ವಿಧಾನಸೌಧದ ಆವರಣದಲ್ಲಿ ಭುವನೇಶ್ವರಿ ಕಂಚಿನ‌ ಪ್ರತಿಮೆ ಅನಾವರಣ: ಏನಿದರ ವೈಶಿಷ್ಟ್ಯತೆ?

Updated on: Jan 27, 2025 | 7:38 PM

ಬೆಂಗಳೂರಿನ ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ಕನ್ನಡಾಂಬೆ ಭುವನೇಶ್ವರಿ ದೇವಿಯ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅನಾವರಣಗೊಳಿಸಿದರು. ವಿಶೇಷ ಪೂಜೆ ಮೂಲಕ ಇಂದು (ಜನವರಿ 27) 43.6 ಅಡಿ ಎತ್ತರದ ಭುವನೇಶ್ವರಿ ಪ್ರತಿಮೆ ಅನಾವರಣಗೊಳಿಸಲಾಗಿದ್ದು, ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್, ಸ್ಪೀಕರ್ ಯು ಟಿ ಖಾದರ್ ಹಾಗೂ ಸಚಿವರು, ಶಾಸಕರು ಸೇರಿದಂತೆ ಹಲವರು ಭಾಗಿಯಾಗಿದ್ದರು. ಇನ್ನು ಈ ಭುವನೇಶ್ವರಿ ದೇವಿಯ ಕಂಚಿನ ಪ್ರತಿಮೆ ಹೇಗೆದೆ? ಎಷ್ಟು ಹಣ ಖರ್ಚಾಗಿದೆ? ಇದರ ವೈಶಿಷ್ಟ್ಯತೆಗಳೇನು ಎನ್ನುವ ವಿವರ ಇಲ್ಲಿದೆ.

1 / 7
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಜನವರಿ 27) ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ಕನ್ನಡಾಂಬೆ ಭುವನೇಶ್ವರಿ ದೇವಿಯ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದರು.  ಶಿಲ್ಪಿ ಶ್ರೀಧರ್ ಮೂರ್ತಿ ನಿರ್ಮಾಣ ಮಾಡಿರುವ ಈ ಕಂಚಿನ ಪ್ರತಿಮೆ ಹಲವು ವೈಶಿಷ್ಟ್ಯತೆಗಳನ್ನು ಒಳಗೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಜನವರಿ 27) ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ಕನ್ನಡಾಂಬೆ ಭುವನೇಶ್ವರಿ ದೇವಿಯ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದರು. ಶಿಲ್ಪಿ ಶ್ರೀಧರ್ ಮೂರ್ತಿ ನಿರ್ಮಾಣ ಮಾಡಿರುವ ಈ ಕಂಚಿನ ಪ್ರತಿಮೆ ಹಲವು ವೈಶಿಷ್ಟ್ಯತೆಗಳನ್ನು ಒಳಗೊಂಡಿದೆ.

2 / 7
ವಿಶೇಷ ಪೂಜೆ ಮೂಲಕ ಇಂದು (ಜನವರಿ 27) 43.6 ಅಡಿ ಎತ್ತರದ ಭುವನೇಶ್ವರಿ ಪ್ರತಿಮೆ ಅನಾವರಣಗೊಳಿಸಲಾಗಿದ್ದು, ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್, ಸ್ಪೀಕರ್ ಯು ಟಿ ಖಾದರ್ ಹಾಗೂ ಸಚಿವರು, ಶಾಸಕರು ಸೇರಿದಂತೆ ಹಲವರು ಭಾಗಿಯಾಗಿದ್ದರು.

ವಿಶೇಷ ಪೂಜೆ ಮೂಲಕ ಇಂದು (ಜನವರಿ 27) 43.6 ಅಡಿ ಎತ್ತರದ ಭುವನೇಶ್ವರಿ ಪ್ರತಿಮೆ ಅನಾವರಣಗೊಳಿಸಲಾಗಿದ್ದು, ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್, ಸ್ಪೀಕರ್ ಯು ಟಿ ಖಾದರ್ ಹಾಗೂ ಸಚಿವರು, ಶಾಸಕರು ಸೇರಿದಂತೆ ಹಲವರು ಭಾಗಿಯಾಗಿದ್ದರು.

