AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಷೇಕ್ ಆರ್ಭಟಕ್ಕೆ ಧಗ್ಗರು ದಾಂಡಿಗರ ದಾಖಲೆ ಧೂಳೀಪಟ

IND vs IRE: ಐರ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲೊಪ್ಪಿಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ 20 ಓವರ್​ಗಳಲ್ಲಿ 182 ರನ್ ಕಲೆಹಾಕಿದರೆ, ಟೀಮ್ ಇಂಡಿಯಾ 18.5 ಓವರ್​ಗಳಲ್ಲಿ 148 ರನ್​ಗಳಿಸಿ ಆಲೌಟ್ ಆಗಿದೆ. ಈ ಸೋಲಿನ ನಡುವೆ ಟೀಮ್ ಇಂಡಿಯಾ ದಾಂಡಿಗ ಅಭಿಷೇಕ್ ಶರ್ಮಾ ಭರ್ಜರಿ ದಾಖಲೆ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Jun 27, 2026 | 8:44 AM

Share
ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾದ ಸ್ಫೋಟಕ ದಾಂಡಿಗ ಅಭಿಷೇಕ್ ಶರ್ಮಾ (Abhishek Sharma) ಅವರ ಆರ್ಭಟ ಮುಂದುವರೆದಿದೆ. ಈ ಬಾರಿ ಆರ್ಭಟದೊಂದಿಗೆ ಅಭಿಷೇಕ್ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ. ಅದು ಸಹ ಧಗ್ಗರು ದಾಂಡಿಗರ ಹಳೆಯ ದಾಖಲೆಗಳನ್ನು ಅಳಿಸಿ ಹಾಕುವ ಮೂಲಕ ಎಂಬುದು ವಿಶೇಷ. (PC: BCCI)

ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾದ ಸ್ಫೋಟಕ ದಾಂಡಿಗ ಅಭಿಷೇಕ್ ಶರ್ಮಾ (Abhishek Sharma) ಅವರ ಆರ್ಭಟ ಮುಂದುವರೆದಿದೆ. ಈ ಬಾರಿ ಆರ್ಭಟದೊಂದಿಗೆ ಅಭಿಷೇಕ್ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ. ಅದು ಸಹ ಧಗ್ಗರು ದಾಂಡಿಗರ ಹಳೆಯ ದಾಖಲೆಗಳನ್ನು ಅಳಿಸಿ ಹಾಕುವ ಮೂಲಕ ಎಂಬುದು ವಿಶೇಷ. (PC: BCCI)

1 / 5
ಬೆಲ್​ಫಾಸ್ಟ್​ನಲ್ಲಿ ನಡೆದ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ ಕೇವಲ 19 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಈ ಅರ್ಧಶತಕದೊಂದಿಗೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಬಾರಿ 20 ಕ್ಕಿಂತ ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿದ ವಿಶ್ವ ದಾಖಲೆಯನ್ನು ಅಭಿಷೇಕ್ ತಮ್ಮದಾಗಿಸಿಕೊಂಡಿದ್ದಾರೆ. (PC: BCCI)

ಬೆಲ್​ಫಾಸ್ಟ್​ನಲ್ಲಿ ನಡೆದ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ ಕೇವಲ 19 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಈ ಅರ್ಧಶತಕದೊಂದಿಗೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಬಾರಿ 20 ಕ್ಕಿಂತ ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿದ ವಿಶ್ವ ದಾಖಲೆಯನ್ನು ಅಭಿಷೇಕ್ ತಮ್ಮದಾಗಿಸಿಕೊಂಡಿದ್ದಾರೆ. (PC: BCCI)

