AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2026: ಸೊನ್ನೆ ಸುತ್ತದ ಏಕೈಕ ತಂಡ ದಕ್ಷಿಣ ಆಫ್ರಿಕಾ

T20 World Cup 2026: 2026ರ ಟಿ20 ವಿಶ್ವಕಪ್ ಗುಂಪು ಹಂತದಲ್ಲಿ ದಕ್ಷಿಣ ಆಫ್ರಿಕಾ ಅಪರೂಪದ ದಾಖಲೆ ಬರೆದಿದೆ. ಈ ಆವೃತ್ತಿಯಲ್ಲಿ ತಂಡದ ಯಾವೊಬ್ಬ ಬ್ಯಾಟ್ಸ್‌ಮನ್‌ ಕೂಡ ಶೂನ್ಯಕ್ಕೆ ಔಟಾಗಿಲ್ಲ. ಆದರೆ, ಭಾರತ ಮತ್ತು ಇಟಲಿ ತಂಡದ ಆಟಗಾರರು ತಲಾ 8 ಬಾರಿ ಶೂನ್ಯಕ್ಕೆ ಔಟಾಗಿ ಅನಗತ್ಯ ದಾಖಲೆ ಮಾಡಿದ್ದಾರೆ. ಅದರಲ್ಲೂ ಭಾರತದ ಅಭಿಷೇಕ್ ಶರ್ಮಾ ಸತತ 3 ಬಾರಿ ಶೂನ್ಯಕ್ಕೆ ಔಟಾಗಿ ತಂಡಕ್ಕೆ ದೊಡ್ಡ ಚಿಂತೆಯಾಗಿದ್ದಾರೆ. ಈ ಪಂದ್ಯಾವಳಿಯಲ್ಲೇ ಅತಿ ಹೆಚ್ಚು ಬಾರಿ ಡಕ್‌ಗೆ ಬಲಿಯಾದವರಲ್ಲಿ ಅವರೇ ಮೊದಲಿಗರು.

ಪೃಥ್ವಿಶಂಕರ
|

Updated on: Feb 21, 2026 | 7:54 PM

Share
2026 ರ ಟಿ20 ವಿಶ್ವಕಪ್‌ನಲ್ಲಿ ಒಟ್ಟು 20 ತಂಡಗಳು ಭಾಗವಹಿಸಿದ್ದವು. ಗುಂಪು ಹಂತದಲ್ಲಿ ನಡೆದ 40 ಪಂದ್ಯಗಳ ಬಳಿಕ ಎಂಟು ತಂಡಗಳು ಎರಡನೇ ಸುತ್ತಿಗೆ ಅರ್ಹತೆ ಪಡೆದಿವೆ. ಆದಾಗ್ಯೂ ಗುಂಪು ಹಂತದಲ್ಲಿ ನಡೆದ ಈ 40 ಪಂದ್ಯಗಳಲ್ಲಿ ದಕ್ಷಿಣ ಆಫ್ರಿಕಾ ತಂಡ ಮಾತ್ರ ಯಾವ ತಂಡಕ್ಕೂ ಸಾಧ್ಯವಾಗದ ಅಪರೂಪದ ಸಾಧನೆಯೊಂದನ್ನು ಮಾಡಿದೆ. ಆ ಸಾಧನೆ ಏನೆಂದರೆ..

2026 ರ ಟಿ20 ವಿಶ್ವಕಪ್‌ನಲ್ಲಿ ಒಟ್ಟು 20 ತಂಡಗಳು ಭಾಗವಹಿಸಿದ್ದವು. ಗುಂಪು ಹಂತದಲ್ಲಿ ನಡೆದ 40 ಪಂದ್ಯಗಳ ಬಳಿಕ ಎಂಟು ತಂಡಗಳು ಎರಡನೇ ಸುತ್ತಿಗೆ ಅರ್ಹತೆ ಪಡೆದಿವೆ. ಆದಾಗ್ಯೂ ಗುಂಪು ಹಂತದಲ್ಲಿ ನಡೆದ ಈ 40 ಪಂದ್ಯಗಳಲ್ಲಿ ದಕ್ಷಿಣ ಆಫ್ರಿಕಾ ತಂಡ ಮಾತ್ರ ಯಾವ ತಂಡಕ್ಕೂ ಸಾಧ್ಯವಾಗದ ಅಪರೂಪದ ಸಾಧನೆಯೊಂದನ್ನು ಮಾಡಿದೆ. ಆ ಸಾಧನೆ ಏನೆಂದರೆ..

