AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುರ್ಗಾ ಪೂಜೆ-ದಸರಾ ವೇಳೆ ಮೂವರು ಕ್ರಿಕೆಟಿಗರಿಗೆ ಕೊಲೆ ಬೆದರಿಕೆ..!

Mohammed Shami: ಆದರೆ ಈ ಒಳಿತಿನ ಸಂದೇಶದ ನಡುವೆ ಟೀಮ್ ಇಂಡಿಯಾದ ಸ್ಟಾರ್ ಕ್ರಿಕೆಟಿಗ ಮೊಹಮ್ಮದ್ ಶಮಿಗೆ ಕೆಡಕನ್ನು ಬಯಸಿ ಬೆದರಿಕೆ ಒಡ್ಡಿದ ಘಟನೆ ಕೂಡ ನಡೆದಿದೆ.

TV9 Web
| Edited By: |

Updated on: Oct 06, 2022 | 3:55 PM

Share
ಬುಧವಾರ ದೇಶಾದ್ಯಂತ ಸಂಭ್ರಮದಿಂದ ದಸರಾ ಹಬ್ಬವನ್ನು ಆಚರಿಸಲಾಗಿದೆ. ದೇಶದ ಹಲವು ಭಾಗಗಳಲ್ಲಿ ರಾವಣ ದಹನ ಮಾಡಿ ಕೆಡುಕಿನ ಮೇಲೆ ಗೆಲುವಿನ ಸಂದೇಶ ಸಾರಲಾಗಿತ್ತು. ಆದರೆ ಈ ಒಳಿತಿನ ಸಂದೇಶದ ನಡುವೆ ಟೀಮ್ ಇಂಡಿಯಾದ ಸ್ಟಾರ್ ಕ್ರಿಕೆಟಿಗ ಮೊಹಮ್ಮದ್ ಶಮಿಗೆ ಕೆಡಕನ್ನು ಬಯಸಿ ಬೆದರಿಕೆ ಒಡ್ಡಿದ ಘಟನೆ ಕೂಡ ನಡೆದಿದೆ.

ಬುಧವಾರ ದೇಶಾದ್ಯಂತ ಸಂಭ್ರಮದಿಂದ ದಸರಾ ಹಬ್ಬವನ್ನು ಆಚರಿಸಲಾಗಿದೆ. ದೇಶದ ಹಲವು ಭಾಗಗಳಲ್ಲಿ ರಾವಣ ದಹನ ಮಾಡಿ ಕೆಡುಕಿನ ಮೇಲೆ ಗೆಲುವಿನ ಸಂದೇಶ ಸಾರಲಾಗಿತ್ತು. ಆದರೆ ಈ ಒಳಿತಿನ ಸಂದೇಶದ ನಡುವೆ ಟೀಮ್ ಇಂಡಿಯಾದ ಸ್ಟಾರ್ ಕ್ರಿಕೆಟಿಗ ಮೊಹಮ್ಮದ್ ಶಮಿಗೆ ಕೆಡಕನ್ನು ಬಯಸಿ ಬೆದರಿಕೆ ಒಡ್ಡಿದ ಘಟನೆ ಕೂಡ ನಡೆದಿದೆ.

1 / 6
ಬುಧವಾರ ಭಾರತ ತಂಡದ ವೇಗಿ ಮೊಹಮ್ಮದ್ ಶಮಿ ಸೋಷಿಯಲ್ ಮೀಡಿಯಾ ಮೂಲಕ ದಸರಾ ಹಬ್ಬದ ಶುಭಾಶಯ ಕೋರಿದ್ದರು. ಈ ಶುಭಕಾಮನೆಯ ಸಂದೇಶವು ಇದೀಗ ಮೂಲಭೂತವಾದಿಗಳ ಕಣ್ಣು ಕೆಂಪಾಗಿಸಿದೆ. ಕೆಲವರು ಶಮಿಯ ಧರ್ಮ ನಿಂದನೆ ಮಾಡಿದರೆ, ಮತ್ತೆ ಕೆಲವರು ಟೀಮ್ ಆಟಗಾರನ ವಿರುದ್ದ ಫತ್ವಾ ಹೊರಡಿಸುವುದಾಗಿ ಬೆದರಿಕೆ ಹಾಕಿದ್ದಾರೆ.