2 / 5
ಇದಕ್ಕೂ ಮುನ್ನ ಇಂತಹದೊಂದು ದಾಖಲೆಯನ್ನು ಹಲವು ದಾಂಡಿಗರು ಜಂಟಿಯಾಗಿ ಹಂಚಿಕೊಂಡಿದ್ದರು. ಭಾರತದ ಯುವರಾಜ್ ಸಿಂಗ್, ಆಸ್ಟ್ರೇಲಿಯಾದ ಡೇವಿಡ್ ವಾರ್ನರ್, ಇಂಗ್ಲೆಂಡ್‌ನ ಫಿಲ್ ಸಾಲ್ಟ್ ಮತ್ತು ನ್ಯೂಝಿಲೆಂಡ್‌ನ ಕಾಲಿನ್ ಮನ್ರೋ ಅವರು ತಲಾ 3 ಬಾರಿ ಐಸಿಸಿ ಪೂರ್ಣಾವಧಿ ಸದಸ್ಯ ರಾಷ್ಟ್ರಗಳ ವಿರುದ್ಧ 20 ಕ್ಕಿಂತ ಕಡಿಮೆ ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿ ಮಿಂಚಿದ್ದರು. (PC: ICC)

ಇದಕ್ಕೂ ಮುನ್ನ ಇಂತಹದೊಂದು ದಾಖಲೆಯನ್ನು ಹಲವು ದಾಂಡಿಗರು ಜಂಟಿಯಾಗಿ ಹಂಚಿಕೊಂಡಿದ್ದರು. ಭಾರತದ ಯುವರಾಜ್ ಸಿಂಗ್, ಆಸ್ಟ್ರೇಲಿಯಾದ ಡೇವಿಡ್ ವಾರ್ನರ್, ಇಂಗ್ಲೆಂಡ್‌ನ ಫಿಲ್ ಸಾಲ್ಟ್ ಮತ್ತು ನ್ಯೂಝಿಲೆಂಡ್‌ನ ಕಾಲಿನ್ ಮನ್ರೋ ಅವರು ತಲಾ 3 ಬಾರಿ ಐಸಿಸಿ ಪೂರ್ಣಾವಧಿ ಸದಸ್ಯ ರಾಷ್ಟ್ರಗಳ ವಿರುದ್ಧ 20 ಕ್ಕಿಂತ ಕಡಿಮೆ ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿ ಮಿಂಚಿದ್ದರು. (PC: ICC)

3 / 5
ಇದೀಗ 25 ವರ್ಷದ ಅಭಿಷೇಕ್ ಶರ್ಮಾ ಈ ದಾಖಲೆಗಳನ್ನು ಉಡೀಸ್​ ಮಾಡಿದ್ದಾರೆ. ಈವರೆಗೆ ಆಡಿರುವ 46 ಟಿ20 ಇನಿಂಗ್ಸ್​ಗಳಲ್ಲಿ ಅಭಿಷೇಕ್ 5 ಬಾರಿ 20 ಕ್ಕಿಂತ ಕಡಿಮೆ ಎಸೆತಗಳಲ್ಲಿ ಹಾಫ್ ಸೆಂಚುರಿ ಪೂರೈಸಿದ್ದಾರೆ. ಈ ಮೂಲಕ ಐಸಿಸಿ ಪೂರ್ಣಾವಧಿ ಸದಸ್ಯ ರಾಷ್ಟ್ರಗಳ ವಿರುದ್ಧ ಇಪ್ಪತ್ತಕ್ಕಿಂತ ಕಡಿಮೆ ಎಸೆತಗಳಲ್ಲಿ ಅತೀ ಹೆಚ್ಚು ಬಾರಿ ಅರ್ಧಶತಕ ಬಾರಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: BCCI)

ಇದೀಗ 25 ವರ್ಷದ ಅಭಿಷೇಕ್ ಶರ್ಮಾ ಈ ದಾಖಲೆಗಳನ್ನು ಉಡೀಸ್​ ಮಾಡಿದ್ದಾರೆ. ಈವರೆಗೆ ಆಡಿರುವ 46 ಟಿ20 ಇನಿಂಗ್ಸ್​ಗಳಲ್ಲಿ ಅಭಿಷೇಕ್ 5 ಬಾರಿ 20 ಕ್ಕಿಂತ ಕಡಿಮೆ ಎಸೆತಗಳಲ್ಲಿ ಹಾಫ್ ಸೆಂಚುರಿ ಪೂರೈಸಿದ್ದಾರೆ. ಈ ಮೂಲಕ ಐಸಿಸಿ ಪೂರ್ಣಾವಧಿ ಸದಸ್ಯ ರಾಷ್ಟ್ರಗಳ ವಿರುದ್ಧ ಇಪ್ಪತ್ತಕ್ಕಿಂತ ಕಡಿಮೆ ಎಸೆತಗಳಲ್ಲಿ ಅತೀ ಹೆಚ್ಚು ಬಾರಿ ಅರ್ಧಶತಕ ಬಾರಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: BCCI)

