AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂತಹದೊಂದು ಪವಾಡ ನಡೆದರೆ ಅಫ್ಘಾನಿಸ್ತಾನ್ ಸೆಮಿಫೈನಲ್​ಗೆ..!

Champions Trophy 2025: ಚಾಂಪಿಯನ್ಸ್ ಟ್ರೋಫಿಯ ನಾಕೌಟ್ ಹಂತಕ್ಕೆ ಈಗಾಗಲೇ ಭಾರತ, ನ್ಯೂಝಿಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳು ಎಂಟ್ರಿ ಕೊಟ್ಟಿದೆ. ಇದಾಗ್ಯೂ ಸೆಮಿಫೈನಲ್​ಗೇರಲಿರುವ ನಾಲ್ಕನೇ ತಂಡ ಯಾವುದೆಂಬುದು ಇನ್ನೂ ಸಹ ನಿರ್ಧಾರವಾಗಿಲ್ಲ. ಇಲ್ಲಿ ಸೌತ್ ಆಫ್ರಿಕಾ ಹಾಗೂ ಅಫ್ಘಾನಿಸ್ತಾನ್ ನಡುವೆ ಪೈಪೋಟಿ ಇದ್ದು, ಇಂದಿನ ಪಂದ್ಯದ ಮೂಲಕ ಸೆಮಿಫೈನಲ್​ಆಡಲಿರುವ 4ನೇ ತಂಡ ಯಾವುದೆಂಬುದು ನಿರ್ಧಾರವಾಗಲಿದೆ.

ಝಾಹಿರ್ ಯೂಸುಫ್
|

Updated on: Mar 01, 2025 | 9:04 AM

Share
ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಮೂರು ತಂಡಗಳು ಹೊರಬಿದ್ದರೆ, ಮೂರು ಟೀಮ್​ಗಳು ಸೆಮಿಫೈನಲ್​ಗೆ ಪ್ರವೇಶಿಸಿದೆ. ಇದಾಗ್ಯೂ ಸೆಮಿಫೈನಲ್ ಆಡಲಿರುವ 4ನೇ ತಂಡ ಯಾವುದೆಂಬುದು ಇನ್ನೂ ಸಹ ನಿರ್ಧಾರವಾಗಿಲ್ಲ. ಇದಕ್ಕೆ ಮುಖ್ಯ ಕಾರಣ ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ್ ನಡುವಣ ಪಂದ್ಯವು ಮಳೆಯಿಂದ ರದ್ದಾಗಿರುವುದು.

ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಮೂರು ತಂಡಗಳು ಹೊರಬಿದ್ದರೆ, ಮೂರು ಟೀಮ್​ಗಳು ಸೆಮಿಫೈನಲ್​ಗೆ ಪ್ರವೇಶಿಸಿದೆ. ಇದಾಗ್ಯೂ ಸೆಮಿಫೈನಲ್ ಆಡಲಿರುವ 4ನೇ ತಂಡ ಯಾವುದೆಂಬುದು ಇನ್ನೂ ಸಹ ನಿರ್ಧಾರವಾಗಿಲ್ಲ. ಇದಕ್ಕೆ ಮುಖ್ಯ ಕಾರಣ ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ್ ನಡುವಣ ಪಂದ್ಯವು ಮಳೆಯಿಂದ ರದ್ದಾಗಿರುವುದು.

1 / 5
ಲಾಹೋರ್​ನಲ್ಲಿ ಶುಕ್ರವಾರ ನಡೆದ ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ್ ನಡುವಣ ಪಂದ್ಯವು ಮಳೆಗೆ ಅಹುತಿಯಾಗಿದೆ. ಹೀಗಾಗಿ ಉಭಯ ತಂಡಗಳು ತಲಾ ಒಂದೊಂದು ಅಂಕಗಳನ್ನು ಹಂಚಿಕೊಂಡಿದೆ. ಈ ಒಂದು ಅಂಕದೊಂದಿಗೆ 4 ಪಾಯಿಂಟ್ಸ್ ಪಡೆದಿರುವ ಆಸ್ಟ್ರೇಲಿಯಾ ಸೆಮಿಫೈನಲ್​ಗೇರಿದೆ.