1 / 5
ವಾಸ್ತವವಾಗಿ, 2026 ರ ಟಿ20 ವಿಶ್ವಕಪ್‌ನಲ್ಲಿ ಒಂದು ತಂಡದ ಯಾವುದೇ ಬ್ಯಾಟ್ಸ್‌ಮನ್ ಶೂನ್ಯಕ್ಕೆ (0) ಔಟಾಗದ ಏಕೈಕ ತಂಡವೆಂದರೆ ಅದು ದಕ್ಷಿಣ ಆಫ್ರಿಕಾ. ಆಫ್ರಿಕಾ ತಂಡವನ್ನು ಹೊರತುಪಡಿಸಿ ಇತರ ತಂಡಗಳಲ್ಲಿ ಒಬ್ಬರು ಅಥವಾ ಹೆಚ್ಚಿನ ಬ್ಯಾಟ್ಸ್‌ಮನ್‌ಗಳು ಶೂನ್ಯಕ್ಕೆ ಔಟಾಗಿದ್ದಾರೆ.

ವಾಸ್ತವವಾಗಿ, 2026 ರ ಟಿ20 ವಿಶ್ವಕಪ್‌ನಲ್ಲಿ ಒಂದು ತಂಡದ ಯಾವುದೇ ಬ್ಯಾಟ್ಸ್‌ಮನ್ ಶೂನ್ಯಕ್ಕೆ (0) ಔಟಾಗದ ಏಕೈಕ ತಂಡವೆಂದರೆ ಅದು ದಕ್ಷಿಣ ಆಫ್ರಿಕಾ. ಆಫ್ರಿಕಾ ತಂಡವನ್ನು ಹೊರತುಪಡಿಸಿ ಇತರ ತಂಡಗಳಲ್ಲಿ ಒಬ್ಬರು ಅಥವಾ ಹೆಚ್ಚಿನ ಬ್ಯಾಟ್ಸ್‌ಮನ್‌ಗಳು ಶೂನ್ಯಕ್ಕೆ ಔಟಾಗಿದ್ದಾರೆ.

2 / 5
ಮತ್ತೊಂದೆಡೆ, 2026 ರ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಅನಗತ್ಯ ದಾಖಲೆಯನ್ನು ನಿರ್ಮಿಸಿದೆ. ಇಲ್ಲಿಯವರೆಗೆ ಪಂದ್ಯಾವಳಿಯಲ್ಲಿ, ಭಾರತ ಮತ್ತು ಇಟಲಿ ತಂಡಗಳ ಆಟಗಾರರು ತಲಾ ಎಂಟು ಬಾರಿ ಶೂನ್ಯಕ್ಕೆ ಔಟಾಗುವ ಮೂಲಕ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿವೆ. ಇದಕ್ಕೆ ದೊಡ್ಡ ಕಾರಣ ಭಾರತೀಯ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರ ಕಳಪೆ ಫಾರ್ಮ್.

ಮತ್ತೊಂದೆಡೆ, 2026 ರ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಅನಗತ್ಯ ದಾಖಲೆಯನ್ನು ನಿರ್ಮಿಸಿದೆ. ಇಲ್ಲಿಯವರೆಗೆ ಪಂದ್ಯಾವಳಿಯಲ್ಲಿ, ಭಾರತ ಮತ್ತು ಇಟಲಿ ತಂಡಗಳ ಆಟಗಾರರು ತಲಾ ಎಂಟು ಬಾರಿ ಶೂನ್ಯಕ್ಕೆ ಔಟಾಗುವ ಮೂಲಕ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿವೆ. ಇದಕ್ಕೆ ದೊಡ್ಡ ಕಾರಣ ಭಾರತೀಯ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರ ಕಳಪೆ ಫಾರ್ಮ್.

3 / 5
ಅಭಿಷೇಕ್ ಶರ್ಮಾ ಟೂರ್ನಿಯಲ್ಲಿ ಸತತ ಮೂರು ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಅಮೆರಿಕ, ಪಾಕಿಸ್ತಾನ ಮತ್ತು ನೆದರ್‌ಲ್ಯಾಂಡ್ಸ್ ವಿರುದ್ಧ ಅವರು ಯಾವುದೇ ರನ್ ಗಳಿಸದೆ ಔಟಾಗಿರುವುದು ಕಳವಳಕಾರಿಯಾಗಿದೆ. ಈ ಆವೃತ್ತಿಯಲ್ಲಿ ಅತಿ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಬ್ಯಾಟ್ಸ್‌ಮನ್ ಕೂಡ ಅಭಿಷೇಕ್.

