AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBL 2021: ಬಿಗ್ ಬ್ಯಾಷ್ ಲೀಗ್​ನಲ್ಲಿ ದಾಖಲೆ ಬರೆದ ಘಾತಕ ವೇಗಿ

Sean Abbott: 2014 ರ ಕಹಿ ಘಟನೆಯ ಬಳಿಕ ಸೀನ್ ಅಬಾಟ್ ಅವರನ್ನು ಘಾತಕ ವೇಗಿ ಎಂದೇ ಗುರುತಿಸಲಾಗುತ್ತದೆ. ಆಸ್ಟ್ರೇಲಿಯಾದಲ್ಲಿ ನಡೆದ ದೇಶೀಯ ಟೂರ್ನಿಯಲ್ಲಿ ನಡೆದ ಪಂದ್ಯದ ವೇಳೆ ಅಬಾಟ್ ಎಸೆದ ಚೆಂಡು ಫಿಲ್ ಹ್ಯೂಸ್ ಅವರ ತಲೆಯ ಹಿಂಭಾಗಕ್ಕೆ ತಾಗಿತ್ತು.

TV9 Web
| Edited By: |

Updated on: Dec 21, 2021 | 6:06 PM

Share
ಸೀನ್ ಅಬಾಟ್....ಈ ಹೆಸರು ಕೇಳಿದೊಡನೆ ಎಲ್ಲರಿಗೂ 2014ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದ ಕಹಿ ಘಟನೆಯೊಂದು ಕಣ್ಮುಂದೆ ಬರುತ್ತೆ. ಹೌದು, ಸೀನ್ ಅಬಾಟ್ ಬೌನ್ಸರ್ ಎಸೆತದಿಂದಾಗಿ ಆಸೀನ್ ಕ್ರಿಕೆಟಿಗ ಫಿಲಿಪ್ ಹ್ಯೂಸ್ ಪ್ರಾಣ ಬಿಡುವಂತಾಗಿತ್ತು. ಈ ಕಹಿ ಘಟನೆಯ ಬಳಿಕ ಅಬಾಟ್ ಕೆಲ ಕಾಲ ಕ್ರಿಕೆಟ್​ನಿಂದ ದೂರ ಉಳಿದಿದ್ದರು.

ಸೀನ್ ಅಬಾಟ್....ಈ ಹೆಸರು ಕೇಳಿದೊಡನೆ ಎಲ್ಲರಿಗೂ 2014ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದ ಕಹಿ ಘಟನೆಯೊಂದು ಕಣ್ಮುಂದೆ ಬರುತ್ತೆ. ಹೌದು, ಸೀನ್ ಅಬಾಟ್ ಬೌನ್ಸರ್ ಎಸೆತದಿಂದಾಗಿ ಆಸೀನ್ ಕ್ರಿಕೆಟಿಗ ಫಿಲಿಪ್ ಹ್ಯೂಸ್ ಪ್ರಾಣ ಬಿಡುವಂತಾಗಿತ್ತು. ಈ ಕಹಿ ಘಟನೆಯ ಬಳಿಕ ಅಬಾಟ್ ಕೆಲ ಕಾಲ ಕ್ರಿಕೆಟ್​ನಿಂದ ದೂರ ಉಳಿದಿದ್ದರು.

1 / 5
ಆ ಬಳಿಕ ಕಂಬ್ಯಾಕ್ ಮಾಡಿದ ಸೀನ್ ಅಬಾಟ್ ಇದೀಗ ಆಸ್ಟ್ರೇಲಿಯಾದ ಬಿಗ್ ಬ್ಯಾಷ್ ಲೀಗ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಬಿಬಿಎಲ್​​ನಲ್ಲಿ ಸಿಡ್ನಿ ಸಿಕ್ಸರ್ ಪರ ಆಡುತ್ತಿರುವ ಅಬಾಟ್ ಅಡಿಲೇಡ್ ಸ್ಟ್ರೈಕರ್ಸ್ ವಿರುದ್ಧ 4 ಓವರ್‌ಗಳಲ್ಲಿ 24 ರನ್‌ಗಳಿಗೆ 3 ವಿಕೆಟ್ ಉರುಳಿಸಿ ಮಿಂಚಿದರು.

