AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೊಂದೇ ಇನಿಂಗ್ಸ್​ ಬಳಿಕ ಸೊನ್ನೆ ಸುತ್ತುವ ಅಭಿಷೇಕ್ ಶರ್ಮಾ

Abhishek Sharma: ಅಭಿಷೇಕ್ ಶರ್ಮಾ ಕಳೆದ 6 ಇನಿಂಗ್ಸ್​​​ಗಳಲ್ಲಿ ಎರಡು ಸ್ಫೋಟಕ ಅರ್ಧಶತಕ ಸಿಡಿಸಿದ್ದಾರೆ. ನ್ಯೂಝಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಕೇವಲ 35 ಎಸೆತಗಳಲ್ಲಿ 84 ರನ್ ಬಾರಿಸಿದ್ದರು. ಇದಾದ ಬಳಿಕ ನ್ಯೂಝಿಲೆಂಡ್ ವಿರುದ್ಧವೇ ಮೂರನೇ ಟಿ20 ಪಂದ್ಯದಲ್ಲಿ ಕೇವಲ 20 ಎಸೆತಗಳಲ್ಲಿ ಅಜೇಯ 68 ರನ್ ಚಚ್ಚಿದ್ದರು. ಈ ವಿಸ್ಫೋಟಕ ಅರ್ಧಶತಕಗಳ ಹೊರತಾಗಿಯೂ ಅಭಿಷೇಕ್ ಶರ್ಮಾ ಅವರ ಬ್ಯಾಟಿಂಗ್ ಟೀಮ್ ಇಂಡಿಯಾ ಚಿಂತೆಗೆ ಕಾರಣವಾಗಿದೆ.

ಝಾಹಿರ್ ಯೂಸುಫ್
|

Updated on: Feb 09, 2026 | 3:21 PM

Share
ಟಿ20 ಕ್ರಿಕೆಟ್​​ನಲ್ಲಿನ ಡೇಂಜರಸ್ ಬ್ಯಾಟ್ಸ್​ಮನ್​​ಗಳಲ್ಲಿ ಅಭಿಷೇಕ್ ಶರ್ಮಾ (Abhishek Sharma) ಕೂಡ ಒಬ್ಬರು. ಈಗಾಗಲೇ ತನ್ನ ಸ್ಫೋಟಕ ಬ್ಯಾಟಿಂಗ್ ಮೂಲಕ ಯುವ ದಾಂಡಿಗ ಸಂಚಲನ ಸೃಷ್ಟಿಸಿದ್ದಾರೆ. ಈ ಸಂಚಲನದ ಹೊರತಾಗಿಯೂ ಅಭಿ ಬ್ಯಾಟಿಂಗ್ ಮಾಡುತ್ತಿರುವುದು ಆಲ್ ಅಥವಾ ನಥಿಂಗ್ ಸ್ಟ್ರೈಲ್​​ನಲ್ಲಿ.

ಟಿ20 ಕ್ರಿಕೆಟ್​​ನಲ್ಲಿನ ಡೇಂಜರಸ್ ಬ್ಯಾಟ್ಸ್​ಮನ್​​ಗಳಲ್ಲಿ ಅಭಿಷೇಕ್ ಶರ್ಮಾ (Abhishek Sharma) ಕೂಡ ಒಬ್ಬರು. ಈಗಾಗಲೇ ತನ್ನ ಸ್ಫೋಟಕ ಬ್ಯಾಟಿಂಗ್ ಮೂಲಕ ಯುವ ದಾಂಡಿಗ ಸಂಚಲನ ಸೃಷ್ಟಿಸಿದ್ದಾರೆ. ಈ ಸಂಚಲನದ ಹೊರತಾಗಿಯೂ ಅಭಿ ಬ್ಯಾಟಿಂಗ್ ಮಾಡುತ್ತಿರುವುದು ಆಲ್ ಅಥವಾ ನಥಿಂಗ್ ಸ್ಟ್ರೈಲ್​​ನಲ್ಲಿ.