3 / 7
 ಈ ನಾಡದೇವಿ ಭುವನೇಶ್ವರಿಯ ಕಂಚಿನ ಪ್ರತಿಮೆಯನ್ನು ಶಿಲ್ಪಿ ಶ್ರೀಧರ್ ಮೂರ್ತಿ ಅವರು ನಿರ್ಮಾಣ ಮಾಡಿದ್ದು, ಈ ಮೂರ್ತಿ ನಿರ್ಮಾಣಕ್ಕೆ ಬರೋಬ್ಬರಿ 12 ತಿಂಗಳು ಸಮಯ ತೆಗೆದುಕೊಂಡಿದ್ದಾರೆ. ನೂರಾರು ಶಿಲ್ಪಿಗಳು, ತಂತ್ರಜ್ಞರು, ಕಲಾವಿದರು ಮೂರ್ತಿ ನಿರ್ಮಾಣಕ್ಕೆ ಸಹಾಯ ಮಾಡಿದ್ದಾರೆ.

ಈ ನಾಡದೇವಿ ಭುವನೇಶ್ವರಿಯ ಕಂಚಿನ ಪ್ರತಿಮೆಯನ್ನು ಶಿಲ್ಪಿ ಶ್ರೀಧರ್ ಮೂರ್ತಿ ಅವರು ನಿರ್ಮಾಣ ಮಾಡಿದ್ದು, ಈ ಮೂರ್ತಿ ನಿರ್ಮಾಣಕ್ಕೆ ಬರೋಬ್ಬರಿ 12 ತಿಂಗಳು ಸಮಯ ತೆಗೆದುಕೊಂಡಿದ್ದಾರೆ. ನೂರಾರು ಶಿಲ್ಪಿಗಳು, ತಂತ್ರಜ್ಞರು, ಕಲಾವಿದರು ಮೂರ್ತಿ ನಿರ್ಮಾಣಕ್ಕೆ ಸಹಾಯ ಮಾಡಿದ್ದಾರೆ.

4 / 7
ಬರೋಬ್ಬರಿ 21.24 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಪ್ರತಿಮೆ ನಿರ್ಮಾಣ ಮಾಡಲಾಗಿದ್ದು, ರಾಜ್ಯದ ಲಾಂಛನ ಗಂಡ ಭೇರುಂಡ, ಮೈಸೂರು ಲಾಂಛನ ಹಾರದಲ್ಲಿ ಕೆತ್ತನೆ  ಮಾಡಲಾಗಿದೆ.  ಚಾಲುಕ್ಯರು ಹಾಗೂ ಹೊಯ್ಸಳ ಶೈಲಿಯ ಸಮ್ಮಿಶ್ರ ರೂಪದಲ್ಲಿ ನಾಡದೇವಿ ಪ್ರತಿಮೆ ಇದ್ದು , ಪೀಠ ಮತ್ತು ಹಿಂಬದಿ ಕರ್ನಾಟಕ ನಕ್ಷೆ, ಉಬ್ಬುಶಿಲ್ಪವನ್ನು ಕಲಾಕೃತಿ ಒಳಗೊಂಡಿದೆ.

ಬರೋಬ್ಬರಿ 21.24 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಪ್ರತಿಮೆ ನಿರ್ಮಾಣ ಮಾಡಲಾಗಿದ್ದು, ರಾಜ್ಯದ ಲಾಂಛನ ಗಂಡ ಭೇರುಂಡ, ಮೈಸೂರು ಲಾಂಛನ ಹಾರದಲ್ಲಿ ಕೆತ್ತನೆ ಮಾಡಲಾಗಿದೆ. ಚಾಲುಕ್ಯರು ಹಾಗೂ ಹೊಯ್ಸಳ ಶೈಲಿಯ ಸಮ್ಮಿಶ್ರ ರೂಪದಲ್ಲಿ ನಾಡದೇವಿ ಪ್ರತಿಮೆ ಇದ್ದು , ಪೀಠ ಮತ್ತು ಹಿಂಬದಿ ಕರ್ನಾಟಕ ನಕ್ಷೆ, ಉಬ್ಬುಶಿಲ್ಪವನ್ನು ಕಲಾಕೃತಿ ಒಳಗೊಂಡಿದೆ.

