AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದಲ್ಲಿ ಅಭಿಷೇಕ್ ಶರ್ಮಾ ನಂಬರ್ 1

Abhishek Sharma: ಅಭಿಷೇಕ್ ಶರ್ಮಾ ಪಾಕಿಸ್ತಾನ್ ವಿರುದ್ಧ ಈವರೆಗೆ ಕೇವಲ 3 ಪಂದ್ಯಗಳನ್ನು ಮಾತ್ರ ಆಡಿದ್ದಾರೆ. ಏಷ್ಯಾಕಪ್​ನಲ್ಲಿ ಪಾಕ್ ಪಡೆಯನ್ನು ಎದುರಿಸಿದ ಅಭಿಷೇಕ್ ಮೊದಲ ಮ್ಯಾಚ್​ನಲ್ಲೇ 13 ಎಸೆತಗಳಲ್ಲಿ 31 ರನ್ ಬಾರಿಸಿದ್ದರು. ಇನ್ನು ದ್ವಿತೀಯ ಪಂದ್ಯದಲ್ಲಿ 39 ಎಸೆತಗಳಲ್ಲಿ 74 ರನ್ ಗಳಿಸುವ ಮೂಲಕ ಪಾಕಿಸ್ತಾನಿ ಬೌಲರ್‌ಗಳನ್ನು ಛಿದ್ರಗೊಳಿಸಿದರು. ಹಾಗೆಯೇ ಫೈನಲ್​ನಲ್ಲಿ 5 ರನ್​ ಗಳಿಸಿದ್ದರು.

ಝಾಹಿರ್ ಯೂಸುಫ್
|

Updated on: Dec 08, 2025 | 2:08 PM

Share
ಟೀಮ್ ಇಂಡಿಯಾದ ಯಂಗ್ ಸೆನ್ಸೇಷನ್ ಅಭಿಷೇಕ್ ಶರ್ಮಾ (Abhishek Sharma) ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಗಾಗಿ ಸಜ್ಜಾಗುತ್ತಿದ್ದಾರೆ. ಈ ಸರಣಿಯ ಮೊದಲ ಪಂದ್ಯವು ನಾಳೆ (ಡಿ.9) ಕಟಕ್​ನಲ್ಲಿ ನಡೆಯಲಿದೆ. ಈ ಪಂದ್ಯಕ್ಖೂ ಮುನ್ನವೇ ಅಭಿಷೇಕ್ ಶರ್ಮಾಗೆ ಗೂಗಲ್​ ಕಡೆಯಿಂದ ಗುಡ್ ನ್ಯೂಸ್​ವೊಂದು ಸಿಕ್ಕಿದೆ.

ಟೀಮ್ ಇಂಡಿಯಾದ ಯಂಗ್ ಸೆನ್ಸೇಷನ್ ಅಭಿಷೇಕ್ ಶರ್ಮಾ (Abhishek Sharma) ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಗಾಗಿ ಸಜ್ಜಾಗುತ್ತಿದ್ದಾರೆ. ಈ ಸರಣಿಯ ಮೊದಲ ಪಂದ್ಯವು ನಾಳೆ (ಡಿ.9) ಕಟಕ್​ನಲ್ಲಿ ನಡೆಯಲಿದೆ. ಈ ಪಂದ್ಯಕ್ಖೂ ಮುನ್ನವೇ ಅಭಿಷೇಕ್ ಶರ್ಮಾಗೆ ಗೂಗಲ್​ ಕಡೆಯಿಂದ ಗುಡ್ ನ್ಯೂಸ್​ವೊಂದು ಸಿಕ್ಕಿದೆ.

1 / 5
ಗೂಗಲ್ 2025 ರ ಅತ್ಯಂತ ಟ್ರೆಂಡಿಂಗ್ ಆಟಗಾರರ ಪಟ್ಟಿಯನ್ನು ಪ್ರಕಟಿಸಿದೆ. ಅಂದರೆ ಯಾವ ದೇಶದಲ್ಲಿ ಯಾವ ಆಟಗಾರನನ್ನು ಗೂಗಲ್​ನಲ್ಲಿ ಹೆಚ್ಚು ಸರ್ಚ್ ಮಾಡಿದ್ದಾರೆ ಎಂಬ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಹೀಗೆ ಬಿಡುಗಡೆ ಮಾಡಿದ ಪಾಕಿಸ್ತಾನದ ಗೂಗಲ್ ಟ್ರೆಂಡಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಕಾಣಿಸಿಕೊಂಡಿರುವುದು ಟೀಮ್ ಇಂಡಿಯಾ ಆಟಗಾರ ಅಭಿಷೇಕ್ ಶರ್ಮಾ ಎಂಬುದು ವಿಶೇಷ.