ಆ ಬಳಿಕ ಕಂಬ್ಯಾಕ್ ಮಾಡಿದ ಸೀನ್ ಅಬಾಟ್ ಇದೀಗ ಆಸ್ಟ್ರೇಲಿಯಾದ ಬಿಗ್ ಬ್ಯಾಷ್ ಲೀಗ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಬಿಬಿಎಲ್​​ನಲ್ಲಿ ಸಿಡ್ನಿ ಸಿಕ್ಸರ್ ಪರ ಆಡುತ್ತಿರುವ ಅಬಾಟ್ ಅಡಿಲೇಡ್ ಸ್ಟ್ರೈಕರ್ಸ್ ವಿರುದ್ಧ 4 ಓವರ್‌ಗಳಲ್ಲಿ 24 ರನ್‌ಗಳಿಗೆ 3 ವಿಕೆಟ್ ಉರುಳಿಸಿ ಮಿಂಚಿದರು.

2 / 5
ಇದರೊಂದಿಗೆ ಬಿಗ್ ಬ್ಯಾಷ್ ಲೀಗ್‌ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ದಾಖಲೆಯನ್ನು ಸೀನ್ ಅಬಾಟ್ ತಮ್ಮದಾಗಿಸಿಕೊಂಡರು. ಅಬಾಟ್ ಇದುವರೆಗೆ 112 ವಿಕೆಟ್‌ಗಳನ್ನು ಪಡೆದು ಬಿಬಿಎಲ್​ನ ಅತ್ಯಂತ ಯಶಸ್ವಿ ಬೌಲರ್ ಎನಿಸಿಕೊಂಡಿದ್ದಾರೆ.

ಇದರೊಂದಿಗೆ ಬಿಗ್ ಬ್ಯಾಷ್ ಲೀಗ್‌ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ದಾಖಲೆಯನ್ನು ಸೀನ್ ಅಬಾಟ್ ತಮ್ಮದಾಗಿಸಿಕೊಂಡರು. ಅಬಾಟ್ ಇದುವರೆಗೆ 112 ವಿಕೆಟ್‌ಗಳನ್ನು ಪಡೆದು ಬಿಬಿಎಲ್​ನ ಅತ್ಯಂತ ಯಶಸ್ವಿ ಬೌಲರ್ ಎನಿಸಿಕೊಂಡಿದ್ದಾರೆ.

3 / 5
ಇದಕ್ಕೂ ಮುನ್ನ ಈ ದಾಖಲೆ ಬೆನ್​ ಲಾಫ್ಲಿನ್ ಹೆಸರಿನಲ್ಲಿತ್ತು. ಲಾಫ್ಲಿನ್ 96 ಪಂದ್ಯಗಳಲ್ಲಿ 111 ವಿಕೆಟ್ ಪಡೆದಿದ್ದರು. ಇದೀಗ ಕೇವಲ 83 ಪಂದ್ಯಗಳನ್ನು ಆಡಿರುವ ಸೀನ್ ಅಬಾಟ್ 112 ವಿಕೆಟ್ ಉರುಳಿಸಿ ಬಿಗ್ ಬ್ಯಾಷ್ ಲೀಗ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅಷ್ಟೇ ಅಲ್ಲದೆ   ಸಿಡ್ನಿ ಸಿಕ್ಸರ್ಸ್ ಪರ 100 ವಿಕೆಟ್ ಪೂರೈಸಿದ ಮೊದಲ ವೇಗಿ ಎನಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಈ ದಾಖಲೆ ಬೆನ್​ ಲಾಫ್ಲಿನ್ ಹೆಸರಿನಲ್ಲಿತ್ತು. ಲಾಫ್ಲಿನ್ 96 ಪಂದ್ಯಗಳಲ್ಲಿ 111 ವಿಕೆಟ್ ಪಡೆದಿದ್ದರು. ಇದೀಗ ಕೇವಲ 83 ಪಂದ್ಯಗಳನ್ನು ಆಡಿರುವ ಸೀನ್ ಅಬಾಟ್ 112 ವಿಕೆಟ್ ಉರುಳಿಸಿ ಬಿಗ್ ಬ್ಯಾಷ್ ಲೀಗ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅಷ್ಟೇ ಅಲ್ಲದೆ ಸಿಡ್ನಿ ಸಿಕ್ಸರ್ಸ್ ಪರ 100 ವಿಕೆಟ್ ಪೂರೈಸಿದ ಮೊದಲ ವೇಗಿ ಎನಿಸಿಕೊಂಡಿದ್ದಾರೆ.