4 / 5
ಅಂದಹಾಗೆ  ಅಭಿಷೇಕ್ ಶರ್ಮಾ ಅವರಿಗೆ ಇಂತಹ ಬಿರುಗಾಳಿ ಬ್ಯಾಟಿಂಗ್ ಹೊಸದೇನಲ್ಲ. ಇದೇ ವರ್ಷ ನಡೆದ ಐಪಿಎಲ್ 2026 ಟೂರ್ನಿಯಲ್ಲೂ ಸನ್‌ರೈಸರ್ಸ್ ಹೈದರಾಬಾದ್ ಪರ ಅಬ್ಬರಿಸಿದ್ದರು. ಅಲ್ಲದೆ ಐಪಿಎಲ್​​ನಲ್ಲಿ 5 ಬಾರಿ 20ಕ್ಕಿಂತ ಕಡಿಮೆ ಎಸೆತಗಳಲ್ಲಿ ಫಿಫ್ಟಿ ಬಾರಿಸಿದ ಮೊದಲ ಆಟಗಾರ ಎಂಬ ದಾಖಲೆಯನ್ನು ಬರೆದಿದ್ದರು. ಇದೀಗ ಈ ದಾಖಲೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲೂ ಪುನರಾವರ್ತಿಸಿದ್ದಾರೆ. (PC: IPL)

ಅಂದಹಾಗೆ  ಅಭಿಷೇಕ್ ಶರ್ಮಾ ಅವರಿಗೆ ಇಂತಹ ಬಿರುಗಾಳಿ ಬ್ಯಾಟಿಂಗ್ ಹೊಸದೇನಲ್ಲ. ಇದೇ ವರ್ಷ ನಡೆದ ಐಪಿಎಲ್ 2026 ಟೂರ್ನಿಯಲ್ಲೂ ಸನ್‌ರೈಸರ್ಸ್ ಹೈದರಾಬಾದ್ ಪರ ಅಬ್ಬರಿಸಿದ್ದರು. ಅಲ್ಲದೆ ಐಪಿಎಲ್​​ನಲ್ಲಿ 5 ಬಾರಿ 20ಕ್ಕಿಂತ ಕಡಿಮೆ ಎಸೆತಗಳಲ್ಲಿ ಫಿಫ್ಟಿ ಬಾರಿಸಿದ ಮೊದಲ ಆಟಗಾರ ಎಂಬ ದಾಖಲೆಯನ್ನು ಬರೆದಿದ್ದರು. ಇದೀಗ ಈ ದಾಖಲೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲೂ ಪುನರಾವರ್ತಿಸಿದ್ದಾರೆ. (PC: IPL)

5 / 5
Follow Us
ಈ ರಾಶಿಯವರಿಗೆ ಇಂದು ಅದೃಷ್ಟ ಕೂಡಿ ಬರಲಿದೆ
ಈ ರಾಶಿಯವರಿಗೆ ಇಂದು ಅದೃಷ್ಟ ಕೂಡಿ ಬರಲಿದೆ
ಚಿಕ್ಕಬಳ್ಳಾಪುರ: ಅನ್ನಭಾಗ್ಯ ಯೋಜನೆಯ ಗೋಧಿ ಅಕ್ರಮ ಸಾಗಾಟ, 14 ಟನ್ ವಶಕ್ಕೆ
ಚಿಕ್ಕಬಳ್ಳಾಪುರ: ಅನ್ನಭಾಗ್ಯ ಯೋಜನೆಯ ಗೋಧಿ ಅಕ್ರಮ ಸಾಗಾಟ, 14 ಟನ್ ವಶಕ್ಕೆ
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