ಬುಧವಾರ ಭಾರತ ತಂಡದ ವೇಗಿ ಮೊಹಮ್ಮದ್ ಶಮಿ ಸೋಷಿಯಲ್ ಮೀಡಿಯಾ ಮೂಲಕ ದಸರಾ ಹಬ್ಬದ ಶುಭಾಶಯ ಕೋರಿದ್ದರು. ಈ ಶುಭಕಾಮನೆಯ ಸಂದೇಶವು ಇದೀಗ ಮೂಲಭೂತವಾದಿಗಳ ಕಣ್ಣು ಕೆಂಪಾಗಿಸಿದೆ. ಕೆಲವರು ಶಮಿಯ ಧರ್ಮ ನಿಂದನೆ ಮಾಡಿದರೆ, ಮತ್ತೆ ಕೆಲವರು ಟೀಮ್ ಆಟಗಾರನ ವಿರುದ್ದ ಫತ್ವಾ ಹೊರಡಿಸುವುದಾಗಿ ಬೆದರಿಕೆ ಹಾಕಿದ್ದಾರೆ.

2 / 6
ಭಗವಾನ್ ರಾಮನು ನಿಮ್ಮ ಜೀವನದಲ್ಲಿ ಬಹಳಷ್ಟು ಸಂತೋಷ, ಸಮೃದ್ಧಿ ಮತ್ತು ಯಶಸ್ಸನ್ನು ತುಂಬಲಿ ಎಂದು ನಾನು ಪ್ರಾರ್ಥಿಸುತ್ತೇನೆ. ನಿಮಗೂ ಮತ್ತು ನಿಮ್ಮ ಕುಟುಂಬದವರಿಗೂ ದಸರಾ ಹಬ್ಬದ ಶುಭಾಶಯಗಳು ಎಂದು ಶಮಿ ಹಾಕಿರುವ ಟ್ವೀಟ್ ಪೋಸ್ಟರ್​ಗೆ ಹಲವರು ಬೆದರಿಕೆ ಹಾಕಿದ್ದಾರೆ. ಈ ಎಲ್ಲಾ ಆಕ್ರೋಶಗಳ ನಡುವೆಯೂ ಟೀಮ್ ಇಂಡಿಯಾ ಆಟಗಾರ ತನ್ನ ಟ್ವೀಟ್ ಅನ್ನು ಹಾಗೆಯೇ ಉಳಿಸಿಕೊಂಡಿದ್ದಾರೆ.

ಭಗವಾನ್ ರಾಮನು ನಿಮ್ಮ ಜೀವನದಲ್ಲಿ ಬಹಳಷ್ಟು ಸಂತೋಷ, ಸಮೃದ್ಧಿ ಮತ್ತು ಯಶಸ್ಸನ್ನು ತುಂಬಲಿ ಎಂದು ನಾನು ಪ್ರಾರ್ಥಿಸುತ್ತೇನೆ. ನಿಮಗೂ ಮತ್ತು ನಿಮ್ಮ ಕುಟುಂಬದವರಿಗೂ ದಸರಾ ಹಬ್ಬದ ಶುಭಾಶಯಗಳು ಎಂದು ಶಮಿ ಹಾಕಿರುವ ಟ್ವೀಟ್ ಪೋಸ್ಟರ್​ಗೆ ಹಲವರು ಬೆದರಿಕೆ ಹಾಕಿದ್ದಾರೆ. ಈ ಎಲ್ಲಾ ಆಕ್ರೋಶಗಳ ನಡುವೆಯೂ ಟೀಮ್ ಇಂಡಿಯಾ ಆಟಗಾರ ತನ್ನ ಟ್ವೀಟ್ ಅನ್ನು ಹಾಗೆಯೇ ಉಳಿಸಿಕೊಂಡಿದ್ದಾರೆ.

