AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ನಿರ್ಮಿಸಿದ ಅಭಿಷೇಕ್ ಶರ್ಮಾ

Abhishek Sharma Records: ಭಾರತ ಟಿ20 ತಂಡದ ಆರಂಭಿಕ ದಾಂಡಿಗ ಅಭಿಷೇಕ್ ಶರ್ಮಾ ಚುಟುಕು ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಸಹ ವೆಸ್ಟ್ ಇಂಡೀಸ್​ನ ದೈತ್ಯ ಆ್ಯಂಡ್ರೆ ರೆಸೆಲ್ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಮುರಿದು ಎಂಬುದು ವಿಶೇಷ. ಅಂದರೆ 2025 ರಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಅಭಿಷೇಕ್ ಶರ್ಮಾ ಹೊಸ ಇತಿಹಾಸ ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 31, 2025 | 8:01 AM

Share
ಅಭಿಷೇಕ್ ಶರ್ಮಾ (Abhishek Sharma) ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಅತ್ಯುತ್ತಮ ಸ್ಟ್ರೈಕ್ ರೇಟ್​ನೊಂದಿಗೆ. ಈ ಸ್ಟ್ರೈಕ್​ ರೇಟ್​ನೊಂದಿಗೆ ಅಭಿ ಸ್ಫೋಟಕ ದಾಂಡಿಗ ಆ್ಯಂಡ್ರೆ ರಸೆಲ್ ಅವರ ವರ್ಲ್ಡ್​ ರೆಕಾರ್ಡ್ ಅನ್ನೇ ಅಳಿಸಿ ಹಾಕಿದ್ದಾರೆ.

ಅಭಿಷೇಕ್ ಶರ್ಮಾ (Abhishek Sharma) ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಅತ್ಯುತ್ತಮ ಸ್ಟ್ರೈಕ್ ರೇಟ್​ನೊಂದಿಗೆ. ಈ ಸ್ಟ್ರೈಕ್​ ರೇಟ್​ನೊಂದಿಗೆ ಅಭಿ ಸ್ಫೋಟಕ ದಾಂಡಿಗ ಆ್ಯಂಡ್ರೆ ರಸೆಲ್ ಅವರ ವರ್ಲ್ಡ್​ ರೆಕಾರ್ಡ್ ಅನ್ನೇ ಅಳಿಸಿ ಹಾಕಿದ್ದಾರೆ.

1 / 5
ಹೌದು, ಟಿ20 ಕ್ರಿಕೆಟ್ ಇತಿಹಾಸದಲ್ಲೇ ಒಂದು ವರ್ಷದಲ್ಲಿ 200ರ ಸ್ಟ್ರೈಕ್​​ ರೇಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವದ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಅಭಿಷೇಕ್ ಶರ್ಮಾ ತಮ್ಮದಾಗಿಸಿಕೊಂಡಿದ್ದಾರೆ. ಅಂದರೆ ಈವರೆಗೆ ಯಾವುದೇ ಬ್ಯಾಟರ್ 200ರ ಸ್ಟ್ರೈಕ್​ ರೇಟ್​ನಲ್ಲಿ ವರ್ಷಾಂತ್ಯಗೊಳಿಸಿರಲಿಲ್ಲ.

ಹೌದು, ಟಿ20 ಕ್ರಿಕೆಟ್ ಇತಿಹಾಸದಲ್ಲೇ ಒಂದು ವರ್ಷದಲ್ಲಿ 200ರ ಸ್ಟ್ರೈಕ್​​ ರೇಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವದ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಅಭಿಷೇಕ್ ಶರ್ಮಾ ತಮ್ಮದಾಗಿಸಿಕೊಂಡಿದ್ದಾರೆ. ಅಂದರೆ ಈವರೆಗೆ ಯಾವುದೇ ಬ್ಯಾಟರ್ 200ರ ಸ್ಟ್ರೈಕ್​ ರೇಟ್​ನಲ್ಲಿ ವರ್ಷಾಂತ್ಯಗೊಳಿಸಿರಲಿಲ್ಲ.

2 / 5
2024 ರಲ್ಲಿ ವೆಸ್ಟ್ ಇಂಡೀಸ್​ನ ಸ್ಫೋಟಕ ದಾಂಡಿಗ ಆ್ಯಂಡ್ರೆ ರಸೆಲ್ 185.34 ಸ್ಟ್ರೈಕ್ ರೇಟ್​ನಲ್ಲಿ 1074 ರನ್ ಕಲೆಹಾಕಿದ್ದರು. ಈ ಮೂಲಕ ವರ್ಷವೊಂದರಲ್ಲಿ ಅತ್ಯಧಿಕ ಸ್ಟ್ರೈಕ್ ರೇಟ್​ನಲ್ಲಿ ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ ಬ್ಯಾಟರ್ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದರು.

2024 ರಲ್ಲಿ ವೆಸ್ಟ್ ಇಂಡೀಸ್​ನ ಸ್ಫೋಟಕ ದಾಂಡಿಗ ಆ್ಯಂಡ್ರೆ ರಸೆಲ್ 185.34 ಸ್ಟ್ರೈಕ್ ರೇಟ್​ನಲ್ಲಿ 1074 ರನ್ ಕಲೆಹಾಕಿದ್ದರು. ಈ ಮೂಲಕ ವರ್ಷವೊಂದರಲ್ಲಿ ಅತ್ಯಧಿಕ ಸ್ಟ್ರೈಕ್ ರೇಟ್​ನಲ್ಲಿ ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ ಬ್ಯಾಟರ್ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದರು.

