AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ajinkya Rahane: ಏಳು ವರ್ಷಗಳ ಬಳಿಕ ಮೊದಲ ಬಾರಿಗೆ ಪಂದ್ಯಶ್ರೇಷ್ಠ ಸ್ವೀಕರಿಸುವಾಗ ಅಜಿಂಕ್ಯಾ ರಹಾನೆ ಹೇಳಿದ್ದೇನು ನೋಡಿ

KKR vs CSK, IPL 2023: ಕೆಕೆಆರ್ ವಿರುದ್ಧ ನೀಡಿದ ಪ್ರದರ್ಶನಕ್ಕಾಗಿ ರಹಾನೆ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಬಾಚಿಕೊಂಡರು. ವಿಶೇಷ ಎಂದರೆ, ಏಳು ಐಪಿಎಲ್ ಸೀಸನ್​ಗಳ ಬಳಿಕ ರಹಾನೆ ಮೊದಲ ಬಾರಿಗೆ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ತಮ್ಮದಾಗಿಸಿಕೊಂಡರು.

Vinay Bhat
|

Updated on:Apr 24, 2023 | 11:12 AM

Share
ಭಾನುವಾರ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಐಪಿಎಲ್ 2023ರ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 49 ರನ್​ಗಳ ಅಮೋಘ ಗೆಲುವು ಸಾಧಿಸಿತು. ಈ ಮೂಲಕ ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನಕ್ಕೇರಿದೆ.

ಭಾನುವಾರ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಐಪಿಎಲ್ 2023ರ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 49 ರನ್​ಗಳ ಅಮೋಘ ಗೆಲುವು ಸಾಧಿಸಿತು. ಈ ಮೂಲಕ ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನಕ್ಕೇರಿದೆ.

1 / 8
ಅಜಿಂಕ್ಯಾ ರಹಾನೆ ಹಾಗೂ ಶಿವಂ ದುಬೆ ಅವರ ಮನಮೋಹಕ ಬ್ಯಾಟಿಂಗ್ ನೆರವಿನಿಂದ ಸಿಎಸ್​ಕೆ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 235 ರನ್ಸ್. ಅದರಲ್ಲೂ ಸ್ಫೋಟಕ ಬ್ಯಾಟಿಂಗ್ ನಡೆಸಿದ ರಹಾನೆ ಕೇವಲ 29 ಎಸೆತಗಳಲ್ಲಿ 6 ಫೋರ್, 5 ಸಿಕ್ಸರ್ ಸಿಡಿಸಿ ಅಜೇಯ 71 ರನ್ ಚಚ್ಚಿದರು.

ಅಜಿಂಕ್ಯಾ ರಹಾನೆ ಹಾಗೂ ಶಿವಂ ದುಬೆ ಅವರ ಮನಮೋಹಕ ಬ್ಯಾಟಿಂಗ್ ನೆರವಿನಿಂದ ಸಿಎಸ್​ಕೆ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 235 ರನ್ಸ್. ಅದರಲ್ಲೂ ಸ್ಫೋಟಕ ಬ್ಯಾಟಿಂಗ್ ನಡೆಸಿದ ರಹಾನೆ ಕೇವಲ 29 ಎಸೆತಗಳಲ್ಲಿ 6 ಫೋರ್, 5 ಸಿಕ್ಸರ್ ಸಿಡಿಸಿ ಅಜೇಯ 71 ರನ್ ಚಚ್ಚಿದರು.

2 / 8
ಈ ಅದ್ಭುತ ಪ್ರದರ್ಶನಕ್ಕಾಗಿ ರಹಾನೆ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಕೂಡ ಬಾಚಿಕೊಂಡರು. ವಿಶೇಷ ಎಂದರೆ ಏಳು ಐಪಿಎಲ್ ಸೀಸನ್​ಗಳ ಬಳಿಕ ರಹಾನೆ ಮೊದಲ ಬಾರಿಗೆ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ತಮ್ಮದಾಗಿಸಿಕೊಂಡರು.

ಈ ಅದ್ಭುತ ಪ್ರದರ್ಶನಕ್ಕಾಗಿ ರಹಾನೆ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಕೂಡ ಬಾಚಿಕೊಂಡರು. ವಿಶೇಷ ಎಂದರೆ ಏಳು ಐಪಿಎಲ್ ಸೀಸನ್​ಗಳ ಬಳಿಕ ರಹಾನೆ ಮೊದಲ ಬಾರಿಗೆ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ತಮ್ಮದಾಗಿಸಿಕೊಂಡರು.