3 / 6
ದಸರಾ ಮತ್ತು ದುರ್ಗಾ ಪೂಜೆಯ ಸಂದರ್ಭದಲ್ಲಿ ಕ್ರಿಕೆಟಿಗರಿಗೆ ಬೆದರಿಕೆಯೊಡ್ಡಿದ ಪ್ರಕರಣ ಇದೇ ಮೊದಲೇನಲ್ಲ.  ಈ ಹಿಂದೆ ಇಬ್ಬರು ಬಾಂಗ್ಲಾದೇಶ ಕ್ರಿಕೆಟಿಗರಿಗೂ ಇಂತಹ ಬೆದರಿಕೆಗಳು ಬಂದಿದ್ದವು ಎಂಬುದು ಗಮನಾರ್ಹ.

ದಸರಾ ಮತ್ತು ದುರ್ಗಾ ಪೂಜೆಯ ಸಂದರ್ಭದಲ್ಲಿ ಕ್ರಿಕೆಟಿಗರಿಗೆ ಬೆದರಿಕೆಯೊಡ್ಡಿದ ಪ್ರಕರಣ ಇದೇ ಮೊದಲೇನಲ್ಲ. ಈ ಹಿಂದೆ ಇಬ್ಬರು ಬಾಂಗ್ಲಾದೇಶ ಕ್ರಿಕೆಟಿಗರಿಗೂ ಇಂತಹ ಬೆದರಿಕೆಗಳು ಬಂದಿದ್ದವು ಎಂಬುದು ಗಮನಾರ್ಹ.

4 / 6
2020ರಲ್ಲಿ ಬಾಂಗ್ಲಾದೇಶದ ಸ್ಟಾರ್ ಕ್ರಿಕೆಟಿಗ ಶಕೀಬ್ ಅಲ್ ಹಸನ್‌ಗೆ ಉಗ್ರ ಮೂಲಭೂತವಾದಿಗಳು ಬೆದರಿಕೆಯೊಡ್ಡಿದ್ದರು. ಬಾಂಗ್ಲಾ ಕ್ರಿಕೆಟಿಗ ಕೋಲ್ಕತ್ತಾದಲ್ಲಿ ಕಾಳಿ ಪೂಜೆಯಲ್ಲಿ ಭಾಗವಹಿಸಿದ್ದಕ್ಕೆ, ವ್ಯಕ್ತಿಯೊಬ್ಬರು ವಿಡಿಯೋ ಕರೆ ಮಾಡಿ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು. ಈ ಬೆದರಿಕೆಯ ನಂತರ, ಶಕೀಬ್ ಅಲ್ ಸಹನ್ ಕ್ಷಮೆಯಾಚಿಸಿದ್ದರು.

2020ರಲ್ಲಿ ಬಾಂಗ್ಲಾದೇಶದ ಸ್ಟಾರ್ ಕ್ರಿಕೆಟಿಗ ಶಕೀಬ್ ಅಲ್ ಹಸನ್‌ಗೆ ಉಗ್ರ ಮೂಲಭೂತವಾದಿಗಳು ಬೆದರಿಕೆಯೊಡ್ಡಿದ್ದರು. ಬಾಂಗ್ಲಾ ಕ್ರಿಕೆಟಿಗ ಕೋಲ್ಕತ್ತಾದಲ್ಲಿ ಕಾಳಿ ಪೂಜೆಯಲ್ಲಿ ಭಾಗವಹಿಸಿದ್ದಕ್ಕೆ, ವ್ಯಕ್ತಿಯೊಬ್ಬರು ವಿಡಿಯೋ ಕರೆ ಮಾಡಿ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು. ಈ ಬೆದರಿಕೆಯ ನಂತರ, ಶಕೀಬ್ ಅಲ್ ಸಹನ್ ಕ್ಷಮೆಯಾಚಿಸಿದ್ದರು.

