AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೋಬ್ಬರಿ 25 ವಿಕೆಟ್: ಭಾರತದಲ್ಲಿ ಇತಿಹಾಸ ನಿರ್ಮಿಸಿದ ಎಜಾಝ್ ಪಟೇಲ್

India vs New Zealand, 3rd Test: ಭಾರತದ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶಿಸುವ ಮೂಲಕ ನ್ಯೂಝಿಲೆಂಡ್ ಸ್ಪಿನ್ನರ್ ಎಜಾಝ್ ಪಟೇಲ್ ಹೊಸ ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ವರ್ಷಗಳ ಹಿಂದೆ ಇಂಗ್ಲೆಂಡ್ ಆಟಗಾರ ಬರೆದಿದ್ದ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 03, 2024 | 1:11 PM

Share
ನ್ಯೂಝಿಲೆಂಡ್ ತಂಡದ ಸ್ಪಿನ್ನರ್ ಎಜಾಝ್ ಪಟೇಲ್ ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ವಾಂಖೆಡೆ ಸ್ಟೇಡಿಯಂನಲ್ಲಿ ಬರೋಬ್ಬರಿ 25 ವಿಕೆಟ್​ಗಳನ್ನು ಕಬಳಿಸುವ ಮೂಲಕ. ಈ ವಿಕೆಟ್​ಗಳೊಂದಿಗೆ ಭಾರತದ ಪಿಚ್​ವೊಂದರಲ್ಲಿ ಅತ್ಯಧಿಕ ವಿಕೆಟ್ ಪಡೆದ ವಿದೇಶಿ ಬೌಲರ್ ಎನಿಸಿಕೊಂಡಿದ್ದಾರೆ.

ನ್ಯೂಝಿಲೆಂಡ್ ತಂಡದ ಸ್ಪಿನ್ನರ್ ಎಜಾಝ್ ಪಟೇಲ್ ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ವಾಂಖೆಡೆ ಸ್ಟೇಡಿಯಂನಲ್ಲಿ ಬರೋಬ್ಬರಿ 25 ವಿಕೆಟ್​ಗಳನ್ನು ಕಬಳಿಸುವ ಮೂಲಕ. ಈ ವಿಕೆಟ್​ಗಳೊಂದಿಗೆ ಭಾರತದ ಪಿಚ್​ವೊಂದರಲ್ಲಿ ಅತ್ಯಧಿಕ ವಿಕೆಟ್ ಪಡೆದ ವಿದೇಶಿ ಬೌಲರ್ ಎನಿಸಿಕೊಂಡಿದ್ದಾರೆ.

1 / 5
ಇದಕ್ಕೂ ಮುನ್ನ ಈ ದಾಖಲೆ ಇಂಗ್ಲೆಂಡ್ ತಂಡದ ಮಾಜಿ ನಾಯನ ಇಯಾನ್ ಬಾಥಮ್ ಹೆಸರಿನಲ್ಲಿತ್ತು. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ 2 ಟೆಸ್ಟ್ ಪಂದ್ಯಗಳಲ್ಲಿ ಬೌಲಿಂಗ್ ಮಾಡಿದ್ದ ಬಾಥಮ್ ಒಟ್ಟು 22 ವಿಕೆಟ್ ಕಬಳಿಸಿ ಈ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಎಜಾಝ್ ಪಟೇಲ್ ಅಳಿಸಿ ಹಾಕಿದ್ದಾರೆ.

ಇದಕ್ಕೂ ಮುನ್ನ ಈ ದಾಖಲೆ ಇಂಗ್ಲೆಂಡ್ ತಂಡದ ಮಾಜಿ ನಾಯನ ಇಯಾನ್ ಬಾಥಮ್ ಹೆಸರಿನಲ್ಲಿತ್ತು. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ 2 ಟೆಸ್ಟ್ ಪಂದ್ಯಗಳಲ್ಲಿ ಬೌಲಿಂಗ್ ಮಾಡಿದ್ದ ಬಾಥಮ್ ಒಟ್ಟು 22 ವಿಕೆಟ್ ಕಬಳಿಸಿ ಈ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಎಜಾಝ್ ಪಟೇಲ್ ಅಳಿಸಿ ಹಾಕಿದ್ದಾರೆ.

