Abhishek Sharma: 25 ಎಸೆತಗಳಲ್ಲಿ ಸ್ಪೋಟಕ ಸೆಂಚುರಿ ಸಿಡಿಸಿದ ಅಭಿಷೇಕ್ ಶರ್ಮಾ

Abhishek Sharma: ಈ ಬಾರಿಯ ಐಪಿಎಲ್​ನಲ್ಲಿ ಎಸ್​ಆರ್​ಹೆಚ್ ಪರ ಆರಂಭಿಕನಾಗಿ ಕಣಕ್ಕಿಳಿದಿದ್ದ ಅಭಿಷೇಕ್ ಶರ್ಮಾ 16 ಪಂದ್ಯಗಳಿಂದ 484 ರನ್ ಕಲೆಹಾಕಿದ್ದರು. ಈ ವೇಳೆ 42 ಸಿಕ್ಸ್​ಗಳನ್ನು ಸಿಡಿಸಿ ಅಬ್ಬರಿಸಿದ್ದರು. ಇದಾಗ್ಯೂ ಅವರು ಟಿ20 ವಿಶ್ವಕಪ್​ ಭಾರತ ತಂಡಕ್ಕೆ ಆಯ್ಕೆಯಾಗಿರಲಿಲ್ಲ. ಹೀಗಾಗಿ ಅವರು ಕ್ಲಬ್ ಕ್ರಿಕೆಟ್​ ಟೂರ್ನಿಯತ್ತ ಮುಖ ಮಾಡಿದ್ದಾರೆ.

|

Updated on:Jun 08, 2024 | 2:25 PM

ಈ ಬಾರಿಯ ಐಪಿಎಲ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್​ ಪರ ಸ್ಪೋಟಕ ಬ್ಯಾಟಿಂಗ್​ನೊಂದಿಗೆ ಅಬ್ಬರಿಸಿದ್ದ ಅಭಿಷೇಕ್ ಶರ್ಮಾ (Abhishek Sharma) ತಮ್ಮ ಭರ್ಜರಿ ಫಾರ್ಮ್ ಅನ್ನು ಮುಂದುವರೆಸಿದ್ದಾರೆ. ಗುರ್ಗಾಂವ್​ನಲ್ಲಿ ನಡೆದ ಕ್ಲಬ್ ಕ್ರಿಕೆಟ್ ಟೂರ್ನಿಯಲ್ಲಿ ಕಣಕ್ಕಿಳಿದ ಅಭಿಷೇಕ್ ಕೇವಲ 26 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ಮಿಂಚಿದ್ದಾರೆ.

ಈ ಬಾರಿಯ ಐಪಿಎಲ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್​ ಪರ ಸ್ಪೋಟಕ ಬ್ಯಾಟಿಂಗ್​ನೊಂದಿಗೆ ಅಬ್ಬರಿಸಿದ್ದ ಅಭಿಷೇಕ್ ಶರ್ಮಾ (Abhishek Sharma) ತಮ್ಮ ಭರ್ಜರಿ ಫಾರ್ಮ್ ಅನ್ನು ಮುಂದುವರೆಸಿದ್ದಾರೆ. ಗುರ್ಗಾಂವ್​ನಲ್ಲಿ ನಡೆದ ಕ್ಲಬ್ ಕ್ರಿಕೆಟ್ ಟೂರ್ನಿಯಲ್ಲಿ ಕಣಕ್ಕಿಳಿದ ಅಭಿಷೇಕ್ ಕೇವಲ 26 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ಮಿಂಚಿದ್ದಾರೆ.

1 / 6
ಈ ಪಂದ್ಯದಲ್ಲಿ ಮಾರಿಯೋ ಕ್ರಿಕೆಟ್ ಕ್ಲಬ್ ಮತ್ತು ಪಂಟರ್ಸ್ ಇಲೆವೆನ್ ತಂಡಗಳು ಮುಖಾಮುಖಿಯಾಗಿದ್ದವು. ಅದರಂತೆ ಮೊದಲು ಬ್ಯಾಟ್ ಮಾಡಿದ ಮಾರಿಯೋ ಕ್ರಿಕೆಟ್ ಕ್ಲಬ್ ಆರಂಭಿಕ ಬ್ಯಾಟರ್ ಕೃನಾಲ್ ಸಿಂಗ್ 21 ಎಸೆತಗಳಲ್ಲಿ 60 ರನ್ ಬಾರಿಸಿದರೆ, ನದೀಮ್ ಖಾನ್ 32 ಎಸೆತಗಳಲ್ಲಿ ಅಜೇಯ 74 ರನ್ ಗಳಿಸಿದರು. ಈ ಮೂಲಕ ಮಾರಿಯೋ ಕ್ಲಬ್ 20 ಓವರ್​ಗಳಲ್ಲಿ 249 ರನ್ ಕಲೆಹಾಕಿತು.

