AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಯಾರಾಗಲಿದ್ದಾರೆ RCB ನಾಯಕ: ಹಿಟ್​ ಲೀಸ್ಟ್​ನಲ್ಲಿದ್ದಾರೆ 4 ಆಟಗಾರರು

IPL 2022 Mega Auction: ಆರ್​ಸಿಬಿ ತಂಡದಿಂದ ಎಬಿ ಡಿವಿಲಿಯರ್ಸ್ ಹೊರನಡೆದಿದ್ದಾರೆ. ಇದೀಗ ಆರ್​ಸಿಬಿಗೆ ವಿದೇಶಿ ಸ್ಟಾರ್ ಆಟಗಾರರೊಬ್ಬರ ಅವಶ್ಯಕತೆಯಿದೆ. ಅತ್ತ ಮೆಗಾ ಹರಾಜಿನಲ್ಲಿ ಎಸ್​ಆರ್​ಹೆಚ್​ ತಂಡದ ಮಾಜಿ ನಾಯಕ ಡೇವಿಡ್ ವಾರ್ನರ್ ಇದ್ದಾರೆ.

TV9 Web
| Edited By: |

Updated on: Jan 31, 2022 | 2:40 PM

Share
 ಐಪಿಎಲ್ ಮೆಗಾ ಹರಾಜಿಗೂ ಮುನ್ನ ಇದೀಗ ಆರ್​ಸಿಬಿ ನಾಯಕ ಯಾರಾಗಲಿದ್ದಾರೆ ಎಂಬ ಚರ್ಚೆಗಳು ಶುರುವಾಗಿದೆ. ಏಕೆಂದರೆ ಕಳೆದ ಸೀಸನ್ ಐಪಿಎಲ್​ ಬೆನ್ನಲ್ಲೇ ವಿರಾಟ್ ಕೊಹ್ಲಿ ಆರ್​ಸಿಬಿ ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು. ಹೀಗಾಗಿ ಈ ಸಲ ಹೊಸ ನಾಯಕನ ಆಯ್ಕೆ ಮಾಡಬೇಕಾದ ಅನಿವಾರ್ಯತೆ ಆರ್​ಸಿಬಿ ಫ್ರಾಂಚೈಸಿಗೆ ಬಂದೊದಗಿದೆ.

ಐಪಿಎಲ್ ಮೆಗಾ ಹರಾಜಿಗೂ ಮುನ್ನ ಇದೀಗ ಆರ್​ಸಿಬಿ ನಾಯಕ ಯಾರಾಗಲಿದ್ದಾರೆ ಎಂಬ ಚರ್ಚೆಗಳು ಶುರುವಾಗಿದೆ. ಏಕೆಂದರೆ ಕಳೆದ ಸೀಸನ್ ಐಪಿಎಲ್​ ಬೆನ್ನಲ್ಲೇ ವಿರಾಟ್ ಕೊಹ್ಲಿ ಆರ್​ಸಿಬಿ ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು. ಹೀಗಾಗಿ ಈ ಸಲ ಹೊಸ ನಾಯಕನ ಆಯ್ಕೆ ಮಾಡಬೇಕಾದ ಅನಿವಾರ್ಯತೆ ಆರ್​ಸಿಬಿ ಫ್ರಾಂಚೈಸಿಗೆ ಬಂದೊದಗಿದೆ.

1 / 6
ಆದರೆ ಇದೀಗ ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ನಾಯಕನ ಜವಾಬ್ದಾರಿಯಿಂದ ಕೆಳಗಿಳಿದಿದ್ದಾರೆ. ಹೀಗಾಗಿ ಅವರು ಮತ್ತೆ ಆರ್​ಸಿಬಿ ನಾಯಕರಾಗಲಿದ್ದಾರಾ ಎಂಬ ಪ್ರಶ್ನೆ ಕೂಡ ಹುಟ್ಟಿಕೊಂಡಿದೆ. ಇದಾಗ್ಯೂ ಆರ್​ಸಿಬಿ ಹಿಟ್​ ಲೀಸ್ಟ್​ನಲ್ಲಿ ಕೆಲ ಆಟಗಾರರ ಹೆಸರಿದೆ. ಒಂದು ವೇಳೆ ಆರ್​ಸಿಬಿ ತಂಡವು ಇವರಲ್ಲಿ ಒಬ್ಬರನ್ನು ಖರೀದಿಸಿದರೂ ಇವರಿಗೆ ನಾಯಕತ್ವ ನೀಡಬಹುದು.

