AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ajinkya Rahane: 27 ಎಸೆತ, 61 ರನ್: ಅಜಿಂಕ್ಯಾ ರಹಾನೆ ಸ್ಫೋಟಕ ಬ್ಯಾಟಿಂಗ್ ಕಂಡು ದಂಗಾದ ಕ್ರಿಕೆಟ್ ಜಗತ್ತು

MI vs CSK, IPL 2023: ಕೇವಲ 27 ಎಸೆತಗಳಲ್ಲಿ 7 ಫೋರ್, 3 ಸಿಕ್ಸರ್ ಸಿಡಿಸಿ 61 ರನ್ ಚಚ್ಚಿದ ಅಜಿಂಕ್ಯಾ ರಹಾನೆ ವೇಗದ ಅರ್ಧಶತಕ ಕೂಡ ಬಾರಿಸಿದರು. ಡೆವೋನ್ ಕಾನ್ವೆ ಮೊದಲ ಓವರ್​ನಲ್ಲೇ ಔಟಾದ ಪರಿಣಾಮ ಕ್ರೀಸ್​ಗೆ ಬಂದ ರಹಾನೆ ಮನಬಂದಂತೆ ಬ್ಯಾಟ್ ಬೀಸಿದರು.

Vinay Bhat
|

Updated on: Apr 09, 2023 | 7:46 AM

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯ ರೋಚಕತೆಯಿಂದ ಕೂಡಿತ್ತು. ಸಿಎಸ್​ಕೆ ತಂಡದ ಅಜಿಂಕ್ಯಾ ರಹಾನೆ ಸ್ಫೋಟಕ ಬ್ಯಾಟಿಂಗ್ ಇಡೀ ಪಂದ್ಯದ ಪ್ರಮುಖ ಹೈಲೇಟ್ ಆಯಿತು.

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯ ರೋಚಕತೆಯಿಂದ ಕೂಡಿತ್ತು. ಸಿಎಸ್​ಕೆ ತಂಡದ ಅಜಿಂಕ್ಯಾ ರಹಾನೆ ಸ್ಫೋಟಕ ಬ್ಯಾಟಿಂಗ್ ಇಡೀ ಪಂದ್ಯದ ಪ್ರಮುಖ ಹೈಲೇಟ್ ಆಯಿತು.

1 / 8
ಕೇವಲ 27 ಎಸೆತಗಳಲ್ಲಿ 7 ಫೋರ್, 3 ಸಿಕ್ಸರ್ ಸಿಡಿಸಿ 61 ರನ್ ಚಚ್ಚಿದ ರಹಾನೆ ವೇಗದ ಅರ್ಧಶತಕ ಕೂಡ ಬಾರಿಸಿದರು. ಡೆವೋನ್ ಕಾನ್ವೆ ಮೊದಲ ಓವರ್​ನಲ್ಲೇ ಔಟಾದ ಪರಿಣಾಮ ಕ್ರೀಸ್​ಗೆ ಬಂದ ರಹಾನೆ ಮನಬಂದಂತೆ ಬ್ಯಾಟ್ ಬೀಸಿದರು.

ಕೇವಲ 27 ಎಸೆತಗಳಲ್ಲಿ 7 ಫೋರ್, 3 ಸಿಕ್ಸರ್ ಸಿಡಿಸಿ 61 ರನ್ ಚಚ್ಚಿದ ರಹಾನೆ ವೇಗದ ಅರ್ಧಶತಕ ಕೂಡ ಬಾರಿಸಿದರು. ಡೆವೋನ್ ಕಾನ್ವೆ ಮೊದಲ ಓವರ್​ನಲ್ಲೇ ಔಟಾದ ಪರಿಣಾಮ ಕ್ರೀಸ್​ಗೆ ಬಂದ ರಹಾನೆ ಮನಬಂದಂತೆ ಬ್ಯಾಟ್ ಬೀಸಿದರು.