3 / 8
ಈ ಸಂದರ್ಭ ಮಾತನಾಡಿದ ರಹಾನೆ, ನಾನು ಸ್ಪಷ್ಟ ಮನಸ್ಥಿತಿಯನ್ನು ಹೊಂದಿದ್ದೆ. ನೀವು ಕೇಳುವ ವಿಷಯ ಚೆನ್ನಾಗಿದ್ದರೆ, ನಿಮ್ಮ ಮನಸ್ಸು ಸರಿಯಾಗಿದ್ದರೆ ಎಲ್ಲವೂ ಅದ್ಭುತವಾಗಿರುತ್ತದೆ. ನಾನು ಆನಂದಿಸುತ್ತಾ ನನ್ನ ಆಟವನ್ನು ಆಡಿದೆ ಎಂದು ರಹಾನೆ ಹೇಳಿದ್ದಾರೆ.

ಈ ಸಂದರ್ಭ ಮಾತನಾಡಿದ ರಹಾನೆ, ನಾನು ಸ್ಪಷ್ಟ ಮನಸ್ಥಿತಿಯನ್ನು ಹೊಂದಿದ್ದೆ. ನೀವು ಕೇಳುವ ವಿಷಯ ಚೆನ್ನಾಗಿದ್ದರೆ, ನಿಮ್ಮ ಮನಸ್ಸು ಸರಿಯಾಗಿದ್ದರೆ ಎಲ್ಲವೂ ಅದ್ಭುತವಾಗಿರುತ್ತದೆ. ನಾನು ಆನಂದಿಸುತ್ತಾ ನನ್ನ ಆಟವನ್ನು ಆಡಿದೆ ಎಂದು ರಹಾನೆ ಹೇಳಿದ್ದಾರೆ.

4 / 8
ಈ ವಿಕೆಟ್ ಸ್ವಲ್ಪ ಜಿಗುಟಾಗಿತ್ತು. ಆದರೆ, ಲಯಕಂಡುಕೊಂಡರೆ ರನ್ ಗಳಿಸಲು ಇಲ್ಲಿ ಉತ್ತಮ ಅವಕಾಶವಿದೆ. ನಮ್ಮ ತಂಡ ಉತ್ತಮ ಆರಂಭ ಪಡೆದುಕೊಂಡಿತು. ಬಳಿಕ ನಾನು ನನ್ನ ಆಟವನ್ನು ಶುರು ಮಾಡಿದೆ, ಅದೇ ವೇಗವನ್ನು ಕಾಯ್ದುಕೊಳ್ಳುವುದು ನನ್ನ ಗುರಿಯಾಗಿತ್ತು - ಅಜಿಂಕ್ಯಾ ರಹಾನೆ.

ಈ ವಿಕೆಟ್ ಸ್ವಲ್ಪ ಜಿಗುಟಾಗಿತ್ತು. ಆದರೆ, ಲಯಕಂಡುಕೊಂಡರೆ ರನ್ ಗಳಿಸಲು ಇಲ್ಲಿ ಉತ್ತಮ ಅವಕಾಶವಿದೆ. ನಮ್ಮ ತಂಡ ಉತ್ತಮ ಆರಂಭ ಪಡೆದುಕೊಂಡಿತು. ಬಳಿಕ ನಾನು ನನ್ನ ಆಟವನ್ನು ಶುರು ಮಾಡಿದೆ, ಅದೇ ವೇಗವನ್ನು ಕಾಯ್ದುಕೊಳ್ಳುವುದು ನನ್ನ ಗುರಿಯಾಗಿತ್ತು - ಅಜಿಂಕ್ಯಾ ರಹಾನೆ.

5 / 8
ನಾನು ನನ್ನ ಎಲ್ಲ ಅರ್ಧಶತಕವನ್ನು ಇಷ್ಟಪಡುತ್ತೇನೆ. ನನಗನಿಸುವ ಪ್ರಕಾರ ನನ್ನ ಅದ್ಭುತ ಎನ್ನುವ ಅರ್ಧಶತಕ ಇನ್ನಷ್ಟೆ ಬರಬೇಕಿದೆ. ಇಲ್ಲಿ ಕಲಿಯಲು ಸಾಕಷ್ಟು ಅವಕಾಶವಿದೆ. ನಾನು ಧೋನಿ ನಾಯಕತ್ವದಡಿಯಲ್ಲಿ ಅನೇಕ ಪಂದ್ಯಗಳನ್ನು ಭಾರತ ಪರ ಆಡಿದ್ದೇನೆ. ಈಗ ಸಿಎಸ್​ಕೆ ತಂಡದ ಪರವಾಗಿಯು ಆಡುತ್ತಿದ್ದೇನೆ ಎಂಬುದು ರಹಾನೆ ಮಾತು.

