AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Abhishek Sharma: ಗುರುವಿನ ದಾಖಲೆಯನ್ನೇ ಮುರಿದ ಶಿಷ್ಯ

Abhishek Sharma - Yuvraj Singh: ಅಭಿಷೇಕ್ ಶರ್ಮಾ ಟೀಮ್ ಇಂಡಿಯಾದ ಮಾಜಿ ಆಲ್​ರೌಂಡರ್ ಯುವರಾಜ್ ಸಿಂಗ್ ಗರಡಿ ಹುಡುಗ. ಪಂಜಾಬ್ ಮೂಲದ ಅಭಿಷೇಕ್​ಗೆ ಯುವಿ ವಿಶೇಷ ತರಬೇತಿ ನೀಡಿದ್ದರು. ಅಲ್ಲದೆ ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಪ್ರದರ್ಶನದೊಂದಿಗೆ ಮಿಂಚಿದ್ದ ಅಭಿಷೇಕ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಬಳಿಕ ಯುವರಾಜ್ ಸಿಂಗ್ ಅವರಿಗೆ ಧನ್ಯವಾದ ಅರ್ಪಿಸಿದ್ದರು. ಇದೀಗ ತನ್ನ ಗುರುವಿನ ದಾಖಲೆಯನ್ನೇ ಮುರಿದು ಅಭಿಷೇಕ್ ಎಲ್ಲರ ಗಮನ ಸೆಳೆದಿದ್ದಾರೆ.

ಝಾಹಿರ್ ಯೂಸುಫ್
|

Updated on: Jul 08, 2024 | 8:31 AM

Share
ಹರಾರೆಯಲ್ಲಿ ನಡೆದ ಝಿಂಬಾಬ್ವೆ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ (Abhishek Sharma) ಭರ್ಜರಿ ಶತಕ ಸಿಡಿಸಿ ಹಲವು ದಾಖಲೆ ಬರೆದಿದ್ದಾರೆ. ಈ ದಾಖಲೆಗಳ ನಡುವೆ ಯುವರಾಜ್ ಸಿಂಗ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯೊಂದನ್ನು ಅಭಿಷೇಕ್ ತಮ್ಮದಾಗಿಸಿಕೊಂಡಿದ್ದಾರೆ. ಆ ದಾಖಲೆ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

ಹರಾರೆಯಲ್ಲಿ ನಡೆದ ಝಿಂಬಾಬ್ವೆ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ (Abhishek Sharma) ಭರ್ಜರಿ ಶತಕ ಸಿಡಿಸಿ ಹಲವು ದಾಖಲೆ ಬರೆದಿದ್ದಾರೆ. ಈ ದಾಖಲೆಗಳ ನಡುವೆ ಯುವರಾಜ್ ಸಿಂಗ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯೊಂದನ್ನು ಅಭಿಷೇಕ್ ತಮ್ಮದಾಗಿಸಿಕೊಂಡಿದ್ದಾರೆ. ಆ ದಾಖಲೆ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

1 / 6
ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಹೊಡಿಬಡಿ ಆಟಕ್ಕೆ ಒತ್ತು ನೀಡಿದ್ದ ಯುವ ಎಡಗೈ ದಾಂಡಿಗ ಝಿಂಬಾಬ್ವೆ ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ ಕೇವಲ 46 ಎಸೆತಗಳಲ್ಲಿ 8 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ ಸ್ಪೋಟಕ ಶತಕ ಮೂಡಿಬಂತು.

ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಹೊಡಿಬಡಿ ಆಟಕ್ಕೆ ಒತ್ತು ನೀಡಿದ್ದ ಯುವ ಎಡಗೈ ದಾಂಡಿಗ ಝಿಂಬಾಬ್ವೆ ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ ಕೇವಲ 46 ಎಸೆತಗಳಲ್ಲಿ 8 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ ಸ್ಪೋಟಕ ಶತಕ ಮೂಡಿಬಂತು.

2 / 6
ವಿಶೇಷ ಎಂದರೆ ಅಭಿಷೇಕ್ ಶರ್ಮಾ ತಮ್ಮ 100 ರನ್​ಗಳಲ್ಲಿ 65 ರನ್​ ಸಿಡಿಸಿರುವುದು ಸ್ಪಿನ್ನರ್​ಗಳ ವಿರುದ್ಧ. ಅಂದರೆ ಸ್ಪಿನ್ ಬೌಲರ್​ಗಳನ್ನೇ ಟಾರ್ಗೆಟ್ ಮಾಡಿದ್ದ ಅಭಿಷೇಕ್ 28 ಎಸೆತಗಳಲ್ಲಿ 65 ರನ್​ ಕಲೆಹಾಕಿದ್ದರು. ಈ ಮೂಲಕ ಯುವರಾಜ್ ಸಿಂಗ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡರು.

ವಿಶೇಷ ಎಂದರೆ ಅಭಿಷೇಕ್ ಶರ್ಮಾ ತಮ್ಮ 100 ರನ್​ಗಳಲ್ಲಿ 65 ರನ್​ ಸಿಡಿಸಿರುವುದು ಸ್ಪಿನ್ನರ್​ಗಳ ವಿರುದ್ಧ. ಅಂದರೆ ಸ್ಪಿನ್ ಬೌಲರ್​ಗಳನ್ನೇ ಟಾರ್ಗೆಟ್ ಮಾಡಿದ್ದ ಅಭಿಷೇಕ್ 28 ಎಸೆತಗಳಲ್ಲಿ 65 ರನ್​ ಕಲೆಹಾಕಿದ್ದರು. ಈ ಮೂಲಕ ಯುವರಾಜ್ ಸಿಂಗ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡರು.

