AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೋಬ್ಬರಿ 25 ವಿಕೆಟ್: ಭಾರತದಲ್ಲಿ ಇತಿಹಾಸ ನಿರ್ಮಿಸಿದ ಎಜಾಝ್ ಪಟೇಲ್

India vs New Zealand, 3rd Test: ಭಾರತದ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶಿಸುವ ಮೂಲಕ ನ್ಯೂಝಿಲೆಂಡ್ ಸ್ಪಿನ್ನರ್ ಎಜಾಝ್ ಪಟೇಲ್ ಹೊಸ ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ವರ್ಷಗಳ ಹಿಂದೆ ಇಂಗ್ಲೆಂಡ್ ಆಟಗಾರ ಬರೆದಿದ್ದ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 03, 2024 | 1:11 PM

Share
ನ್ಯೂಝಿಲೆಂಡ್ ತಂಡದ ಸ್ಪಿನ್ನರ್ ಎಜಾಝ್ ಪಟೇಲ್ ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ವಾಂಖೆಡೆ ಸ್ಟೇಡಿಯಂನಲ್ಲಿ ಬರೋಬ್ಬರಿ 25 ವಿಕೆಟ್​ಗಳನ್ನು ಕಬಳಿಸುವ ಮೂಲಕ. ಈ ವಿಕೆಟ್​ಗಳೊಂದಿಗೆ ಭಾರತದ ಪಿಚ್​ವೊಂದರಲ್ಲಿ ಅತ್ಯಧಿಕ ವಿಕೆಟ್ ಪಡೆದ ವಿದೇಶಿ ಬೌಲರ್ ಎನಿಸಿಕೊಂಡಿದ್ದಾರೆ.

ನ್ಯೂಝಿಲೆಂಡ್ ತಂಡದ ಸ್ಪಿನ್ನರ್ ಎಜಾಝ್ ಪಟೇಲ್ ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ವಾಂಖೆಡೆ ಸ್ಟೇಡಿಯಂನಲ್ಲಿ ಬರೋಬ್ಬರಿ 25 ವಿಕೆಟ್​ಗಳನ್ನು ಕಬಳಿಸುವ ಮೂಲಕ. ಈ ವಿಕೆಟ್​ಗಳೊಂದಿಗೆ ಭಾರತದ ಪಿಚ್​ವೊಂದರಲ್ಲಿ ಅತ್ಯಧಿಕ ವಿಕೆಟ್ ಪಡೆದ ವಿದೇಶಿ ಬೌಲರ್ ಎನಿಸಿಕೊಂಡಿದ್ದಾರೆ.

1 / 5
ಇದಕ್ಕೂ ಮುನ್ನ ಈ ದಾಖಲೆ ಇಂಗ್ಲೆಂಡ್ ತಂಡದ ಮಾಜಿ ನಾಯನ ಇಯಾನ್ ಬಾಥಮ್ ಹೆಸರಿನಲ್ಲಿತ್ತು. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ 2 ಟೆಸ್ಟ್ ಪಂದ್ಯಗಳಲ್ಲಿ ಬೌಲಿಂಗ್ ಮಾಡಿದ್ದ ಬಾಥಮ್ ಒಟ್ಟು 22 ವಿಕೆಟ್ ಕಬಳಿಸಿ ಈ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಎಜಾಝ್ ಪಟೇಲ್ ಅಳಿಸಿ ಹಾಕಿದ್ದಾರೆ.

ಇದಕ್ಕೂ ಮುನ್ನ ಈ ದಾಖಲೆ ಇಂಗ್ಲೆಂಡ್ ತಂಡದ ಮಾಜಿ ನಾಯನ ಇಯಾನ್ ಬಾಥಮ್ ಹೆಸರಿನಲ್ಲಿತ್ತು. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ 2 ಟೆಸ್ಟ್ ಪಂದ್ಯಗಳಲ್ಲಿ ಬೌಲಿಂಗ್ ಮಾಡಿದ್ದ ಬಾಥಮ್ ಒಟ್ಟು 22 ವಿಕೆಟ್ ಕಬಳಿಸಿ ಈ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಎಜಾಝ್ ಪಟೇಲ್ ಅಳಿಸಿ ಹಾಕಿದ್ದಾರೆ.