2 / 8
ಮುಂಬೈ ಬೌಲರ್​ಗಳ ಬೆವರಿಳಿಸಿದ ರಹಾನೆ 7.6 ಓವರ್​ನಲ್ಲಿ ತಂಡದ ಮೊತ್ತವನ್ನು 82ಕ್ಕೆ ತಂದಿಟ್ಟರು. ಈ ಮೂಲಕ ತನ್ನ ವೃತ್ತಿ ಜೀವನ ಮುಗಿಯಿತು ಎಂದವರಿಗೆ ಸ್ಫೋಟಕ ಬ್ಯಾಟಿಂಗ್ ನಡೆಸಿ ತಕ್ಕ ಉತ್ತರ ಕೊಟ್ಟಿದ್ದಾರೆ.

ಮುಂಬೈ ಬೌಲರ್​ಗಳ ಬೆವರಿಳಿಸಿದ ರಹಾನೆ 7.6 ಓವರ್​ನಲ್ಲಿ ತಂಡದ ಮೊತ್ತವನ್ನು 82ಕ್ಕೆ ತಂದಿಟ್ಟರು. ಈ ಮೂಲಕ ತನ್ನ ವೃತ್ತಿ ಜೀವನ ಮುಗಿಯಿತು ಎಂದವರಿಗೆ ಸ್ಫೋಟಕ ಬ್ಯಾಟಿಂಗ್ ನಡೆಸಿ ತಕ್ಕ ಉತ್ತರ ಕೊಟ್ಟಿದ್ದಾರೆ.

3 / 8
ರಹಾನೆ ನಿರ್ಗಮನದ ಬಳಿಕ ಕ್ರೀಸ್​ಗೆ ಬಂದ ಶಿವಂ ದುಬೆ 26 ಎಸೆತಗಳಲ್ಲಿ 28 ರನ್ ಗಳಿಸಿದರು. ತಂಡವನ್ನು ಗೆಲುವಿನ ದಡ ಸೇರಿಸಿದ ರುತುರಾಜ್ ಗಾಯಕ್ವಾಡ್ ಅಜೇಯ 40 ರನ್ ಗಳಿಸಿದರೆ ಅಂಬಟಿ ರಾಯುಡು ಅಜೇಯ 20 ರನ್ ಬಾರಿಸಿದರು.

ರಹಾನೆ ನಿರ್ಗಮನದ ಬಳಿಕ ಕ್ರೀಸ್​ಗೆ ಬಂದ ಶಿವಂ ದುಬೆ 26 ಎಸೆತಗಳಲ್ಲಿ 28 ರನ್ ಗಳಿಸಿದರು. ತಂಡವನ್ನು ಗೆಲುವಿನ ದಡ ಸೇರಿಸಿದ ರುತುರಾಜ್ ಗಾಯಕ್ವಾಡ್ ಅಜೇಯ 40 ರನ್ ಗಳಿಸಿದರೆ ಅಂಬಟಿ ರಾಯುಡು ಅಜೇಯ 20 ರನ್ ಬಾರಿಸಿದರು.

4 / 8
ಸಿಎಸ್​​ಕೆ 18.1 ಓವರ್​ಗಳಲ್ಲಿ 3 ವಿಕೆಟ್ ನಷ್ಟಕ್ಕೆ 159 ರನ್ ಸಿಡಿಸಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ಈ ಮೂಲಕ ಚೆನ್ನೈ ಆಡಿದ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಗೆಲುವು ಸಾಧಿಸಿ 4 ಅಂಕದೊಂದಿಗೆ ಪಾಯಿಂಟ್ ಟೇಬಲ್​ನಲ್ಲಿ ನಾಲ್ಕನೇ ಸ್ಥಾನಕ್ಕೇರಿದೆ.

ಸಿಎಸ್​​ಕೆ 18.1 ಓವರ್​ಗಳಲ್ಲಿ 3 ವಿಕೆಟ್ ನಷ್ಟಕ್ಕೆ 159 ರನ್ ಸಿಡಿಸಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ಈ ಮೂಲಕ ಚೆನ್ನೈ ಆಡಿದ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಗೆಲುವು ಸಾಧಿಸಿ 4 ಅಂಕದೊಂದಿಗೆ ಪಾಯಿಂಟ್ ಟೇಬಲ್​ನಲ್ಲಿ ನಾಲ್ಕನೇ ಸ್ಥಾನಕ್ಕೇರಿದೆ.

