AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: 4ನೇ ಟೆಸ್ಟ್​ನಿಂದ ಟೀಮ್ ಇಂಡಿಯಾದ ಮೂವರು ಔಟ್..!

IND vs ENG 4th Test: ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಏಕೆಂದರೆ 5 ಪಂದ್ಯಗಳ ಸರಣಿಯಲ್ಲಿ ಇಂಗ್ಲೆಂಡ್ ಈಗಾಗಲೇ 2-1 ಅಂತರದಿಂದ ಮುನ್ನಡೆ ಹೊಂದಿದ್ದು, ಹೀಗಾಗಿ ಮ್ಯಾಚೆಂಸ್ಟರ್​ನಲ್ಲಿ ಭಾರತ ತಂಡ ಗೆಲ್ಲುವುದು ಅಥವಾ ಡ್ರಾ ಸಾಧಿಸುವುದು ಅನಿವಾರ್ಯ. ಆದರೆ ಈ ನಿರ್ಣಾಯಕ ಪಂದ್ಯಕ್ಕೆ ಟೀಮ್ ಇಂಡಿಯಾದ ಮೂವರು ಆಟಗಾರರು ಅಲಭ್ಯರಾಗುವುದು ಬಹುತೇಕ ಖಚಿತವಾಗಿದೆ.

ಝಾಹಿರ್ ಯೂಸುಫ್
|

Updated on: Jul 21, 2025 | 7:28 AM

Share
India vs England 4th Test: ಭಾರತ ಮತ್ತು ಇಂಗ್ಲೆಂಡ್ ನಡುವಣ 4ನೇ ಟೆಸ್ಟ್ ಪಂದ್ಯವು ಜುಲೈ 23 ರಿಂದ ಶುರುವಾಗಲಿದೆ. ಮ್ಯಾಚೆಂಸ್ಟರ್​ನ ಓಲ್ಡ್ ಟ್ರಾಫೋರ್ಡ್ ಮೈದಾನದಲ್ಲಿ ಜರುಗಲಿರುವ ಈ ಪಂದ್ಯದಿಂದ ಟೀಮ್ ಇಂಡಿಯಾದ ಮೂವರು ಆಟಗಾರರು ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ. 

India vs England 4th Test: ಭಾರತ ಮತ್ತು ಇಂಗ್ಲೆಂಡ್ ನಡುವಣ 4ನೇ ಟೆಸ್ಟ್ ಪಂದ್ಯವು ಜುಲೈ 23 ರಿಂದ ಶುರುವಾಗಲಿದೆ. ಮ್ಯಾಚೆಂಸ್ಟರ್​ನ ಓಲ್ಡ್ ಟ್ರಾಫೋರ್ಡ್ ಮೈದಾನದಲ್ಲಿ ಜರುಗಲಿರುವ ಈ ಪಂದ್ಯದಿಂದ ಟೀಮ್ ಇಂಡಿಯಾದ ಮೂವರು ಆಟಗಾರರು ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ. 

1 / 6
ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಬಳಿಕ ನಡೆದ ಅಭ್ಯಾಸದ ವೇಳೆ ಟೀಮ್ ಇಂಡಿಯಾದ ಎಡಗೈ ವೇಗಿ ಅರ್ಷದೀಪ್ ಸಿಂಗ್ ಅವರ ಕೈಗೆ ಗಾಯವಾಗಿದ್ದು, ಹೀಗಾಗಿ ಮ್ಯಾಂಚೆಸ್ಟರ್​ ಟೆಸ್ಟ್ ಪಂದ್ಯದಲ್ಲೂ ಅವರು ಕಾಣಿಸಿಕೊಳ್ಳುವುದಿಲ್ಲ.

ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಬಳಿಕ ನಡೆದ ಅಭ್ಯಾಸದ ವೇಳೆ ಟೀಮ್ ಇಂಡಿಯಾದ ಎಡಗೈ ವೇಗಿ ಅರ್ಷದೀಪ್ ಸಿಂಗ್ ಅವರ ಕೈಗೆ ಗಾಯವಾಗಿದ್ದು, ಹೀಗಾಗಿ ಮ್ಯಾಂಚೆಸ್ಟರ್​ ಟೆಸ್ಟ್ ಪಂದ್ಯದಲ್ಲೂ ಅವರು ಕಾಣಿಸಿಕೊಳ್ಳುವುದಿಲ್ಲ.

