AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

535 ದಿನಗಳ ಬಳಿಕ ಮಿಚೆಲ್ ಸ್ಟಾರ್ಕ್​ ಮಿಂಚಿನ ದಾಳಿ

India vs Australia: ಮಿಚೆಲ್ ಸ್ಟಾರ್ಕ್​ ಅವರ ಮಾರಕ ದಾಳಿಗೆ ತತ್ತರಿಸಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​​ನಲ್ಲಿ ಕೇವಲ 180 ರನ್​ಗಳಿಸಿ ಆಲೌಟ್ ಆಗಿದೆ. ಇದರ ಬೆನ್ನಲ್ಲೇ ದ್ವಿತೀಯ ಇನಿಂಗ್ಸ್ ಆರಂಭಿಸಿರುವ ಆಸ್ಟ್ರೇಲಿಯಾ ತಂಡವು ಮೊದಲ ದಿನದಾಟದ ಅಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 86 ರನ್ ಕಲೆಹಾಕಿದೆ.

ಝಾಹಿರ್ ಯೂಸುಫ್
|

Updated on: Dec 07, 2024 | 8:25 AM

Share
ಟೆಸ್ಟ್ ಕ್ರಿಕೆಟ್​​ನಲ್ಲಿ ಆಸ್ಟ್ರೇಲಿಯಾ ವೇಗಿ ಮಿಚೆಲ್ ಸ್ಟಾರ್ಕ್ ಬರೋಬ್ಬರಿ 15 ಬಾರಿ 5 ವಿಕೆಟ್​​ಗಳನ್ನು ಕಬಳಿಸಿದ್ದಾರೆ. ಆದರೆ ಹದಿನೈದನೇ 5 ವಿಕೆಟ್​​ಗಳು ಮೂಡಿಬಂದಿರುವುದು ಬರೋಬ್ಬರಿ 535 ದಿನಗಳ ನಂತರ ಎಂಬುದು ವಿಶೇಷ.

ಟೆಸ್ಟ್ ಕ್ರಿಕೆಟ್​​ನಲ್ಲಿ ಆಸ್ಟ್ರೇಲಿಯಾ ವೇಗಿ ಮಿಚೆಲ್ ಸ್ಟಾರ್ಕ್ ಬರೋಬ್ಬರಿ 15 ಬಾರಿ 5 ವಿಕೆಟ್​​ಗಳನ್ನು ಕಬಳಿಸಿದ್ದಾರೆ. ಆದರೆ ಹದಿನೈದನೇ 5 ವಿಕೆಟ್​​ಗಳು ಮೂಡಿಬಂದಿರುವುದು ಬರೋಬ್ಬರಿ 535 ದಿನಗಳ ನಂತರ ಎಂಬುದು ವಿಶೇಷ.

1 / 5
ಅಂದರೆ ಮಿಚೆಲ್ ಸ್ಟಾರ್ಕ್​ 5 ವಿಕೆಟ್ ಕಬಳಿಸದೇ ಒಂದು ವರ್ಷದ ಮೇಲಾಗಿತ್ತು. ಕೊನೆಯ ಬಾರಿ ಅವರು 2023 ರಲ್ಲಿ ಲೀಡ್ಸ್​​ನಲ್ಲಿ ಇಂಗ್ಲೆಂಡ್ ವಿರುದ್ಧ 5 ವಿಕೆಟ್ ಪಡೆದಿದ್ದರು. ಇದಾದ ಬಳಿಕ ಅವರಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಹೀಗಾಗಿಯೇ ಸ್ಟಾರ್ಕ್​ ಅವರ ಸ್ಪಾರ್ಕ್ ಮಾಯವಾಗಿದೆ ಎಂಬ ಮಾತುಗಳು ಕೇಳಿ ಬಂದಿದ್ದವು.

ಅಂದರೆ ಮಿಚೆಲ್ ಸ್ಟಾರ್ಕ್​ 5 ವಿಕೆಟ್ ಕಬಳಿಸದೇ ಒಂದು ವರ್ಷದ ಮೇಲಾಗಿತ್ತು. ಕೊನೆಯ ಬಾರಿ ಅವರು 2023 ರಲ್ಲಿ ಲೀಡ್ಸ್​​ನಲ್ಲಿ ಇಂಗ್ಲೆಂಡ್ ವಿರುದ್ಧ 5 ವಿಕೆಟ್ ಪಡೆದಿದ್ದರು. ಇದಾದ ಬಳಿಕ ಅವರಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಹೀಗಾಗಿಯೇ ಸ್ಟಾರ್ಕ್​ ಅವರ ಸ್ಪಾರ್ಕ್ ಮಾಯವಾಗಿದೆ ಎಂಬ ಮಾತುಗಳು ಕೇಳಿ ಬಂದಿದ್ದವು.

2 / 5
ಆದರೆ ಅಡಿಲೇಡ್​ನಲ್ಲಿ ನಡೆದ ಭಾರತದ ವಿರುದ್ಧದ ಪಿಂಕ್ ಬಾಲ್ ಟೆಸ್ಟ್​​ನಲ್ಲಿ ಮಿಚೆಲ್ ಸ್ಟಾರ್ಕ್​ ಮತ್ತೆ ಮಿಂಚಿನ ದಾಳಿ ಸಂಘಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪಂದ್ಯದ ಮೊದಲ ಎಸೆತದಲ್ಲೇ ಯಶಸ್ವಿ ಜೈಸ್ವಾಲ್ ವಿಕೆಟ್ ಪಡೆದು ಶುಭಾರಂಭ ಮಾಡಿದ ಸ್ಟಾರ್ಕ್ 14.1 ಓವರ್​​ಗಳಲ್ಲಿ 48 ರನ್ ನೀಡಿ 6 ವಿಕೆಟ್ ಉರುಳಿಸಿದ್ದಾರೆ.

