AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜು ಟು ಯುವರಾಜ್; ಯೋ- ಯೋ ಟೆಸ್ಟ್​ನಲ್ಲಿ ಫೇಲ್ ಆದ ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗರಿವರು

ಕೊಹ್ಲಿ ಟೀಂ ಇಂಡಿಯಾದ ನಾಯಕನಾದ ಬಳಿಕ ತಂಡದಲ್ಲಿ ಸಾಕಷ್ಟು ಬದಲಾವಣೆಗಳಾದವು. ಅದರಲ್ಲಿ ಪ್ರಮುಖವಾದದ್ದು, ಪ್ರತಿಯೊಬ್ಬ ಆಟಗಾರನ ಫಿಟ್ನೆಸ್. ಹೀಗಾಗಿ 2017 ರಲ್ಲಿ, ತಂಡದ ಆಡಳಿತ ಮಂಡಳಿಯೂ ಯೋ-ಯೋ ಪರೀಕ್ಷೆಯನ್ನು ಕಡ್ಡಾಯಗೊಳಿಸಿತು. ಅಂದಿನಿಂದ ಈ ಪರೀಕ್ಷೆಯಲ್ಲಿ ಫೇಲ್ ಆದವರನ್ನು ತಂಡದಿಂದ ಕೈಬಿಡಲು ನಿರ್ಧರಿಸಲಾಯಿತು.

ಪೃಥ್ವಿಶಂಕರ
|

Updated on:Aug 31, 2023 | 2:08 PM

ಕೊಹ್ಲಿ ಟೀಂ ಇಂಡಿಯಾದ ನಾಯಕನಾದ ಬಳಿಕ ತಂಡದಲ್ಲಿ ಸಾಕಷ್ಟು ಬದಲಾವಣೆಗಳಾದವು. ಅದರಲ್ಲಿ ಪ್ರಮುಖವಾದದ್ದು, ಪ್ರತಿಯೊಬ್ಬ ಆಟಗಾರನ ಫಿಟ್ನೆಸ್. ಹೀಗಾಗಿ 2017 ರಲ್ಲಿ, ತಂಡದ ಆಡಳಿತ ಮಂಡಳಿಯೂ ಯೋ-ಯೋ ಪರೀಕ್ಷೆಯನ್ನು ಕಡ್ಡಾಯಗೊಳಿಸಿತು. ಅಂದಿನಿಂದ ಈ ಪರೀಕ್ಷೆಯಲ್ಲಿ ಫೇಲ್ ಆದವರನ್ನು ತಂಡದಿಂದ ಕೈಬಿಡಲು ನಿರ್ಧರಿಸಲಾಯಿತು. ಅಲ್ಲದೆ ಆಟಗಾರರು ತಂಡದಲ್ಲಿ ಸ್ಥಾನ ಪಡೆಯಬೇಕೆಂದರೆ ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದನ್ನು ಕಡ್ಡಾಯಗೊಳಿಸಲಾಯಿತು.

ಕೊಹ್ಲಿ ಟೀಂ ಇಂಡಿಯಾದ ನಾಯಕನಾದ ಬಳಿಕ ತಂಡದಲ್ಲಿ ಸಾಕಷ್ಟು ಬದಲಾವಣೆಗಳಾದವು. ಅದರಲ್ಲಿ ಪ್ರಮುಖವಾದದ್ದು, ಪ್ರತಿಯೊಬ್ಬ ಆಟಗಾರನ ಫಿಟ್ನೆಸ್. ಹೀಗಾಗಿ 2017 ರಲ್ಲಿ, ತಂಡದ ಆಡಳಿತ ಮಂಡಳಿಯೂ ಯೋ-ಯೋ ಪರೀಕ್ಷೆಯನ್ನು ಕಡ್ಡಾಯಗೊಳಿಸಿತು. ಅಂದಿನಿಂದ ಈ ಪರೀಕ್ಷೆಯಲ್ಲಿ ಫೇಲ್ ಆದವರನ್ನು ತಂಡದಿಂದ ಕೈಬಿಡಲು ನಿರ್ಧರಿಸಲಾಯಿತು. ಅಲ್ಲದೆ ಆಟಗಾರರು ತಂಡದಲ್ಲಿ ಸ್ಥಾನ ಪಡೆಯಬೇಕೆಂದರೆ ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದನ್ನು ಕಡ್ಡಾಯಗೊಳಿಸಲಾಯಿತು.

