AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2026: ಸೂಪರ್-8 ಸುತ್ತಿಗೆ 5 ತಂಡಗಳ ಎಂಟ್ರಿ

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸುತ್ತಿನಲ್ಲಿ ಕಣಕ್ಕಿಳಿದ 20 ತಂಡಗಳಲ್ಲಿ 8 ತಂಡಗಳು ಮಾತ್ರ ಮುಂದಿನ ಹಂತಕ್ಕೇರಲಿದೆ. ಅಂದರೆ ಇಲ್ಲಿ ಪ್ರತಿ ತಂಡಗಳನ್ನು ನಾಲ್ಕು ಗ್ರೂಪ್​ಗಳಲ್ಲಿ ವಿಂಗಡಿಸಲಾಗಿದ್ದು, ಈ ಗ್ರೂಪ್​ನ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ ತಂಡಗಳು ಮುಂದಿನ​ ಸುತ್ತಿಗೆ ಪ್ರವೇಶಿಸಲಿದೆ.

ಝಾಹಿರ್ ಯೂಸುಫ್
|

Updated on: Feb 17, 2026 | 8:26 AM

Share
T20 World Cup 2026: ಟಿ20 ವಿಶ್ವಕಪ್ 2026ರ ಮೊದಲ ಸುತ್ತಿನ ಮುಕ್ತಾಯಕ್ಕೂ ಮುನ್ನವೇ ಐದು ತಂಡಗಳು ಸೂಪರ್-8 ಹಂತಕ್ಕೇರಿದೆ. ಇದೇ ವೇಳೆ ಮತ್ತೈದು ತಂಡಗಳು ಮೊದಲ ಸುತ್ತಿನಲ್ಲೇ ಹೊರಬಿದ್ದಿವೆ. ಹೀಗೆ ಮುಂದಿನ ಹಂತಕ್ಕೇರಿದ ಮತ್ತು ಹೊರಬಿದ್ದ ತಂಡಗಳಾವುವು ಎಂದು ನೋಡುವುದಾದರೆ...

T20 World Cup 2026: ಟಿ20 ವಿಶ್ವಕಪ್ 2026ರ ಮೊದಲ ಸುತ್ತಿನ ಮುಕ್ತಾಯಕ್ಕೂ ಮುನ್ನವೇ ಐದು ತಂಡಗಳು ಸೂಪರ್-8 ಹಂತಕ್ಕೇರಿದೆ. ಇದೇ ವೇಳೆ ಮತ್ತೈದು ತಂಡಗಳು ಮೊದಲ ಸುತ್ತಿನಲ್ಲೇ ಹೊರಬಿದ್ದಿವೆ. ಹೀಗೆ ಮುಂದಿನ ಹಂತಕ್ಕೇರಿದ ಮತ್ತು ಹೊರಬಿದ್ದ ತಂಡಗಳಾವುವು ಎಂದು ನೋಡುವುದಾದರೆ...

1 / 7
ಸೌತ್ ಆಫ್ರಿಕಾ: ಈ ಬಾರಿಯ ವಿಶ್ವಕಪ್​ನಲ್ಲಿ ಗ್ರೂಪ್-ಡಿ ನಲ್ಲಿ ಕಣಕ್ಕಿಳಿದಿರುವ ಸೌತ್ ಆಫ್ರಿಕಾ ತಂಡವು ಕೆನಡಾ, ಅಫ್ಘಾನಿಸ್ತಾನ್ ಹಾಗೂ ನ್ಯೂಝಿಲೆಂಡ್ ವಿರುದ್ಧ ಗೆಲುವು ದಾಖಲಿಸಿದೆ. ಈ ಮೂರು ಗೆಲುವುಗಳೊಂದಿಗೆ ಒಟ್ಟು 6 ಅಂಕಗಳನ್ನು ಪಡೆದು ಸೂಪರ್-8 ಹಂತಕ್ಕೇರಿದೆ.

ಸೌತ್ ಆಫ್ರಿಕಾ: ಈ ಬಾರಿಯ ವಿಶ್ವಕಪ್​ನಲ್ಲಿ ಗ್ರೂಪ್-ಡಿ ನಲ್ಲಿ ಕಣಕ್ಕಿಳಿದಿರುವ ಸೌತ್ ಆಫ್ರಿಕಾ ತಂಡವು ಕೆನಡಾ, ಅಫ್ಘಾನಿಸ್ತಾನ್ ಹಾಗೂ ನ್ಯೂಝಿಲೆಂಡ್ ವಿರುದ್ಧ ಗೆಲುವು ದಾಖಲಿಸಿದೆ. ಈ ಮೂರು ಗೆಲುವುಗಳೊಂದಿಗೆ ಒಟ್ಟು 6 ಅಂಕಗಳನ್ನು ಪಡೆದು ಸೂಪರ್-8 ಹಂತಕ್ಕೇರಿದೆ.

