AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ಏಕದಿನ ವಿಶ್ವಕಪ್​ನಲ್ಲಿ ಎಂಎಸ್​ಡಿ ಸಿಡಿಸಿದ ಸಿಕ್ಸ್ ಲ್ಯಾಂಡ್ ಆದ ಆಸನಕ್ಕೆ ಧೋನಿ ಹೆಸರು

ಭಾರತವು ಈಗ 2011 ರ ಏಕದಿನ ವಿಶ್ವಕಪ್ ಗೆದ್ದ ತಂಡದ 12 ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. ಹೀಗಿರುವಾಗ ಮುಂಬೈ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರು ಮಹತ್ವದ ಘೋಷಣೆ ಮಾಡಿದ್ದು ವಾಂಖೆಡೆ ಸ್ಟೇಡಿಯಂನಲ್ಲಿ ವಿಕೆಟ್-ಕೀಪರ್ ಬ್ಯಾಟರ್ ಧೋನಿ ಹೆಸರನ್ನು ಇಡಲು ನಿರ್ಧರಿಸಿದ್ದಾರೆ.

Vinay Bhat
|

Updated on:Apr 04, 2023 | 12:48 PM

Share
ಮಹೇಂದ್ರ ಸಿಂಗ್ ಧೋನಿ ಅಂತರರಾಷ್ಟ್ರೀಯ ಕ್ರಿಕೆಟ್​ನಿಂದ ದೂರವಾಗಿ ಕೆಲ ವರ್ಷಗಳಾಗಿದ್ದರೂ ಅವರ ಅಭಿಮಾನಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಮಾತ್ರ ಕಾಣಿಸಿಕೊಳ್ಳುವ ಎಂಎಸ್​ಡಿ ಈ ವರ್ಷ ಇದಕ್ಕೂ ನಿವೃತ್ತಿ ಘೋಷಿಸಿ ಕ್ರಿಕೆಟ್​ನಿಂದ ದೂರವಾಗಲಿದ್ದಾರೆ.

ಮಹೇಂದ್ರ ಸಿಂಗ್ ಧೋನಿ ಅಂತರರಾಷ್ಟ್ರೀಯ ಕ್ರಿಕೆಟ್​ನಿಂದ ದೂರವಾಗಿ ಕೆಲ ವರ್ಷಗಳಾಗಿದ್ದರೂ ಅವರ ಅಭಿಮಾನಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಮಾತ್ರ ಕಾಣಿಸಿಕೊಳ್ಳುವ ಎಂಎಸ್​ಡಿ ಈ ವರ್ಷ ಇದಕ್ಕೂ ನಿವೃತ್ತಿ ಘೋಷಿಸಿ ಕ್ರಿಕೆಟ್​ನಿಂದ ದೂರವಾಗಲಿದ್ದಾರೆ.

1 / 7
ಇಂದು ಒಂದು ತಂಡಕ್ಕೆ ಬೆಂಬಲ ಎಂಬ ಬದಲು ಕೇವಲ ಧೋನಿಯನ್ನು ನೋಡಲು, ಅವರ ಆಟವನ್ನು ವೀಕ್ಷಿಸಲು ಅಭಿಮಾನಿಗಳು ಐಪಿಎಲ್​ಗೆ ಆಗಮಿನಿಸುತ್ತಿದ್ದಾರೆ. ಭಾರತಕ್ಕೆ ವಿಶ್ವಕಪ್ ತಂದುಕೊಟ್ಟು ಸಾರ್ವಕಾಲಿಕ ಶ್ರೇಷ್ಠ ಕ್ರಿಕೆಟಿಗರಲ್ಲಿ ಒಬ್ಬರಾದ ಧೋನಿಗೆ ಇದೀಗ ವಿಶೇಷ ಗೌರವ ಸೂಚಿಸಲು ಮುಂಬೈ ಕ್ರಿಕೆಟ್ ಸಂಸ್ಥೆ ಮುಂದಾಗಿದೆ.

ಇಂದು ಒಂದು ತಂಡಕ್ಕೆ ಬೆಂಬಲ ಎಂಬ ಬದಲು ಕೇವಲ ಧೋನಿಯನ್ನು ನೋಡಲು, ಅವರ ಆಟವನ್ನು ವೀಕ್ಷಿಸಲು ಅಭಿಮಾನಿಗಳು ಐಪಿಎಲ್​ಗೆ ಆಗಮಿನಿಸುತ್ತಿದ್ದಾರೆ. ಭಾರತಕ್ಕೆ ವಿಶ್ವಕಪ್ ತಂದುಕೊಟ್ಟು ಸಾರ್ವಕಾಲಿಕ ಶ್ರೇಷ್ಠ ಕ್ರಿಕೆಟಿಗರಲ್ಲಿ ಒಬ್ಬರಾದ ಧೋನಿಗೆ ಇದೀಗ ವಿಶೇಷ ಗೌರವ ಸೂಚಿಸಲು ಮುಂಬೈ ಕ್ರಿಕೆಟ್ ಸಂಸ್ಥೆ ಮುಂದಾಗಿದೆ.