1 / 7
ಇತ್ತೀಚೆಗೆ, ಟೀಂ ಇಂಡಿಯಾ ಆಟಗಾರರು 2023 ರ ಏಷ್ಯಾಕಪ್‌ಗಾಗಿ ಶ್ರೀಲಂಕಾಕ್ಕೆ ಹಾರುವ ಮೊದಲು ಆಲೂರಿನಲ್ಲಿ ಯೋ-ಯೋ ಟೆಸ್ಟ್‌ ತೆಗೆದುಕೊಂಡಿದ್ದರು. ಇದರಲ್ಲಿ ಕೆಲವು ಕ್ರಿಕೆಟಿಗರ ಪರೀಕ್ಷೆಯ ರಿಸಲ್ಟ್ ಎಲ್ಲರನ್ನೂ ಅಚ್ಚರಿಗೊಳಿಸಿತ್ತು. ಸಿಕ್ಕಿರುವ ಮಾಹಿತಿ ಪ್ರಕಾರ ಯೋ ಯೋ ಟೆಸ್ಟ್ ತೆಗೆದುಕೊಂಡವರೆಲ್ಲ ಪಾಸ್ ಆಗಿದ್ದಾರೆ ಎಂಬ ಮಾಹಿತಿ ಇದೆ. ಆದರೆ ಕೆಲವೇ ವರ್ಷಗಳ ಹಿಂದೆ ಈ ಟೆಸ್ಟ್​ನಲ್ಲಿ ಪಾಸ್ ಆಗದೆ ಟೀಂ ಇಂಡಿಯಾದ ಅವಕಾಶ ವಂಚಿತರಾದ ಸಾಕಷ್ಟು ಆಟಗಾರರಿದ್ದಾರೆ. ಅವರಲ್ಲಿ ಈ ನಾಲ್ಕು ಕ್ರಿಕೆಟಿಗರು ಪ್ರಮುಖರಾಗಿದ್ದಾರೆ.

ಇತ್ತೀಚೆಗೆ, ಟೀಂ ಇಂಡಿಯಾ ಆಟಗಾರರು 2023 ರ ಏಷ್ಯಾಕಪ್‌ಗಾಗಿ ಶ್ರೀಲಂಕಾಕ್ಕೆ ಹಾರುವ ಮೊದಲು ಆಲೂರಿನಲ್ಲಿ ಯೋ-ಯೋ ಟೆಸ್ಟ್‌ ತೆಗೆದುಕೊಂಡಿದ್ದರು. ಇದರಲ್ಲಿ ಕೆಲವು ಕ್ರಿಕೆಟಿಗರ ಪರೀಕ್ಷೆಯ ರಿಸಲ್ಟ್ ಎಲ್ಲರನ್ನೂ ಅಚ್ಚರಿಗೊಳಿಸಿತ್ತು. ಸಿಕ್ಕಿರುವ ಮಾಹಿತಿ ಪ್ರಕಾರ ಯೋ ಯೋ ಟೆಸ್ಟ್ ತೆಗೆದುಕೊಂಡವರೆಲ್ಲ ಪಾಸ್ ಆಗಿದ್ದಾರೆ ಎಂಬ ಮಾಹಿತಿ ಇದೆ. ಆದರೆ ಕೆಲವೇ ವರ್ಷಗಳ ಹಿಂದೆ ಈ ಟೆಸ್ಟ್​ನಲ್ಲಿ ಪಾಸ್ ಆಗದೆ ಟೀಂ ಇಂಡಿಯಾದ ಅವಕಾಶ ವಂಚಿತರಾದ ಸಾಕಷ್ಟು ಆಟಗಾರರಿದ್ದಾರೆ. ಅವರಲ್ಲಿ ಈ ನಾಲ್ಕು ಕ್ರಿಕೆಟಿಗರು ಪ್ರಮುಖರಾಗಿದ್ದಾರೆ.

2 / 7
ಸಂಜು ಸ್ಯಾಮ್ಸನ್: 2018 ರಲ್ಲಿ ಭಾರತ ಎ ತಂಡ ಇಂಗ್ಲೆಂಡ್ ಪ್ರವಾಸ ಮಾಡುವ ಮೊದಲು ಯೋ- ಯೋ ಟೆಸ್ಟ್ ಮಾಡಲಾಗಿತ್ತು. ಆ ಪರೀಕ್ಷೆಯಲ್ಲಿ ಸಂಜು ಸ್ಯಾಮ್ಸನ್ ವಿಫಲರಾಗಿದ್ದರು. ಹೀಗಾಗಿ ಅವರನ್ನು ತಂಡದಿಂದ ಕೈಬಿಡಲಾಯಿತು. ಪರೀಕ್ಷೆಯನ್ನು ಪೂರ್ಣಗೊಳಿಸುವಲ್ಲಿ ವಿಫಲರಾದ ಸ್ಯಾಮ್ಸನ್ ಬದಲಿಗೆ ಇಶಾನ್ ಕಿಶನ್ ಅವರಿಗೆ ತಂಡದಲ್ಲಿ ಸ್ಥಾನ ನೀಡಲಾಯಿತು.

