AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: 5 ಭರ್ಜರಿ ಸಿಕ್ಸ್, 6 ಫೋರ್: ರಹಾನೆ ಸಿಡಿಲಬ್ಬರಕ್ಕೆ ಕಂಗಾಲಾದ KKR

IPL 2023 Kannada: ಒಂದೆಡೆ ಕಾನ್ವೆ ಅಬ್ಬರ ಶುರು ಮಾಡುತ್ತಿದ್ದಂತೆ, ಮತ್ತೊಂದೆಡೆ ರಹಾನೆ ಸಿಡಿಲಬ್ಬರದ ಆರಂಭಿಸಿದ್ದರು. ಇತ್ತ ಇವರಿಬ್ಬರ ಬಿರುಸಿನ ಬ್ಯಾಟಿಂಗ್ ನಡುವೆ ಕೆಕೆಆರ್ ಬೌಲರ್​ಗಳು ಪರದಾಡಿದರು.

TV9 Web
| Edited By: |

Updated on: Apr 23, 2023 | 10:53 PM

Share
IPL 2023: ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಸಿಎಸ್​ಕೆ ಬ್ಯಾಟರ್ ಅಜಿಂಕ್ಯ ರಹಾನೆ ಅಕ್ಷರಶಃ ಅಬ್ಬರಿಸಿದ್ದಾರೆ. ಅದು ಅಂತಿಂಥ ಅಬ್ಬರವಲ್ಲ..ಸಿಡಿಲಬ್ಬರ..!

IPL 2023: ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಸಿಎಸ್​ಕೆ ಬ್ಯಾಟರ್ ಅಜಿಂಕ್ಯ ರಹಾನೆ ಅಕ್ಷರಶಃ ಅಬ್ಬರಿಸಿದ್ದಾರೆ. ಅದು ಅಂತಿಂಥ ಅಬ್ಬರವಲ್ಲ..ಸಿಡಿಲಬ್ಬರ..!

1 / 8
ಹೌದು, ಈ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ನಾಯಕ ನಿತೀಶ್ ರಾಣಾ ಬೌಲಿಂಗ್ ಆಯ್ದುಕೊಂಡಿದ್ದರು. ಆದರೆ ಸಿಎಸ್​ಕೆ ಪರ ಆರಂಭಿಕರಾಗಿ ಕಣಕ್ಕಿಳಿದ ರುತುರಾಜ್ ಗಾಯಕ್ವಾಡ್ ಹಾಗೂ ಡೆವೊನ್ ಕಾನ್ವೆ ಕೆಕೆಆರ್ ತಂಡದ ಲೆಕ್ಕಚಾರಗಳನ್ನು ಆರಂಭದಲ್ಲೇ ತಲೆಕೆಳಗಾಗಿಸಿದರು.

ಹೌದು, ಈ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ನಾಯಕ ನಿತೀಶ್ ರಾಣಾ ಬೌಲಿಂಗ್ ಆಯ್ದುಕೊಂಡಿದ್ದರು. ಆದರೆ ಸಿಎಸ್​ಕೆ ಪರ ಆರಂಭಿಕರಾಗಿ ಕಣಕ್ಕಿಳಿದ ರುತುರಾಜ್ ಗಾಯಕ್ವಾಡ್ ಹಾಗೂ ಡೆವೊನ್ ಕಾನ್ವೆ ಕೆಕೆಆರ್ ತಂಡದ ಲೆಕ್ಕಚಾರಗಳನ್ನು ಆರಂಭದಲ್ಲೇ ತಲೆಕೆಳಗಾಗಿಸಿದರು.

2 / 8
ಆರಂಭದಿಂದಲೇ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿದ ರುತುರಾಜ್ ಗಾಯಕ್ವಾಡ್ 20 ಎಸೆತಗಳಲ್ಲಿ 35 ರನ್ ಬಾರಿಸಿ ಔಟಾದರು. ಆದರೆ ಅದಕ್ಕೂ ಮುನ್ನ ಕಾನ್ವೆ ಜೊತೆ 7.2 ಓವರ್​ಗಳಲ್ಲಿ 73 ರನ್​ಗಳ ಜೊತೆಯಾಟವಾಡಿದ್ದರು. ಇದಾದ ಬಳಿಕ ಕಾನ್ವೆ ಹಾಗೂ ಅಜಿಂಕ್ಯ ರಹಾನೆ ಜೊತೆಯಾದರು.

ಆರಂಭದಿಂದಲೇ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿದ ರುತುರಾಜ್ ಗಾಯಕ್ವಾಡ್ 20 ಎಸೆತಗಳಲ್ಲಿ 35 ರನ್ ಬಾರಿಸಿ ಔಟಾದರು. ಆದರೆ ಅದಕ್ಕೂ ಮುನ್ನ ಕಾನ್ವೆ ಜೊತೆ 7.2 ಓವರ್​ಗಳಲ್ಲಿ 73 ರನ್​ಗಳ ಜೊತೆಯಾಟವಾಡಿದ್ದರು. ಇದಾದ ಬಳಿಕ ಕಾನ್ವೆ ಹಾಗೂ ಅಜಿಂಕ್ಯ ರಹಾನೆ ಜೊತೆಯಾದರು.

