಿ.ಆರ್. ಅಂಬೇಡ್ಕರ್ ಅವರ ಕಾನ್ಸೆಪ್ಟ್ ನಲ್ಲಿ ಫ್ಲವರ್ ಶೋ ಮೂಡಿಬಂದಿದ್ದು, ಆಗಸ್ಟ್ 19ರವರೆಗೂ ನಲ್ಲಿ ಫ್ಲವರ್ ಶೋ ಇರಲಿದೆ. ಸಂಸತ್, ಭೀಮ ಸ್ಮರಾಕ, ಅಂಬೇಡ್ಕರ್ ಅವರು ಹುಟ್ಟಿದ ಜಾಗ, ಅವರು ಹುಟ್ಟಿ ಬೆಳೆದು ಬಂದಂತಹ ಹಾದಿ ಹೇಗಿತ್ತು ಎನ್ನುವುದು ಪ್ಲವರ್ ಶೋ ನ ಪ್ರಮುಖ ಆಕರ್ಷಣೆಗಳಾಗಿವೆ.‌

2 / 7
ಪ್ಲವರ್ ಶೋ‌ನಲ್ಲಿ 200 ಕ್ಕು ಹೆಚ್ಚು ಬಗೆಯ ಹೂಗಳು ಒಂದೇ ಸ್ಥಳದಲ್ಲಿ ಜನರನ್ನ ಮೋಡಿ ಮಾಡುತ್ತಿದ್ದು, ಒಟ್ಟು 35 ಲಕ್ಷ ಹೂಗಳನ್ನ ಪ್ಲವರ್ ಶೋಗೆ ಬಳಕೆ ಮಾಡಿಕೊಳ್ಳಲಾಗಿದೆ. ಇನ್ನು ಫ್ಲವರ್ ಶೋಗೆಂದೆ ಆಂಧ್ರ, ಊಟಿ, ತಮಿಳುನಾಡು ಸೇರಿದಂತೆ ಬೇರೆ ಬೇರೆ ಭಾಗದಿಂದ ಹೂಗಳು ಬಂದಿದ್ದು, ಲಾಲ್ ಬಾಗ್​ನ ಗಾಜಿನ ಮನೆಯಲ್ಲಿ ಮೋಡಿ ಮಾಡಿವೆ.

ಪ್ಲವರ್ ಶೋ‌ನಲ್ಲಿ 200 ಕ್ಕು ಹೆಚ್ಚು ಬಗೆಯ ಹೂಗಳು ಒಂದೇ ಸ್ಥಳದಲ್ಲಿ ಜನರನ್ನ ಮೋಡಿ ಮಾಡುತ್ತಿದ್ದು, ಒಟ್ಟು 35 ಲಕ್ಷ ಹೂಗಳನ್ನ ಪ್ಲವರ್ ಶೋಗೆ ಬಳಕೆ ಮಾಡಿಕೊಳ್ಳಲಾಗಿದೆ. ಇನ್ನು ಫ್ಲವರ್ ಶೋಗೆಂದೆ ಆಂಧ್ರ, ಊಟಿ, ತಮಿಳುನಾಡು ಸೇರಿದಂತೆ ಬೇರೆ ಬೇರೆ ಭಾಗದಿಂದ ಹೂಗಳು ಬಂದಿದ್ದು, ಲಾಲ್ ಬಾಗ್​ನ ಗಾಜಿನ ಮನೆಯಲ್ಲಿ ಮೋಡಿ ಮಾಡಿವೆ.

3 / 7
ಫ್ಲವರ್ ಶೋ ನಲ್ಲಿ ಆಂಥೋರಿಯಂ, ಲಿಲ್ಲಿ, ಆರ್ಕಿಡ್‌, ಜರ್‌ಬೆರಾ, ಸೇವಂತಿಗೆ, ನಂದಿ ಗಿರಿಧಾಮದ ಇಂಪೇಷನ್ಸ್‌ ಹೂಗಳು, ಅಗಪಾಂಥಸ್‌, ಸುಗಂಧ ರಾಜ ಸೇರಿದಂತೆ 200 ಪ್ರಭೇದದ ಸುಮಾರು 30-32 ಲಕ್ಷ ಹೂಗಳನ್ನು ಪ್ರದರ್ಶನದಲ್ಲಿ ಬಳಕೆ ಮಾಡಕೊಳ್ಳಲಾಗಿದೆ. ಸುಮಾರು 8 ಲಕ್ಷ ಹೂಗಳು ಹೊರ ರಾಜ್ಯಗಳಿಂದ ಬಂದಿವೆ.