ಆದರೆ ಇದೀಗ ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ನಾಯಕನ ಜವಾಬ್ದಾರಿಯಿಂದ ಕೆಳಗಿಳಿದಿದ್ದಾರೆ. ಹೀಗಾಗಿ ಅವರು ಮತ್ತೆ ಆರ್​ಸಿಬಿ ನಾಯಕರಾಗಲಿದ್ದಾರಾ ಎಂಬ ಪ್ರಶ್ನೆ ಕೂಡ ಹುಟ್ಟಿಕೊಂಡಿದೆ. ಇದಾಗ್ಯೂ ಆರ್​ಸಿಬಿ ಹಿಟ್​ ಲೀಸ್ಟ್​ನಲ್ಲಿ ಕೆಲ ಆಟಗಾರರ ಹೆಸರಿದೆ. ಒಂದು ವೇಳೆ ಆರ್​ಸಿಬಿ ತಂಡವು ಇವರಲ್ಲಿ ಒಬ್ಬರನ್ನು ಖರೀದಿಸಿದರೂ ಇವರಿಗೆ ನಾಯಕತ್ವ ನೀಡಬಹುದು.

2 / 6
 ಗ್ಲೆನ್ ಮ್ಯಾಕ್ಸ್​ವೆಲ್: ಈ ಬಾರಿ ಆರ್​ಸಿಬಿ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ತಂಡದಲ್ಲೇ ಉಳಿಸಿಕೊಂಡಿದೆ. ಅತ್ತ ಬಿಬಿಎಲ್​​ನಲ್ಲಿ ಮೆಲ್ಬೋರ್ನ್​ ಸ್ಟಾರ್ಸ್​ ತಂಡವನ್ನು ಮುನ್ನಡೆಸಿರುವ ಮ್ಯಾಕ್ಸಿ ಭರ್ಜರಿ ಪ್ರದರ್ಶನ ನೀಡಿದ್ದರು. ಹೀಗಾಗಿ ಮ್ಯಾಕ್ಸ್​ವೆಲ್ ಅವರಿಗೆ ತಂಡದ ಸಾರಥ್ಯ ನೀಡಿದರೂ ಅಚ್ಚರಿಪಡಬೇಕಿಲ್ಲ.

ಗ್ಲೆನ್ ಮ್ಯಾಕ್ಸ್​ವೆಲ್: ಈ ಬಾರಿ ಆರ್​ಸಿಬಿ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ತಂಡದಲ್ಲೇ ಉಳಿಸಿಕೊಂಡಿದೆ. ಅತ್ತ ಬಿಬಿಎಲ್​​ನಲ್ಲಿ ಮೆಲ್ಬೋರ್ನ್​ ಸ್ಟಾರ್ಸ್​ ತಂಡವನ್ನು ಮುನ್ನಡೆಸಿರುವ ಮ್ಯಾಕ್ಸಿ ಭರ್ಜರಿ ಪ್ರದರ್ಶನ ನೀಡಿದ್ದರು. ಹೀಗಾಗಿ ಮ್ಯಾಕ್ಸ್​ವೆಲ್ ಅವರಿಗೆ ತಂಡದ ಸಾರಥ್ಯ ನೀಡಿದರೂ ಅಚ್ಚರಿಪಡಬೇಕಿಲ್ಲ.

3 / 6
ಶ್ರೇಯಸ್ ಅಯ್ಯರ್: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮಾಜಿ ನಾಯಕ ಶ್ರೇಯಸ್ ಅಯ್ಯರ್ ಈ ಹಿಂದೆ ಉತ್ತಮವಾಗಿ ತಂಡವನ್ನು ಮುನ್ನಡೆಸಿದ್ದರು. ಇದೀಗ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡಿರುವ ಅಯ್ಯರ್ ನಾಯಕತ್ವವನ್ನು ಎದುರು ನೋಡುತ್ತಿದ್ದಾರೆ. ಹೀಗಾಗಿ ಆರ್​ಸಿಬಿ ತಂಡವು ಶ್ರೇಯಸ್ ಅಯ್ಯರ್ ಅವರನ್ನು ಖರೀದಿಸಿ ನಾಯಕತ್ವ ನೀಡಬಹುದು.