5 / 6
ಶಕೀಬ್ ನಂತರ ಬಾಂಗ್ಲಾದೇಶದ ಮತ್ತೋರ್ವ ಕ್ರಿಕೆಟಿಗ ಲಿಟ್ಟನ್ ದಾಸ್ ಅವರಿಗೂ ಇಂತಹ ಬೆದರಿಕೆಗಳು ಬಂದಿದ್ದವು.  2020 ರಲ್ಲಿ, ಲಿಟನ್ ದಾಸ್ ಫೇಸ್‌ಬುಕ್‌ನಲ್ಲಿ ದುರ್ಗಾ ಪೂಜೆಗೆ ಶುಭಕೋರಿದ್ದರು. ಈ ವೇಳೆ ಅನೇಕರು ಆಕ್ರೋಶ ವ್ಯಕ್ತಪಡಿಸಿ ಬೆದರಿಕೆ ಹಾಕಿದ್ದರು. ಅಷ್ಟೇ ಅಲ್ಲದೆ ಇತ್ತೀಚೆಗೆ ನವರಾತ್ರಿಯ ಸಂದರ್ಭದಲ್ಲಿ ಶುಭಾಶಯ ತಿಳಿಸಿ ಹಾಕಿದ ಪೋಸ್ಟ್​ಗೂ ಮೂಲಭೂತವಾದಿಗಳು ಆಕ್ರೋಶ ವ್ಯಕ್ತಪಡಿಸಿ, ಬಾಂಗ್ಲಾ ಕ್ರಿಕೆಟಿಗನಿಗೆ ಕೊಲೆ ಬೆದರಿಕೆಯೊಡ್ಡಿದ್ದರು.

ಶಕೀಬ್ ನಂತರ ಬಾಂಗ್ಲಾದೇಶದ ಮತ್ತೋರ್ವ ಕ್ರಿಕೆಟಿಗ ಲಿಟ್ಟನ್ ದಾಸ್ ಅವರಿಗೂ ಇಂತಹ ಬೆದರಿಕೆಗಳು ಬಂದಿದ್ದವು. 2020 ರಲ್ಲಿ, ಲಿಟನ್ ದಾಸ್ ಫೇಸ್‌ಬುಕ್‌ನಲ್ಲಿ ದುರ್ಗಾ ಪೂಜೆಗೆ ಶುಭಕೋರಿದ್ದರು. ಈ ವೇಳೆ ಅನೇಕರು ಆಕ್ರೋಶ ವ್ಯಕ್ತಪಡಿಸಿ ಬೆದರಿಕೆ ಹಾಕಿದ್ದರು. ಅಷ್ಟೇ ಅಲ್ಲದೆ ಇತ್ತೀಚೆಗೆ ನವರಾತ್ರಿಯ ಸಂದರ್ಭದಲ್ಲಿ ಶುಭಾಶಯ ತಿಳಿಸಿ ಹಾಕಿದ ಪೋಸ್ಟ್​ಗೂ ಮೂಲಭೂತವಾದಿಗಳು ಆಕ್ರೋಶ ವ್ಯಕ್ತಪಡಿಸಿ, ಬಾಂಗ್ಲಾ ಕ್ರಿಕೆಟಿಗನಿಗೆ ಕೊಲೆ ಬೆದರಿಕೆಯೊಡ್ಡಿದ್ದರು.

6 / 6
ನನ್ನನ್ನು ಮುಗಿಸಲೆಂದೇ ಗುಂಡಿನ ದಾಳಿ; ಜನಾರ್ದನ ರೆಡ್ಡಿ ಆರೋಪ
ನನ್ನನ್ನು ಮುಗಿಸಲೆಂದೇ ಗುಂಡಿನ ದಾಳಿ; ಜನಾರ್ದನ ರೆಡ್ಡಿ ಆರೋಪ
ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್; ಕಾಂಗ್ರೆಸ್​​ ಕಾರ್ಯಕರ್ತ ಸಾವು
ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್; ಕಾಂಗ್ರೆಸ್​​ ಕಾರ್ಯಕರ್ತ ಸಾವು
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್