2 / 7
ವೆಸ್ಟ್ ಇಂಡೀಸ್: ಗ್ರೂಪ್- ಸಿ ನಲ್ಲಿ ಕಣಕ್ಕಿಳಿದಿರುವ ಎರಡು ಬಾರಿಯ ಚಾಂಪಿಯನ್ ವೆಸ್ಟ್ ಇಂಡೀಸ್ ತಂಡ ಸ್ಕಾಟ್ಲೆಂಡ್, ಇಂಗ್ಲೆಂಡ್ ಹಾಗೂ ನೇಪಾಳ ವಿರುದ್ಧ ಗೆದ್ದು ಒಟ್ಟು 6 ಅಂಕಗಳನ್ನು ಪಡೆದುಕೊಂಡಿದೆ. ಈ ಮೂಲಕ ದ್ವಿತೀಯ ಸುತ್ತಿಗೆ ಪ್ರವೇಶಿಸಿದೆ.

ವೆಸ್ಟ್ ಇಂಡೀಸ್: ಗ್ರೂಪ್- ಸಿ ನಲ್ಲಿ ಕಣಕ್ಕಿಳಿದಿರುವ ಎರಡು ಬಾರಿಯ ಚಾಂಪಿಯನ್ ವೆಸ್ಟ್ ಇಂಡೀಸ್ ತಂಡ ಸ್ಕಾಟ್ಲೆಂಡ್, ಇಂಗ್ಲೆಂಡ್ ಹಾಗೂ ನೇಪಾಳ ವಿರುದ್ಧ ಗೆದ್ದು ಒಟ್ಟು 6 ಅಂಕಗಳನ್ನು ಪಡೆದುಕೊಂಡಿದೆ. ಈ ಮೂಲಕ ದ್ವಿತೀಯ ಸುತ್ತಿಗೆ ಪ್ರವೇಶಿಸಿದೆ.

3 / 7
ಇಂಗ್ಲೆಂಡ್: ವೆಸ್ಟ್ ಇಂಡೀಸ್ ಜೊತೆ ಗ್ರೂಪ್-ಸಿ ಯಿಂದ ಸೂಪರ್-8 ಹಂತಕ್ಕೇರಿದ ಎರಡನೇ ತಂಡ ಇಂಗ್ಲೆಂಡ್. ನೇಪಾಳ, ಸ್ಕಾಟ್ಲೆಂಡ್ ಹಾಗೂ ಇಟಲಿ ವಿರುದ್ಧ ಗೆದ್ದು ಹ್ಯಾರಿ ಬ್ರೂಕ್ ಪಡೆ ಒಟ್ಟು 6 ಅಂಕಗಳೊಂದಿಗೆ ಮುಂದಿನ ಹಂತಕ್ಕೇರುವಲ್ಲಿ ಯಶಸ್ವಿಯಾಗಿದೆ.

ಇಂಗ್ಲೆಂಡ್: ವೆಸ್ಟ್ ಇಂಡೀಸ್ ಜೊತೆ ಗ್ರೂಪ್-ಸಿ ಯಿಂದ ಸೂಪರ್-8 ಹಂತಕ್ಕೇರಿದ ಎರಡನೇ ತಂಡ ಇಂಗ್ಲೆಂಡ್. ನೇಪಾಳ, ಸ್ಕಾಟ್ಲೆಂಡ್ ಹಾಗೂ ಇಟಲಿ ವಿರುದ್ಧ ಗೆದ್ದು ಹ್ಯಾರಿ ಬ್ರೂಕ್ ಪಡೆ ಒಟ್ಟು 6 ಅಂಕಗಳೊಂದಿಗೆ ಮುಂದಿನ ಹಂತಕ್ಕೇರುವಲ್ಲಿ ಯಶಸ್ವಿಯಾಗಿದೆ.

4 / 7
ಶ್ರೀಲಂಕಾ: ಗ್ರೂಪ್- ಬಿ ನಲ್ಲಿ ಕಣಕ್ಕಿಳಿದಿರುವ ಶ್ರೀಲಂಕಾ ತಂಡವು ಐರ್ಲೆಂಡ್, ಒಮಾನ್ ಹಾಗೂ ಆಸ್ಟ್ರೇಲಿಯಾ ತಂಡಗಳನ್ನು ಬಗ್ಗು ಬಡಿದು ಒಟ್ಟು 6 ಅಂಕಗಳನ್ನು ಪಡೆದುಕೊಂಡಿದೆ. ಈ ಮೂಲಕ ಸೂಪರ್-8 ಹಂತಕ್ಕೇರುವಲ್ಲಿ ಲಂಕಾ ಪಡೆ ಯಶಸ್ವಿಯಾಗಿದೆ. 