ಶ್ರೇಯಸ್ ಅಯ್ಯರ್: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮಾಜಿ ನಾಯಕ ಶ್ರೇಯಸ್ ಅಯ್ಯರ್ ಈ ಹಿಂದೆ ಉತ್ತಮವಾಗಿ ತಂಡವನ್ನು ಮುನ್ನಡೆಸಿದ್ದರು. ಇದೀಗ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡಿರುವ ಅಯ್ಯರ್ ನಾಯಕತ್ವವನ್ನು ಎದುರು ನೋಡುತ್ತಿದ್ದಾರೆ. ಹೀಗಾಗಿ ಆರ್​ಸಿಬಿ ತಂಡವು ಶ್ರೇಯಸ್ ಅಯ್ಯರ್ ಅವರನ್ನು ಖರೀದಿಸಿ ನಾಯಕತ್ವ ನೀಡಬಹುದು.

4 / 6
ಡೇವಿಡ್ ವಾರ್ನರ್: ಆರ್​ಸಿಬಿ ತಂಡದಿಂದ ಎಬಿ ಡಿವಿಲಿಯರ್ಸ್ ಹೊರನಡೆದಿದ್ದಾರೆ. ಇದೀಗ ಆರ್​ಸಿಬಿಗೆ ವಿದೇಶಿ ಸ್ಟಾರ್ ಆಟಗಾರರೊಬ್ಬರ ಅವಶ್ಯಕತೆಯಿದೆ. ಅತ್ತ ಮೆಗಾ ಹರಾಜಿನಲ್ಲಿ ಎಸ್​ಆರ್​ಹೆಚ್​ ತಂಡದ ಮಾಜಿ ನಾಯಕ ಡೇವಿಡ್ ವಾರ್ನರ್ ಇದ್ದಾರೆ. ವಾರ್ನರ್ ನಾಯಕತ್ವದಲ್ಲಿ 2016 ರಲ್ಲಿ ಎಸ್​ಆರ್​ಹೆಚ್​ ಚಾಂಪಿಯನ್​ ಪಟ್ಟಕ್ಕೇರಿತು. ಇದೀಗ ಭರ್ಜರಿ ಫಾರ್ಮ್​ನಲ್ಲಿರುವ ವಾರ್ನರ್ ಅವರ ಖರೀದಿಯಿಂದ ಆರ್​ಸಿಬಿ ಆರಂಭಿಕನ ಹಾಗೂ ನಾಯಕನ ಸಮಸ್ಯೆಯನ್ನು ನೀಗಿಸಬಹುದು. ಹೀಗಾಗಿ ಡೇವಿಡ್ ವಾರ್ನರ್ ಖರೀದಿಗೆ ಆರ್​ಸಿಬಿ ಹೆಚ್ಚಿನ ಆಸಕ್ತಿ ತೋರಲಿದೆ.

ಡೇವಿಡ್ ವಾರ್ನರ್: ಆರ್​ಸಿಬಿ ತಂಡದಿಂದ ಎಬಿ ಡಿವಿಲಿಯರ್ಸ್ ಹೊರನಡೆದಿದ್ದಾರೆ. ಇದೀಗ ಆರ್​ಸಿಬಿಗೆ ವಿದೇಶಿ ಸ್ಟಾರ್ ಆಟಗಾರರೊಬ್ಬರ ಅವಶ್ಯಕತೆಯಿದೆ. ಅತ್ತ ಮೆಗಾ ಹರಾಜಿನಲ್ಲಿ ಎಸ್​ಆರ್​ಹೆಚ್​ ತಂಡದ ಮಾಜಿ ನಾಯಕ ಡೇವಿಡ್ ವಾರ್ನರ್ ಇದ್ದಾರೆ. ವಾರ್ನರ್ ನಾಯಕತ್ವದಲ್ಲಿ 2016 ರಲ್ಲಿ ಎಸ್​ಆರ್​ಹೆಚ್​ ಚಾಂಪಿಯನ್​ ಪಟ್ಟಕ್ಕೇರಿತು. ಇದೀಗ ಭರ್ಜರಿ ಫಾರ್ಮ್​ನಲ್ಲಿರುವ ವಾರ್ನರ್ ಅವರ ಖರೀದಿಯಿಂದ ಆರ್​ಸಿಬಿ ಆರಂಭಿಕನ ಹಾಗೂ ನಾಯಕನ ಸಮಸ್ಯೆಯನ್ನು ನೀಗಿಸಬಹುದು. ಹೀಗಾಗಿ ಡೇವಿಡ್ ವಾರ್ನರ್ ಖರೀದಿಗೆ ಆರ್​ಸಿಬಿ ಹೆಚ್ಚಿನ ಆಸಕ್ತಿ ತೋರಲಿದೆ.