2 / 6
ಇನ್ನು ಬರ್ಮಿಂಗ್​ಹ್ಯಾಮ್​ ಟೆಸ್ಟ್​ನ ಗೆಲುವಿನ ರೂವಾರಿಗಳಲ್ಲಿ ಒಬ್ಬರಾಗಿರುವ ಆಕಾಶ್ ದೀಪ್ ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಲಾರ್ಡ್ಸ್​ ಟೆಸ್ಟ್ ಪಂದ್ಯದ 4ನೇ ದಿನದಾಟದಂದು ತೊಡೆಸಂದು ಗಾಯದ ಸಮಸ್ಯೆಗೆ ಒಳಗಾಗಿದ್ದ ಆಕಾಶ್ ದೀಪ್ ದ್ವಿತೀಯ ಇನಿಂಗ್ಸ್​ನಲ್ಲಿ ಕೇವಲ 8 ಓವರ್​ಗಳನ್ನು ಮಾತ್ರ ಎಸೆದಿದ್ದರು. ಇತ್ತ ಫಿಟ್​ನೆಸ್ ಸಮಸ್ಯೆಗೆ ಒಳಗಾಗಿರುವ ಅವರು 4ನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ಟೀಮ್ ಇಂಡಿಯಾ ನಾಯಕ ಶುಭ್​ಮನ್ ಗಿಲ್ ತಿಳಿಸಿದ್ದಾರೆ.

ಇನ್ನು ಬರ್ಮಿಂಗ್​ಹ್ಯಾಮ್​ ಟೆಸ್ಟ್​ನ ಗೆಲುವಿನ ರೂವಾರಿಗಳಲ್ಲಿ ಒಬ್ಬರಾಗಿರುವ ಆಕಾಶ್ ದೀಪ್ ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಲಾರ್ಡ್ಸ್​ ಟೆಸ್ಟ್ ಪಂದ್ಯದ 4ನೇ ದಿನದಾಟದಂದು ತೊಡೆಸಂದು ಗಾಯದ ಸಮಸ್ಯೆಗೆ ಒಳಗಾಗಿದ್ದ ಆಕಾಶ್ ದೀಪ್ ದ್ವಿತೀಯ ಇನಿಂಗ್ಸ್​ನಲ್ಲಿ ಕೇವಲ 8 ಓವರ್​ಗಳನ್ನು ಮಾತ್ರ ಎಸೆದಿದ್ದರು. ಇತ್ತ ಫಿಟ್​ನೆಸ್ ಸಮಸ್ಯೆಗೆ ಒಳಗಾಗಿರುವ ಅವರು 4ನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ಟೀಮ್ ಇಂಡಿಯಾ ನಾಯಕ ಶುಭ್​ಮನ್ ಗಿಲ್ ತಿಳಿಸಿದ್ದಾರೆ.

3 / 6
ಹಾಗೆಯೇ ಟೀಮ್ ಇಂಡಿಯಾದ ಯುವ ಆಲ್​ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಕೂಡ ಗಾಯದ ಸಮಸ್ಯೆಗೆ ಒಳಗಾಗಿದ್ದಾರೆ. ಜಿಮ್​ನಲ್ಲಿನ ತರಬೇತಿ ವೇಳೆ ಅವರ ಮೊಣಕಾಲಿಗೆ ಗಾಯವಾಗಿದ್ದು, ಹೀಗಾಗಿ ಇಂಗ್ಲೆಂಡ್ ವಿರುದ್ಧದ ಕೊನೆಯ ಎರಡು ಟೆಸ್ಟ್ ಪಂದ್ಯಗಳಿಂದ ಅವರು ಹೊರಬಿದ್ದಿದ್ದಾರೆ. ಹೀಗಾಗಿ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ನಿತೀಶ್ ಕುಮಾರ್ ಕೂಡ ಅಲಭ್ಯರಾಗಲಿದ್ದಾರೆ.

