AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಬರೆದಿಟ್ಕೊಳ್ಳಿ, ಈ ಸಲ ಕಪ್ ಇವರದ್ದೆ… ಎಬಿಡಿ ಭವಿಷ್ಯ

IPL 2025: RCB ಪರ 11 ವರ್ಷಗಳ ಕಾಲ ಆಡಿದ್ದ ಎಬಿಡಿ ಹಲವು ಬಾರಿ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟಿದ್ದರು. ಈ 157 ಪಂದ್ಯಗಳಿಂದ ಒಟ್ಟು 4522 ರನ್‌ಗಳನ್ನು ಕಲೆಹಾಕಿದ್ದರು. ಅಷ್ಟೇ ಅಲ್ಲದೆ ಆರ್​ಸಿಬಿ ಪರ ಅತೀ ಹೆಚ್ಚು ರನ್ ಬಾರಿಸಿದ ವಿದೇಶಿ ಬ್ಯಾಟರ್ ಎಂಬ ದಾಖಲೆಯನ್ನೂ ಕೂಡ ಹೊಂದಿದ್ದಾರೆ. ಹಾಗೆಯೇ ಆರ್​ಸಿಬಿ ಪರ ವಿರಾಟ್‌ ಕೊಹ್ಲಿ ಬಳಿಕ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಆಟಗಾರ ಎಂಬ ದಾಖಲೆ ಕೂಡ ಎಬಿಡಿ ಹೆಸರಿನಲ್ಲಿದೆ.

ಝಾಹಿರ್ ಯೂಸುಫ್
|

Updated on: Mar 19, 2025 | 7:59 AM

Share
ಐಪಿಎಲ್​ನಲ್ಲಿ ಕಪ್ ಗೆಲ್ಲುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಕನಸು ಕನಸಾಗಿಯೇ ಉಳಿದಿದೆ. ಕಳೆದ 17 ಸೀಸನ್​ಗಳಲ್ಲಿ 3 ಬಾರಿ ಫೈನಲ್ ಪ್ರವೇಶಿಸಿದರೂ ಆರ್​ಸಿಬಿ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಳ್ಳಲು ಸಾಧ್ಯವಾಗಿಲ್ಲ. ಇದೀಗ 18ನೇ ಸೀಸನ್​ ಹೊಸ್ತಿಲಲ್ಲಿದ್ದೇವೆ. ಇತ್ತ ಐಪಿಎಲ್ ಸೀಸನ್-18 ಆರಂಭಕ್ಕೂ ಮುನ್ನವೇ ಈ ಬಾರಿ ಕಪ್ ಗೆಲ್ಲುವ ತಂಡ ಯಾವುದೆಂದು ಎಬಿ ಡಿವಿಲಿಯರ್ಸ್ ಭವಿಷ್ಯ ನುಡಿದಿದ್ದಾರೆ.

ಐಪಿಎಲ್​ನಲ್ಲಿ ಕಪ್ ಗೆಲ್ಲುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಕನಸು ಕನಸಾಗಿಯೇ ಉಳಿದಿದೆ. ಕಳೆದ 17 ಸೀಸನ್​ಗಳಲ್ಲಿ 3 ಬಾರಿ ಫೈನಲ್ ಪ್ರವೇಶಿಸಿದರೂ ಆರ್​ಸಿಬಿ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಳ್ಳಲು ಸಾಧ್ಯವಾಗಿಲ್ಲ. ಇದೀಗ 18ನೇ ಸೀಸನ್​ ಹೊಸ್ತಿಲಲ್ಲಿದ್ದೇವೆ. ಇತ್ತ ಐಪಿಎಲ್ ಸೀಸನ್-18 ಆರಂಭಕ್ಕೂ ಮುನ್ನವೇ ಈ ಬಾರಿ ಕಪ್ ಗೆಲ್ಲುವ ತಂಡ ಯಾವುದೆಂದು ಎಬಿ ಡಿವಿಲಿಯರ್ಸ್ ಭವಿಷ್ಯ ನುಡಿದಿದ್ದಾರೆ.

1 / 6
ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠವಾಗಿದೆ. ಅದರಲ್ಲೂ ಪ್ಲೇಯಿಂಗ್ ಇಲೆವೆನ್ ರೂಪಿಸಲು ಅತ್ಯಂತ ಸಮತೋಲನದಿಂದ ಕೂಡಿದೆ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ರಾಯಲ್ಲಾಗಿಯೇ ಟ್ರೋಫಿ ಎತ್ತಿ ಹಿಡಿಯುವ ವಿಶ್ವಾಸವಿದೆ ಎಂದು ಎಬಿಡಿ ಡಿವಿಲಿಯರ್ಸ್ ಹೇಳಿದ್ದಾರೆ.

ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠವಾಗಿದೆ. ಅದರಲ್ಲೂ ಪ್ಲೇಯಿಂಗ್ ಇಲೆವೆನ್ ರೂಪಿಸಲು ಅತ್ಯಂತ ಸಮತೋಲನದಿಂದ ಕೂಡಿದೆ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ರಾಯಲ್ಲಾಗಿಯೇ ಟ್ರೋಫಿ ಎತ್ತಿ ಹಿಡಿಯುವ ವಿಶ್ವಾಸವಿದೆ ಎಂದು ಎಬಿಡಿ ಡಿವಿಲಿಯರ್ಸ್ ಹೇಳಿದ್ದಾರೆ.

2 / 6
ಆರ್​ಸಿಬಿ ತಂಡದ ಬ್ಯಾಟಿಂಗ್ ಲೈನಪ್​ ಬಲಿಷ್ಠವಾಗಿದೆ. ವಿರಾಟ್ ಕೊಹ್ಲಿ ಹಾಗೂ ಫಿಲ್ ಸಾಲ್ಟ್ ಇನಿಂಗ್ಸ್ ಆರಂಭಿಸಲಿದ್ದಾರೆ. ಸಾಲ್ಟ್ ಜೊತೆಗಿನ ಬ್ಯಾಟಿಂಗ್​ ಅನ್ನು ಕೊಹ್ಲಿ ಆನಂದಿಸುವುದು ಖಚಿತ. ಇನ್ನು ಬೌಲಿಂಗ್ ವಿಭಾಗವನ್ನು ನೋಡಿ, ಭುವನೇಶ್ವರ್ ಕುಮಾರ್ ಅವರ ಅನುಭವ ತಂಡಕ್ಕಿದೆ. ಅವರೊಂದಿಗೆ ಜೋಶ್ ಹ್ಯಾಝಲ್​ವುಡ್ ಕೂಡ ಇದ್ದಾರೆ.

ಆರ್​ಸಿಬಿ ತಂಡದ ಬ್ಯಾಟಿಂಗ್ ಲೈನಪ್​ ಬಲಿಷ್ಠವಾಗಿದೆ. ವಿರಾಟ್ ಕೊಹ್ಲಿ ಹಾಗೂ ಫಿಲ್ ಸಾಲ್ಟ್ ಇನಿಂಗ್ಸ್ ಆರಂಭಿಸಲಿದ್ದಾರೆ. ಸಾಲ್ಟ್ ಜೊತೆಗಿನ ಬ್ಯಾಟಿಂಗ್​ ಅನ್ನು ಕೊಹ್ಲಿ ಆನಂದಿಸುವುದು ಖಚಿತ. ಇನ್ನು ಬೌಲಿಂಗ್ ವಿಭಾಗವನ್ನು ನೋಡಿ, ಭುವನೇಶ್ವರ್ ಕುಮಾರ್ ಅವರ ಅನುಭವ ತಂಡಕ್ಕಿದೆ. ಅವರೊಂದಿಗೆ ಜೋಶ್ ಹ್ಯಾಝಲ್​ವುಡ್ ಕೂಡ ಇದ್ದಾರೆ.

3 / 6
ಜೋಶ್ ಹ್ಯಾಝಲ್​ವುಡ್ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಇಡೀ ಟೂರ್ನಿ ಆಡಿದರೆ ಫಲಿತಾಂಶಗಳು ಆರ್​ಸಿಬಿ ಪರವಾಗಲಿದೆ. ಇನ್ನು ಸ್ಪಿನ್ ಆಲ್​ರೌಂಡರ್ ಆಗಿ ಕೃನಾಲ್ ಪಾಂಡ್ಯ ಸಹ ಇದ್ದಾರೆ. ಅವರು ಬೌಲಿಂಗ್​ನಲ್ಲೂ ಮಿಂಚಬಲ್ಲರು, ಬ್ಯಾಟಿಂಗ್​ ಸಹ ಮಾಡಬಲ್ಲರು. ಅಂದರೆ ಈ ಹಿಂದಿಗಿಂತಲೂ ಆರ್​ಸಿಬಿ ಈ ಬಾರಿ ಹೆಚ್ಚು ಸಮತೋಲಿತವಾಗಿದೆ ಎಂದು ಎಬಿ ಡಿವಿಲಿಯರ್ಸ್ ಅಭಿಪ್ರಾಯಪಟ್ಟಿದ್ದಾರೆ.