ಈ ಪಂದ್ಯದಲ್ಲಿ ಮಾರಿಯೋ ಕ್ರಿಕೆಟ್ ಕ್ಲಬ್ ಮತ್ತು ಪಂಟರ್ಸ್ ಇಲೆವೆನ್ ತಂಡಗಳು ಮುಖಾಮುಖಿಯಾಗಿದ್ದವು. ಅದರಂತೆ ಮೊದಲು ಬ್ಯಾಟ್ ಮಾಡಿದ ಮಾರಿಯೋ ಕ್ರಿಕೆಟ್ ಕ್ಲಬ್ ಆರಂಭಿಕ ಬ್ಯಾಟರ್ ಕೃನಾಲ್ ಸಿಂಗ್ 21 ಎಸೆತಗಳಲ್ಲಿ 60 ರನ್ ಬಾರಿಸಿದರೆ, ನದೀಮ್ ಖಾನ್ 32 ಎಸೆತಗಳಲ್ಲಿ ಅಜೇಯ 74 ರನ್ ಗಳಿಸಿದರು. ಈ ಮೂಲಕ ಮಾರಿಯೋ ಕ್ಲಬ್ 20 ಓವರ್​ಗಳಲ್ಲಿ 249 ರನ್ ಕಲೆಹಾಕಿತು.

2 / 6
250 ರನ್​ಗಳ ಕಠಿಣ ಗುರಿ ಪಡೆದ ಪಂಟರ್ಸ್ ಇಲೆವೆನ್ ಪರ ಅಭಿಷೇಕ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿದರು. ಮೊದಲ ಓವರ್​ನಿಂದಲೇ ಸಿಕ್ಸ್​ಗಳ ಸುರಿಮಳೆಗೈದ ಅಭಿ ಮೈದಾನದ ಮೂಲೆ ಮೂಲೆಗೂ ಚೆಂಡನ್ನು ಬಾರಿಸಿ ಮಾರಿಯೋ ಕ್ಲಬ್ ಬೌಲರ್​ಗಳ ಬೆಂಡೆತ್ತಿದರು.

250 ರನ್​ಗಳ ಕಠಿಣ ಗುರಿ ಪಡೆದ ಪಂಟರ್ಸ್ ಇಲೆವೆನ್ ಪರ ಅಭಿಷೇಕ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿದರು. ಮೊದಲ ಓವರ್​ನಿಂದಲೇ ಸಿಕ್ಸ್​ಗಳ ಸುರಿಮಳೆಗೈದ ಅಭಿ ಮೈದಾನದ ಮೂಲೆ ಮೂಲೆಗೂ ಚೆಂಡನ್ನು ಬಾರಿಸಿ ಮಾರಿಯೋ ಕ್ಲಬ್ ಬೌಲರ್​ಗಳ ಬೆಂಡೆತ್ತಿದರು.

3 / 6
ಪರಿಣಾಮ ಕೇವಲ 25 ಎಸೆತಗಳಲ್ಲಿ ಅಭಿಷೇಕ್​ ಬ್ಯಾಟ್​ನಿಂದ ಭರ್ಜರಿ ಶತಕ ಮೂಡಿಬಂತು. ಈ ಭರ್ಜರಿ ಶತಕದ ಇನಿಂಗ್ಸ್​ನಲ್ಲಿ ಬರೋಬ್ಬರಿ 14 ಸಿಕ್ಸ್​ಗಳನ್ನು ಸಿಡಿಸಿದ್ದರು. ಹಾಗೆಯೇ 4 ಫೋರ್​ಗಳು ಮೂಡಿಬಂದಿದ್ದವು. ಅಂದರೆ ಬೌಂಡರಿಗಳಿಂದಲೇ ಅಭಿಷೇಕ್ ಶರ್ಮಾ 100 ರನ್​ ಕಲೆಹಾಕಿದ್ದರು.