ನಾನು ನನ್ನ ಎಲ್ಲ ಅರ್ಧಶತಕವನ್ನು ಇಷ್ಟಪಡುತ್ತೇನೆ. ನನಗನಿಸುವ ಪ್ರಕಾರ ನನ್ನ ಅದ್ಭುತ ಎನ್ನುವ ಅರ್ಧಶತಕ ಇನ್ನಷ್ಟೆ ಬರಬೇಕಿದೆ. ಇಲ್ಲಿ ಕಲಿಯಲು ಸಾಕಷ್ಟು ಅವಕಾಶವಿದೆ. ನಾನು ಧೋನಿ ನಾಯಕತ್ವದಡಿಯಲ್ಲಿ ಅನೇಕ ಪಂದ್ಯಗಳನ್ನು ಭಾರತ ಪರ ಆಡಿದ್ದೇನೆ. ಈಗ ಸಿಎಸ್​ಕೆ ತಂಡದ ಪರವಾಗಿಯು ಆಡುತ್ತಿದ್ದೇನೆ ಎಂಬುದು ರಹಾನೆ ಮಾತು.

6 / 8
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ರಹಾನೆ ಅವರ ಅಜೇಯ 71 ರನ್, ಶಿವಂ ದುಬೆ 21 ಎಸೆತಗಳಲ್ಲಿ 50 ಮತ್ತು ಡೆವೊನ್ ಕಾನ್ವೇ 40 ಎಸೆತಗಳಲ್ಲಿ 56 ರನ್​ಗಳನ್ನ ಸಿಡಿಸುವ ಮೂಲಕ ಎದುರಾಳಿಗೆ 236 ರನ್​ಗಳ ಕಠಿಣ ಟಾರ್ಗೆಟ್ ನೀಡಿತು.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ರಹಾನೆ ಅವರ ಅಜೇಯ 71 ರನ್, ಶಿವಂ ದುಬೆ 21 ಎಸೆತಗಳಲ್ಲಿ 50 ಮತ್ತು ಡೆವೊನ್ ಕಾನ್ವೇ 40 ಎಸೆತಗಳಲ್ಲಿ 56 ರನ್​ಗಳನ್ನ ಸಿಡಿಸುವ ಮೂಲಕ ಎದುರಾಳಿಗೆ 236 ರನ್​ಗಳ ಕಠಿಣ ಟಾರ್ಗೆಟ್ ನೀಡಿತು.

7 / 8
ಬೃಹತ್​ ಮೊತ್ತ ಬೆನ್ನಟ್ಟಿದ ಕೆಕೆಆರ್ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 186 ರನ್ ಗಳಿಸಲಷ್ಟೇ ಶಕ್ತವಾಯಿತು. ಜೇಸನ್ ರಾಯ್ 61 ರನ್ ಮತ್ತು ರಿಂಕು ಸಿಂಗ್ ಅಜೇಯ 53ರನ್ ಗಳನ್ನು ಬಾರಿಸಿ ಗೆಲುವಿಗಾಗಿ ಕೊನೆವರೆಗೂ ಹೋರಾಟ ನಡೆಸಿದರಾದರೂ ಸಾಧ್ಯವಾಗಲಿಲ್ಲ.

ಬೃಹತ್​ ಮೊತ್ತ ಬೆನ್ನಟ್ಟಿದ ಕೆಕೆಆರ್ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 186 ರನ್ ಗಳಿಸಲಷ್ಟೇ ಶಕ್ತವಾಯಿತು. ಜೇಸನ್ ರಾಯ್ 61 ರನ್ ಮತ್ತು ರಿಂಕು ಸಿಂಗ್ ಅಜೇಯ 53ರನ್ ಗಳನ್ನು ಬಾರಿಸಿ ಗೆಲುವಿಗಾಗಿ ಕೊನೆವರೆಗೂ ಹೋರಾಟ ನಡೆಸಿದರಾದರೂ ಸಾಧ್ಯವಾಗಲಿಲ್ಲ.

8 / 8

Published On - 11:12 am, Mon, 24 April 23

ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