AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಆರ್​ಸಿಬಿ ಆಟಗಾರ ಟೀಂ ಇಂಡಿಯಾಕ್ಕೆ ಹೊಸ ಮುಖ್ಯ ಆಯ್ಕೆದಾರ

ಟೀಂ ಇಂಡಿಯಾ ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಅವರ ಮೂರು ವರ್ಷಗಳ ಅಧಿಕಾರಾವಧಿ ಮುಕ್ತಾಯಗೊಳ್ಳುತ್ತಿದ್ದು, ಅವರು ಹುದ್ದೆಯಲ್ಲಿ ಮುಂದುವರೆಯದಿರಲು ನಿರ್ಧರಿಸಿದ್ದಾರೆ. ಬಿಸಿಸಿಐ ಇದೀಗ ಹೊಸ ಮುಖ್ಯ ಆಯ್ಕೆದಾರರ ಹುಡುಕಾಟದಲ್ಲಿದ್ದು, ಮಾಜಿ ವಿಕೆಟ್‌ಕೀಪರ್ ಪಾರ್ಥಿವ್ ಪಟೇಲ್ ಪ್ರಬಲ ಸಂಭಾವ್ಯ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದಾರೆ. ಪಟೇಲ್ ಅವರ ವ್ಯಾಪಕ ಕ್ರಿಕೆಟ್ ಅನುಭವ ಮತ್ತು ಆಯ್ಕೆ ಮಾನದಂಡಗಳನ್ನು ಪೂರೈಸುವ ಅರ್ಹತೆಗಳು ಅವರನ್ನು ಈ ಸ್ಥಾನಕ್ಕೆ ಸೂಕ್ತವಾಗಿಸುತ್ತಿವೆ.

ಪೃಥ್ವಿಶಂಕರ
|

Updated on: Sep 19, 2026 | 2:44 PM

Share
ಟೀಂ ಇಂಡಿಯಾದ ಮುಖ್ಯ ಆಯ್ಕೆದಾರರಾಗಿ ಮಾಜಿ ವೇಗಿ ಅಜಿತ್ ಅಗರ್ಕರ್ ಅವರ ಮೂರು ವರ್ಷಗಳ ಯಶಸ್ವಿ ಅಧಿಕಾರಾವಧಿ ಕೊನೆಗೊಳ್ಳುತ್ತಿದೆ. ವರದಿಗಳ ಪ್ರಕಾರ, ಅಕ್ಟೋಬರ್ 4 ರಂದು ತಮ್ಮ ಅವಧಿ ಮುಗಿದ ನಂತರ ಆ ಸ್ಥಾನದಲ್ಲಿ ಮುಂದುವರಿಯಲು ಬಯಸುವುದಿಲ್ಲ ಎಂದು ಅಗರ್ಕರ್ ಬಿಸಿಸಿಐ ಔಪಚಾರಿಕವಾಗಿ ತಿಳಿಸಿದ್ದಾರೆ. ಹೀಗಾಗಿ ಅಗರ್ಕರ್ ಬದಲಿಗೆ ಹೊಸ ಮುಖ್ಯ ಆಯ್ಕೆದಾರರನ್ನು ಬಿಸಿಸಿಐ ಈಗಾಗಲೇ ಹುಡುಕಿದೆ ಎಂದು ವರದಿಯಾಗಿದೆ(PC-PTI).

ಟೀಂ ಇಂಡಿಯಾದ ಮುಖ್ಯ ಆಯ್ಕೆದಾರರಾಗಿ ಮಾಜಿ ವೇಗಿ ಅಜಿತ್ ಅಗರ್ಕರ್ ಅವರ ಮೂರು ವರ್ಷಗಳ ಯಶಸ್ವಿ ಅಧಿಕಾರಾವಧಿ ಕೊನೆಗೊಳ್ಳುತ್ತಿದೆ. ವರದಿಗಳ ಪ್ರಕಾರ, ಅಕ್ಟೋಬರ್ 4 ರಂದು ತಮ್ಮ ಅವಧಿ ಮುಗಿದ ನಂತರ ಆ ಸ್ಥಾನದಲ್ಲಿ ಮುಂದುವರಿಯಲು ಬಯಸುವುದಿಲ್ಲ ಎಂದು ಅಗರ್ಕರ್ ಬಿಸಿಸಿಐ ಔಪಚಾರಿಕವಾಗಿ ತಿಳಿಸಿದ್ದಾರೆ. ಹೀಗಾಗಿ ಅಗರ್ಕರ್ ಬದಲಿಗೆ ಹೊಸ ಮುಖ್ಯ ಆಯ್ಕೆದಾರರನ್ನು ಬಿಸಿಸಿಐ ಈಗಾಗಲೇ ಹುಡುಕಿದೆ ಎಂದು ವರದಿಯಾಗಿದೆ(PC-PTI).