ಗೂಗಲ್ 2025 ರ ಅತ್ಯಂತ ಟ್ರೆಂಡಿಂಗ್ ಆಟಗಾರರ ಪಟ್ಟಿಯನ್ನು ಪ್ರಕಟಿಸಿದೆ. ಅಂದರೆ ಯಾವ ದೇಶದಲ್ಲಿ ಯಾವ ಆಟಗಾರನನ್ನು ಗೂಗಲ್​ನಲ್ಲಿ ಹೆಚ್ಚು ಸರ್ಚ್ ಮಾಡಿದ್ದಾರೆ ಎಂಬ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಹೀಗೆ ಬಿಡುಗಡೆ ಮಾಡಿದ ಪಾಕಿಸ್ತಾನದ ಗೂಗಲ್ ಟ್ರೆಂಡಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಕಾಣಿಸಿಕೊಂಡಿರುವುದು ಟೀಮ್ ಇಂಡಿಯಾ ಆಟಗಾರ ಅಭಿಷೇಕ್ ಶರ್ಮಾ ಎಂಬುದು ವಿಶೇಷ.

2 / 5
ಈ ವರ್ಷ ಪಾಕಿಸ್ತಾನದಲ್ಲಿ ಗೂಗಲ್‌ನಲ್ಲಿ ಹೆಚ್ಚು ಟ್ರೆಂಡಿಂಗ್ ಆದ ಆಟಗಾರರ ಪಟ್ಟಿಯಲ್ಲಿ ಭಾರತೀಯ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ನಂಬರ್-1 ಸ್ಥಾನ ಪಡೆದಿದ್ದಾರೆ. ಪಾಕ್​ ಆಟಗಾರರಾದ ಬಾಬರ್ ಆಝಂ, ಶಾಹೀನ್ ಶಾ ಅಫ್ರಿದಿ, ಮೊಹಮ್ಮದ್ ರಿಝ್ವಾನ್​ನಂತಹ ಆಟಗಾರರನ್ನೇ ಹಿಂದಿಕ್ಕಿ ಅಭಿಷೇಕ್ ಶರ್ಮಾ ಪಾಕಿಸ್ತಾನದಲ್ಲಿ ಸಂಚಲನ ಸೃಷ್ಟಿಸಿದ್ದಾರೆ.

ಈ ವರ್ಷ ಪಾಕಿಸ್ತಾನದಲ್ಲಿ ಗೂಗಲ್‌ನಲ್ಲಿ ಹೆಚ್ಚು ಟ್ರೆಂಡಿಂಗ್ ಆದ ಆಟಗಾರರ ಪಟ್ಟಿಯಲ್ಲಿ ಭಾರತೀಯ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ನಂಬರ್-1 ಸ್ಥಾನ ಪಡೆದಿದ್ದಾರೆ. ಪಾಕ್​ ಆಟಗಾರರಾದ ಬಾಬರ್ ಆಝಂ, ಶಾಹೀನ್ ಶಾ ಅಫ್ರಿದಿ, ಮೊಹಮ್ಮದ್ ರಿಝ್ವಾನ್​ನಂತಹ ಆಟಗಾರರನ್ನೇ ಹಿಂದಿಕ್ಕಿ ಅಭಿಷೇಕ್ ಶರ್ಮಾ ಪಾಕಿಸ್ತಾನದಲ್ಲಿ ಸಂಚಲನ ಸೃಷ್ಟಿಸಿದ್ದಾರೆ.

3 / 5
ಕುತೂಹಲಕಾರಿ ವಿಷಯ ಎಂದರೆ ಪಾಕಿಸ್ತಾನದ ಗೂಗಲ್ ಸರ್ಚ್ ಟ್ರೆಂಡಿಂಗ್ ಪಟ್ಟಿಯ ಟಾಪ್-10 ನಲ್ಲಿ ಅಲ್ಲಿನ ಸ್ಟಾರ್ ಆಟಗಾರರಾದ ಬಾಬರ್ ಆಝಂ, ಶಾಹೀನ್ ಶಾ ಅಫ್ರಿದಿ ಕಾಣಿಸಿಕೊಂಡಿಲ್ಲ. ಅಲ್ಲದೆ ಹೊಸ ಸೆನ್ಸೇಷನ್ ಸೃಷ್ಟಿಸಿದ್ದ ಯುವ ದಾಂಡಿಗ ಸೈಮ್ ಅಯ್ಯೂಬ್ ಆರನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಅಂದರೆ ಪಾಕಿಸ್ತಾನ್ ಆಟಗಾರರ ಬದಲಾಗಿ ಈ ವರ್ಷ ಪಾಕಿಗಳು ಅಭಿಷೇಕ್ ಶರ್ಮಾ ಬಗ್ಗೆ ಹೆಚ್ಚು ಹುಡುಕಾಡಿದ್ದಾರೆ.

