AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಗೆ ಕನ್ನಡದಲ್ಲೇ ಧನ್ಯವಾದ ತಿಳಿಸಿದ ABD

Ab De Villiers: ಸೌತ್ ಆಫ್ರಿಕಾ ಪರ 479 ಇನಿಂಗ್ಸ್ ಆಡಿರುವ ಎಬಿ ಡಿವಿಲಿಯರ್ಸ್ 47 ಶತಕ ಹಾಗೂ 108 ಅರ್ಧಶತಕಗಳೊಂದಿಗೆ ಒಟ್ಟು 19864 ರನ್ ಕಲೆಹಾಕಿದ್ದಾರೆ. ಈ ಮೂಲಕ ಸೌತ್ ಆಫ್ರಿಕಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಎಲ್ಲಾ ಸಾಧನೆಗಾಗಿ ಇದೀಗ ಎಬಿಡಿಗೆ ಹಾಲ್ ಆಫ್ ಫೇಮ್ ಗೌರವ ಸಂದಿದೆ.

ಝಾಹಿರ್ ಯೂಸುಫ್
|

Updated on: Oct 26, 2024 | 1:31 PM

Share
ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ತಮ್ಮದೇಯಾದ ಛಾಪು ಮೂಡಿಸಿರುವ ಸೌತ್ ಆಫ್ರಿಕಾ ತಂಡದ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಅವರಿಗೆ ಐಸಿಸಿ ಹಾಲ್ ಆಫ್ ಫೇಮ್ ಗೌರವ ನೀಡಿದೆ. ಈ ಗೌರವದೊಂದಿಗೆ ಎಬಿಡಿಗೆ ಹಾಲ್ ಆಫ್ ಫೇಮ್ ಕ್ಯಾಪ್ ಅನ್ನು ಕಳುಹಿಸಿಕೊಟ್ಟಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ತಮ್ಮದೇಯಾದ ಛಾಪು ಮೂಡಿಸಿರುವ ಸೌತ್ ಆಫ್ರಿಕಾ ತಂಡದ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಅವರಿಗೆ ಐಸಿಸಿ ಹಾಲ್ ಆಫ್ ಫೇಮ್ ಗೌರವ ನೀಡಿದೆ. ಈ ಗೌರವದೊಂದಿಗೆ ಎಬಿಡಿಗೆ ಹಾಲ್ ಆಫ್ ಫೇಮ್ ಕ್ಯಾಪ್ ಅನ್ನು ಕಳುಹಿಸಿಕೊಟ್ಟಿದ್ದಾರೆ.

1 / 6
ಈ ಗೌರವ ಸೂಚಕದ ಫೋಟೋವನ್ನು ಎಬಿ ಡಿವಿಲಿಯರ್ಸ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದರು. ಈ ಫೋಟೋಗೆ ಮಾಜಿ ಕ್ರಿಕೆಟಿಗರು ಸೇರಿದಂತೆ ಅನೇಕರು ಪ್ರತಿಕ್ರಿಯಿಸಿ ಅಭಿನಂದನೆ ಸಲ್ಲಿಸಿದ್ದರು.

ಈ ಗೌರವ ಸೂಚಕದ ಫೋಟೋವನ್ನು ಎಬಿ ಡಿವಿಲಿಯರ್ಸ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದರು. ಈ ಫೋಟೋಗೆ ಮಾಜಿ ಕ್ರಿಕೆಟಿಗರು ಸೇರಿದಂತೆ ಅನೇಕರು ಪ್ರತಿಕ್ರಿಯಿಸಿ ಅಭಿನಂದನೆ ಸಲ್ಲಿಸಿದ್ದರು.

2 / 6
ಅದರಲ್ಲೂ ಆರ್​ಸಿಬಿ ಫ್ರಾಂಚೈಸಿಯು, ಗೌರವಗಳು ಬರುತ್ತವೆ ಹೋಗುತ್ತವೆ, ಆದರೆ ಈ ಫ್ರೇಮ್ ಶಾಶ್ವತವಾಗಿ ಉಳಿಯುತ್ತದೆ' ಎಂದು ಬರೆದು ಎಬಿಡಿ ಅವರ ಹಾಲ್ ಅಫ್ ಫೇಮ್​ ಗೌರವದ ಫೋಟೋ ಹಂಚಿಕೊಂಡಿದ್ದರು.

ಅದರಲ್ಲೂ ಆರ್​ಸಿಬಿ ಫ್ರಾಂಚೈಸಿಯು, ಗೌರವಗಳು ಬರುತ್ತವೆ ಹೋಗುತ್ತವೆ, ಆದರೆ ಈ ಫ್ರೇಮ್ ಶಾಶ್ವತವಾಗಿ ಉಳಿಯುತ್ತದೆ' ಎಂದು ಬರೆದು ಎಬಿಡಿ ಅವರ ಹಾಲ್ ಅಫ್ ಫೇಮ್​ ಗೌರವದ ಫೋಟೋ ಹಂಚಿಕೊಂಡಿದ್ದರು.

3 / 6
ಈ ಫೋಟೋಗೆ ಖುದ್ದು ಎಬಿಡಿ ಪ್ರತಿಕ್ರಿಯಿಸಿದ್ದಾರೆ. ಅದು ಕೂಡ ಕನ್ನಡದಲ್ಲಿ ಎಂಬುದು ವಿಶೇಷ. ಆರ್​ಸಿಬಿ ಹಂಚಿಕೊಂಡಿದ್ದ ಫೋಟೋಗೆ ಎಬಿ ಡಿವಿಲಿಯರ್ಸ್ "ಧನ್ಯವಾದಗಳು" ಎಂದು ಕನ್ನಡದಲ್ಲೇ ಪ್ರತಿಕ್ರಿಯೆ ನೀಡಿ ಕನ್ನಡಿಗರ ಮನಗೆದ್ದಿದ್ದಾರೆ.