3 / 5
ಈ ವಿಶ್ವ ದಾಖಲೆಯನ್ನು ಅಭಿಷೇಕ್ ಶರ್ಮಾ ಉಡೀಸ್ ಮಾಡಿದ್ದಾರೆ. 2025 ರಲ್ಲಿ ಅಭಿಷೇಕ್ ಶರ್ಮಾ ಟಿ20 ಕ್ರಿಕೆಟ್​ನಲ್ಲಿ ಒಟ್ಟು 1602 ರನ್ ಕಲೆಹಾಕಿದ್ದಾರೆ. ಅದು ಕೂಡ 202.01 ಸ್ಟ್ರೈಕ್ ರೇಟ್​ನಲ್ಲಿ. ಈ ಮೂಲಕ ಟಿ20 ಇತಿಹಾಸದಲ್ಲೇ ಒಂದೇ ವರ್ಷದೊಳಗೆ 200+ ಸ್ಟ್ರೈಕ್ ರೇಟ್​ನಲ್ಲಿ 1500+ ರನ್​ ಕಲೆಹಾಕಿದ ವಿಶ್ವದ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಈ ವಿಶ್ವ ದಾಖಲೆಯನ್ನು ಅಭಿಷೇಕ್ ಶರ್ಮಾ ಉಡೀಸ್ ಮಾಡಿದ್ದಾರೆ. 2025 ರಲ್ಲಿ ಅಭಿಷೇಕ್ ಶರ್ಮಾ ಟಿ20 ಕ್ರಿಕೆಟ್​ನಲ್ಲಿ ಒಟ್ಟು 1602 ರನ್ ಕಲೆಹಾಕಿದ್ದಾರೆ. ಅದು ಕೂಡ 202.01 ಸ್ಟ್ರೈಕ್ ರೇಟ್​ನಲ್ಲಿ. ಈ ಮೂಲಕ ಟಿ20 ಇತಿಹಾಸದಲ್ಲೇ ಒಂದೇ ವರ್ಷದೊಳಗೆ 200+ ಸ್ಟ್ರೈಕ್ ರೇಟ್​ನಲ್ಲಿ 1500+ ರನ್​ ಕಲೆಹಾಕಿದ ವಿಶ್ವದ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 5
ಅಷ್ಟೇ ಅಲ್ಲದೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 190+ ಸ್ಟ್ರೈಕ್ ರೇಟ್​ನಲ್ಲಿ 500 ಕ್ಕೂ ಅಧಿಕ ರನ್ ಕಲೆಹಾಕಿದ ವಿಶ್ವದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಈ ವರ್ಷ ಅಭಿಷೇಕ್ ಶರ್ಮಾ ಟೀಮ್ ಇಂಡಿಯಾ ಪರ ಒಟ್ಟು 859 ರನ್ ಕಲೆಹಾಕಿದ್ದಾರೆ. ಅದು ಸಹ 193.46 ಸ್ಟ್ರೈಕ್ ರೇಟ್​ನಲ್ಲಿ. ಈ ಮೂಲಕ ಟಿ20 ಇಂಟರ್​ನ್ಯಾಷನಲ್ ಕ್ರಿಕೆಟ್​ನಲ್ಲೂ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಅಷ್ಟೇ ಅಲ್ಲದೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 190+ ಸ್ಟ್ರೈಕ್ ರೇಟ್​ನಲ್ಲಿ 500 ಕ್ಕೂ ಅಧಿಕ ರನ್ ಕಲೆಹಾಕಿದ ವಿಶ್ವದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಈ ವರ್ಷ ಅಭಿಷೇಕ್ ಶರ್ಮಾ ಟೀಮ್ ಇಂಡಿಯಾ ಪರ ಒಟ್ಟು 859 ರನ್ ಕಲೆಹಾಕಿದ್ದಾರೆ. ಅದು ಸಹ 193.46 ಸ್ಟ್ರೈಕ್ ರೇಟ್​ನಲ್ಲಿ. ಈ ಮೂಲಕ ಟಿ20 ಇಂಟರ್​ನ್ಯಾಷನಲ್ ಕ್ರಿಕೆಟ್​ನಲ್ಲೂ ಹೊಸ ಇತಿಹಾಸ ನಿರ್ಮಿಸಿದ್ದಾರೆ.

5 / 5
200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ
200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು
ಹಿಂದೂ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಸೈಯದ್: ಬೆಂಗಳೂರಿನಲ್ಲಿ ಲವ್ ಜಿಹಾದ್
ಹಿಂದೂ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಸೈಯದ್: ಬೆಂಗಳೂರಿನಲ್ಲಿ ಲವ್ ಜಿಹಾದ್
ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ
ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ
ಸಿಎಂ ಕುರ್ಚಿ ಕಿತ್ತಾಟ: ಡಿಕೆ ಕದ್ದು ಮುಚ್ಚಿ ಮಾತಿಗೆ ಸಿದ್ದರಾಮಯ್ಯ ಗರಂ
ಸಿಎಂ ಕುರ್ಚಿ ಕಿತ್ತಾಟ: ಡಿಕೆ ಕದ್ದು ಮುಚ್ಚಿ ಮಾತಿಗೆ ಸಿದ್ದರಾಮಯ್ಯ ಗರಂ