ಅಭಿಷೇಕ್ ಶರ್ಮಾ ಟೂರ್ನಿಯಲ್ಲಿ ಸತತ ಮೂರು ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಅಮೆರಿಕ, ಪಾಕಿಸ್ತಾನ ಮತ್ತು ನೆದರ್‌ಲ್ಯಾಂಡ್ಸ್ ವಿರುದ್ಧ ಅವರು ಯಾವುದೇ ರನ್ ಗಳಿಸದೆ ಔಟಾಗಿರುವುದು ಕಳವಳಕಾರಿಯಾಗಿದೆ. ಈ ಆವೃತ್ತಿಯಲ್ಲಿ ಅತಿ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಬ್ಯಾಟ್ಸ್‌ಮನ್ ಕೂಡ ಅಭಿಷೇಕ್.

4 / 5
ಏತನ್ಮಧ್ಯೆ, ದಕ್ಷಿಣ ಆಫ್ರಿಕಾ ತನ್ನ ಗುಂಪು ಹಂತದ ನಾಲ್ಕು ಪಂದ್ಯಗಳನ್ನು ಗೆದ್ದು ಸೂಪರ್ 8 ರಲ್ಲಿ ಅಗ್ರಸ್ಥಾನದಲ್ಲಿದೆ. ಕ್ವಿಂಟನ್ ಡಿ ಕಾಕ್, ರಯಾನ್ ರಿಕಲ್ಟನ್, ಐಡೆನ್ ಮಾರ್ಕ್ರಾಮ್ ಮತ್ತು ಟ್ರಿಸ್ಟಾನ್ ಸ್ಟಬ್ಸ್ ಅವರನ್ನು ಒಳಗೊಂಡ ಅವರ ಬ್ಯಾಟಿಂಗ್ ತಂಡವು ಸ್ಥಿರವಾಗಿ ರನ್ ಗಳಿಸುವುದನ್ನು ಮುಂದುವರೆಸಿದೆ. ಇದೀಗ ಆಫ್ರಿಕಾ ತಂಡ ಸೂಪರ್ 8 ಸುತ್ತಿನಲ್ಲಿ ಭಾರತ, ವೆಸ್ಟ್ ಇಂಡೀಸ್ ಮತ್ತು ಜಿಂಬಾಬ್ವೆಯನ್ನು ಎದುರಿಸಲಿದ್ದಾರೆ.

ಏತನ್ಮಧ್ಯೆ, ದಕ್ಷಿಣ ಆಫ್ರಿಕಾ ತನ್ನ ಗುಂಪು ಹಂತದ ನಾಲ್ಕು ಪಂದ್ಯಗಳನ್ನು ಗೆದ್ದು ಸೂಪರ್ 8 ರಲ್ಲಿ ಅಗ್ರಸ್ಥಾನದಲ್ಲಿದೆ. ಕ್ವಿಂಟನ್ ಡಿ ಕಾಕ್, ರಯಾನ್ ರಿಕಲ್ಟನ್, ಐಡೆನ್ ಮಾರ್ಕ್ರಾಮ್ ಮತ್ತು ಟ್ರಿಸ್ಟಾನ್ ಸ್ಟಬ್ಸ್ ಅವರನ್ನು ಒಳಗೊಂಡ ಅವರ ಬ್ಯಾಟಿಂಗ್ ತಂಡವು ಸ್ಥಿರವಾಗಿ ರನ್ ಗಳಿಸುವುದನ್ನು ಮುಂದುವರೆಸಿದೆ. ಇದೀಗ ಆಫ್ರಿಕಾ ತಂಡ ಸೂಪರ್ 8 ಸುತ್ತಿನಲ್ಲಿ ಭಾರತ, ವೆಸ್ಟ್ ಇಂಡೀಸ್ ಮತ್ತು ಜಿಂಬಾಬ್ವೆಯನ್ನು ಎದುರಿಸಲಿದ್ದಾರೆ.

5 / 5
Follow Us
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