ಈ ಫೋಟೋಗೆ ಖುದ್ದು ಎಬಿಡಿ ಪ್ರತಿಕ್ರಿಯಿಸಿದ್ದಾರೆ. ಅದು ಕೂಡ ಕನ್ನಡದಲ್ಲಿ ಎಂಬುದು ವಿಶೇಷ. ಆರ್​ಸಿಬಿ ಹಂಚಿಕೊಂಡಿದ್ದ ಫೋಟೋಗೆ ಎಬಿ ಡಿವಿಲಿಯರ್ಸ್ "ಧನ್ಯವಾದಗಳು" ಎಂದು ಕನ್ನಡದಲ್ಲೇ ಪ್ರತಿಕ್ರಿಯೆ ನೀಡಿ ಕನ್ನಡಿಗರ ಮನಗೆದ್ದಿದ್ದಾರೆ.

4 / 6
ಇದೀಗ ಆರ್​ಸಿಬಿ ತಂಡದ ಮಾಜಿ ಆಟಗಾರನ ಕನ್ನಡ ಪ್ರೀತಿಗೆ ಅಭಿಮಾನಿಗಳು ಭಾರೀ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ಮತ್ತೆ ಆರ್​ಸಿಬಿ ತಂಡದಲ್ಲಿ ಕಾಣಿಸಿಕೊಳ್ಳುವಂತೆ ಅನೇಕ ಅಭಿಮಾನಿಗಳು ಎಬಿಡಿ ಅವರಲ್ಲಿ ಮನವಿ ಮಾಡಿದ್ದಾರೆ.

ಇದೀಗ ಆರ್​ಸಿಬಿ ತಂಡದ ಮಾಜಿ ಆಟಗಾರನ ಕನ್ನಡ ಪ್ರೀತಿಗೆ ಅಭಿಮಾನಿಗಳು ಭಾರೀ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ಮತ್ತೆ ಆರ್​ಸಿಬಿ ತಂಡದಲ್ಲಿ ಕಾಣಿಸಿಕೊಳ್ಳುವಂತೆ ಅನೇಕ ಅಭಿಮಾನಿಗಳು ಎಬಿಡಿ ಅವರಲ್ಲಿ ಮನವಿ ಮಾಡಿದ್ದಾರೆ.

5 / 6
2011 ರಲ್ಲಿ RCB ಸೇರಿದ್ದ ಎಬಿ ಡಿವಿಲಿಯರ್ಸ್ ಸತತ 11 ಸೀಸನ್​ಗಳಲ್ಲಿ ತಂಡದ ಭಾಗವಾಗಿದ್ದರು. ಅಲ್ಲದೆ RCB ಪರ 157 ಪಂದ್ಯಗಳಲ್ಲಿ 4522 ರನ್ ಗಳಿಸಿದ್ದಾರೆ. ಈ ಮೂಲಕ ಆರ್​ಸಿಬಿ ಪರ ಅತ್ಯಧಿಕ ರನ್ ಕಲೆಹಾಕಿದ ವಿದೇಶಿ ಆಟಗಾರ ಎನಿಸಿಕೊಂಡಿದ್ದಾರೆ. ಇದೀಗ ಎಲ್ಲಾ ಮಾದರಿಯ ಕ್ರಿಕೆಟ್​ಗೆ ನಿವೃತ್ತಿ ನೀಡಿರುವ ಎಬಿಡಿ ಮುಂಬರುವ ದಿನಗಳಲ್ಲಿ ಆರ್​ಸಿಬಿ ತಂಡದ ಸಿಬ್ಬಂದಿ ವರ್ಗಗಳ ಭಾಗವಾದರೂ ಅಚ್ಚರಿಪಡಬೇಕಿಲ್ಲ.

2011 ರಲ್ಲಿ RCB ಸೇರಿದ್ದ ಎಬಿ ಡಿವಿಲಿಯರ್ಸ್ ಸತತ 11 ಸೀಸನ್​ಗಳಲ್ಲಿ ತಂಡದ ಭಾಗವಾಗಿದ್ದರು. ಅಲ್ಲದೆ RCB ಪರ 157 ಪಂದ್ಯಗಳಲ್ಲಿ 4522 ರನ್ ಗಳಿಸಿದ್ದಾರೆ. ಈ ಮೂಲಕ ಆರ್​ಸಿಬಿ ಪರ ಅತ್ಯಧಿಕ ರನ್ ಕಲೆಹಾಕಿದ ವಿದೇಶಿ ಆಟಗಾರ ಎನಿಸಿಕೊಂಡಿದ್ದಾರೆ. ಇದೀಗ ಎಲ್ಲಾ ಮಾದರಿಯ ಕ್ರಿಕೆಟ್​ಗೆ ನಿವೃತ್ತಿ ನೀಡಿರುವ ಎಬಿಡಿ ಮುಂಬರುವ ದಿನಗಳಲ್ಲಿ ಆರ್​ಸಿಬಿ ತಂಡದ ಸಿಬ್ಬಂದಿ ವರ್ಗಗಳ ಭಾಗವಾದರೂ ಅಚ್ಚರಿಪಡಬೇಕಿಲ್ಲ.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