3 / 8
ಒಂದೆಡೆ ಕಾನ್ವೆ ಅಬ್ಬರ ಶುರು ಮಾಡುತ್ತಿದ್ದಂತೆ, ಮತ್ತೊಂದೆಡೆ ರಹಾನೆ ಸಿಡಿಲಬ್ಬರದ ಆರಂಭಿಸಿದ್ದರು. ಇತ್ತ ಇವರಿಬ್ಬರ ಬಿರುಸಿನ ಬ್ಯಾಟಿಂಗ್ ನಡುವೆ ಕೆಕೆಆರ್ ಬೌಲರ್​ಗಳು ಪರದಾಡಿದರು. ಇದರ ನಡುವೆ 40 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 4 ಫೋರ್​ನೊಂದಿಗೆ 56 ರನ್ ಬಾರಿಸಿ ಕಾನ್ವೆ ಔಟಾದರು.

ಒಂದೆಡೆ ಕಾನ್ವೆ ಅಬ್ಬರ ಶುರು ಮಾಡುತ್ತಿದ್ದಂತೆ, ಮತ್ತೊಂದೆಡೆ ರಹಾನೆ ಸಿಡಿಲಬ್ಬರದ ಆರಂಭಿಸಿದ್ದರು. ಇತ್ತ ಇವರಿಬ್ಬರ ಬಿರುಸಿನ ಬ್ಯಾಟಿಂಗ್ ನಡುವೆ ಕೆಕೆಆರ್ ಬೌಲರ್​ಗಳು ಪರದಾಡಿದರು. ಇದರ ನಡುವೆ 40 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 4 ಫೋರ್​ನೊಂದಿಗೆ 56 ರನ್ ಬಾರಿಸಿ ಕಾನ್ವೆ ಔಟಾದರು.

4 / 8
ಆದರೆ ಮತ್ತೊಂದೆಡೆ ಅದಾಗಲೇ ಬಿರುಗಾಳಿ ಬ್ಯಾಟಿಂಗ್​ಗೆ ಒತ್ತು ನೀಡಿದ್ದ ರಹಾನೆ ಕೆಕೆಆರ್ ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ ಕೇವಲ 24 ಎಸೆತಗಳಲ್ಲಿ ಅಜಿಂಕ್ಯ ರಹಾನೆ ಬ್ಯಾಟ್​ನಿಂದ ಅರ್ಧಶತಕ ಮೂಡಿಬಂತು.

ಆದರೆ ಮತ್ತೊಂದೆಡೆ ಅದಾಗಲೇ ಬಿರುಗಾಳಿ ಬ್ಯಾಟಿಂಗ್​ಗೆ ಒತ್ತು ನೀಡಿದ್ದ ರಹಾನೆ ಕೆಕೆಆರ್ ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ ಕೇವಲ 24 ಎಸೆತಗಳಲ್ಲಿ ಅಜಿಂಕ್ಯ ರಹಾನೆ ಬ್ಯಾಟ್​ನಿಂದ ಅರ್ಧಶತಕ ಮೂಡಿಬಂತು.

5 / 8
ಮತ್ತೊಂದೆಡೆ ರಹಾನೆಗೆ ಉತ್ತಮ ಸಾಥ್ ನೀಡಿದ ಶಿವಂ ದುಬೆ ಕೂಡ ಅಬ್ಬರಿಸಲಾರಂಭಿಸಿದರು. ಕೆಕೆಆರ್​ ಬೌಲರ್​ಗಳನ್ನು ಮನಸ್ಸೊ ಇಚ್ಛೆ ದಂಡಿಸಿದ ದುಬೆ ಕೇವಲ 20 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್​ನೊಂದಿಗೆ ಅರ್ಧಶತಕ ಪೂರೈಸಿ ವಿಕೆಟ್ ಒಪ್ಪಿಸಿದರು.

ಮತ್ತೊಂದೆಡೆ ರಹಾನೆಗೆ ಉತ್ತಮ ಸಾಥ್ ನೀಡಿದ ಶಿವಂ ದುಬೆ ಕೂಡ ಅಬ್ಬರಿಸಲಾರಂಭಿಸಿದರು. ಕೆಕೆಆರ್​ ಬೌಲರ್​ಗಳನ್ನು ಮನಸ್ಸೊ ಇಚ್ಛೆ ದಂಡಿಸಿದ ದುಬೆ ಕೇವಲ 20 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್​ನೊಂದಿಗೆ ಅರ್ಧಶತಕ ಪೂರೈಸಿ ವಿಕೆಟ್ ಒಪ್ಪಿಸಿದರು.