5 / 7
ದೇವಿ ಮೂರ್ತಿ ಚಾಲುಕ್ಯ, ಆಭರಣಗಳು ಹೊಯ್ಸಳರ ಶೈಲಿಯಲ್ಲಿದೆ.  ಮುಕುಟದಲ್ಲಿ ಮಯೂರ ಧ್ವಜ, ನವರತ್ನಗಳ ಜಡೆ, ಮಂಗಳೂರು ಮಲ್ಲಿಗೆಯಿಂದ ಅಲಂಕೃತ ತುರುಬು, ಎರಡು ಕಿವಿಗಳ ಕೆಳಗೆ ಮಕರ ತೋರಣ, ಕಂಠಿಹಾರ ದಲ್ಲಿ ಗಂಡಭೇರುಂಡ ಕೆತ್ತನೆ, ಹೆಗಲಿನಿಂದ ಕಾಲಿನವರೆಗೆ ವೈಜಯಂತಿ ಮಾಲೆ, ಹೊಯ್ಸಳರ ಶೈಲಿನ ಕಾಲುಗಳುಳ್ಳ ಸಿಂಹಾಸನದ ಮೇಲೆ ತಾಯಿ ವಿರಾಜಮಾನವಾಗಿದ್ದಾಳೆ.

ದೇವಿ ಮೂರ್ತಿ ಚಾಲುಕ್ಯ, ಆಭರಣಗಳು ಹೊಯ್ಸಳರ ಶೈಲಿಯಲ್ಲಿದೆ. ಮುಕುಟದಲ್ಲಿ ಮಯೂರ ಧ್ವಜ, ನವರತ್ನಗಳ ಜಡೆ, ಮಂಗಳೂರು ಮಲ್ಲಿಗೆಯಿಂದ ಅಲಂಕೃತ ತುರುಬು, ಎರಡು ಕಿವಿಗಳ ಕೆಳಗೆ ಮಕರ ತೋರಣ, ಕಂಠಿಹಾರ ದಲ್ಲಿ ಗಂಡಭೇರುಂಡ ಕೆತ್ತನೆ, ಹೆಗಲಿನಿಂದ ಕಾಲಿನವರೆಗೆ ವೈಜಯಂತಿ ಮಾಲೆ, ಹೊಯ್ಸಳರ ಶೈಲಿನ ಕಾಲುಗಳುಳ್ಳ ಸಿಂಹಾಸನದ ಮೇಲೆ ತಾಯಿ ವಿರಾಜಮಾನವಾಗಿದ್ದಾಳೆ.

6 / 7
ಅಭಯ ಹಸ್ತ, ಎಡಗೈಯಲ್ಲಿ ಜ್ಞಾನದ ಸಂಕೇತವಾಗಿ ಕೃತಿಗಳ ಕಟ್ಟು, ಹಿಂಬದಿಯಲ್ಲಿ ಕರ್ನಾಟಕ ನಕ್ಷೆಯ ಉಬ್ಬುಶಿಲ್ಪವು ರಾಜ್ಯದ ಭೂಮೇಲ್ಮ ಲಕ್ಷಣ ಸಾರುತ್ತದೆ. ಕರ್ನಾಟಕ ಸೇರಿ ದೇಶದ ಹಲವು ನೂರಾರು ಶಿಲ್ಪಕೃತಿಗಳನ್ನು ಕೊಟ್ಟಿರುವ ನುರಿತ ಶಿಲ್ಪಿ ಶ್ರೀಧರಮೂರ್ತಿ ನೇತೃತ್ವದಲ್ಲಿ 80 ಜನರ ತಂಡ, 12 ತಿಂಗಳು ಕಾಲ‌ ಪರಿಶ್ರಮದಿಂದ ಈ ಭವ್ಯ ಪ್ರತಿಮೆ ತಯಾರಾಗಿದೆ

