AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

31 ಸಿಕ್ಸ್, 8 ಫೋರ್: ಮಹಾರಾಜ ಟೂರ್ನಿಯಲ್ಲಿ ಅಭಿನವ್ ಆರ್ಭಟ

Abhinav Manohar: ಅಭಿನವ್ ಮನೋಹರ್ ಐಪಿಎಲ್ 2022 ರಿಂದ ಗುಜರಾತ್ ಟೈಟಾನ್ಸ್ ತಂಡದಲ್ಲಿದ್ದಾರೆ. ಜಿಟಿ ಪರ ಮಧ್ಯಮ ಕ್ರಮಾಂಕದಲ್ಲಿ 15 ಇನಿಂಗ್ಸ್ ಆಡಿರುವ ಅಭಿನವ್ 10 ಭರ್ಜರಿ ಸಿಕ್ಸ್ ಹಾಗೂ 21 ಫೋರ್​ಗಳೊಂದಿಗೆ ಒಟ್ಟು 231 ರನ್ ಕಲೆಹಾಕಿದ್ದಾರೆ. ಈ ಬಾರಿ ಮೆಗಾ ಹರಾಜು ನಡೆಯುತ್ತಿರುವುದರಿಂದ ಅಭಿನವ್ ಮನೋಹರ್ ಅವರು ಆಕ್ಷನ್​ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

ಝಾಹಿರ್ ಯೂಸುಫ್
|

Updated on: Aug 25, 2024 | 12:53 PM

Share
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಅಭಿನವ್ ಮನೋಹರ್ ಅವರ ಆರ್ಭಟ ಮುಂದುವರೆದಿದೆ. ಶಿವಮೊಗ್ಗ ಲಯನ್ಸ್ ಪರ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಯುತ್ತಿರುವ ಅಭಿನವ್ ಈವರೆಗೆ 329 ರನ್​ಗಳನ್ನು ಕಲೆಹಾಕಿದ್ದಾರೆ. ಅದು ಸಹ ಕೇವಲ 7 ಪಂದ್ಯಗಳ ಮೂಲಕ ಎಂಬುದು ವಿಶೇಷ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಅಭಿನವ್ ಮನೋಹರ್ ಅವರ ಆರ್ಭಟ ಮುಂದುವರೆದಿದೆ. ಶಿವಮೊಗ್ಗ ಲಯನ್ಸ್ ಪರ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಯುತ್ತಿರುವ ಅಭಿನವ್ ಈವರೆಗೆ 329 ರನ್​ಗಳನ್ನು ಕಲೆಹಾಕಿದ್ದಾರೆ. ಅದು ಸಹ ಕೇವಲ 7 ಪಂದ್ಯಗಳ ಮೂಲಕ ಎಂಬುದು ವಿಶೇಷ.

1 / 6
ಮೈಸೂರು ವಾರಿಯರ್ಸ್ ವಿರುದ್ಧದ ಪಂದ್ಯದ ಮೂಲಕ ಮಹಾರಾಜ ಟ್ರೋಫಿ ಅಭಿಯಾನ ಆರಂಭಿಸಿದ್ದ ಅಭಿನವ್ ಮೊದಲ ಪಂದ್ಯದಲ್ಲೇ 29 ಎಸೆತಗಳಲ್ಲಿ ಅಜೇಯ 52 ರನ್ ಬಾರಿಸಿದ್ದರು. ಇದಾದ ಬಳಿಕ ಮಂಗಳೂರು ಡ್ರಾಗನ್ಸ್ ವಿರುದ್ಧ ಕೇವಲ 34 ಎಸೆತಗಳಲ್ಲಿ ಅಜೇಯ 84 ರನ್​ ಚಚ್ಚಿದ್ದರು.