5 / 6
 ಮನೀಷ್ ಪಾಂಡೆ: ಆರ್​ಸಿಬಿ ತಂಡದ ಮಾಜಿ ಆಟಗಾರ ಮನೀಷ್ ಪಾಂಡೆ ಈ ಬಾರಿ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡಿದ್ದಾರೆ. ಕಳೆದ ಕೆಲ ಸೀಸನ್​ಗಳಿಂದ ಎಸ್​ಆರ್​ಹೆಚ್​ ತಂಡದಲ್ಲಿದ್ದ ಪಾಂಡೆ ಕೆಲವು ಪಂದ್ಯಗಳಲ್ಲಿ ನಾಯಕರಾಗಿಯೂ ಕೂಡ ಕಣಕ್ಕಿಳಿದಿದ್ದರು. ಅದರಲ್ಲೂ ಕರ್ನಾಟಕ ತಂಡದ ನಾಯಕನಾಗಿ ಮನೀಷ್ ಪಾಂಡೆ ಅತ್ಯುತ್ತಮ ಯಶಸ್ಸು ಸಾಧಿಸಿದ್ದಾರೆ. ಹೀಗಾಗಿ ಸ್ಥಳೀಯ ಕ್ರಿಕೆಟಿಗನಿಗೆ ಆರ್​ಸಿಬಿ ಮಣೆಹಾಕುವುದಾದರೆ ಮನೀಷ್ ಪಾಂಡೆಗೆ ನಾಯಕತ್ವ ಸಿಗುವುದು ಬಹುತೇಕ ಖಚಿತ ಎನ್ನಬಹುದು.

ಮನೀಷ್ ಪಾಂಡೆ: ಆರ್​ಸಿಬಿ ತಂಡದ ಮಾಜಿ ಆಟಗಾರ ಮನೀಷ್ ಪಾಂಡೆ ಈ ಬಾರಿ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡಿದ್ದಾರೆ. ಕಳೆದ ಕೆಲ ಸೀಸನ್​ಗಳಿಂದ ಎಸ್​ಆರ್​ಹೆಚ್​ ತಂಡದಲ್ಲಿದ್ದ ಪಾಂಡೆ ಕೆಲವು ಪಂದ್ಯಗಳಲ್ಲಿ ನಾಯಕರಾಗಿಯೂ ಕೂಡ ಕಣಕ್ಕಿಳಿದಿದ್ದರು. ಅದರಲ್ಲೂ ಕರ್ನಾಟಕ ತಂಡದ ನಾಯಕನಾಗಿ ಮನೀಷ್ ಪಾಂಡೆ ಅತ್ಯುತ್ತಮ ಯಶಸ್ಸು ಸಾಧಿಸಿದ್ದಾರೆ. ಹೀಗಾಗಿ ಸ್ಥಳೀಯ ಕ್ರಿಕೆಟಿಗನಿಗೆ ಆರ್​ಸಿಬಿ ಮಣೆಹಾಕುವುದಾದರೆ ಮನೀಷ್ ಪಾಂಡೆಗೆ ನಾಯಕತ್ವ ಸಿಗುವುದು ಬಹುತೇಕ ಖಚಿತ ಎನ್ನಬಹುದು.

6 / 6
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