ಕುತೂಹಲಕಾರಿ ವಿಷಯ ಎಂದರೆ ಪಾಕಿಸ್ತಾನದ ಗೂಗಲ್ ಸರ್ಚ್ ಟ್ರೆಂಡಿಂಗ್ ಪಟ್ಟಿಯ ಟಾಪ್-10 ನಲ್ಲಿ ಅಲ್ಲಿನ ಸ್ಟಾರ್ ಆಟಗಾರರಾದ ಬಾಬರ್ ಆಝಂ, ಶಾಹೀನ್ ಶಾ ಅಫ್ರಿದಿ ಕಾಣಿಸಿಕೊಂಡಿಲ್ಲ. ಅಲ್ಲದೆ ಹೊಸ ಸೆನ್ಸೇಷನ್ ಸೃಷ್ಟಿಸಿದ್ದ ಯುವ ದಾಂಡಿಗ ಸೈಮ್ ಅಯ್ಯೂಬ್ ಆರನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಅಂದರೆ ಪಾಕಿಸ್ತಾನ್ ಆಟಗಾರರ ಬದಲಾಗಿ ಈ ವರ್ಷ ಪಾಕಿಗಳು ಅಭಿಷೇಕ್ ಶರ್ಮಾ ಬಗ್ಗೆ ಹೆಚ್ಚು ಹುಡುಕಾಡಿದ್ದಾರೆ.

4 / 5
ಇನ್ನು ಈ ವರ್ಷ ಭಾರತದಲ್ಲಿ ಹೆಚ್ಚು ಹುಡುಕಲ್ಪಟ್ಟ ಆಟಗಾರ 14 ವರ್ಷದ ವೈಭವ್ ಸೂರ್ಯವಂಶಿ. ಭರ್ಜರಿ ಬ್ಯಾಟಿಂಗ್​ನೊಂದಿಗೆ ಅಬ್ಬರಿಸುತ್ತಿರುವ ವೈಭವ್ ಬಗ್ಗೆ ಭಾರತೀಯರು ಗೂಗಲ್​ನಲ್ಲಿ ಹೆಚ್ಚು ಹುಡುಕಾಡಿದ್ದಾರೆ. ಅಂದರೆ ಭಾರತ ಮತ್ತು ಪಾಕಿಸ್ತಾನದಲ್ಲಿ ಟೀಮ್ ಇಂಡಿಯಾದ ಇಬ್ಬರು ಎಡಗೈ ದಾಂಡಿಗರ ಬಗ್ಗೆ ಗೂಗಲ್​ನಲ್ಲಿ ಹೆಚ್ಚು ಹುಡುಕಾಟ ನಡೆಸಿರುವುದು ವಿಶೇಷ.

ಇನ್ನು ಈ ವರ್ಷ ಭಾರತದಲ್ಲಿ ಹೆಚ್ಚು ಹುಡುಕಲ್ಪಟ್ಟ ಆಟಗಾರ 14 ವರ್ಷದ ವೈಭವ್ ಸೂರ್ಯವಂಶಿ. ಭರ್ಜರಿ ಬ್ಯಾಟಿಂಗ್​ನೊಂದಿಗೆ ಅಬ್ಬರಿಸುತ್ತಿರುವ ವೈಭವ್ ಬಗ್ಗೆ ಭಾರತೀಯರು ಗೂಗಲ್​ನಲ್ಲಿ ಹೆಚ್ಚು ಹುಡುಕಾಡಿದ್ದಾರೆ. ಅಂದರೆ ಭಾರತ ಮತ್ತು ಪಾಕಿಸ್ತಾನದಲ್ಲಿ ಟೀಮ್ ಇಂಡಿಯಾದ ಇಬ್ಬರು ಎಡಗೈ ದಾಂಡಿಗರ ಬಗ್ಗೆ ಗೂಗಲ್​ನಲ್ಲಿ ಹೆಚ್ಚು ಹುಡುಕಾಟ ನಡೆಸಿರುವುದು ವಿಶೇಷ.

5 / 5
Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