ಮೈಸೂರು ವಾರಿಯರ್ಸ್ ವಿರುದ್ಧದ ಪಂದ್ಯದ ಮೂಲಕ ಮಹಾರಾಜ ಟ್ರೋಫಿ ಅಭಿಯಾನ ಆರಂಭಿಸಿದ್ದ ಅಭಿನವ್ ಮೊದಲ ಪಂದ್ಯದಲ್ಲೇ 29 ಎಸೆತಗಳಲ್ಲಿ ಅಜೇಯ 52 ರನ್ ಬಾರಿಸಿದ್ದರು. ಇದಾದ ಬಳಿಕ ಮಂಗಳೂರು ಡ್ರಾಗನ್ಸ್ ವಿರುದ್ಧ ಕೇವಲ 34 ಎಸೆತಗಳಲ್ಲಿ ಅಜೇಯ 84 ರನ್​ ಚಚ್ಚಿದ್ದರು.

2 / 6
ಬ್ಯಾಕ್ ಟು ಬ್ಯಾಕ್ ಎರಡು ಅರ್ಧಶತಕ ಸಿಡಿಸಿದ್ದ ಅಭಿನವ್ ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ಹುಬ್ಬಳ್ಳಿ ಟೈಗರ್ಸ್ ವಿರುದ್ಧ ಕ್ರಮವಾಗಿ 5 ಮತ್ತು 17 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಆದರೆ ಗುಲ್ಬರ್ಗ ಮಿಸ್ಟಿಕ್ಸ್ ವಿರುದ್ಧದ ಪಂದ್ಯದಲ್ಲಿ ಮತ್ತೆ ಲಯ ಕಂಡುಕೊಂಡ ಬಲಗೈ ದಾಂಡಿಗ 36 ಎಸೆತಗಳಲ್ಲಿ 55 ರನ್ ಸಿಡಿಸಿದರು.

ಬ್ಯಾಕ್ ಟು ಬ್ಯಾಕ್ ಎರಡು ಅರ್ಧಶತಕ ಸಿಡಿಸಿದ್ದ ಅಭಿನವ್ ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ಹುಬ್ಬಳ್ಳಿ ಟೈಗರ್ಸ್ ವಿರುದ್ಧ ಕ್ರಮವಾಗಿ 5 ಮತ್ತು 17 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಆದರೆ ಗುಲ್ಬರ್ಗ ಮಿಸ್ಟಿಕ್ಸ್ ವಿರುದ್ಧದ ಪಂದ್ಯದಲ್ಲಿ ಮತ್ತೆ ಲಯ ಕಂಡುಕೊಂಡ ಬಲಗೈ ದಾಂಡಿಗ 36 ಎಸೆತಗಳಲ್ಲಿ 55 ರನ್ ಸಿಡಿಸಿದರು.

3 / 6
ಇನ್ನು ಮೈಸೂರು ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಮತ್ತೆ ಅಬ್ಬರಿಸಿದ ಅಭಿನವ್ 29 ಎಸೆತಗಳಲ್ಲಿ 46 ರನ್ ಬಾರಿಸಿದ್ದಾರೆ. ಅಲ್ಲದೆ ಕಳೆದ ಪಂದ್ಯದಲ್ಲಿ ಹುಬ್ಬಳ್ಳಿ ಟೈಗರ್ಸ್ ಸಿಡಿಲಬ್ಬರದ ಬ್ಯಾಟಿಂಗ್​ ಪ್ರದರ್ಶಿಸಿ ಕೇವಲ 27 ಎಸೆತಗಳಲ್ಲಿ 70 ರನ್ ಚಚ್ಚಿದ್ದಾರೆ. ಈ ಮೂಲಕ 7 ಪಂದ್ಯಗಳಿಂದ ಅಭಿನವ್ ಮನೋಹರ್ 329 ರನ್ ಕಲೆಹಾಕಿದ್ದಾರೆ.

ಇನ್ನು ಮೈಸೂರು ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಮತ್ತೆ ಅಬ್ಬರಿಸಿದ ಅಭಿನವ್ 29 ಎಸೆತಗಳಲ್ಲಿ 46 ರನ್ ಬಾರಿಸಿದ್ದಾರೆ. ಅಲ್ಲದೆ ಕಳೆದ ಪಂದ್ಯದಲ್ಲಿ ಹುಬ್ಬಳ್ಳಿ ಟೈಗರ್ಸ್ ಸಿಡಿಲಬ್ಬರದ ಬ್ಯಾಟಿಂಗ್​ ಪ್ರದರ್ಶಿಸಿ ಕೇವಲ 27 ಎಸೆತಗಳಲ್ಲಿ 70 ರನ್ ಚಚ್ಚಿದ್ದಾರೆ. ಈ ಮೂಲಕ 7 ಪಂದ್ಯಗಳಿಂದ ಅಭಿನವ್ ಮನೋಹರ್ 329 ರನ್ ಕಲೆಹಾಕಿದ್ದಾರೆ.