2 / 5
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ 4 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಎಜಾಝ್ ಪಟೇಲ್ ಒಟ್ಟು 25 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಭಾರತದ ಪಿಚ್​ವೊಂದರಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ವಿದೇಶಿ ಬೌಲರ್ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ 4 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಎಜಾಝ್ ಪಟೇಲ್ ಒಟ್ಟು 25 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಭಾರತದ ಪಿಚ್​ವೊಂದರಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ವಿದೇಶಿ ಬೌಲರ್ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

3 / 5
ಅಂದಹಾಗೆ 2021 ರಲ್ಲಿ ಇದೇ ಮೈದಾನದಲ್ಲಿ ಎಜಾಝ್ ಪಟೇಲ್ ಇತಿಹಾಸ ನಿರ್ಮಿಸಿದ್ದರು. ಮೂರು ವರ್ಷಗಳ ಹಿಂದೆ ವಾಂಖೆಡೆಯಲ್ಲಿ ನಡೆದ ಟೆಸ್ಟ್​ನಲ್ಲಿ ಭಾರತದ 10 ಬ್ಯಾಟರ್​ಗಳನ್ನು ಔಟ್ ಮಾಡಿ, ಒಂದೇ ಇನಿಂಗ್ಸ್​ನಲ್ಲಿ ಹತ್ತು ವಿಕೆಟ್ ಪಡೆದ ವಿಶ್ವದ ಮೂರನೇ ಬೌಲರ್​ ಎನಿಸಿಕೊಂಡಿದ್ದರು. ಇದಕ್ಕೂ ಮುನ್ನ ಜಿಮ್ ಲೇಕರ್ (1956) ಮತ್ತು ಅನಿಲ್ ಕುಂಬ್ಳೆ (1999) ಮಾತ್ರ ಈ ಸಾಧನೆ ಮಾಡಿದ್ದರು. 2021 ರಲ್ಲಿ 10 ವಿಕೆಟ್ ಉರುಳಿಸಿ ಎಜಾಝ್ ಪಟೇಲ್ ಈ ಸಾಧನೆಯನ್ನು ಪುನರಾವರ್ತಿಸಿದ್ದರು.

ಅಂದಹಾಗೆ 2021 ರಲ್ಲಿ ಇದೇ ಮೈದಾನದಲ್ಲಿ ಎಜಾಝ್ ಪಟೇಲ್ ಇತಿಹಾಸ ನಿರ್ಮಿಸಿದ್ದರು. ಮೂರು ವರ್ಷಗಳ ಹಿಂದೆ ವಾಂಖೆಡೆಯಲ್ಲಿ ನಡೆದ ಟೆಸ್ಟ್​ನಲ್ಲಿ ಭಾರತದ 10 ಬ್ಯಾಟರ್​ಗಳನ್ನು ಔಟ್ ಮಾಡಿ, ಒಂದೇ ಇನಿಂಗ್ಸ್​ನಲ್ಲಿ ಹತ್ತು ವಿಕೆಟ್ ಪಡೆದ ವಿಶ್ವದ ಮೂರನೇ ಬೌಲರ್​ ಎನಿಸಿಕೊಂಡಿದ್ದರು. ಇದಕ್ಕೂ ಮುನ್ನ ಜಿಮ್ ಲೇಕರ್ (1956) ಮತ್ತು ಅನಿಲ್ ಕುಂಬ್ಳೆ (1999) ಮಾತ್ರ ಈ ಸಾಧನೆ ಮಾಡಿದ್ದರು. 2021 ರಲ್ಲಿ 10 ವಿಕೆಟ್ ಉರುಳಿಸಿ ಎಜಾಝ್ ಪಟೇಲ್ ಈ ಸಾಧನೆಯನ್ನು ಪುನರಾವರ್ತಿಸಿದ್ದರು.

4 / 5
ಇದೀಗ ಮತ್ತೆ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಭಾರತದ ವಿರುದ್ಧದ 3ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 5 ವಿಕೆಟ್ ಕಬಳಿಸಿದ ಎಜಾಝ್ ಪಟೇಲ್, ದ್ವಿತೀಯ ಇನಿಂಗ್ಸ್​ನಲ್ಲಿ 6 ವಿಕೆಟ್ ಪಡೆದಿದ್ದಾರೆ. ಈ ಮೂಲಕ ಭಾರತದ ಪಿಚ್​ವೊಂದರಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ವಿದೇಶಿ ಬೌಲರ್ ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ.

ಇದೀಗ ಮತ್ತೆ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಭಾರತದ ವಿರುದ್ಧದ 3ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 5 ವಿಕೆಟ್ ಕಬಳಿಸಿದ ಎಜಾಝ್ ಪಟೇಲ್, ದ್ವಿತೀಯ ಇನಿಂಗ್ಸ್​ನಲ್ಲಿ 6 ವಿಕೆಟ್ ಪಡೆದಿದ್ದಾರೆ. ಈ ಮೂಲಕ ಭಾರತದ ಪಿಚ್​ವೊಂದರಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ವಿದೇಶಿ ಬೌಲರ್ ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ.

5 / 5
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