2 / 7
ಭಾರತವು ಈಗ 2011 ರ ಏಕದಿನ ವಿಶ್ವಕಪ್ ಗೆದ್ದ ತಂಡದ 12 ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. ಹೀಗಿರುವಾಗ ಮುಂಬೈ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರು ಮಹತ್ವದ ಘೋಷಣೆ ಮಾಡಿದ್ದು ವಾಂಖೆಡೆ ಸ್ಟೇಡಿಯಂನಲ್ಲಿ ವಿಕೆಟ್-ಕೀಪರ್ ಬ್ಯಾಟರ್ ಧೋನಿ ಹೆಸರನ್ನು ಇಡಲು ನಿರ್ಧರಿಸಿದ್ದಾರೆ.

ಭಾರತವು ಈಗ 2011 ರ ಏಕದಿನ ವಿಶ್ವಕಪ್ ಗೆದ್ದ ತಂಡದ 12 ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. ಹೀಗಿರುವಾಗ ಮುಂಬೈ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರು ಮಹತ್ವದ ಘೋಷಣೆ ಮಾಡಿದ್ದು ವಾಂಖೆಡೆ ಸ್ಟೇಡಿಯಂನಲ್ಲಿ ವಿಕೆಟ್-ಕೀಪರ್ ಬ್ಯಾಟರ್ ಧೋನಿ ಹೆಸರನ್ನು ಇಡಲು ನಿರ್ಧರಿಸಿದ್ದಾರೆ.

3 / 7
2011ರ ವಿಶ್ವಕಪ್​ ಫೈನಲ್​ಲ್ಲಿ ಶ್ರೀಲಂಕಾ ವಿರುದ್ಧ ಧೋನಿ ಸಿಕ್ಸ್ ಮೂಲಕ ವಿನ್ನಿಂಗ್ ಶಾಟ್ ಸಿಡಿಸಿದ್ದು ಯಾರೂ ಮರೆಯಲು ಸಾಧ್ಯವಿಲ್ಲ. ಇದೀಗ ಲಂಕಾ ವೇಗಿ ನುವಾನ್ ಕುಲಶೇಖರ ವಿರುದ್ಧ ಧೋನಿ ಹೊಡೆದಿದ್ದ ಸಿಕ್ಸರ್‌ ಲ್ಯಾಂಡ್ ಆಗಿರುವ ಕ್ರೀಡಾಂಗಣದಲ್ಲಿನ ಆಸನಕ್ಕೆ ಧೋನಿ ಅವರ ಹೆಸರನ್ನು ಇಡಲಾಗುವುದು ಎಂದು ಎಂಸಿಎ ಅಧ್ಯಕ್ಷ ಅಮೋಲ್ ಕಾಳೆ ಹೇಳಿದ್ದಾರೆ.

2011ರ ವಿಶ್ವಕಪ್​ ಫೈನಲ್​ಲ್ಲಿ ಶ್ರೀಲಂಕಾ ವಿರುದ್ಧ ಧೋನಿ ಸಿಕ್ಸ್ ಮೂಲಕ ವಿನ್ನಿಂಗ್ ಶಾಟ್ ಸಿಡಿಸಿದ್ದು ಯಾರೂ ಮರೆಯಲು ಸಾಧ್ಯವಿಲ್ಲ. ಇದೀಗ ಲಂಕಾ ವೇಗಿ ನುವಾನ್ ಕುಲಶೇಖರ ವಿರುದ್ಧ ಧೋನಿ ಹೊಡೆದಿದ್ದ ಸಿಕ್ಸರ್‌ ಲ್ಯಾಂಡ್ ಆಗಿರುವ ಕ್ರೀಡಾಂಗಣದಲ್ಲಿನ ಆಸನಕ್ಕೆ ಧೋನಿ ಅವರ ಹೆಸರನ್ನು ಇಡಲಾಗುವುದು ಎಂದು ಎಂಸಿಎ ಅಧ್ಯಕ್ಷ ಅಮೋಲ್ ಕಾಳೆ ಹೇಳಿದ್ದಾರೆ.

4 / 7
"ಎಂಸಿಎ ಕ್ರೀಡಾಂಗಣದ ಒಳಗಿನ ಆಸನಕ್ಕೆ ಎಂಎಸ್ ಧೋನಿ ಹೆಸರಿಡಲು ನಿರ್ಧಾರ ತೆಗೆದುಕೊಂಡಿದೆ. 2011 ರ ವಿಶ್ವಕಪ್‌ನ ಫೈನಲ್‌ನಲ್ಲಿ ಶ್ರೀಲಂಕಾ ವಿರುದ್ಧ ಧೋನಿ ಅವರ ಮ್ಯಾಚ್ ವಿನ್ನಿಂಗ್ ಸಿಕ್ಸರ್ ಬಿದ್ದ ಸ್ಥಳಕ್ಕೆ ಅವರ ಹೆಸರನ್ನು ಇಡಲಾಗುವುದು . ಇದರ ಉದ್ಘಾಟನೆಗೆ ಬರಲು ನಾವು ಧೋನಿ ಅವರನ್ನು ವಿನಂತಿಸುತ್ತೇವೆ'' ಎಂದು ಕಾಳೆ ಹೇಳಿದರು.