1 / 5
ಕಳೆದ ಕೆಲವು ತಿಂಗಳುಗಳಿಂದ ಅಜಿತ್ ಅಗರ್ಕರ್ ಅವರ ಹುದ್ದೆಯ ಬಗ್ಗೆ ವದಂತಿಗಳು ಕೇಳಿಬರುತ್ತಲೇ ಇದ್ದವು. ಮುಂದಿನ ವರ್ಷ ನಡೆಯಲಿರುವ ಏಕದಿನ ವಿಶ್ವಕಪ್​ವರೆಗೂ ಅಗರ್ಕರ್ ತಮ್ಮ ಹುದ್ದೆಯಲ್ಲಿ ಮುಂದುವರೆಯಲಿದ್ದಾರೆ ಎಂದು ವರದಿಯಾಗಿತ್ತು. ಆದರೀಗ ಕೇಳಿಬಂದಿರುವ ಮಾಹಿತಿ ಪ್ರಕಾರ, ಸ್ವತಃ ಅಗರ್ಕರ್ ಅವರೇ ಈ ಹುದ್ದೆಯಲ್ಲಿ ಮುಂದುವರೆಯುವುದಿಲ್ಲ ಎಂದು ಬಿಸಿಸಿಐಗೆ ತಿಳಿಸಿದ್ದಾರೆ(PC-PTI).

ಕಳೆದ ಕೆಲವು ತಿಂಗಳುಗಳಿಂದ ಅಜಿತ್ ಅಗರ್ಕರ್ ಅವರ ಹುದ್ದೆಯ ಬಗ್ಗೆ ವದಂತಿಗಳು ಕೇಳಿಬರುತ್ತಲೇ ಇದ್ದವು. ಮುಂದಿನ ವರ್ಷ ನಡೆಯಲಿರುವ ಏಕದಿನ ವಿಶ್ವಕಪ್​ವರೆಗೂ ಅಗರ್ಕರ್ ತಮ್ಮ ಹುದ್ದೆಯಲ್ಲಿ ಮುಂದುವರೆಯಲಿದ್ದಾರೆ ಎಂದು ವರದಿಯಾಗಿತ್ತು. ಆದರೀಗ ಕೇಳಿಬಂದಿರುವ ಮಾಹಿತಿ ಪ್ರಕಾರ, ಸ್ವತಃ ಅಗರ್ಕರ್ ಅವರೇ ಈ ಹುದ್ದೆಯಲ್ಲಿ ಮುಂದುವರೆಯುವುದಿಲ್ಲ ಎಂದು ಬಿಸಿಸಿಐಗೆ ತಿಳಿಸಿದ್ದಾರೆ(PC-PTI).

2 / 5
ಅಕ್ಟೋಬರ್ ತಿಂಗಳಲ್ಲಿ ಅಗರ್ಕರ್ ತಮ್ಮ ಹುದ್ದೆಯಿಂದ ಕೆಳಗಿಳಿದರೆ ಅವರ ಸ್ಥಾನಕ್ಕೆ ಯಾರು ಆಯ್ಕೆಯಾಗುತ್ತಾರೆ ಎಂಬುದು ಪ್ರಶ್ನೆಯಾಗಿದೆ. ಈ ಸ್ಥಾನಕ್ಕೆ ಮಾಜಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಪಾರ್ಥಿವ್ ಪಟೇಲ್ ಸಂಭಾವ್ಯ ಅಭ್ಯರ್ಥಿಯಾಗಬಹುದು ಎಂದು ಹೇಳಲಾಗುತ್ತಿದೆ. ಅಲ್ಲದೆ ಮಾರ್ಚ್ 2026 ರಿಂದಲೂ ಪಟೇಲ್ ಅವರ ಹೆಸರು ಈ ಹುದ್ದೆಗೆ ಹರಿದಾಡುತ್ತಿದೆ(PC-PTI).