6 / 8
ಇದಾಗ್ಯೂ ಅಜಿಂಕ್ಯ ರಹಾನೆ ಅಬ್ಬರ ಮಾತ್ರ ಕಮ್ಮಿಯಾಗಿರಲಿಲ್ಲ. ಅರ್ಧಶತಕದ ಬಳಿಕ ಬೀಸ್ಟ್ ಮೋಡ್​ನಲ್ಲಿ ಕಾಣಿಸಿಕೊಂಡ ರಹಾನೆ ತೂಫಾನ್ ಬ್ಯಾಟಿಂಗ್ ಮುಂದುವರೆಸಿದರು. ಕೊನೆಯವರೆಗೂ ಕ್ರೀಸ್​ ಕಚ್ಚಿ ನಿಂತು ಆಡಿದ ಅಜಿಂಕ್ಯ ರಹಾನೆ 29 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 6 ಫೋರ್​ನೊಂದಿಗೆ ಅಜೇಯ 71 ರನ್ ಬಾರಿಸಿದರು. ಪರಿಣಾಮ 20 ಓವರ್​ಗಳಲ್ಲಿ ಸಿಎಸ್​ಕೆ ತಂಡದ ಮೊತ್ತ 4 ವಿಕೆಟ್​ ನಷ್ಟಕ್ಕೆ 235 ಕ್ಕೆ ಬಂದು ನಿಂತಿತು.

ಇದಾಗ್ಯೂ ಅಜಿಂಕ್ಯ ರಹಾನೆ ಅಬ್ಬರ ಮಾತ್ರ ಕಮ್ಮಿಯಾಗಿರಲಿಲ್ಲ. ಅರ್ಧಶತಕದ ಬಳಿಕ ಬೀಸ್ಟ್ ಮೋಡ್​ನಲ್ಲಿ ಕಾಣಿಸಿಕೊಂಡ ರಹಾನೆ ತೂಫಾನ್ ಬ್ಯಾಟಿಂಗ್ ಮುಂದುವರೆಸಿದರು. ಕೊನೆಯವರೆಗೂ ಕ್ರೀಸ್​ ಕಚ್ಚಿ ನಿಂತು ಆಡಿದ ಅಜಿಂಕ್ಯ ರಹಾನೆ 29 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 6 ಫೋರ್​ನೊಂದಿಗೆ ಅಜೇಯ 71 ರನ್ ಬಾರಿಸಿದರು. ಪರಿಣಾಮ 20 ಓವರ್​ಗಳಲ್ಲಿ ಸಿಎಸ್​ಕೆ ತಂಡದ ಮೊತ್ತ 4 ವಿಕೆಟ್​ ನಷ್ಟಕ್ಕೆ 235 ಕ್ಕೆ ಬಂದು ನಿಂತಿತು.

7 / 8
ಒಟ್ಟಿನಲ್ಲಿ ತನ್ನನ್ನು ಟೆಸ್ಟ್ ಕ್ರಿಕೆಟಿಗ ಎಂದು ಬಣ್ಣಿಸುತ್ತಿದ್ದವರಿಗೆ ಈ ಬಾರಿಯ ಐಪಿಎಲ್​ ಮೂಲಕ ಅಜಿಂಕ್ಯ ರಹಾನೆ ಉತ್ತರ ನೀಡುತ್ತಿದ್ದಾರೆ. ಇದಕ್ಕೆ ಸಾಕ್ಷಿಯೇ ಈ ಬಾರಿ ಮುಂಬೈ ಇಂಡಿಯನ್ಸ್ ವಿರುದ್ಧ ಕೇವಲ 19 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದು, ಇದೀಗ 29 ಎಸೆತಗಳಲ್ಲಿ 71 ರನ್ ಚಚ್ಚಿರುವುದು.

ಒಟ್ಟಿನಲ್ಲಿ ತನ್ನನ್ನು ಟೆಸ್ಟ್ ಕ್ರಿಕೆಟಿಗ ಎಂದು ಬಣ್ಣಿಸುತ್ತಿದ್ದವರಿಗೆ ಈ ಬಾರಿಯ ಐಪಿಎಲ್​ ಮೂಲಕ ಅಜಿಂಕ್ಯ ರಹಾನೆ ಉತ್ತರ ನೀಡುತ್ತಿದ್ದಾರೆ. ಇದಕ್ಕೆ ಸಾಕ್ಷಿಯೇ ಈ ಬಾರಿ ಮುಂಬೈ ಇಂಡಿಯನ್ಸ್ ವಿರುದ್ಧ ಕೇವಲ 19 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದು, ಇದೀಗ 29 ಎಸೆತಗಳಲ್ಲಿ 71 ರನ್ ಚಚ್ಚಿರುವುದು.

8 / 8
Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