ಪರಿಣಾಮ ಕೇವಲ 25 ಎಸೆತಗಳಲ್ಲಿ ಅಭಿಷೇಕ್​ ಬ್ಯಾಟ್​ನಿಂದ ಭರ್ಜರಿ ಶತಕ ಮೂಡಿಬಂತು. ಈ ಭರ್ಜರಿ ಶತಕದ ಇನಿಂಗ್ಸ್​ನಲ್ಲಿ ಬರೋಬ್ಬರಿ 14 ಸಿಕ್ಸ್​ಗಳನ್ನು ಸಿಡಿಸಿದ್ದರು. ಹಾಗೆಯೇ 4 ಫೋರ್​ಗಳು ಮೂಡಿಬಂದಿದ್ದವು. ಅಂದರೆ ಬೌಂಡರಿಗಳಿಂದಲೇ ಅಭಿಷೇಕ್ ಶರ್ಮಾ 100 ರನ್​ ಕಲೆಹಾಕಿದ್ದರು.

4 / 6
ಕೇವಲ 26 ಎಸೆತಗಳಲ್ಲಿ 103 ರನ್ ಬಾರಿಸಿದ ಅಭಿಷೇಕ್ ಶರ್ಮಾ ಅವರ ವಿಸ್ಪೋಟಕ ಬ್ಯಾಟಿಂಗ್​ ನೆರವಿನಿಂದ ಪಂಟರ್ಸ್ ಇಲೆವೆನ್ ತಂಡವು 18.1 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 250 ರನ್‌ಗಳ ಗುರಿ ಮುಟ್ಟಿತು. ಈ ಮೂಲಕ 4 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಕೇವಲ 26 ಎಸೆತಗಳಲ್ಲಿ 103 ರನ್ ಬಾರಿಸಿದ ಅಭಿಷೇಕ್ ಶರ್ಮಾ ಅವರ ವಿಸ್ಪೋಟಕ ಬ್ಯಾಟಿಂಗ್​ ನೆರವಿನಿಂದ ಪಂಟರ್ಸ್ ಇಲೆವೆನ್ ತಂಡವು 18.1 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 250 ರನ್‌ಗಳ ಗುರಿ ಮುಟ್ಟಿತು. ಈ ಮೂಲಕ 4 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

5 / 6
ಅಂದಹಾಗೆ ಈ ಬಾರಿಯ ಐಪಿಎಲ್​ನಲ್ಲಿ ಅಭಿಷೇಕ್ ಶರ್ಮಾ 16 ಪಂದ್ಯಗಳಿಂದ 484 ರನ್ ಕಲೆಹಾಕಿದ್ದರು. ಈ ವೇಳೆ 42 ಸಿಕ್ಸ್​ಗಳನ್ನು ಸಿಡಿಸಿ ಅಬ್ಬರಿಸಿದ್ದರು. ಇದಾಗ್ಯೂ ಅವರಿಗೆ ಟಿ20 ವಿಶ್ವಕಪ್​ ತಂಡದಲ್ಲಿ ಸ್ಥಾನ ಲಭಿಸಿರಲಿಲ್ಲ. ಹೀಗಾಗಿ ಇದೀಗ ಕ್ಲಬ್ ಕ್ರಿಕೆಟ್​ ಆಡುತ್ತಿದ್ದಾರೆ.

ಅಂದಹಾಗೆ ಈ ಬಾರಿಯ ಐಪಿಎಲ್​ನಲ್ಲಿ ಅಭಿಷೇಕ್ ಶರ್ಮಾ 16 ಪಂದ್ಯಗಳಿಂದ 484 ರನ್ ಕಲೆಹಾಕಿದ್ದರು. ಈ ವೇಳೆ 42 ಸಿಕ್ಸ್​ಗಳನ್ನು ಸಿಡಿಸಿ ಅಬ್ಬರಿಸಿದ್ದರು. ಇದಾಗ್ಯೂ ಅವರಿಗೆ ಟಿ20 ವಿಶ್ವಕಪ್​ ತಂಡದಲ್ಲಿ ಸ್ಥಾನ ಲಭಿಸಿರಲಿಲ್ಲ. ಹೀಗಾಗಿ ಇದೀಗ ಕ್ಲಬ್ ಕ್ರಿಕೆಟ್​ ಆಡುತ್ತಿದ್ದಾರೆ.

6 / 6

Published On - 2:24 pm, Sat, 8 June 24

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್