4 / 6
ವಿಶೇಷ ಎಂದರೆ ಈ ಏಳು ಪಂದ್ಯಗಳಲ್ಲಿ ಅಭಿನವ್ ಮನೋಹರ್ ಬ್ಯಾಟ್​ನಿಂದ ಮೂಡಿಬಂದಿರುವುದು ಕೇವಲ 8 ಫೋರ್​ಗಳು. ಆದರೆ ಮೂಡಿಬಂದ ಸಿಕ್ಸ್​ಗಳ ಸಂಖ್ಯೆ 31. ಅಂದರೆ ಫೋರ್​ಗಿಂತ ಸಿಕ್ಸ್​ಗಳ ಮೂಲಕ ರನ್​​ಗಳಿಸುತ್ತಿರುವ ಅಭಿನವ್ ಮನೋಹರ್ ಮಹಾರಾಜ ಟೂರ್ನಿಯಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ಈ ಮೂಲಕ ಐಪಿಎಲ್ ಫ್ರಾಂಚೈಸಿಗಳ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.

ವಿಶೇಷ ಎಂದರೆ ಈ ಏಳು ಪಂದ್ಯಗಳಲ್ಲಿ ಅಭಿನವ್ ಮನೋಹರ್ ಬ್ಯಾಟ್​ನಿಂದ ಮೂಡಿಬಂದಿರುವುದು ಕೇವಲ 8 ಫೋರ್​ಗಳು. ಆದರೆ ಮೂಡಿಬಂದ ಸಿಕ್ಸ್​ಗಳ ಸಂಖ್ಯೆ 31. ಅಂದರೆ ಫೋರ್​ಗಿಂತ ಸಿಕ್ಸ್​ಗಳ ಮೂಲಕ ರನ್​​ಗಳಿಸುತ್ತಿರುವ ಅಭಿನವ್ ಮನೋಹರ್ ಮಹಾರಾಜ ಟೂರ್ನಿಯಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ಈ ಮೂಲಕ ಐಪಿಎಲ್ ಫ್ರಾಂಚೈಸಿಗಳ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.

5 / 6
ಅಂದಹಾಗೆ ಐಪಿಎಲ್​ನಲ್ಲಿ ಅಭಿನವ್ ಮನೋಹರ್ ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿದಿದ್ದಾರೆ. 2022 ರಿಂದ ಗುಜರಾತ್ ಟೈಟಾನ್ಸ್ ತಂಡದ ಭಾಗವಾಗಿರುವ ಅವರು 15 ಇನಿಂಗ್ಸ್​ಗಳಲ್ಲಿ 10 ಭರ್ಜರಿ ಸಿಕ್ಸ್ ಹಾಗೂ 21 ಫೋರ್​ಗಳೊಂದಿಗೆ ಒಟ್ಟು 231 ರನ್ ಕಲೆಹಾಕಿದ್ದಾರೆ.

ಅಂದಹಾಗೆ ಐಪಿಎಲ್​ನಲ್ಲಿ ಅಭಿನವ್ ಮನೋಹರ್ ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿದಿದ್ದಾರೆ. 2022 ರಿಂದ ಗುಜರಾತ್ ಟೈಟಾನ್ಸ್ ತಂಡದ ಭಾಗವಾಗಿರುವ ಅವರು 15 ಇನಿಂಗ್ಸ್​ಗಳಲ್ಲಿ 10 ಭರ್ಜರಿ ಸಿಕ್ಸ್ ಹಾಗೂ 21 ಫೋರ್​ಗಳೊಂದಿಗೆ ಒಟ್ಟು 231 ರನ್ ಕಲೆಹಾಕಿದ್ದಾರೆ.

6 / 6
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