4 / 5
ಅಂದಹಾಗೆ 2014 ರ ಕಹಿ ಘಟನೆಯ ಬಳಿಕ ಸೀನ್ ಅಬಾಟ್ ಅವರನ್ನು ಘಾತಕ ವೇಗಿ ಎಂದೇ ಗುರುತಿಸಲಾಗುತ್ತದೆ. ಆಸ್ಟ್ರೇಲಿಯಾದಲ್ಲಿ ನಡೆದ ದೇಶೀಯ ಟೂರ್ನಿಯಲ್ಲಿ ನಡೆದ ಪಂದ್ಯದ ವೇಳೆ ಅಬಾಟ್ ಎಸೆದ ಚೆಂಡು ಫಿಲ್ ಹ್ಯೂಸ್ ಅವರ ತಲೆಯ ಹಿಂಭಾಗಕ್ಕೆ ತಾಗಿತ್ತು. ತಕ್ಷಣವೇ ಕುಸಿದು ಬಿದ್ದಿದ್ದ ಹ್ಯೂಸ್ ಕೋಮಾಕ್ಕೆ ಜಾರಿದ್ದರು. ಇದಾಗಿ 2 ದಿನಗಳ ನಂತರ ಆಸ್ಪತ್ರೆಯಲ್ಲಿ ಫಿಲಿಪ್ ಹ್ಯೂಸ್ ನಿಧನರಾಗಿದ್ದರು. ಆ ಕಹಿ ಘಟನೆಯ ಬಳಿಕ ಕ್ರಿಕೆಟ್​ ಅಂಗಳದಿಂದ ದೂರ ಉಳಿದಿದ್ದ ಸೀನ್ ಅಬಾಟ್ ಆ ಬಳಿಕ ಫಿಲಿಪ್ ಹ್ಯೂಸ್ ಅವರ ಕುಟುಂಬಸ್ಥರ ಕ್ಷಮೆಯಾಚಿಸಿ ಮತ್ತೆ ಕ್ರಿಕೆಟ್ ಅಂಗಳಕ್ಕೆ ಹಿಂತಿರುಗಿದ್ದರು.

ಅಂದಹಾಗೆ 2014 ರ ಕಹಿ ಘಟನೆಯ ಬಳಿಕ ಸೀನ್ ಅಬಾಟ್ ಅವರನ್ನು ಘಾತಕ ವೇಗಿ ಎಂದೇ ಗುರುತಿಸಲಾಗುತ್ತದೆ. ಆಸ್ಟ್ರೇಲಿಯಾದಲ್ಲಿ ನಡೆದ ದೇಶೀಯ ಟೂರ್ನಿಯಲ್ಲಿ ನಡೆದ ಪಂದ್ಯದ ವೇಳೆ ಅಬಾಟ್ ಎಸೆದ ಚೆಂಡು ಫಿಲ್ ಹ್ಯೂಸ್ ಅವರ ತಲೆಯ ಹಿಂಭಾಗಕ್ಕೆ ತಾಗಿತ್ತು. ತಕ್ಷಣವೇ ಕುಸಿದು ಬಿದ್ದಿದ್ದ ಹ್ಯೂಸ್ ಕೋಮಾಕ್ಕೆ ಜಾರಿದ್ದರು. ಇದಾಗಿ 2 ದಿನಗಳ ನಂತರ ಆಸ್ಪತ್ರೆಯಲ್ಲಿ ಫಿಲಿಪ್ ಹ್ಯೂಸ್ ನಿಧನರಾಗಿದ್ದರು. ಆ ಕಹಿ ಘಟನೆಯ ಬಳಿಕ ಕ್ರಿಕೆಟ್​ ಅಂಗಳದಿಂದ ದೂರ ಉಳಿದಿದ್ದ ಸೀನ್ ಅಬಾಟ್ ಆ ಬಳಿಕ ಫಿಲಿಪ್ ಹ್ಯೂಸ್ ಅವರ ಕುಟುಂಬಸ್ಥರ ಕ್ಷಮೆಯಾಚಿಸಿ ಮತ್ತೆ ಕ್ರಿಕೆಟ್ ಅಂಗಳಕ್ಕೆ ಹಿಂತಿರುಗಿದ್ದರು.

5 / 5
Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್