ಲಾಹೋರ್​ನಲ್ಲಿ ಶುಕ್ರವಾರ ನಡೆದ ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ್ ನಡುವಣ ಪಂದ್ಯವು ಮಳೆಗೆ ಅಹುತಿಯಾಗಿದೆ. ಹೀಗಾಗಿ ಉಭಯ ತಂಡಗಳು ತಲಾ ಒಂದೊಂದು ಅಂಕಗಳನ್ನು ಹಂಚಿಕೊಂಡಿದೆ. ಈ ಒಂದು ಅಂಕದೊಂದಿಗೆ 4 ಪಾಯಿಂಟ್ಸ್ ಪಡೆದಿರುವ ಆಸ್ಟ್ರೇಲಿಯಾ ಸೆಮಿಫೈನಲ್​ಗೇರಿದೆ.

2 / 5
ಆದರೆ ಇತ್ತ ಇಂಗ್ಲೆಂಡ್ ವಿರುದ್ಧ ಗೆದ್ದು 2 ಅಂಕಗಳನ್ನು ಪಡೆದಿದ್ದ ಅಫ್ಘಾನಿಸ್ತಾನ್ ತಂಡ ಒಟ್ಟು ಪಾಯಿಂಟ್ಸ್ ಮೂರಕ್ಕೇರಿದೆ. ಅತ್ತ ಸೌತ್ ಆಫ್ರಿಕಾ ತಂಡವು 3 ಅಂಕಗಳನ್ನು ಹೊಂದಿದೆ. ಒಂದು ವೇಳೆ ಇಂದಿನ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಸೌತ್ ಆಫ್ರಿಕಾ ತಂಡ  ಜಯ ಸಾಧಿಸಿದರೆ 5 ಅಂಕಗಳೊಂದಿಗೆ ಸೆಮಿಫೈನಲ್​ಗೆ ಪ್ರವೇಶಿಸಲಿದೆ.

ಆದರೆ ಇತ್ತ ಇಂಗ್ಲೆಂಡ್ ವಿರುದ್ಧ ಗೆದ್ದು 2 ಅಂಕಗಳನ್ನು ಪಡೆದಿದ್ದ ಅಫ್ಘಾನಿಸ್ತಾನ್ ತಂಡ ಒಟ್ಟು ಪಾಯಿಂಟ್ಸ್ ಮೂರಕ್ಕೇರಿದೆ. ಅತ್ತ ಸೌತ್ ಆಫ್ರಿಕಾ ತಂಡವು 3 ಅಂಕಗಳನ್ನು ಹೊಂದಿದೆ. ಒಂದು ವೇಳೆ ಇಂದಿನ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಸೌತ್ ಆಫ್ರಿಕಾ ತಂಡ ಜಯ ಸಾಧಿಸಿದರೆ 5 ಅಂಕಗಳೊಂದಿಗೆ ಸೆಮಿಫೈನಲ್​ಗೆ ಪ್ರವೇಶಿಸಲಿದೆ.

3 / 5
ಆದರೆ ಇಂಗ್ಲೆಂಡ್ ತಂಡ 207 ರನ್​ಗಳ (ಕನಿಷ್ಠ 301 ರನ್​ಗಳ ಟಾರ್ಗೆಟ್) ಅಂತರದಿಂದ ಗೆದ್ದರೆ ಅಫ್ಘಾನಿಸ್ತಾನ್ ತಂಡ ಸೆಮಿಫೈನಲ್​ಗೆ ಅರ್ಹತೆ ಪಡೆಯಲಿದೆ. ಅಂದರೆ ಇಲ್ಲಿ +2.140 ನೆಟ್​ ರನ್​ ರೇಟ್ ಹೊಂದಿರುವ ಸೌತ್ ಆಫ್ರಿಕಾ ತಂಡವನ್ನು ಅಫ್ಘಾನಿಸ್ತಾನ್ (-0.990) ಹಿಂದಿಕ್ಕಬೇಕಿದ್ದರೆ ಇಂಗ್ಲೆಂಡ್ ಕನಿಷ್ಠ 207 ರನ್​ಗಳ ಅಮೋಘ ಗೆಲುವು ದಾಖಲಿಸಬೇಕು.