2 / 5
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ 4 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಎಜಾಝ್ ಪಟೇಲ್ ಒಟ್ಟು 25 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಭಾರತದ ಪಿಚ್​ವೊಂದರಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ವಿದೇಶಿ ಬೌಲರ್ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ 4 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಎಜಾಝ್ ಪಟೇಲ್ ಒಟ್ಟು 25 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಭಾರತದ ಪಿಚ್​ವೊಂದರಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ವಿದೇಶಿ ಬೌಲರ್ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

3 / 5
ಅಂದಹಾಗೆ 2021 ರಲ್ಲಿ ಇದೇ ಮೈದಾನದಲ್ಲಿ ಎಜಾಝ್ ಪಟೇಲ್ ಇತಿಹಾಸ ನಿರ್ಮಿಸಿದ್ದರು. ಮೂರು ವರ್ಷಗಳ ಹಿಂದೆ ವಾಂಖೆಡೆಯಲ್ಲಿ ನಡೆದ ಟೆಸ್ಟ್​ನಲ್ಲಿ ಭಾರತದ 10 ಬ್ಯಾಟರ್​ಗಳನ್ನು ಔಟ್ ಮಾಡಿ, ಒಂದೇ ಇನಿಂಗ್ಸ್​ನಲ್ಲಿ ಹತ್ತು ವಿಕೆಟ್ ಪಡೆದ ವಿಶ್ವದ ಮೂರನೇ ಬೌಲರ್​ ಎನಿಸಿಕೊಂಡಿದ್ದರು. ಇದಕ್ಕೂ ಮುನ್ನ ಜಿಮ್ ಲೇಕರ್ (1956) ಮತ್ತು ಅನಿಲ್ ಕುಂಬ್ಳೆ (1999) ಮಾತ್ರ ಈ ಸಾಧನೆ ಮಾಡಿದ್ದರು. 2021 ರಲ್ಲಿ 10 ವಿಕೆಟ್ ಉರುಳಿಸಿ ಎಜಾಝ್ ಪಟೇಲ್ ಈ ಸಾಧನೆಯನ್ನು ಪುನರಾವರ್ತಿಸಿದ್ದರು.

ಅಂದಹಾಗೆ 2021 ರಲ್ಲಿ ಇದೇ ಮೈದಾನದಲ್ಲಿ ಎಜಾಝ್ ಪಟೇಲ್ ಇತಿಹಾಸ ನಿರ್ಮಿಸಿದ್ದರು. ಮೂರು ವರ್ಷಗಳ ಹಿಂದೆ ವಾಂಖೆಡೆಯಲ್ಲಿ ನಡೆದ ಟೆಸ್ಟ್​ನಲ್ಲಿ ಭಾರತದ 10 ಬ್ಯಾಟರ್​ಗಳನ್ನು ಔಟ್ ಮಾಡಿ, ಒಂದೇ ಇನಿಂಗ್ಸ್​ನಲ್ಲಿ ಹತ್ತು ವಿಕೆಟ್ ಪಡೆದ ವಿಶ್ವದ ಮೂರನೇ ಬೌಲರ್​ ಎನಿಸಿಕೊಂಡಿದ್ದರು. ಇದಕ್ಕೂ ಮುನ್ನ ಜಿಮ್ ಲೇಕರ್ (1956) ಮತ್ತು ಅನಿಲ್ ಕುಂಬ್ಳೆ (1999) ಮಾತ್ರ ಈ ಸಾಧನೆ ಮಾಡಿದ್ದರು. 2021 ರಲ್ಲಿ 10 ವಿಕೆಟ್ ಉರುಳಿಸಿ ಎಜಾಝ್ ಪಟೇಲ್ ಈ ಸಾಧನೆಯನ್ನು ಪುನರಾವರ್ತಿಸಿದ್ದರು.

4 / 5
ಇದೀಗ ಮತ್ತೆ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಭಾರತದ ವಿರುದ್ಧದ 3ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 5 ವಿಕೆಟ್ ಕಬಳಿಸಿದ ಎಜಾಝ್ ಪಟೇಲ್, ದ್ವಿತೀಯ ಇನಿಂಗ್ಸ್​ನಲ್ಲಿ 6 ವಿಕೆಟ್ ಪಡೆದಿದ್ದಾರೆ. ಈ ಮೂಲಕ ಭಾರತದ ಪಿಚ್​ವೊಂದರಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ವಿದೇಶಿ ಬೌಲರ್ ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ.