ಸಂಜು ಸ್ಯಾಮ್ಸನ್: 2018 ರಲ್ಲಿ ಭಾರತ ಎ ತಂಡ ಇಂಗ್ಲೆಂಡ್ ಪ್ರವಾಸ ಮಾಡುವ ಮೊದಲು ಯೋ- ಯೋ ಟೆಸ್ಟ್ ಮಾಡಲಾಗಿತ್ತು. ಆ ಪರೀಕ್ಷೆಯಲ್ಲಿ ಸಂಜು ಸ್ಯಾಮ್ಸನ್ ವಿಫಲರಾಗಿದ್ದರು. ಹೀಗಾಗಿ ಅವರನ್ನು ತಂಡದಿಂದ ಕೈಬಿಡಲಾಯಿತು. ಪರೀಕ್ಷೆಯನ್ನು ಪೂರ್ಣಗೊಳಿಸುವಲ್ಲಿ ವಿಫಲರಾದ ಸ್ಯಾಮ್ಸನ್ ಬದಲಿಗೆ ಇಶಾನ್ ಕಿಶನ್ ಅವರಿಗೆ ತಂಡದಲ್ಲಿ ಸ್ಥಾನ ನೀಡಲಾಯಿತು.

3 / 7
ಆ ಬಳಿಕ ಒಂದು ತಿಂಗಳ ನಂತರ ನಡೆದ ಯೋ-ಯೋ ಟೆಸ್ಟ್‌ನಲ್ಲಿ ತೇರ್ಗಡೆಯಾದ ಸಂಜುರನ್ನು ಭಾರತ A ತಂಡಕ್ಕೆ ಆಯ್ಕೆ ಮಾಡಲಾಯಿತು. ಆದರೆ ಟೀಂ ಇಂಡಿಯಾಕ್ಕೆ ಮರಳಲು ಸ್ಯಾಮ್ಸನ್​ಗೆ ಬರೋಬ್ಬರಿ ನಾಲ್ಕು ವರ್ಷಗಳು ಬೇಕಾಯಿತು. ಇದಲ್ಲದೆ ಟೀಂ ಇಂಡಿಯಾಕ್ಕೆ ಮರಳಿದ ನಂತರವೂ ಸಂಜುಗೆ ತಂಡದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ಆ ಬಳಿಕ ಒಂದು ತಿಂಗಳ ನಂತರ ನಡೆದ ಯೋ-ಯೋ ಟೆಸ್ಟ್‌ನಲ್ಲಿ ತೇರ್ಗಡೆಯಾದ ಸಂಜುರನ್ನು ಭಾರತ A ತಂಡಕ್ಕೆ ಆಯ್ಕೆ ಮಾಡಲಾಯಿತು. ಆದರೆ ಟೀಂ ಇಂಡಿಯಾಕ್ಕೆ ಮರಳಲು ಸ್ಯಾಮ್ಸನ್​ಗೆ ಬರೋಬ್ಬರಿ ನಾಲ್ಕು ವರ್ಷಗಳು ಬೇಕಾಯಿತು. ಇದಲ್ಲದೆ ಟೀಂ ಇಂಡಿಯಾಕ್ಕೆ ಮರಳಿದ ನಂತರವೂ ಸಂಜುಗೆ ತಂಡದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಸಾಧ್ಯವಾಗಲಿಲ್ಲ.

4 / 7
ಯುವರಾಜ್ ಸಿಂಗ್: 2017 ರಲ್ಲಿ ಶ್ರೀಲಂಕಾ ವಿರುದ್ಧದ ವೈಟ್-ಬಾಲ್ ಸರಣಿಯಿಂದ ಯುವರಾಜ್ ಸಿಂಗ್ ಅವರನ್ನು ಕೈಬಿಡಲಾಗಿತ್ತು. ನಂತರ, ಯೋ-ಯೋ ಟೆಸ್ಟ್‌ನಲ್ಲಿ ಯುವಿ ವಿಫಲರಾದ ಕಾರಣ ಸ್ಟಾರ್ ಆಲ್‌ರೌಂಡರ್ ಅವರನ್ನು ತಂಡದಿಂದ ಕೈಬಿಡಲಾಯಿತು ಎಂದು ಪಿಟಿಐ ವರದಿ ಮಾಡಿತ್ತು. ಆ ವರ್ಷದ ನಂತರ ಯುವರಾಜ್ ಯೋ-ಯೋ ಪರೀಕ್ಷೆಯಲ್ಲಿ ತೇರ್ಗಡೆಯಾದರು. ಆದರೆ ಅವರನ್ನು ಮತ್ತೆ ರಾಷ್ಟ್ರೀಯ ತಂಡಕ್ಕೆ ಮರಳಿ ಕರೆಸಿಕೊಳ್ಳಲಿಲ್ಲ.