ಅಕ್ಟೋಬರ್ ತಿಂಗಳಲ್ಲಿ ಅಗರ್ಕರ್ ತಮ್ಮ ಹುದ್ದೆಯಿಂದ ಕೆಳಗಿಳಿದರೆ ಅವರ ಸ್ಥಾನಕ್ಕೆ ಯಾರು ಆಯ್ಕೆಯಾಗುತ್ತಾರೆ ಎಂಬುದು ಪ್ರಶ್ನೆಯಾಗಿದೆ. ಈ ಸ್ಥಾನಕ್ಕೆ ಮಾಜಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಪಾರ್ಥಿವ್ ಪಟೇಲ್ ಸಂಭಾವ್ಯ ಅಭ್ಯರ್ಥಿಯಾಗಬಹುದು ಎಂದು ಹೇಳಲಾಗುತ್ತಿದೆ. ಅಲ್ಲದೆ ಮಾರ್ಚ್ 2026 ರಿಂದಲೂ ಪಟೇಲ್ ಅವರ ಹೆಸರು ಈ ಹುದ್ದೆಗೆ ಹರಿದಾಡುತ್ತಿದೆ(PC-PTI).

3 / 5
ಪಟೇಲ್ ಭಾರತೀಯ ಕ್ರಿಕೆಟ್‌ನಲ್ಲಿ ವ್ಯಾಪಕ ಅನುಭವ ಹೊಂದಿದ್ದು, ಟೀಂ ಇಂಡಿಯಾ ಪರ ಹಾಗೂ ಐಪಿಎಲ್‌ನಲ್ಲಿ ಆರ್​​ಸಿಬಿ ಪರ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಆಗಿ ಆಡಿದ್ದಾರೆ. ಅಲ್ಲದೆ ಐದು ವರ್ಷಗಳ ಹಿಂದೆಯೇ ಸಕ್ರಿಯ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದಾರೆ. ಅಲ್ಲದೆ ಆಯ್ಕೆದಾರರ ಸ್ಥಾನಕ್ಕೆ ಬೇಕಿರುವ ಎಲ್ಲಾ ಅರ್ಹತಾ ಮಾನದಂಡಗಳನ್ನು ಪಾರ್ಥಿವ್ ಪಟೇಲ್ ಪೂರೈಸಲು ಶಕ್ತರಾಗಿದ್ದಾರೆ(PC-PTI).

ಪಟೇಲ್ ಭಾರತೀಯ ಕ್ರಿಕೆಟ್‌ನಲ್ಲಿ ವ್ಯಾಪಕ ಅನುಭವ ಹೊಂದಿದ್ದು, ಟೀಂ ಇಂಡಿಯಾ ಪರ ಹಾಗೂ ಐಪಿಎಲ್‌ನಲ್ಲಿ ಆರ್​​ಸಿಬಿ ಪರ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಆಗಿ ಆಡಿದ್ದಾರೆ. ಅಲ್ಲದೆ ಐದು ವರ್ಷಗಳ ಹಿಂದೆಯೇ ಸಕ್ರಿಯ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದಾರೆ. ಅಲ್ಲದೆ ಆಯ್ಕೆದಾರರ ಸ್ಥಾನಕ್ಕೆ ಬೇಕಿರುವ ಎಲ್ಲಾ ಅರ್ಹತಾ ಮಾನದಂಡಗಳನ್ನು ಪಾರ್ಥಿವ್ ಪಟೇಲ್ ಪೂರೈಸಲು ಶಕ್ತರಾಗಿದ್ದಾರೆ(PC-PTI).