"ಎಂಸಿಎ ಕ್ರೀಡಾಂಗಣದ ಒಳಗಿನ ಆಸನಕ್ಕೆ ಎಂಎಸ್ ಧೋನಿ ಹೆಸರಿಡಲು ನಿರ್ಧಾರ ತೆಗೆದುಕೊಂಡಿದೆ. 2011 ರ ವಿಶ್ವಕಪ್‌ನ ಫೈನಲ್‌ನಲ್ಲಿ ಶ್ರೀಲಂಕಾ ವಿರುದ್ಧ ಧೋನಿ ಅವರ ಮ್ಯಾಚ್ ವಿನ್ನಿಂಗ್ ಸಿಕ್ಸರ್ ಬಿದ್ದ ಸ್ಥಳಕ್ಕೆ ಅವರ ಹೆಸರನ್ನು ಇಡಲಾಗುವುದು . ಇದರ ಉದ್ಘಾಟನೆಗೆ ಬರಲು ನಾವು ಧೋನಿ ಅವರನ್ನು ವಿನಂತಿಸುತ್ತೇವೆ'' ಎಂದು ಕಾಳೆ ಹೇಳಿದರು.

5 / 7
ವಾಂಖೆಡೆ ಸ್ಟೇಡಿಯಂ ಈಗಾಗಲೇ ಕೆಲ ಕ್ರಿಕೆಟ್ ದಿಗ್ಗಜರ ಹೆಸರು ಇದೆ. ಸಚಿನ್ ತೆಂಡುಲ್ಕರ್, ಸುನೀಲ್ ಗವಾಸ್ಕರ್ ಹಾಗೂ ವಿಜಯ್ ಮರ್ಚೆಂಟ್ ಅವರಂತಹ ಶ್ರೇಷ್ಠರ ಹೆಸರನ್ನು ಹೊಂದಿದೆ. ಪಾಲ್ಲಿ ಉಮ್ರಿಗರ್ ಹಾಗೂ  ವಿನೂ ಮಂಕಡ್ ಅವರ ಹೆಸರಿನ ದ್ವಾರಗಳೂ ಇವೆ. ಇವರ ಜೊತೆಗೆ ಈಗ ಧೋನಿ ಹೆಸರು ಕೂಡ ಸೇರ್ಪಡೆ ಆಗಲಿದೆ.

ವಾಂಖೆಡೆ ಸ್ಟೇಡಿಯಂ ಈಗಾಗಲೇ ಕೆಲ ಕ್ರಿಕೆಟ್ ದಿಗ್ಗಜರ ಹೆಸರು ಇದೆ. ಸಚಿನ್ ತೆಂಡುಲ್ಕರ್, ಸುನೀಲ್ ಗವಾಸ್ಕರ್ ಹಾಗೂ ವಿಜಯ್ ಮರ್ಚೆಂಟ್ ಅವರಂತಹ ಶ್ರೇಷ್ಠರ ಹೆಸರನ್ನು ಹೊಂದಿದೆ. ಪಾಲ್ಲಿ ಉಮ್ರಿಗರ್ ಹಾಗೂ ವಿನೂ ಮಂಕಡ್ ಅವರ ಹೆಸರಿನ ದ್ವಾರಗಳೂ ಇವೆ. ಇವರ ಜೊತೆಗೆ ಈಗ ಧೋನಿ ಹೆಸರು ಕೂಡ ಸೇರ್ಪಡೆ ಆಗಲಿದೆ.

6 / 7
ಏಪ್ರಿಲ್ 2 ರ ದಿನ ಭಾರತೀಯ ಕ್ರಿಕೆಟ್‌ಗೆ ಬಹಳ ಮುಖ್ಯ. 28 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ, ಟೀಮ್ ಇಂಡಿಯಾ ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಫೈನಲ್‌ನಲ್ಲಿ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಭಾರತ ತಾಯ್ನಾಡಿನಲ್ಲಿ ಶ್ರೀಲಂಕಾವನ್ನು 6 ವಿಕೆಟ್‌ಗಳಿಂದ ಸೋಲಿಸುವ ಮೂಲಕ ವಿಶ್ವಕಪ್ ಅನ್ನು ವಶಪಡಿಸಿಕೊಂಡಿತು.

ಏಪ್ರಿಲ್ 2 ರ ದಿನ ಭಾರತೀಯ ಕ್ರಿಕೆಟ್‌ಗೆ ಬಹಳ ಮುಖ್ಯ. 28 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ, ಟೀಮ್ ಇಂಡಿಯಾ ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಫೈನಲ್‌ನಲ್ಲಿ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಭಾರತ ತಾಯ್ನಾಡಿನಲ್ಲಿ ಶ್ರೀಲಂಕಾವನ್ನು 6 ವಿಕೆಟ್‌ಗಳಿಂದ ಸೋಲಿಸುವ ಮೂಲಕ ವಿಶ್ವಕಪ್ ಅನ್ನು ವಶಪಡಿಸಿಕೊಂಡಿತು.

7 / 7

Published On - 12:48 pm, Tue, 4 April 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!