1 / 6
ಅಂದರೆ ಅಭಿಷೇಕ್ ಶರ್ಮಾ ಸ್ಥಿರ ಪ್ರದರ್ಶನ ನೀಡುವಲ್ಲಿ ಎಡವುತ್ತಿದ್ದಾರೆ. ಇದಕ್ಕೆ ಸಾಕ್ಷಿ ಅವರು ಕಳೆದ 6 ಇನಿಂಗ್ಸ್​​ಗಳಲ್ಲಿ ಕಲೆಹಾಕಿರುವ ಸ್ಕೋರ್. ಈ ಆರು ಇನಿಂಗ್ಸ್​​ಗಳಲ್ಲಿ ಅವರು ಮೂರು ಬಾರಿ ಸೊನ್ನೆ ಸುತ್ತಿದ್ದಾರೆ ಎಂಬುದೇ ಅಚ್ಚರಿ. ಇದಾಗ್ಯೂ ಅವರು ಔಟ್ ಆಫ್ ಫಾರ್ಮ್​ನಲ್ಲಿಲ್ಲ ಎಂಬುದು ಸಹ ಉಲ್ಲೇಖಾರ್ಹ.

ಅಂದರೆ ಅಭಿಷೇಕ್ ಶರ್ಮಾ ಸ್ಥಿರ ಪ್ರದರ್ಶನ ನೀಡುವಲ್ಲಿ ಎಡವುತ್ತಿದ್ದಾರೆ. ಇದಕ್ಕೆ ಸಾಕ್ಷಿ ಅವರು ಕಳೆದ 6 ಇನಿಂಗ್ಸ್​​ಗಳಲ್ಲಿ ಕಲೆಹಾಕಿರುವ ಸ್ಕೋರ್. ಈ ಆರು ಇನಿಂಗ್ಸ್​​ಗಳಲ್ಲಿ ಅವರು ಮೂರು ಬಾರಿ ಸೊನ್ನೆ ಸುತ್ತಿದ್ದಾರೆ ಎಂಬುದೇ ಅಚ್ಚರಿ. ಇದಾಗ್ಯೂ ಅವರು ಔಟ್ ಆಫ್ ಫಾರ್ಮ್​ನಲ್ಲಿಲ್ಲ ಎಂಬುದು ಸಹ ಉಲ್ಲೇಖಾರ್ಹ.

2 / 6
ಏಕೆಂದರೆ ನಾಗ್​​ಪುರದಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಕೇವಲ 35 ಎಸೆತಗಳಲ್ಲಿ 84 ರನ್ ಚಚ್ಚಿದ್ದರು. ಆದರೆ ರಾಯ್​ಪುರದಲ್ಲಿ ನಡೆದ 2ನೇ ಪಂದ್ಯದಲ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದರು.

ಏಕೆಂದರೆ ನಾಗ್​​ಪುರದಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಕೇವಲ 35 ಎಸೆತಗಳಲ್ಲಿ 84 ರನ್ ಚಚ್ಚಿದ್ದರು. ಆದರೆ ರಾಯ್​ಪುರದಲ್ಲಿ ನಡೆದ 2ನೇ ಪಂದ್ಯದಲ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದರು.

3 / 6
ಇನ್ನು ಗುವಾಹಟಿಯಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೂರನೇ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಕೇವಲ 20 ಎಸೆತಗಳಲ್ಲಿ 68 ರನ್ ಚಚ್ಚಿದ್ದರು. ಆದರೆ ವಿಶಾಖಪಟ್ಟಣದಲ್ಲಿ ನಡೆದ ನಾಲ್ಕನೇ ಪಂದ್ಯದಲ್ಲಿ ಮತ್ತೆ ಶೂನ್ಯಕ್ಕೆ ಔಟಾಗುವ ಮೂಲಕ ನಿರಾಸೆ ಮೂಡಿಸಿದರು.

ಇನ್ನು ಗುವಾಹಟಿಯಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೂರನೇ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಕೇವಲ 20 ಎಸೆತಗಳಲ್ಲಿ 68 ರನ್ ಚಚ್ಚಿದ್ದರು. ಆದರೆ ವಿಶಾಖಪಟ್ಟಣದಲ್ಲಿ ನಡೆದ ನಾಲ್ಕನೇ ಪಂದ್ಯದಲ್ಲಿ ಮತ್ತೆ ಶೂನ್ಯಕ್ಕೆ ಔಟಾಗುವ ಮೂಲಕ ನಿರಾಸೆ ಮೂಡಿಸಿದರು.