ಆದರೆ ಇಂಗ್ಲೆಂಡ್ ತಂಡ 207 ರನ್​ಗಳ (ಕನಿಷ್ಠ 301 ರನ್​ಗಳ ಟಾರ್ಗೆಟ್) ಅಂತರದಿಂದ ಗೆದ್ದರೆ ಅಫ್ಘಾನಿಸ್ತಾನ್ ತಂಡ ಸೆಮಿಫೈನಲ್​ಗೆ ಅರ್ಹತೆ ಪಡೆಯಲಿದೆ. ಅಂದರೆ ಇಲ್ಲಿ +2.140 ನೆಟ್​ ರನ್​ ರೇಟ್ ಹೊಂದಿರುವ ಸೌತ್ ಆಫ್ರಿಕಾ ತಂಡವನ್ನು ಅಫ್ಘಾನಿಸ್ತಾನ್ (-0.990) ಹಿಂದಿಕ್ಕಬೇಕಿದ್ದರೆ ಇಂಗ್ಲೆಂಡ್ ಕನಿಷ್ಠ 207 ರನ್​ಗಳ ಅಮೋಘ ಗೆಲುವು ದಾಖಲಿಸಬೇಕು.

4 / 5
ಕರಾಚಿ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಇಂದಿನ (ಮಾ.1) ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ಇಂಗ್ಲೆಂಡ್ ಇಂತಹದೊಂದು ಅಮೋಘ ಗೆಲುವು ದಾಖಲಿಸಿದರೆ ಮಾತ್ರ ಅಫ್ಘಾನಿಸ್ತಾನ್ ತಂಡ ಸೆಮಿಫೈನಲ್​ಗೇರಬಹುದು. ಇದರ ಹೊರತಾಗಿ ಸೌತ್ ಆಫ್ರಿಕಾ ತಂಡ ಸೋತರೂ ಸೆಮಿಫೈನಲ್​ಗೆ ಅರ್ಹತೆ ಪಡೆಯಲಿದೆ. ಹೀಗಾಗಿ ಅಫ್ಘಾನ್ ಪಾಲಿಗೆ ಆಂಗ್ಲರು ಪವಾಡ ಸೃಷ್ಟಿಸಲಿದ್ದಾರಾ ಕಾದು ನೋಡಬೇಕಿದೆ.

ಕರಾಚಿ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಇಂದಿನ (ಮಾ.1) ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ಇಂಗ್ಲೆಂಡ್ ಇಂತಹದೊಂದು ಅಮೋಘ ಗೆಲುವು ದಾಖಲಿಸಿದರೆ ಮಾತ್ರ ಅಫ್ಘಾನಿಸ್ತಾನ್ ತಂಡ ಸೆಮಿಫೈನಲ್​ಗೇರಬಹುದು. ಇದರ ಹೊರತಾಗಿ ಸೌತ್ ಆಫ್ರಿಕಾ ತಂಡ ಸೋತರೂ ಸೆಮಿಫೈನಲ್​ಗೆ ಅರ್ಹತೆ ಪಡೆಯಲಿದೆ. ಹೀಗಾಗಿ ಅಫ್ಘಾನ್ ಪಾಲಿಗೆ ಆಂಗ್ಲರು ಪವಾಡ ಸೃಷ್ಟಿಸಲಿದ್ದಾರಾ ಕಾದು ನೋಡಬೇಕಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