ಶ್ರೀಲಂಕಾ: ಗ್ರೂಪ್- ಬಿ ನಲ್ಲಿ ಕಣಕ್ಕಿಳಿದಿರುವ ಶ್ರೀಲಂಕಾ ತಂಡವು ಐರ್ಲೆಂಡ್, ಒಮಾನ್ ಹಾಗೂ ಆಸ್ಟ್ರೇಲಿಯಾ ತಂಡಗಳನ್ನು ಬಗ್ಗು ಬಡಿದು ಒಟ್ಟು 6 ಅಂಕಗಳನ್ನು ಪಡೆದುಕೊಂಡಿದೆ. ಈ ಮೂಲಕ ಸೂಪರ್-8 ಹಂತಕ್ಕೇರುವಲ್ಲಿ ಲಂಕಾ ಪಡೆ ಯಶಸ್ವಿಯಾಗಿದೆ. 

5 / 7
ಭಾರತ: ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಗ್ರೂಪ್-ಎ ನಲ್ಲಿ ಕಣಕ್ಕಿಳಿದಿರುವ ಟೀಮ್ ಇಂಡಿಯಾ ಆಡಿರುವ ಮೂರು ಮ್ಯಾಚ್​ಗಳಲ್ಲೂ ಜಯ ಸಾಧಿಸಿದೆ. ಯುಎಸ್​ಎ, ನಮೀಬಿಯ ಹಾಗೂ ಪಾಕಿಸ್ತಾನ್ ವಿರುದ್ಧ ಗೆದ್ದಿರುವ ಭಾರತ ಒಟ್ಟು 6 ಅಂಕಗಳೊಂದಿಗೆ ಸೂಪರ್-8 ಹಂತಕ್ಕೇರುವಲ್ಲಿ ಯಶಸ್ವಿಯಾಗಿದೆ.

ಭಾರತ: ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಗ್ರೂಪ್-ಎ ನಲ್ಲಿ ಕಣಕ್ಕಿಳಿದಿರುವ ಟೀಮ್ ಇಂಡಿಯಾ ಆಡಿರುವ ಮೂರು ಮ್ಯಾಚ್​ಗಳಲ್ಲೂ ಜಯ ಸಾಧಿಸಿದೆ. ಯುಎಸ್​ಎ, ನಮೀಬಿಯ ಹಾಗೂ ಪಾಕಿಸ್ತಾನ್ ವಿರುದ್ಧ ಗೆದ್ದಿರುವ ಭಾರತ ಒಟ್ಟು 6 ಅಂಕಗಳೊಂದಿಗೆ ಸೂಪರ್-8 ಹಂತಕ್ಕೇರುವಲ್ಲಿ ಯಶಸ್ವಿಯಾಗಿದೆ.

6 / 7
ಇನ್ನು ಈ ಬಾರಿ ಟಿ20 ವಿಶ್ವಕಪ್​​ನಿಂದ ಈವರೆಗೆ ಎಲಿಮಿನೇಟ್ ಆದ ತಂಡಗಳೆಂದರೆ... ನಮೀಬಿಯ, ಒಮಾನ್, ಸ್ಕಾಟ್ಲೆಂಡ್, ಇಟಲಿ ಮತ್ತು ನೇಪಾಳ. ಇನ್ನುಳಿದ ಆಸ್ಟ್ರೇಲಿಯಾ, ಪಾಕಿಸ್ತಾನ್, ಝಿಂಬಾಬ್ವೆ, ಅಫ್ಘಾನಿಸ್ತಾನ್, ನ್ಯೂಝಿಲೆಂಡ್, ಐರ್ಲೆಂಡ್, ಯುಎಸ್​ಎ ತಂಡಗಳು ಇನ್ನೂ ಸಹ ಸೂಪರ್-8 ಹಂತಕ್ಕೇರುವ ರೇಸ್​ನಲ್ಲಿದ್ದಾರೆ.

ಇನ್ನು ಈ ಬಾರಿ ಟಿ20 ವಿಶ್ವಕಪ್​​ನಿಂದ ಈವರೆಗೆ ಎಲಿಮಿನೇಟ್ ಆದ ತಂಡಗಳೆಂದರೆ... ನಮೀಬಿಯ, ಒಮಾನ್, ಸ್ಕಾಟ್ಲೆಂಡ್, ಇಟಲಿ ಮತ್ತು ನೇಪಾಳ. ಇನ್ನುಳಿದ ಆಸ್ಟ್ರೇಲಿಯಾ, ಪಾಕಿಸ್ತಾನ್, ಝಿಂಬಾಬ್ವೆ, ಅಫ್ಘಾನಿಸ್ತಾನ್, ನ್ಯೂಝಿಲೆಂಡ್, ಐರ್ಲೆಂಡ್, ಯುಎಸ್​ಎ ತಂಡಗಳು ಇನ್ನೂ ಸಹ ಸೂಪರ್-8 ಹಂತಕ್ಕೇರುವ ರೇಸ್​ನಲ್ಲಿದ್ದಾರೆ.

7 / 7
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