5 / 8
ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ ಮುಂಬೈ ತಂಡವು 20 ಓವರ್‌ಗಳಲ್ಲಿ 8 ವಿಕೆಟ್‌ಗಳಿಗೆ 157 ರನ್ ಗಳಿಸಿತು. ನಾಯಕ ರೋಹಿತ್ ಶರ್ಮಾ (21 ರನ್) ಹಾಗೂ ಇಶಾನ್ ಕಿಶನ್ (32 ರನ್) ಉತ್ತಮ ಆರಂಭ ನೀಡಿದರು. ಆದರೆ, ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳು ಸಂಪೂರ್ಣ ವೈಫಲ್ಯ ಅನುಭವಿಸಿದರು.

ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ ಮುಂಬೈ ತಂಡವು 20 ಓವರ್‌ಗಳಲ್ಲಿ 8 ವಿಕೆಟ್‌ಗಳಿಗೆ 157 ರನ್ ಗಳಿಸಿತು. ನಾಯಕ ರೋಹಿತ್ ಶರ್ಮಾ (21 ರನ್) ಹಾಗೂ ಇಶಾನ್ ಕಿಶನ್ (32 ರನ್) ಉತ್ತಮ ಆರಂಭ ನೀಡಿದರು. ಆದರೆ, ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳು ಸಂಪೂರ್ಣ ವೈಫಲ್ಯ ಅನುಭವಿಸಿದರು.

6 / 8
ಕ್ಯಾಮರಾನ್ ಗ್ರೀನ್ (12) ಹಾಗೂ ತಿಲಕ್ ವರ್ಮಾ (22 ರನ್) ಅವರ ವಿಕೆಟ್ ಜಡೇಜ ಪಡೆದರು. ಸೂರ್ಯಕುಮಾರ್ ಯಾದವ್ (1) ಕಳಪೆ ಫಾರ್ಮ್ ಈ ಪಂದ್ಯದಲ್ಲೂ ಮುಂದುವರೆಯಿತು.

ಕ್ಯಾಮರಾನ್ ಗ್ರೀನ್ (12) ಹಾಗೂ ತಿಲಕ್ ವರ್ಮಾ (22 ರನ್) ಅವರ ವಿಕೆಟ್ ಜಡೇಜ ಪಡೆದರು. ಸೂರ್ಯಕುಮಾರ್ ಯಾದವ್ (1) ಕಳಪೆ ಫಾರ್ಮ್ ಈ ಪಂದ್ಯದಲ್ಲೂ ಮುಂದುವರೆಯಿತು.

7 / 8
ಟಿಮ್ ಡೇವಿಡ್ (31 ರನ್) ಹಾಗೂ ಕೊನೆಯಲ್ಲಿ ಮಿಂಚಿದ ಹೃತಿಕ್ ಶೋಕೀನ್ (ಔಟಾಗದೆ 18) ಅವರಿಂದಾಗಿ ಮುಂಬೈ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 157ರನ್ ಗಳಿಸಿತು. ಚೆನ್ನೈ ಪರ ಜಡೇಜಾ 3, ತುಷಾರ್ ದೇಶಪಾಂಡೆ ಹಾಗೂ ಸ್ಯಾಂಟನರ್ ತಲಾ ಎರಡು ವಿಕೆಟ್ ಗಳಿಸಿದರು.

ಟಿಮ್ ಡೇವಿಡ್ (31 ರನ್) ಹಾಗೂ ಕೊನೆಯಲ್ಲಿ ಮಿಂಚಿದ ಹೃತಿಕ್ ಶೋಕೀನ್ (ಔಟಾಗದೆ 18) ಅವರಿಂದಾಗಿ ಮುಂಬೈ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 157ರನ್ ಗಳಿಸಿತು. ಚೆನ್ನೈ ಪರ ಜಡೇಜಾ 3, ತುಷಾರ್ ದೇಶಪಾಂಡೆ ಹಾಗೂ ಸ್ಯಾಂಟನರ್ ತಲಾ ಎರಡು ವಿಕೆಟ್ ಗಳಿಸಿದರು.

8 / 8
Follow us
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್