ಅಭಯ ಹಸ್ತ, ಎಡಗೈಯಲ್ಲಿ ಜ್ಞಾನದ ಸಂಕೇತವಾಗಿ ಕೃತಿಗಳ ಕಟ್ಟು, ಹಿಂಬದಿಯಲ್ಲಿ ಕರ್ನಾಟಕ ನಕ್ಷೆಯ ಉಬ್ಬುಶಿಲ್ಪವು ರಾಜ್ಯದ ಭೂಮೇಲ್ಮ ಲಕ್ಷಣ ಸಾರುತ್ತದೆ. ಕರ್ನಾಟಕ ಸೇರಿ ದೇಶದ ಹಲವು ನೂರಾರು ಶಿಲ್ಪಕೃತಿಗಳನ್ನು ಕೊಟ್ಟಿರುವ ನುರಿತ ಶಿಲ್ಪಿ ಶ್ರೀಧರಮೂರ್ತಿ ನೇತೃತ್ವದಲ್ಲಿ 80 ಜನರ ತಂಡ, 12 ತಿಂಗಳು ಕಾಲ‌ ಪರಿಶ್ರಮದಿಂದ ಈ ಭವ್ಯ ಪ್ರತಿಮೆ ತಯಾರಾಗಿದೆ

7 / 7
ನೆಲಮಟ್ಟದಿಂದ ಪ್ರತಿಮೆ 43.6 ಅಡಿ ಎತ್ತರ ಇದ್ದು, ಪ್ರತಿಮೆಯ ಲೋಹದ ತೂಕ 31.50 ಟನ್ ಇದೆ. ಭುವನೇಶ್ವರಿ ಪ್ರತಿಮೆ - 20 ಟನ್, ಪ್ರತಿಮೆ ಹಿಂದಿನ ಕರ್ನಾಟಕ ನಕ್ಷೆ - 11.50 ಟನ್ ಇದ್ದು, ಕಟ್ಟಡದ ಕಲ್ಲು ಪೀಠ - ಕಲ್ಲಿನ ಹೊಯ್ಸಳ ಶೈಲಿಯ ಪೀಠ ಮತ್ತು ಪ್ರದಕ್ಷಿಣ ಪಥದ ಸುತ್ತ ಕರ್ಣಕೂಟ, ಅಲಂಕಾರಿಕ ಕಲ್ಲಿನ ಕೈಪಿಡಿ ನಿರ್ಮಾಣ ಮಾಡಲಾಗಿದೆ.

ನೆಲಮಟ್ಟದಿಂದ ಪ್ರತಿಮೆ 43.6 ಅಡಿ ಎತ್ತರ ಇದ್ದು, ಪ್ರತಿಮೆಯ ಲೋಹದ ತೂಕ 31.50 ಟನ್ ಇದೆ. ಭುವನೇಶ್ವರಿ ಪ್ರತಿಮೆ - 20 ಟನ್, ಪ್ರತಿಮೆ ಹಿಂದಿನ ಕರ್ನಾಟಕ ನಕ್ಷೆ - 11.50 ಟನ್ ಇದ್ದು, ಕಟ್ಟಡದ ಕಲ್ಲು ಪೀಠ - ಕಲ್ಲಿನ ಹೊಯ್ಸಳ ಶೈಲಿಯ ಪೀಠ ಮತ್ತು ಪ್ರದಕ್ಷಿಣ ಪಥದ ಸುತ್ತ ಕರ್ಣಕೂಟ, ಅಲಂಕಾರಿಕ ಕಲ್ಲಿನ ಕೈಪಿಡಿ ನಿರ್ಮಾಣ ಮಾಡಲಾಗಿದೆ.

Published On - 7:36 pm, Mon, 27 January 25

Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us