4 / 6
ಇದಾದ ಬಳಿಕ ತಿರುವನಂತಪುರದಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಕೊನೆಯ ಟಿ20 ಪಂದ್ಯದಲ್ಲಿ 16 ಎಸೆತಗಳಲ್ಲಿ 30 ರನ್ ಚಚ್ಚಿದ್ದರು. ಇದೀಗ ಟಿ20 ವಿಶ್ವಕಪ್​​ನ ಮೊದಲ ಪಂದ್ಯದಲ್ಲಿ ಯುಎಸ್​ಎ ವಿರುದ್ಧ ಶೂನ್ಯಕ್ಕೆ ಔಟಾಗಿದ್ದಾರೆ. ಅಂದರೆ ಅಭಿಷೇಕ್ ಶರ್ಮಾ ಪ್ರತಿ ಇನಿಂಗ್ಸ್ ಬಳಿಕ ಸೊನ್ನೆ ಸುತ್ತಿದ್ದಾರೆ.

ಇದಾದ ಬಳಿಕ ತಿರುವನಂತಪುರದಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಕೊನೆಯ ಟಿ20 ಪಂದ್ಯದಲ್ಲಿ 16 ಎಸೆತಗಳಲ್ಲಿ 30 ರನ್ ಚಚ್ಚಿದ್ದರು. ಇದೀಗ ಟಿ20 ವಿಶ್ವಕಪ್​​ನ ಮೊದಲ ಪಂದ್ಯದಲ್ಲಿ ಯುಎಸ್​ಎ ವಿರುದ್ಧ ಶೂನ್ಯಕ್ಕೆ ಔಟಾಗಿದ್ದಾರೆ. ಅಂದರೆ ಅಭಿಷೇಕ್ ಶರ್ಮಾ ಪ್ರತಿ ಇನಿಂಗ್ಸ್ ಬಳಿಕ ಸೊನ್ನೆ ಸುತ್ತಿದ್ದಾರೆ.

5 / 6
ಅಂದರೆ ಒಂದು ಇನಿಂಗ್ಸ್​​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿರುವ ಅಭಿಷೇಕ್ ಶರ್ಮಾ, ಮತ್ತೊಂದು ಇನಿಂಗ್ಸ್​ನಲ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸುತ್ತಿದ್ದಾರೆ. ಇದಕ್ಕೆ ಸಾಕ್ಷಿ ಕಳೆದ 6 ಪಂದ್ಯಗಳಲ್ಲಿ ಅವರು ಮೂರು ಬಾರಿ ಡಕ್ ಔಟ್ ಆಗಿರುವುದು. ಅಂದರೆ ಅತ್ತ ಭರ್ಜರಿ ಫಾರ್ಮ್​​ನಲ್ಲಿದ್ದರೂ ಅಭಿಷೇಕ್ ಶರ್ಮಾ ಒಂದೊಂದೇ ಇನಿಂಗ್ಸ್​​ಗಳ ಸೊನ್ನೆ ಸುತ್ತುತ್ತಿರುವುದು ಇದೀಗ ಟೀಮ್ ಇಂಡಿಯಾದ ಚಿಂತೆಗೆ ಕಾರಣವಾಗಿದೆ.

ಅಂದರೆ ಒಂದು ಇನಿಂಗ್ಸ್​​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿರುವ ಅಭಿಷೇಕ್ ಶರ್ಮಾ, ಮತ್ತೊಂದು ಇನಿಂಗ್ಸ್​ನಲ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸುತ್ತಿದ್ದಾರೆ. ಇದಕ್ಕೆ ಸಾಕ್ಷಿ ಕಳೆದ 6 ಪಂದ್ಯಗಳಲ್ಲಿ ಅವರು ಮೂರು ಬಾರಿ ಡಕ್ ಔಟ್ ಆಗಿರುವುದು. ಅಂದರೆ ಅತ್ತ ಭರ್ಜರಿ ಫಾರ್ಮ್​​ನಲ್ಲಿದ್ದರೂ ಅಭಿಷೇಕ್ ಶರ್ಮಾ ಒಂದೊಂದೇ ಇನಿಂಗ್ಸ್​​ಗಳ ಸೊನ್ನೆ ಸುತ್ತುತ್ತಿರುವುದು ಇದೀಗ ಟೀಮ್ ಇಂಡಿಯಾದ ಚಿಂತೆಗೆ ಕಾರಣವಾಗಿದೆ.

6 / 6
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