4 / 5
ಪ್ರಸ್ತುತ, ಪಾರ್ಥಿವ್ ಐಪಿಎಲ್ ಫ್ರಾಂಚೈಸಿ ಗುಜರಾತ್ ಟೈಟಾನ್ಸ್‌ನ ಸಹಾಯಕ ಕೋಚ್ ಆಗಿದ್ದಾರೆ. ನಾಯಕ ಶುಭ್‌ಮನ್ ಗಿಲ್ ಗುಜರಾತ್ ತಂಡಕ್ಕೂ ಆಡುತ್ತಾರೆ. ಪಾರ್ಥಿವ್ ಕ್ರಿಕೆಟ್ ಕಾಮೆಂಟರಿ ಮತ್ತು ಕೋಚಿಂಗ್‌ನಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಆದಾಗ್ಯೂ, ಪಾರ್ಥಿವ್ ಪಟೇಲ್ ಅವರನ್ನು ಮುಖ್ಯ ಆಯ್ಕೆದಾರರನ್ನಾಗಿ ನೇಮಿಸುವ ಬಗ್ಗೆ ಬಿಸಿಸಿಐನಿಂದ ಯಾವುದೇ ಅಧಿಕೃತ ಘೋಷಣೆ ಬಂದಿಲ್ಲ. ಪ್ರಸ್ತುತ, ಅವರ ಹೆಸರನ್ನು ಸಂಭಾವ್ಯ ಆಯ್ಕೆಯಾಗಿ ಮಾತ್ರ ಚರ್ಚಿಸಲಾಗುತ್ತಿದೆ(PC-PTI).

ಪ್ರಸ್ತುತ, ಪಾರ್ಥಿವ್ ಐಪಿಎಲ್ ಫ್ರಾಂಚೈಸಿ ಗುಜರಾತ್ ಟೈಟಾನ್ಸ್‌ನ ಸಹಾಯಕ ಕೋಚ್ ಆಗಿದ್ದಾರೆ. ನಾಯಕ ಶುಭ್‌ಮನ್ ಗಿಲ್ ಗುಜರಾತ್ ತಂಡಕ್ಕೂ ಆಡುತ್ತಾರೆ. ಪಾರ್ಥಿವ್ ಕ್ರಿಕೆಟ್ ಕಾಮೆಂಟರಿ ಮತ್ತು ಕೋಚಿಂಗ್‌ನಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಆದಾಗ್ಯೂ, ಪಾರ್ಥಿವ್ ಪಟೇಲ್ ಅವರನ್ನು ಮುಖ್ಯ ಆಯ್ಕೆದಾರರನ್ನಾಗಿ ನೇಮಿಸುವ ಬಗ್ಗೆ ಬಿಸಿಸಿಐನಿಂದ ಯಾವುದೇ ಅಧಿಕೃತ ಘೋಷಣೆ ಬಂದಿಲ್ಲ. ಪ್ರಸ್ತುತ, ಅವರ ಹೆಸರನ್ನು ಸಂಭಾವ್ಯ ಆಯ್ಕೆಯಾಗಿ ಮಾತ್ರ ಚರ್ಚಿಸಲಾಗುತ್ತಿದೆ(PC-PTI).