ಯುವರಾಜ್ ಸಿಂಗ್: 2017 ರಲ್ಲಿ ಶ್ರೀಲಂಕಾ ವಿರುದ್ಧದ ವೈಟ್-ಬಾಲ್ ಸರಣಿಯಿಂದ ಯುವರಾಜ್ ಸಿಂಗ್ ಅವರನ್ನು ಕೈಬಿಡಲಾಗಿತ್ತು. ನಂತರ, ಯೋ-ಯೋ ಟೆಸ್ಟ್‌ನಲ್ಲಿ ಯುವಿ ವಿಫಲರಾದ ಕಾರಣ ಸ್ಟಾರ್ ಆಲ್‌ರೌಂಡರ್ ಅವರನ್ನು ತಂಡದಿಂದ ಕೈಬಿಡಲಾಯಿತು ಎಂದು ಪಿಟಿಐ ವರದಿ ಮಾಡಿತ್ತು. ಆ ವರ್ಷದ ನಂತರ ಯುವರಾಜ್ ಯೋ-ಯೋ ಪರೀಕ್ಷೆಯಲ್ಲಿ ತೇರ್ಗಡೆಯಾದರು. ಆದರೆ ಅವರನ್ನು ಮತ್ತೆ ರಾಷ್ಟ್ರೀಯ ತಂಡಕ್ಕೆ ಮರಳಿ ಕರೆಸಿಕೊಳ್ಳಲಿಲ್ಲ.

5 / 7
ಅಂಬಟಿ ರಾಯುಡು: 2018 ರ ಐಪಿಎಲ್​ನಲ್ಲಿ ಮಿಂಚಿನ ಪ್ರದರ್ಶನ ನೀಡುವ ಮೂಲಕ ಅಂಬಾಟಿ ರಾಯುಡು ಟೀಮ್ ಇಂಡಿಯಾಕ್ಕೆ ಪುನರಾಗಮನ ಮಾಡಿದರು. ಆದರೆ ಯೋ-ಯೋ ಟೆಸ್ಟ್‌ನಲ್ಲಿ ವಿಫಲರಾದ ಕಾರಣ ಅವರನ್ನು ತಂಡದಿಂದ ಕೈಬಿಡಲಾಯಿತು. ರಾಯುಡು ಅವರು ಏಷ್ಯಾಕಪ್‌ಗೆ ತಂಡದಲ್ಲಿ ಸ್ಥಾನ ಪಡೆಯುವ ಮೊದಲು ಟೆಸ್ಟ್‌ನಲ್ಲಿ ಉತ್ತೀರ್ಣರಾಗಿದ್ದರು. ಆದರೆ ಅವರನ್ನು 2019 ರ ವಿಶ್ವಕಪ್‌ಗಾಗಿ ತಂಡದಿಂದ ಆಶ್ಚರ್ಯಕರವಾಗಿ ಕೈಬಿಡಲಾಯಿತು.

ಅಂಬಟಿ ರಾಯುಡು: 2018 ರ ಐಪಿಎಲ್​ನಲ್ಲಿ ಮಿಂಚಿನ ಪ್ರದರ್ಶನ ನೀಡುವ ಮೂಲಕ ಅಂಬಾಟಿ ರಾಯುಡು ಟೀಮ್ ಇಂಡಿಯಾಕ್ಕೆ ಪುನರಾಗಮನ ಮಾಡಿದರು. ಆದರೆ ಯೋ-ಯೋ ಟೆಸ್ಟ್‌ನಲ್ಲಿ ವಿಫಲರಾದ ಕಾರಣ ಅವರನ್ನು ತಂಡದಿಂದ ಕೈಬಿಡಲಾಯಿತು. ರಾಯುಡು ಅವರು ಏಷ್ಯಾಕಪ್‌ಗೆ ತಂಡದಲ್ಲಿ ಸ್ಥಾನ ಪಡೆಯುವ ಮೊದಲು ಟೆಸ್ಟ್‌ನಲ್ಲಿ ಉತ್ತೀರ್ಣರಾಗಿದ್ದರು. ಆದರೆ ಅವರನ್ನು 2019 ರ ವಿಶ್ವಕಪ್‌ಗಾಗಿ ತಂಡದಿಂದ ಆಶ್ಚರ್ಯಕರವಾಗಿ ಕೈಬಿಡಲಾಯಿತು.

