
ಮುಖ್ಯಮಂತ್ರಿ ಸ್ಥಾನದ ಜಟಾಪಟಿ ಮಧ್ಯೆಯೂ 63ನೇ ವಸಂತಕ್ಕೆ ಕಾಲಿಟ್ಟ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹುಟ್ಟುಹಬ್ಬವನ್ನು ಆಚರಿಸಲಾಯಿತು.

ಸಿಎಂ ಹುದ್ದೆಗೆ ಪೈಪೋಟಿ ಇದ್ದರೂ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೇಕ್ ತಿನ್ನಿಸಿ, ಶುಭಾಶಯ ತಿಳಿಸಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಮಾಜಿ ಸಚಿವ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್ ಮತ್ತಿತರರು ಜತೆಗಿದ್ದರು ಹುಟ್ಟು ಹಬ್ಬದ ಸಂಭ್ರಮ ಮುಗಿಸಿ, ಶಾಂಗ್ರಿಲಾ ಹೋಟೆಲ್ ನಿಂದ ತೆರಳುತ್ತಿರುವ ನಾಯಕರು ಒಬ್ಬೊಬ್ಬರಾಗಿ ತಮ್ಮ ತಮ್ಮ ಮನೆಗೆ ತೆರಳುತ್ತಿರುವ ಕೈ ನಾಯಕರು

ರಾಜ್ಯದ ಮೂಲೆಮೂಲೆಗಳಿಂದ ಕಾರ್ಯಕರ್ತರು, ಮುಖಂಡರು ಹುಟ್ಟುಹಬ್ಬದ ಶುಭಾಶಯ ಹೇಳುತ್ತಿರುವ ಹಿನ್ನೆಲೆ ಟ್ವಿಟ್ ಮೂಲಕ ಧನ್ಯವಾದ ತಿಳಿಸಿದ ಡಿಕೆ ಶಿವಕುಮಾರ ಅವರು, ನನ್ನ ಜೀವನ ಕರ್ನಾಟಕದ ಜನರ ಸೇವೆಗೆ ಮುಡಿಪಾಗಿದೆ ನನ್ನ ಹುಟ್ಟುಹಬ್ಬದ ಮುನ್ನಾದಿನದಂದು, ಕರ್ನಾಟಕದ ಜನರು ನನಗೆ ಅತ್ಯುತ್ತಮ ಹುಟ್ಟುಹಬ್ಬದ ಉಡುಗೊರೆಯನ್ನು ನೀಡಿದ್ದಾರೆ ನನ್ನ ಕಾಂಗ್ರೆಸ್ ಕುಟುಂಬಕ್ಕೆ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.

ಸಿದ್ದರಾಮಯ್ಯ-ಡಿಕೆ ಶಿವಕುಮಾರ್


ಹಿರಿಯ ನಾಯಕ ಸುಶೀಲ್ ಕುಮಾರ್ ಶಿಂಧೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಸಿಂಗ್, ದೀಪಕ್ ಬಬಾರಿಯಾರನ್ನ ವೀಕ್ಷಕರಾಗಿ ಹೈಕಮಾಂಡ್ ಕಳಿಸಿತ್ತು. ಮೊದಲ ಶಾಸಕಾಂಗ ಸಭೆಯಲ್ಲಿ ಪ್ರತಿಯೊಬ್ಬ ಶಾಸಕರೂ ತಮ್ಮ ಅಭಿಪ್ರಾಯವನ್ನ ತಿಳಿಸಿದ್ರು.