ಇದೀಗ ಮತ್ತೆ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಭಾರತದ ವಿರುದ್ಧದ 3ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 5 ವಿಕೆಟ್ ಕಬಳಿಸಿದ ಎಜಾಝ್ ಪಟೇಲ್, ದ್ವಿತೀಯ ಇನಿಂಗ್ಸ್​ನಲ್ಲಿ 6 ವಿಕೆಟ್ ಪಡೆದಿದ್ದಾರೆ. ಈ ಮೂಲಕ ಭಾರತದ ಪಿಚ್​ವೊಂದರಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ವಿದೇಶಿ ಬೌಲರ್ ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
‘ಮ್ಯಾಂಗೊ ಪಚ್ಚ’ ಕಟೌಟ್​​ನಲ್ಲಿ ನಟ ದರ್ಶನ್ ಚಿತ್ರ: ಸುದೀಪ್ ಹೇಳಿದ್ದೇನು?
‘ಮ್ಯಾಂಗೊ ಪಚ್ಚ’ ಕಟೌಟ್​​ನಲ್ಲಿ ನಟ ದರ್ಶನ್ ಚಿತ್ರ: ಸುದೀಪ್ ಹೇಳಿದ್ದೇನು?
ನೂತನ ಸಿಎಂ ಡಿಕೆ ಶಿವಕುಮಾರ್​​ಗೆ ಶುಭ ಹಾರೈಸಿದ ಲಿಂಗಾಯತ ಸ್ವಾಮೀಜಿಗಳು
ನೂತನ ಸಿಎಂ ಡಿಕೆ ಶಿವಕುಮಾರ್​​ಗೆ ಶುಭ ಹಾರೈಸಿದ ಲಿಂಗಾಯತ ಸ್ವಾಮೀಜಿಗಳು
ರಾಜೀನಾಮೆ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಹೇಳಿಕೆ
ರಾಜೀನಾಮೆ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಹೇಳಿಕೆ
ಕ್ಲಿಯರ್ ಔಟ್ ಆಗಿದ್ದರೂ... ನಾಟಕವಾಡಿ ಬಚಾವಾದ ಕೆಎಲ್ ರಾಹುಲ್!
ಕ್ಲಿಯರ್ ಔಟ್ ಆಗಿದ್ದರೂ... ನಾಟಕವಾಡಿ ಬಚಾವಾದ ಕೆಎಲ್ ರಾಹುಲ್!
ಮೃತ ಮಹಿಳೆಯ ಕುಟುಂಬಕ್ಕೆ ಪರಿಹಾರ ನೀಡದ್ದಕ್ಕೆ ಕೆಕೆಆರ್​ಟಿಸಿ ಬಸ್ ಜಪ್ತಿ
ಮೃತ ಮಹಿಳೆಯ ಕುಟುಂಬಕ್ಕೆ ಪರಿಹಾರ ನೀಡದ್ದಕ್ಕೆ ಕೆಕೆಆರ್​ಟಿಸಿ ಬಸ್ ಜಪ್ತಿ
‘ಮ್ಯಾಂಗೋ ಪಚ್ಚ’ ರಿಲೀಸ್ ಬೆನ್ನಲ್ಲೇ ಕಿಚ್ಚ ಸುದೀಪ್ ಸುದ್ದಿಗೋಷ್ಠಿ
‘ಮ್ಯಾಂಗೋ ಪಚ್ಚ’ ರಿಲೀಸ್ ಬೆನ್ನಲ್ಲೇ ಕಿಚ್ಚ ಸುದೀಪ್ ಸುದ್ದಿಗೋಷ್ಠಿ
ಕೆಸಿಇಟಿ ಫಲಿತಾಂಶ ಪ್ರಕಟ: ಸಚಿವರ ಸುದ್ದಿಗೋಷ್ಠಿ ನೇರಪ್ರಸಾರ
ಕೆಸಿಇಟಿ ಫಲಿತಾಂಶ ಪ್ರಕಟ: ಸಚಿವರ ಸುದ್ದಿಗೋಷ್ಠಿ ನೇರಪ್ರಸಾರ
2 ದಿನಗಳಲ್ಲಿ 33 ವಿಕೆಟ್ ಪತನ: ರೋಚಕ ಘಟ್ಟದತ್ತ 'ಲಾರ್ಡ್ಸ್'​ ಟೆಸ್ಟ್
2 ದಿನಗಳಲ್ಲಿ 33 ವಿಕೆಟ್ ಪತನ: ರೋಚಕ ಘಟ್ಟದತ್ತ 'ಲಾರ್ಡ್ಸ್'​ ಟೆಸ್ಟ್
ಬರ್ತ್ ಡೇ ಪಾರ್ಟಿ ವೇಳೆ ಕುಸಿದು ಬಿದ್ದ ಕಟ್ಟಡ: 15 ಯುವಕರು ಜಸ್ಟ್ ಮಿಸ್
ಬರ್ತ್ ಡೇ ಪಾರ್ಟಿ ವೇಳೆ ಕುಸಿದು ಬಿದ್ದ ಕಟ್ಟಡ: 15 ಯುವಕರು ಜಸ್ಟ್ ಮಿಸ್
ಜೂನ್ ತಿಂಗಳ ಈ ದಿನದಂದು ವಾಹನ ಖರೀದಿ ಮಾಡಿದರೆ ಶುಭ!
ಜೂನ್ ತಿಂಗಳ ಈ ದಿನದಂದು ವಾಹನ ಖರೀದಿ ಮಾಡಿದರೆ ಶುಭ!