ಫ್ಲವರ್ ಶೋ ನಲ್ಲಿ ಆಂಥೋರಿಯಂ, ಲಿಲ್ಲಿ, ಆರ್ಕಿಡ್‌, ಜರ್‌ಬೆರಾ, ಸೇವಂತಿಗೆ, ನಂದಿ ಗಿರಿಧಾಮದ ಇಂಪೇಷನ್ಸ್‌ ಹೂಗಳು, ಅಗಪಾಂಥಸ್‌, ಸುಗಂಧ ರಾಜ ಸೇರಿದಂತೆ 200 ಪ್ರಭೇದದ ಸುಮಾರು 30-32 ಲಕ್ಷ ಹೂಗಳನ್ನು ಪ್ರದರ್ಶನದಲ್ಲಿ ಬಳಕೆ ಮಾಡಕೊಳ್ಳಲಾಗಿದೆ. ಸುಮಾರು 8 ಲಕ್ಷ ಹೂಗಳು ಹೊರ ರಾಜ್ಯಗಳಿಂದ ಬಂದಿವೆ.

4 / 7
ಈ 12 ದಿನಗಳ ಈ ಪ್ರದರ್ಶನಕ್ಕೆ 2.80 ಕೋಟಿ ರೂ. ವ್ಯಯಿಸಲಾಗುತ್ತಿದೆ.‌ ಅಂದಹಾಗೇ ಕಳೆದ ಪ್ಲವರ್ ಶೋ ನಲ್ಲಿ ಕಳೆದ ಬಾರಿ 60-70 ಲಕ್ಷ ರೂ. ಆದಾಯ ಹರಿದು ಬಂದಿತ್ತು. ಈ ವರ್ಷ ಅದಕ್ಕಿಂತ ಹೆಚ್ಚು ಆದಾಯ ಬರುವ ಸಾಧ್ಯಾತೆ ಇದೆ.‌ ಹೀಗಾಗಿ ಪ್ರದರ್ಶನಕ್ಕೆ ಬರುವ ಜನರ ಅನುಕೂಲಕ್ಕಾಗಿ ಆನ್‌ಲೈನ್‌ ಟಿಕೆಟ್‌ ವ್ಯವಸ್ಥೆ ಮಾಡಲಾಗಿದೆ.

ಈ 12 ದಿನಗಳ ಈ ಪ್ರದರ್ಶನಕ್ಕೆ 2.80 ಕೋಟಿ ರೂ. ವ್ಯಯಿಸಲಾಗುತ್ತಿದೆ.‌ ಅಂದಹಾಗೇ ಕಳೆದ ಪ್ಲವರ್ ಶೋ ನಲ್ಲಿ ಕಳೆದ ಬಾರಿ 60-70 ಲಕ್ಷ ರೂ. ಆದಾಯ ಹರಿದು ಬಂದಿತ್ತು. ಈ ವರ್ಷ ಅದಕ್ಕಿಂತ ಹೆಚ್ಚು ಆದಾಯ ಬರುವ ಸಾಧ್ಯಾತೆ ಇದೆ.‌ ಹೀಗಾಗಿ ಪ್ರದರ್ಶನಕ್ಕೆ ಬರುವ ಜನರ ಅನುಕೂಲಕ್ಕಾಗಿ ಆನ್‌ಲೈನ್‌ ಟಿಕೆಟ್‌ ವ್ಯವಸ್ಥೆ ಮಾಡಲಾಗಿದೆ.

