ಪಾಕಿಸ್ತಾನ್ ವಿರುದ್ಧ ಅಭಿಷೇಕ್ ಶರ್ಮಾ ಕಣಕ್ಕಿಳಿತಾರಾ? ಇಲ್ವಾ?

Updated on: Feb 14, 2026 | 2:24 PM

ಭಾರತ ಮತ್ತು ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಭಾನುವಾರ ಕೊಲಂಬೊದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​​ನ 28ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಆರಂಭಿಕ ದಾಂಡಿಗ ಅಭಿಷೇಕ್ ಶರ್ಮಾ ಆಡುತ್ತಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

1 / 5
ಟಿ20 ವಿಶ್ವಕಪ್​ನ 28ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಭಾನುವಾರ (ಫೆ.15) ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಅಭಿಷೇಕ್ ಶರ್ಮಾ (Abhishek sharma) ಕಣಕ್ಕಿಳಿಯುತ್ತಾರಾ ಎಂಬುದೇ ಪ್ರಶ್ನೆ.

ಟಿ20 ವಿಶ್ವಕಪ್​ನ 28ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಭಾನುವಾರ (ಫೆ.15) ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಅಭಿಷೇಕ್ ಶರ್ಮಾ (Abhishek sharma) ಕಣಕ್ಕಿಳಿಯುತ್ತಾರಾ ಎಂಬುದೇ ಪ್ರಶ್ನೆ.

2 / 5
ಏಕೆಂದರೆ ಹೊಟ್ಟೆಯ ಸೋಂಕಿನ ಸಮಸ್ಯೆಯಿಂದ ಬಳಲುತ್ತಿರುವ ಅಭಿಷೇಕ್ ಶರ್ಮಾ ನಮೀಬಿಯ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದರು. ಇದೀಗ ಟೀಮ್ ಇಂಡಿಯಾ ಪಾಕಿಸ್ತಾನ್ ವಿರುದ್ಧ ಕಣಕ್ಕಿಳಿಯಲು ಸಜ್ಜಾಗುತ್ತಿದೆ. ಇದಕ್ಕಾಗಿ ಭಾರತ ತಂಡವು ಕೊಲಂಬೊಗೆ ಬಂದಿಳಿದಿದೆ.

ಏಕೆಂದರೆ ಹೊಟ್ಟೆಯ ಸೋಂಕಿನ ಸಮಸ್ಯೆಯಿಂದ ಬಳಲುತ್ತಿರುವ ಅಭಿಷೇಕ್ ಶರ್ಮಾ ನಮೀಬಿಯ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದರು. ಇದೀಗ ಟೀಮ್ ಇಂಡಿಯಾ ಪಾಕಿಸ್ತಾನ್ ವಿರುದ್ಧ ಕಣಕ್ಕಿಳಿಯಲು ಸಜ್ಜಾಗುತ್ತಿದೆ. ಇದಕ್ಕಾಗಿ ಭಾರತ ತಂಡವು ಕೊಲಂಬೊಗೆ ಬಂದಿಳಿದಿದೆ.

3 / 5
ಕೊಲಂಬೊಗೆ ಬಂದಿಳಿದಿರುವ ಭಾರತ ತಂಡದಲ್ಲಿ ಅಭಿಷೇಕ್ ಶರ್ಮಾ ಕೂಡ ಇದ್ದಾರೆ. ಅಂದರೆ ಅವರು ಬಹುತೇಕ ಚೇತರಿಸಿಕೊಂಡಿರುವುದು ಖಚಿತ. ಇದೇ ಕಾರಣದಿಂದಾಗಿ ಅವರು ದೆಹಲಿಯಿಂದ ಕೊಲಂಬೊಗೆ ಪ್ರಯಾಣಿಸಿದ್ದಾರೆ. ಹೀಗಾಗಿ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.

ಕೊಲಂಬೊಗೆ ಬಂದಿಳಿದಿರುವ ಭಾರತ ತಂಡದಲ್ಲಿ ಅಭಿಷೇಕ್ ಶರ್ಮಾ ಕೂಡ ಇದ್ದಾರೆ. ಅಂದರೆ ಅವರು ಬಹುತೇಕ ಚೇತರಿಸಿಕೊಂಡಿರುವುದು ಖಚಿತ. ಇದೇ ಕಾರಣದಿಂದಾಗಿ ಅವರು ದೆಹಲಿಯಿಂದ ಕೊಲಂಬೊಗೆ ಪ್ರಯಾಣಿಸಿದ್ದಾರೆ. ಹೀಗಾಗಿ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.

4 / 5
ಇನ್ನು ಅಭಿಷೇಕ್ ಶರ್ಮಾ ಕಣಕ್ಕಿಳಿದರೆ ಸಂಜು ಸ್ಯಾಮ್ಸನ್ ತಂಡದಿಂದ ಹೊರಗುಳಿಯಲಿದ್ದಾರೆ. ಏಕೆಂದರೆ ಅಭಿಷೇಕ್ ಅನುಪಸ್ಥಿತಿಯಲ್ಲಿ ಸ್ಯಾಮ್ಸನ್ ನಮೀಬಿಯ ವಿರುದ್ಧ ಇನಿಂಗ್ಸ್ ಆರಂಭಿಸಿದ್ದರು. ಇದೀಗ ಅಭಿಷೇಕ್ ಶರ್ಮಾ ಕೊಲಂಬೊಗೆ ಬಂದಿಳಿದಿರುವ ಕಾರಣ ಪಾಕ್ ವಿರುದ್ಧ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.

ಇನ್ನು ಅಭಿಷೇಕ್ ಶರ್ಮಾ ಕಣಕ್ಕಿಳಿದರೆ ಸಂಜು ಸ್ಯಾಮ್ಸನ್ ತಂಡದಿಂದ ಹೊರಗುಳಿಯಲಿದ್ದಾರೆ. ಏಕೆಂದರೆ ಅಭಿಷೇಕ್ ಅನುಪಸ್ಥಿತಿಯಲ್ಲಿ ಸ್ಯಾಮ್ಸನ್ ನಮೀಬಿಯ ವಿರುದ್ಧ ಇನಿಂಗ್ಸ್ ಆರಂಭಿಸಿದ್ದರು. ಇದೀಗ ಅಭಿಷೇಕ್ ಶರ್ಮಾ ಕೊಲಂಬೊಗೆ ಬಂದಿಳಿದಿರುವ ಕಾರಣ ಪಾಕ್ ವಿರುದ್ಧ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.

5 / 5
ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us