6 / 7
ಮೊಹಮ್ಮದ್ ಶಮಿ: ಐಪಿಎಲ್ 2018 ರ ನಂತರ ಯೋ-ಯೋ ಟೆಸ್ಟ್‌ನಲ್ಲಿ ವಿಫಲರಾದ ಮೂವರು ಆಟಗಾರರಲ್ಲಿ ಮೊಹಮ್ಮದ್ ಶಮಿ ಒಬ್ಬರು. ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕೂ ಮೊದಲು ನಡೆದ ಈ ಪರೀಕ್ಷೆಯಲ್ಲಿ ಶಮಿ ಫೇಲ್ ಆಗಿದ್ದರು. ಹೀಗಾಗಿ ಅವರ ಬದಲಿಗೆ ನವದೀಪ್ ಸೈನಿಗೆ ತಂಡದಲ್ಲಿ ಅವಕಾಶ ನೀಡಲಾಗಿತ್ತು.

ಮೊಹಮ್ಮದ್ ಶಮಿ: ಐಪಿಎಲ್ 2018 ರ ನಂತರ ಯೋ-ಯೋ ಟೆಸ್ಟ್‌ನಲ್ಲಿ ವಿಫಲರಾದ ಮೂವರು ಆಟಗಾರರಲ್ಲಿ ಮೊಹಮ್ಮದ್ ಶಮಿ ಒಬ್ಬರು. ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕೂ ಮೊದಲು ನಡೆದ ಈ ಪರೀಕ್ಷೆಯಲ್ಲಿ ಶಮಿ ಫೇಲ್ ಆಗಿದ್ದರು. ಹೀಗಾಗಿ ಅವರ ಬದಲಿಗೆ ನವದೀಪ್ ಸೈನಿಗೆ ತಂಡದಲ್ಲಿ ಅವಕಾಶ ನೀಡಲಾಗಿತ್ತು.

7 / 7

Published On - 12:51 pm, Thu, 31 August 23

Follow us
VIDEO: ನಿಜಕ್ಕೂ ಇದು ನೋ ಬಾಲಾ? ಇಲ್ಲಿದೆ ಉತ್ತರ 
VIDEO: ನಿಜಕ್ಕೂ ಇದು ನೋ ಬಾಲಾ? ಇಲ್ಲಿದೆ ಉತ್ತರ 
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್
VIDEO: ಮಂಕಡ್ ರನೌಟ್​ಗೆ ಅಪೀಲ್​ ಮಾಡುತ್ತಿದ್ದಂತೆ, ವಿರಾಟ್ ಕೊಹ್ಲಿ ಆಕ್ರೋಶ
VIDEO: ಮಂಕಡ್ ರನೌಟ್​ಗೆ ಅಪೀಲ್​ ಮಾಡುತ್ತಿದ್ದಂತೆ, ವಿರಾಟ್ ಕೊಹ್ಲಿ ಆಕ್ರೋಶ
ಪರೀಕ್ಷಾರ್ಥ ಹಾರಾಟ ವೇಳೆ ಸಮುದ್ರಕ್ಕೆ ಅಪ್ಪಳಿಸಿದ ಸ್ಪೇಸ್​ಎಕ್ಸ್​ನ ರಾಕೆಟ್
ಪರೀಕ್ಷಾರ್ಥ ಹಾರಾಟ ವೇಳೆ ಸಮುದ್ರಕ್ಕೆ ಅಪ್ಪಳಿಸಿದ ಸ್ಪೇಸ್​ಎಕ್ಸ್​ನ ರಾಕೆಟ್
VIDEO: ದಿಗ್ವೇಶ್ ಮಹಾ ಎಡವಟ್ಟು... ಇದೇ ಕಾರಣಕ್ಕೆ ಅಂಪೈರ್ ಔಟ್ ನೀಡಿಲ್ಲ
VIDEO: ದಿಗ್ವೇಶ್ ಮಹಾ ಎಡವಟ್ಟು... ಇದೇ ಕಾರಣಕ್ಕೆ ಅಂಪೈರ್ ಔಟ್ ನೀಡಿಲ್ಲ
ವಸ್ತ್ರದಾನದ ಮಹತ್ವ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ
ವಸ್ತ್ರದಾನದ ಮಹತ್ವ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಪ್ರಗತಿ ಹೊಂದುವರು
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಪ್ರಗತಿ ಹೊಂದುವರು
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್