5 / 7
ವಯಸ್ಕರಿಗೆ 100 ರೂ, ಮಕ್ಕಳಿಗೆ 30 ರೂ.ಪ್ರವೇಶ ಶುಲ್ಕ ನಿಗದಿಪಡಿಸಿದ್ದು, ಶಾಲಾ ಮಕ್ಕಳಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ತುರ್ತು ಚಿಕಿತ್ಸೆಗಾಗಿ 6 ಆಂಬ್ಯುಲೆಸ್ಸ್‌ ಸೇವೆ ಒದಗಿಸಲಾಗಿದೆ. ಡೆಂಗ್ಯು ಆತಂಕದಿಂದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿದ್ದು, ಪ್ಲಾಸ್ಟಿಕ್‌ ಬಳಕೆ ಸಂಪೂರ್ಣ ನಿಷೇಧಿಸಲಾಗಿದೆ.

ವಯಸ್ಕರಿಗೆ 100 ರೂ, ಮಕ್ಕಳಿಗೆ 30 ರೂ.ಪ್ರವೇಶ ಶುಲ್ಕ ನಿಗದಿಪಡಿಸಿದ್ದು, ಶಾಲಾ ಮಕ್ಕಳಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ತುರ್ತು ಚಿಕಿತ್ಸೆಗಾಗಿ 6 ಆಂಬ್ಯುಲೆಸ್ಸ್‌ ಸೇವೆ ಒದಗಿಸಲಾಗಿದೆ. ಡೆಂಗ್ಯು ಆತಂಕದಿಂದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿದ್ದು, ಪ್ಲಾಸ್ಟಿಕ್‌ ಬಳಕೆ ಸಂಪೂರ್ಣ ನಿಷೇಧಿಸಲಾಗಿದೆ.

6 / 7
ಕುಡಿಯುವ ನೀರಿಗಾಗಿ 18 ಕಡೆ ವ್ಯವಸ್ಥೆ ಮಾಡಿದ್ದು, ಹೆಚ್ಚುವರಿ ಸಂಚಾರಿ ಶೌಚಾಲಯ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ 136 ಸಿಸಿ ಟಿವಿ ಕ್ಯಾಮೆರಾಗಳು, 400 ಪೊಲೀಸರು, ಬಿಬಿಎಂಪಿ ಮಾರ್ಷಲ್‌ ಹಾಗೂ ಲಾಲ್‌ಬಾಗ್‌ ಸಿಬ್ಬಂದಿ ಭದ್ರತೆ ಒದಗಿಸಿದ್ದು, ಲಾಲ್ ಬಾಗ್ ನಾ ನಾಲ್ಕು ಗೇಟ್ ಗಳಲ್ಲಿ ಫ್ಲವರ್ ಶೋ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ.

ಕುಡಿಯುವ ನೀರಿಗಾಗಿ 18 ಕಡೆ ವ್ಯವಸ್ಥೆ ಮಾಡಿದ್ದು, ಹೆಚ್ಚುವರಿ ಸಂಚಾರಿ ಶೌಚಾಲಯ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ 136 ಸಿಸಿ ಟಿವಿ ಕ್ಯಾಮೆರಾಗಳು, 400 ಪೊಲೀಸರು, ಬಿಬಿಎಂಪಿ ಮಾರ್ಷಲ್‌ ಹಾಗೂ ಲಾಲ್‌ಬಾಗ್‌ ಸಿಬ್ಬಂದಿ ಭದ್ರತೆ ಒದಗಿಸಿದ್ದು, ಲಾಲ್ ಬಾಗ್ ನಾ ನಾಲ್ಕು ಗೇಟ್ ಗಳಲ್ಲಿ ಫ್ಲವರ್ ಶೋ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ.

7 / 7
Follow us
ಪಿತೃಪಕ್ಷದ ಮಹತ್ವ ತಿಳಿಯಲು ಈ ವಿಡಿಯೋದಲ್ಲಿ ನೋಡಿ
ಪಿತೃಪಕ್ಷದ ಮಹತ್ವ ತಿಳಿಯಲು ಈ ವಿಡಿಯೋದಲ್ಲಿ ನೋಡಿ
Nithya Bhavishya: ಈ ರಾಶಿಯವರಿಗೆ ಸ್ವ ಉದ್ಯೋಗವು ಇಂದು ಕೈ ಹಿಡಿಯುವುದು
Nithya Bhavishya: ಈ ರಾಶಿಯವರಿಗೆ ಸ್ವ ಉದ್ಯೋಗವು ಇಂದು ಕೈ ಹಿಡಿಯುವುದು
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್