AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

36 ಸಿಕ್ಸ್​ಗಳೊಂದಿಗೆ ಹೊಸ ದಾಖಲೆ ಬರೆದ ಅಭಿನವ್ ಮನೋಹರ್

Abhinav Manohar: ಅಭಿನವ್ ಮನೋಹರ್ ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿಯುತ್ತಿದ್ದಾರೆ. 2022 ರಿಂದ ಗುಜರಾತ್ ಟೈಟಾನ್ಸ್ ಪರ ಮಧ್ಯಮ ಕ್ರಮಾಂಕದಲ್ಲಿ 15 ಇನಿಂಗ್ಸ್ ಆಡಿರುವ ಅಭಿನವ್ 10 ಭರ್ಜರಿ ಸಿಕ್ಸ್ ಹಾಗೂ 21 ಫೋರ್​ಗಳೊಂದಿಗೆ ಒಟ್ಟು 231 ರನ್ ಕಲೆಹಾಕಿದ್ದಾರೆ. ಇದಾಗ್ಯೂ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ಅಭಿನವ್ ಅವರನ್ನು ಗುಜರಾತ್ ಟೈಟಾನ್ಸ್ ತಂಡ ರಿಲೀಸ್ ಮಾಡುವ ಸಾಧ್ಯತೆಯಿದೆ.

ಝಾಹಿರ್ ಯೂಸುಫ್
|

Updated on: Aug 26, 2024 | 1:08 PM

Share
ಪ್ರಸ್ತುತ ನಡೆಯುತ್ತಿರುವ ಮಹಾರಾಜ ಟಿ20 ಟೂರ್ನಿಯಲ್ಲಿ 36 ಸಿಕ್ಸ್​ಗಳನ್ನು ಸಿಡಿಸುವ ಮೂಲಕ ಅಭಿನವ್ ಮನೋಹರ್ ಹೊಸ ದಾಖಲೆ ನಿರ್ಮಿಸಿದ್ದಾರೆ. ಶಿವಮೊಗ್ಗ ಲಯನ್ಸ್ ಪರ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸುತ್ತಿರುವ ಮನೋಹರ್ ಈವರಗೆ 200 ಎಸೆತಗಳನ್ನು ಎದುರಿಸಿದ್ದಾರೆ. ಈ ವೇಳೆ 36 ಸಿಕ್ಸ್​ಗಳನ್ನು ಸಿಡಿಸಿರುವುದು ವಿಶೇಷ.

ಪ್ರಸ್ತುತ ನಡೆಯುತ್ತಿರುವ ಮಹಾರಾಜ ಟಿ20 ಟೂರ್ನಿಯಲ್ಲಿ 36 ಸಿಕ್ಸ್​ಗಳನ್ನು ಸಿಡಿಸುವ ಮೂಲಕ ಅಭಿನವ್ ಮನೋಹರ್ ಹೊಸ ದಾಖಲೆ ನಿರ್ಮಿಸಿದ್ದಾರೆ. ಶಿವಮೊಗ್ಗ ಲಯನ್ಸ್ ಪರ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸುತ್ತಿರುವ ಮನೋಹರ್ ಈವರಗೆ 200 ಎಸೆತಗಳನ್ನು ಎದುರಿಸಿದ್ದಾರೆ. ಈ ವೇಳೆ 36 ಸಿಕ್ಸ್​ಗಳನ್ನು ಸಿಡಿಸಿರುವುದು ವಿಶೇಷ.

1 / 5
ಈ ಮೂಲಕ ಮಹಾರಾಜ ಟ್ರೋಫಿ ಟಿ20 ಟೂರ್ನಿಯ ಒಂದೇ ಸೀಸನ್​ನಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ದಾಖಲೆಯನ್ನು ಅಭಿನವ್ ಮನೋಹರ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಮೊಹಮ್ಮದ್ ತಾಹ ಹೆಸರಿನಲ್ಲಿತ್ತು.

ಈ ಮೂಲಕ ಮಹಾರಾಜ ಟ್ರೋಫಿ ಟಿ20 ಟೂರ್ನಿಯ ಒಂದೇ ಸೀಸನ್​ನಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ದಾಖಲೆಯನ್ನು ಅಭಿನವ್ ಮನೋಹರ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಮೊಹಮ್ಮದ್ ತಾಹ ಹೆಸರಿನಲ್ಲಿತ್ತು.

2 / 5
2023ರ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಹುಬ್ಬಳ್ಳಿ ಟೈಗರ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದಿದ್ದ ಮೊಹಮ್ಮದ್ ತಾಹ 12 ಪಂದ್ಯಗಳಿಂದ ಒಟ್ಟು 32 ಸಿಕ್ಸ್ ಸಿಡಿಸಿ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಅಭಿನವ್ ಮನೋಹರ್ ಯಶಸ್ವಿಯಾಗಿದ್ದಾರೆ.

2023ರ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಹುಬ್ಬಳ್ಳಿ ಟೈಗರ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದಿದ್ದ ಮೊಹಮ್ಮದ್ ತಾಹ 12 ಪಂದ್ಯಗಳಿಂದ ಒಟ್ಟು 32 ಸಿಕ್ಸ್ ಸಿಡಿಸಿ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಅಭಿನವ್ ಮನೋಹರ್ ಯಶಸ್ವಿಯಾಗಿದ್ದಾರೆ.