ಜೋಶ್ ಹ್ಯಾಝಲ್​ವುಡ್ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಇಡೀ ಟೂರ್ನಿ ಆಡಿದರೆ ಫಲಿತಾಂಶಗಳು ಆರ್​ಸಿಬಿ ಪರವಾಗಲಿದೆ. ಇನ್ನು ಸ್ಪಿನ್ ಆಲ್​ರೌಂಡರ್ ಆಗಿ ಕೃನಾಲ್ ಪಾಂಡ್ಯ ಸಹ ಇದ್ದಾರೆ. ಅವರು ಬೌಲಿಂಗ್​ನಲ್ಲೂ ಮಿಂಚಬಲ್ಲರು, ಬ್ಯಾಟಿಂಗ್​ ಸಹ ಮಾಡಬಲ್ಲರು. ಅಂದರೆ ಈ ಹಿಂದಿಗಿಂತಲೂ ಆರ್​ಸಿಬಿ ಈ ಬಾರಿ ಹೆಚ್ಚು ಸಮತೋಲಿತವಾಗಿದೆ ಎಂದು ಎಬಿ ಡಿವಿಲಿಯರ್ಸ್ ಅಭಿಪ್ರಾಯಪಟ್ಟಿದ್ದಾರೆ.

4 / 6
ಆರ್​ಸಿಬಿ ತಂಡವು ಅನುಭವಿ ಹಾಗೂ ಯುವ ಆಟಗಾರರ ಮಿಶ್ರಣವನ್ನು ಹೊಂದಿದೆ. ಹೀಗಾಗಿ ಈ ಬಾರಿ ಆರ್​ಸಿಬಿ ಕಡೆಯಿಂದ ಭರ್ಜರಿ ಪ್ರದರ್ಶನವನ್ನು ಎದುರು ನೋಡಬಹುದು. ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಸಲ ಕಪ್ ಗೆಲ್ಲುವ ನಿರೀಕ್ಷೆಯಿದೆ ಎಂದು ಎಬಿ ಡಿವಿಲಿಯರ್ಸ್ ಹೇಳಿದ್ದಾರೆ.

ಆರ್​ಸಿಬಿ ತಂಡವು ಅನುಭವಿ ಹಾಗೂ ಯುವ ಆಟಗಾರರ ಮಿಶ್ರಣವನ್ನು ಹೊಂದಿದೆ. ಹೀಗಾಗಿ ಈ ಬಾರಿ ಆರ್​ಸಿಬಿ ಕಡೆಯಿಂದ ಭರ್ಜರಿ ಪ್ರದರ್ಶನವನ್ನು ಎದುರು ನೋಡಬಹುದು. ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಸಲ ಕಪ್ ಗೆಲ್ಲುವ ನಿರೀಕ್ಷೆಯಿದೆ ಎಂದು ಎಬಿ ಡಿವಿಲಿಯರ್ಸ್ ಹೇಳಿದ್ದಾರೆ.

5 / 6
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಲಿಯಾಮ್ ಲಿವಿಂಗ್​ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹ್ಯಾಝಲ್​ವುಡ್, ರಸಿಖ್ ಸಲಾಂ, ಸುಯೇಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ನುವಾನ್ ತುಷಾರ, ರೊಮಾರಿಯೋ ಶೆಫರ್ಡ್, ಜೇಕೊಬ್ ಬೆಥೆಲ್, ಮನೋಜ್ ಭಾಂಡಗೆ, ಸ್ವಸ್ತಿಕ್ ಚಿಕಾರ, ದೇವದತ್​ ಪಡಿಕ್ಕಲ್, ಮೋಹಿತ್ ರಾಠಿ, ಅಭಿನಂದನ್ ಸಿಂಗ್, ಲುಂಗಿ ಎನ್​ಗಿಡಿ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಲಿಯಾಮ್ ಲಿವಿಂಗ್​ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹ್ಯಾಝಲ್​ವುಡ್, ರಸಿಖ್ ಸಲಾಂ, ಸುಯೇಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ನುವಾನ್ ತುಷಾರ, ರೊಮಾರಿಯೋ ಶೆಫರ್ಡ್, ಜೇಕೊಬ್ ಬೆಥೆಲ್, ಮನೋಜ್ ಭಾಂಡಗೆ, ಸ್ವಸ್ತಿಕ್ ಚಿಕಾರ, ದೇವದತ್​ ಪಡಿಕ್ಕಲ್, ಮೋಹಿತ್ ರಾಠಿ, ಅಭಿನಂದನ್ ಸಿಂಗ್, ಲುಂಗಿ ಎನ್​ಗಿಡಿ.

6 / 6
Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