ಆದರೆ ಅಡಿಲೇಡ್​ನಲ್ಲಿ ನಡೆದ ಭಾರತದ ವಿರುದ್ಧದ ಪಿಂಕ್ ಬಾಲ್ ಟೆಸ್ಟ್​​ನಲ್ಲಿ ಮಿಚೆಲ್ ಸ್ಟಾರ್ಕ್​ ಮತ್ತೆ ಮಿಂಚಿನ ದಾಳಿ ಸಂಘಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪಂದ್ಯದ ಮೊದಲ ಎಸೆತದಲ್ಲೇ ಯಶಸ್ವಿ ಜೈಸ್ವಾಲ್ ವಿಕೆಟ್ ಪಡೆದು ಶುಭಾರಂಭ ಮಾಡಿದ ಸ್ಟಾರ್ಕ್ 14.1 ಓವರ್​​ಗಳಲ್ಲಿ 48 ರನ್ ನೀಡಿ 6 ವಿಕೆಟ್ ಉರುಳಿಸಿದ್ದಾರೆ.

3 / 5
ಇದರೊಂದಿಗೆ ಒಂದು ವರ್ಷದಿಂದ ಐದು ವಿಕೆಟ್​​ಗಳ ಗುಚ್ಛದ ಬರ ಎದುರಿಸುತ್ತಿದ್ದ ಸ್ಟಾರ್ಕ್​ ಮತ್ತೆ ಲಯಕ್ಕೆ ಮರಳಿದಂತಾಗಿದೆ. ಈ ಐದು ವಿಕೆಟ್​ಗಳೊಂದಿಗೆ ಮಿಚೆಲ್ ಸ್ಟಾರ್ಕ್ ತಮ್ಮ ಟೆಸ್ಟ್ ವಿಕೆಟ್​​ಗಳ ಸಂಖ್ಯೆಯನ್ನು 367 ಕ್ಕೇರಿಸಿದ್ದು, ಈ ಮೂಲಕ 400 ವಿಕೆಟ್​ಗಳ ಸಾಧಕರ ಪಟ್ಟಿಗೆ ದಾಂಗುಡಿ ಇಟ್ಟಿದ್ದಾರೆ.

ಇದರೊಂದಿಗೆ ಒಂದು ವರ್ಷದಿಂದ ಐದು ವಿಕೆಟ್​​ಗಳ ಗುಚ್ಛದ ಬರ ಎದುರಿಸುತ್ತಿದ್ದ ಸ್ಟಾರ್ಕ್​ ಮತ್ತೆ ಲಯಕ್ಕೆ ಮರಳಿದಂತಾಗಿದೆ. ಈ ಐದು ವಿಕೆಟ್​ಗಳೊಂದಿಗೆ ಮಿಚೆಲ್ ಸ್ಟಾರ್ಕ್ ತಮ್ಮ ಟೆಸ್ಟ್ ವಿಕೆಟ್​​ಗಳ ಸಂಖ್ಯೆಯನ್ನು 367 ಕ್ಕೇರಿಸಿದ್ದು, ಈ ಮೂಲಕ 400 ವಿಕೆಟ್​ಗಳ ಸಾಧಕರ ಪಟ್ಟಿಗೆ ದಾಂಗುಡಿ ಇಟ್ಟಿದ್ದಾರೆ.

4 / 5
ಇನ್ನು ಮಿಚೆಲ್ ಸ್ಟಾರ್ಕ್​ ಅವರ ಮಾರಕ ದಾಳಿಗೆ ತತ್ತರಿಸಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​​ನಲ್ಲಿ ಕೇವಲ 180 ರನ್​ಗಳಿಸಿ ಆಲೌಟ್ ಆಗಿದೆ. ಇದರ ಬೆನ್ನಲ್ಲೇ ದ್ವಿತೀಯ ಇನಿಂಗ್ಸ್ ಆರಂಭಿಸಿರುವ ಆಸ್ಟ್ರೇಲಿಯಾ ತಂಡವು ಮೊದಲ ದಿನದಾಟದ ಅಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 86 ರನ್ ಕಲೆಹಾಕಿದೆ. ಈ ಮೂಲಕ ಆಸೀಸ್ ಪಡೆ ಪ್ರಥಮ ಇನಿಂಗ್ಸ್​ನಲ್ಲಿ ಉತ್ತಮ ಆರಂಭ ಪಡೆದುಕೊಂಡಿದೆ.

ಇನ್ನು ಮಿಚೆಲ್ ಸ್ಟಾರ್ಕ್​ ಅವರ ಮಾರಕ ದಾಳಿಗೆ ತತ್ತರಿಸಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​​ನಲ್ಲಿ ಕೇವಲ 180 ರನ್​ಗಳಿಸಿ ಆಲೌಟ್ ಆಗಿದೆ. ಇದರ ಬೆನ್ನಲ್ಲೇ ದ್ವಿತೀಯ ಇನಿಂಗ್ಸ್ ಆರಂಭಿಸಿರುವ ಆಸ್ಟ್ರೇಲಿಯಾ ತಂಡವು ಮೊದಲ ದಿನದಾಟದ ಅಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 86 ರನ್ ಕಲೆಹಾಕಿದೆ. ಈ ಮೂಲಕ ಆಸೀಸ್ ಪಡೆ ಪ್ರಥಮ ಇನಿಂಗ್ಸ್​ನಲ್ಲಿ ಉತ್ತಮ ಆರಂಭ ಪಡೆದುಕೊಂಡಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