3 / 5
ಶಿವಮೊಗ್ಗ ಲಯನ್ಸ್ ಪರ 8 ಪಂದ್ಯಗಳಲ್ಲಿ ಬ್ಯಾಟ್ ಬೀಸಿರುವ ಅಭಿನವ್ ಮನೋಹರ್ ಒಟ್ಟು 36 ಸಿಕ್ಸ್​ಗಳನ್ನು ಸಿಡಿಸಿದ್ದಾರೆ. ಈ ಮೂಲಕ ಮಹಾರಾಜ ಟ್ರೋಫಿ ಟಿ20 ಟೂರ್ನಿಯ ಒಂದೇ ಆವೃತ್ತಿಯಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ದಾಖಲೆಯನ್ನು ಅಭಿನವ್ ತಮ್ಮದಾಗಿಸಿಕೊಂಡಿದ್ದಾರೆ.

ಶಿವಮೊಗ್ಗ ಲಯನ್ಸ್ ಪರ 8 ಪಂದ್ಯಗಳಲ್ಲಿ ಬ್ಯಾಟ್ ಬೀಸಿರುವ ಅಭಿನವ್ ಮನೋಹರ್ ಒಟ್ಟು 36 ಸಿಕ್ಸ್​ಗಳನ್ನು ಸಿಡಿಸಿದ್ದಾರೆ. ಈ ಮೂಲಕ ಮಹಾರಾಜ ಟ್ರೋಫಿ ಟಿ20 ಟೂರ್ನಿಯ ಒಂದೇ ಆವೃತ್ತಿಯಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ದಾಖಲೆಯನ್ನು ಅಭಿನವ್ ತಮ್ಮದಾಗಿಸಿಕೊಂಡಿದ್ದಾರೆ.

4 / 5
ಇನ್ನು ಈ ಬಾರಿಯ ಟೂರ್ನಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಅಭಿನವ್ ಮನೋಹರ್ ಅಗ್ರಸ್ಥಾನದಲ್ಲಿದ್ದಾರೆ. ಈವರೆಗೆ 8 ಇನಿಂಗ್ಸ್​ಗಳನ್ನಾಡಿರುವ ಅಭಿನವ್ 4 ಅರ್ಧಶತಕಗಳೊಂದಿಗೆ ಒಟ್ಟು 372	 ರನ್ ಕಲೆಹಾಕಿದ್ದಾರೆ. ಇದೇ ವೇಳೆ ಅವರು 8 ಫೋರ್ ಹಾಗೂ 36 ಸಿಕ್ಸ್​ಗಳನ್ನು ಬಾರಿಸಿದ್ದಾರೆ. ವಿಶೇಷ ಎಂದರೆ 8 ಪಂದ್ಯಗಳಿಂದ ಅಭಿನವ್ ಬ್ಯಾಟ್​ನಿಂದ ಮೂಡಿಬಂದಿರುವುದು ಕೇವಲ 8 ಫೋರ್​ಗಳು ಮಾತ್ರ. ಇದೇ ವೇಳೆ ಅವರು 36 ಸಿಕ್ಸ್​​ಗಳನ್ನು ಸಿಡಿಸಿದ್ದಾರೆ. ಅಂದರೆ ಸಿಕ್ಸರ್​ಗಳ ಮೂಲಕವೇ ಸ್ಪೋಟಕ ಇನಿಂಗ್ಸ್ ಆಡುವಲ್ಲಿ ಅಭಿನವ್ ಮನೋಹರ್ ಯಶಸ್ವಿಯಾಗಿದ್ದಾರೆ.

ಇನ್ನು ಈ ಬಾರಿಯ ಟೂರ್ನಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಅಭಿನವ್ ಮನೋಹರ್ ಅಗ್ರಸ್ಥಾನದಲ್ಲಿದ್ದಾರೆ. ಈವರೆಗೆ 8 ಇನಿಂಗ್ಸ್​ಗಳನ್ನಾಡಿರುವ ಅಭಿನವ್ 4 ಅರ್ಧಶತಕಗಳೊಂದಿಗೆ ಒಟ್ಟು 372 ರನ್ ಕಲೆಹಾಕಿದ್ದಾರೆ. ಇದೇ ವೇಳೆ ಅವರು 8 ಫೋರ್ ಹಾಗೂ 36 ಸಿಕ್ಸ್​ಗಳನ್ನು ಬಾರಿಸಿದ್ದಾರೆ. ವಿಶೇಷ ಎಂದರೆ 8 ಪಂದ್ಯಗಳಿಂದ ಅಭಿನವ್ ಬ್ಯಾಟ್​ನಿಂದ ಮೂಡಿಬಂದಿರುವುದು ಕೇವಲ 8 ಫೋರ್​ಗಳು ಮಾತ್ರ. ಇದೇ ವೇಳೆ ಅವರು 36 ಸಿಕ್ಸ್​​ಗಳನ್ನು ಸಿಡಿಸಿದ್ದಾರೆ. ಅಂದರೆ ಸಿಕ್ಸರ್​ಗಳ ಮೂಲಕವೇ ಸ್ಪೋಟಕ ಇನಿಂಗ್ಸ್ ಆಡುವಲ್ಲಿ ಅಭಿನವ್ ಮನೋಹರ್ ಯಶಸ್ವಿಯಾಗಿದ್ದಾರೆ.

5 / 5
Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!