5 / 5
Follow Us
ಭಾರತೀಯ ವಾಯುಪಡೆಗೆ ಹೆಚ್ಎಎಲ್ ನಿರ್ಮಿತ ಯುದ್ಧ ವಿಮಾನಗಳ ಹಸ್ತಾಂತರ
ಭಾರತೀಯ ವಾಯುಪಡೆಗೆ ಹೆಚ್ಎಎಲ್ ನಿರ್ಮಿತ ಯುದ್ಧ ವಿಮಾನಗಳ ಹಸ್ತಾಂತರ
ಅವಕಾಶ ಕೊಟ್ಟ ವೇದಿಕೆಗೆ ಅಗೌರವ; ಕಿಚ್ಚನ ಕ್ಲಾಸ್ ಹೇಗಿದೆ ನೋಡಿ
ಅವಕಾಶ ಕೊಟ್ಟ ವೇದಿಕೆಗೆ ಅಗೌರವ; ಕಿಚ್ಚನ ಕ್ಲಾಸ್ ಹೇಗಿದೆ ನೋಡಿ
ಕೆಪಿಎಸ್​ಸಿ ಹಗರಣ: ಜ್ಞಾನೇಂದ್ರ ಕುಮಾರ್, ಕನ್ನಾಳೆ ಬಂಧಿಸಿದ ಇಡಿ
ಕೆಪಿಎಸ್​ಸಿ ಹಗರಣ: ಜ್ಞಾನೇಂದ್ರ ಕುಮಾರ್, ಕನ್ನಾಳೆ ಬಂಧಿಸಿದ ಇಡಿ
ನಾನು ಈಗ ವೆಜ್​ಟೇರಿಯನ್, ಅಶೋಕಣ್ಣಂಗೆ ಫ್ರೆಶ್ ಮೀನು ಕಳಿಸ್ತೀನಿ: ಡಿಕೆಶಿ
ನಾನು ಈಗ ವೆಜ್​ಟೇರಿಯನ್, ಅಶೋಕಣ್ಣಂಗೆ ಫ್ರೆಶ್ ಮೀನು ಕಳಿಸ್ತೀನಿ: ಡಿಕೆಶಿ
ಬಂದರು ಪ್ರದೇಶದಲ್ಲಿ ಬೋಟ್ ಹತ್ತಿ ಸಮುದ್ರಕ್ಕಿಳಿದೇ ಬಿಟ್ರು ಸಿಎಂ ಡಿಕೆಶಿ
ಬಂದರು ಪ್ರದೇಶದಲ್ಲಿ ಬೋಟ್ ಹತ್ತಿ ಸಮುದ್ರಕ್ಕಿಳಿದೇ ಬಿಟ್ರು ಸಿಎಂ ಡಿಕೆಶಿ
ಸಿಎಂ ಡಿಕೆ ಶಿವಕುಮಾರ್ ಮಂಗಳೂರು ಮೀನುಗಾರಿಕೆ ಬಂದರಿಗೆ ದಿಢೀರ್ ಭೇಟಿ
ಸಿಎಂ ಡಿಕೆ ಶಿವಕುಮಾರ್ ಮಂಗಳೂರು ಮೀನುಗಾರಿಕೆ ಬಂದರಿಗೆ ದಿಢೀರ್ ಭೇಟಿ
ಬೆಂಗಳೂರಿನ ಸುಧಾಮ ನಗರದಲ್ಲಿ ಬೆಂಕಿ ಅವಘಡ: ಸುಟ್ಟು ಕರಕಲಾದ ಕಟ್ಟಡ!
ಬೆಂಗಳೂರಿನ ಸುಧಾಮ ನಗರದಲ್ಲಿ ಬೆಂಕಿ ಅವಘಡ: ಸುಟ್ಟು ಕರಕಲಾದ ಕಟ್ಟಡ!
ಟಿ ನರಸೀಪುರದಲ್ಲಿ ಮಸೀದಿ ಮುಂದೆಯೇ ಗಣೇಶ ಮೆರವಣಿಗೆ, ಪಟಾಕಿ ಸಿಡಿಸಿ ಸಂಭ್ರಮ
ಟಿ ನರಸೀಪುರದಲ್ಲಿ ಮಸೀದಿ ಮುಂದೆಯೇ ಗಣೇಶ ಮೆರವಣಿಗೆ, ಪಟಾಕಿ ಸಿಡಿಸಿ ಸಂಭ್ರಮ
ರವಿ ಕನ್ಯಾ ರಾಶಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ರವಿ ಕನ್ಯಾ ರಾಶಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ಕನ್ನಡಿಗರೇ ನಿರ್ಮಿಸಿದ ದ್ರುವ ಹೆಲಿಕಾಪ್ಟರ್ ಹಸ್ತಾಂತರ:ಭಾರತೀಯ ಸೇನೆಗೆ ಬಲ
ಕನ್ನಡಿಗರೇ ನಿರ್ಮಿಸಿದ ದ್ರುವ ಹೆಲಿಕಾಪ್ಟರ್ ಹಸ್ತಾಂತರ:ಭಾರತೀಯ ಸೇನೆಗೆ ಬಲ