3 / 6
ಇದಕ್ಕೂ ಮುನ್ನ ಟಿ20 ಇನಿಂಗ್ಸ್​ನಲ್ಲಿ ಸ್ಪಿನ್ನರ್​ಗಳ ವಿರುದ್ಧ ಅತ್ಯಧಿಕ ರನ್ ಬಾರಿಸಿದ ದಾಖಲೆ ಯುವರಾಜ್ ಸಿಂಗ್ ಹೆಸರಿನಲ್ಲಿತ್ತು. 2012 ರಲ್ಲಿ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಸ್ಪಿನ್ನರ್​ಗಳ ವಿರುದ್ಧ ಯುವರಾಜ್ ಸಿಂಗ್ 57 ರನ್ ಸಿಡಿಸಿ ಈ ವಿಶೇಷ ದಾಖಲೆ ನಿರ್ಮಿಸಿದ್ದರು.

ಇದಕ್ಕೂ ಮುನ್ನ ಟಿ20 ಇನಿಂಗ್ಸ್​ನಲ್ಲಿ ಸ್ಪಿನ್ನರ್​ಗಳ ವಿರುದ್ಧ ಅತ್ಯಧಿಕ ರನ್ ಬಾರಿಸಿದ ದಾಖಲೆ ಯುವರಾಜ್ ಸಿಂಗ್ ಹೆಸರಿನಲ್ಲಿತ್ತು. 2012 ರಲ್ಲಿ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಸ್ಪಿನ್ನರ್​ಗಳ ವಿರುದ್ಧ ಯುವರಾಜ್ ಸಿಂಗ್ 57 ರನ್ ಸಿಡಿಸಿ ಈ ವಿಶೇಷ ದಾಖಲೆ ನಿರ್ಮಿಸಿದ್ದರು.

4 / 6
ಇದೀಗ 12 ವರ್ಷಗಳ ಬಳಿಕ ಈ ದಾಖಲೆಯನ್ನು ಮುರಿಯುವಲ್ಲಿ ಅಭಿಷೇಕ್ ಶರ್ಮಾ ಯಶಸ್ವಿಯಾಗಿದ್ದಾರೆ. ಅದು ಕೂಡ ತಮ್ಮ ಗುರು ಯುವರಾಜ್ ಸಿಂಗ್ ಅವರ ದಾಖಲೆಯನ್ನೇ ಮುರಿಯುವ ಮೂಲಕ ಎಂಬುದು ವಿಶೇಷ.

ಇದೀಗ 12 ವರ್ಷಗಳ ಬಳಿಕ ಈ ದಾಖಲೆಯನ್ನು ಮುರಿಯುವಲ್ಲಿ ಅಭಿಷೇಕ್ ಶರ್ಮಾ ಯಶಸ್ವಿಯಾಗಿದ್ದಾರೆ. ಅದು ಕೂಡ ತಮ್ಮ ಗುರು ಯುವರಾಜ್ ಸಿಂಗ್ ಅವರ ದಾಖಲೆಯನ್ನೇ ಮುರಿಯುವ ಮೂಲಕ ಎಂಬುದು ವಿಶೇಷ.

5 / 6
ಇನ್ನು ಈ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಬ್ಯಾಕ್ ಟು ಬ್ಯಾಕ್ ಮೂರು ಸಿಕ್ಸ್ ಸಿಡಿಸಿ ಶತಕ ಪೂರೈಸಿದ್ದರು. ಈ ಮೂಲಕ ಟಿ20 ಕ್ರಿಕೆಟ್​ ಇತಿಹಾಸದಲ್ಲಿ 82 ರನ್​ಗಳ ಬಳಿಕ ಹ್ಯಾಟ್ರಿಕ್ ಸಿಕ್ಸ್​ ಸಿಡಿಸಿ ಶತಕ ಪೂರೈಸಿದ ಮೊದಲ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ಅಭಿಷೇಕ್ ಶರ್ಮಾ ತಮ್ಮದಾಗಿಸಿಕೊಂಡಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಬ್ಯಾಕ್ ಟು ಬ್ಯಾಕ್ ಮೂರು ಸಿಕ್ಸ್ ಸಿಡಿಸಿ ಶತಕ ಪೂರೈಸಿದ್ದರು. ಈ ಮೂಲಕ ಟಿ20 ಕ್ರಿಕೆಟ್​ ಇತಿಹಾಸದಲ್ಲಿ 82 ರನ್​ಗಳ ಬಳಿಕ ಹ್ಯಾಟ್ರಿಕ್ ಸಿಕ್ಸ್​ ಸಿಡಿಸಿ ಶತಕ ಪೂರೈಸಿದ ಮೊದಲ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ಅಭಿಷೇಕ್ ಶರ್ಮಾ ತಮ್ಮದಾಗಿಸಿಕೊಂಡಿದ್ದಾರೆ.

6 / 6
Follow Us
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!