ಹಾಗೆಯೇ ಟೀಮ್ ಇಂಡಿಯಾದ ಯುವ ಆಲ್​ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಕೂಡ ಗಾಯದ ಸಮಸ್ಯೆಗೆ ಒಳಗಾಗಿದ್ದಾರೆ. ಜಿಮ್​ನಲ್ಲಿನ ತರಬೇತಿ ವೇಳೆ ಅವರ ಮೊಣಕಾಲಿಗೆ ಗಾಯವಾಗಿದ್ದು, ಹೀಗಾಗಿ ಇಂಗ್ಲೆಂಡ್ ವಿರುದ್ಧದ ಕೊನೆಯ ಎರಡು ಟೆಸ್ಟ್ ಪಂದ್ಯಗಳಿಂದ ಅವರು ಹೊರಬಿದ್ದಿದ್ದಾರೆ. ಹೀಗಾಗಿ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ನಿತೀಶ್ ಕುಮಾರ್ ಕೂಡ ಅಲಭ್ಯರಾಗಲಿದ್ದಾರೆ.

4 / 6
ಇತ್ತ ಮೂವರ ಅಲಭ್ಯತೆಯ ನಡುವೆ ಟೀಮ್ ಇಂಡಿಯಾಗೆ ಯುವ ವೇಗಿಯ ಎಂಟ್ರಿಯಾಗಿದೆ. ಈ ಹಿಂದೆ ಭಾರತ ಎ ತಂಡವನ್ನು ಪ್ರತಿನಿಧಿಸಿದ್ದ ಹರ್ಯಾಣದ ಬಲಗೈ ವೇಗಿ ಅನ್ಶುಲ್ ಕಂಬೋಜ್ ಅವರನ್ನು ಭಾರತ ತಂಡಕ್ಕೆ ಸೇರ್ಪಡೆಗೊಳಿಸಲಾಗಿದ್ದು, ಇತ್ತ ಆಕಾಶ್ ದೀಪ್ ಹಾಗೂ ಅರ್ಷದೀಪ್ ಸಿಂಗ್ ಅಲಭ್ಯತೆಯ ನಡುವೆ ಅನ್ಶುಲ್​ಗೆ ಆಡುವ ಬಳಗದಲ್ಲಿ ಚಾನ್ಸ್ ಸಿಗುವ ಸಾಧ್ಯತೆಯಿದೆ.

ಇತ್ತ ಮೂವರ ಅಲಭ್ಯತೆಯ ನಡುವೆ ಟೀಮ್ ಇಂಡಿಯಾಗೆ ಯುವ ವೇಗಿಯ ಎಂಟ್ರಿಯಾಗಿದೆ. ಈ ಹಿಂದೆ ಭಾರತ ಎ ತಂಡವನ್ನು ಪ್ರತಿನಿಧಿಸಿದ್ದ ಹರ್ಯಾಣದ ಬಲಗೈ ವೇಗಿ ಅನ್ಶುಲ್ ಕಂಬೋಜ್ ಅವರನ್ನು ಭಾರತ ತಂಡಕ್ಕೆ ಸೇರ್ಪಡೆಗೊಳಿಸಲಾಗಿದ್ದು, ಇತ್ತ ಆಕಾಶ್ ದೀಪ್ ಹಾಗೂ ಅರ್ಷದೀಪ್ ಸಿಂಗ್ ಅಲಭ್ಯತೆಯ ನಡುವೆ ಅನ್ಶುಲ್​ಗೆ ಆಡುವ ಬಳಗದಲ್ಲಿ ಚಾನ್ಸ್ ಸಿಗುವ ಸಾಧ್ಯತೆಯಿದೆ.

5 / 6
ಭಾರತ ಟೆಸ್ಟ್ ತಂಡ: ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಧ್ರುವ್ ಜುರೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಅನ್ಶುಲ್ ಕಂಬೋಜ್.

ಭಾರತ ಟೆಸ್ಟ್ ತಂಡ: ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಧ್ರುವ್ ಜುರೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಅನ್ಶುಲ್ ಕಂಬೋಜ್.

6 / 6
Follow Us
ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ
ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​
ಏಣಿಯ ಮೇಲೆ ಬ್ಯಾಲೆನ್ಸ್, ಕ್ಯಾಪ್ಟನ್ ಆಗಲು ಏನೆಲ್ಲಾ ಸಾಹಸ: ವಿಡಿಯೋ
ಏಣಿಯ ಮೇಲೆ ಬ್ಯಾಲೆನ್ಸ್, ಕ್ಯಾಪ್ಟನ್ ಆಗಲು ಏನೆಲ್ಲಾ ಸಾಹಸ: ವಿಡಿಯೋ
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