AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ambati Rayudu: ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಮತ್ತೆ ಮುಗ್ಗರಿಸಿದ ಅಂಬಟಿ ರಾಯುಡು

Ambati Rayudu: ಈ ಪಂದ್ಯದಲ್ಲಿ ರಾಯುಡು ಅವರಿಂದ ಉತ್ತಮ ಇನ್ನಿಂಗ್ಸ್ ನಿರೀಕ್ಷಿಸಲಾಗಿತ್ತು. ಆದರೆ ನಿರೀಕ್ಷೆಗೆ ತಕ್ಕಂತೆ ಬ್ಯಾಟ್ ಬೀಸಲು ರಾಯುಡುಗೆ ಸಾಧ್ಯವಾಗಲಿಲ್ಲ. ತಂಡದ ಇನ್ನಿಂಗ್ಸ್ ಸಂಕಷ್ಟದಲ್ಲಿದ್ದಾಗ ಬ್ಯಾಟಿಂಗ್​ಗೆ ಬಂದ ರಾಯುಡು, ಇನ್ನಿಂಗ್ಸ್ ನಿಭಾಯಿಸುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಅವರು ಗುಡ್ಕೇಶ್ ಮೋತಿ ಅವರ ಸ್ಪಿನ್‌ಗೆ ಸಿಲುಕಿ, 24 ಎಸೆತಗಳಲ್ಲಿ ಎರಡು ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 32 ರನ್ ಗಳಿಸಿ ಔಟಾದರು.

ಪೃಥ್ವಿಶಂಕರ
|

Updated on: Aug 27, 2023 | 9:27 AM

Share
ಭಾರತ ಕ್ರಿಕೆಟ್​ಗೆ ವಿದಾಯ ಹೇಳಿದ ಬಳಿಕ ಪ್ರಸ್ತುತ ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಆಡುತ್ತಿರುವ ಅಂಬಟಿ ರಾಯುಡು ತಮ್ಮ ಕಳಪೆ ಪ್ರದರ್ಶನವನ್ನು ಈ ಲೀಗ್​ನಲ್ಲೂ ಮುಂದುವರೆಸಿದ್ದಾರೆ. ಕಳೆದ ಐಪಿಎಲ್​ನಲ್ಲಿ ಚೆನ್ನೈ ಪರ ಆಡಿದ್ದ ರಾಯುಡು ಲೀಗ್​ನ ಕೊನೆಯ ಪಂದ್ಯದಲ್ಲಿ ಮ್ಯಾಚ್ ವಿನ್ನಿಂಗ್ ಇನ್ನಿಂಗ್ಸ್ ಆಡಿ ಗಮನ ಸೆಳೆದಿದ್ದರು.

ಭಾರತ ಕ್ರಿಕೆಟ್​ಗೆ ವಿದಾಯ ಹೇಳಿದ ಬಳಿಕ ಪ್ರಸ್ತುತ ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಆಡುತ್ತಿರುವ ಅಂಬಟಿ ರಾಯುಡು ತಮ್ಮ ಕಳಪೆ ಪ್ರದರ್ಶನವನ್ನು ಈ ಲೀಗ್​ನಲ್ಲೂ ಮುಂದುವರೆಸಿದ್ದಾರೆ. ಕಳೆದ ಐಪಿಎಲ್​ನಲ್ಲಿ ಚೆನ್ನೈ ಪರ ಆಡಿದ್ದ ರಾಯುಡು ಲೀಗ್​ನ ಕೊನೆಯ ಪಂದ್ಯದಲ್ಲಿ ಮ್ಯಾಚ್ ವಿನ್ನಿಂಗ್ ಇನ್ನಿಂಗ್ಸ್ ಆಡಿ ಗಮನ ಸೆಳೆದಿದ್ದರು.

1 / 7
ಚೆನ್ನೈ ತಂಡವನ್ನು ಚಾಂಪಿಯನ್ ಮಾಡಿದ ಐಪಿಎಲ್​ಗೂ ವಿದಾಯ ಹೇಳಿದ್ದ ರಾಯುಡು ರಾಜಕೀಯ ಜೀವನಕ್ಕೆ ಕಾಲಿಡಲಿದ್ದಾರೆ ಎಂದು ಸುದ್ದಿಯಾಗಿತ್ತು. ಈ ನಡುವೆ ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಹೊಸ ಇನ್ನಿಂಗ್ಸ್ ಆರಂಭಿಸಿರುವ ರಾಯುಡುಗೆ ನಿರೀಕ್ಷಿತ ಆರಂಭ ಸಿಕ್ಕಿಲ್ಲ.

ಚೆನ್ನೈ ತಂಡವನ್ನು ಚಾಂಪಿಯನ್ ಮಾಡಿದ ಐಪಿಎಲ್​ಗೂ ವಿದಾಯ ಹೇಳಿದ್ದ ರಾಯುಡು ರಾಜಕೀಯ ಜೀವನಕ್ಕೆ ಕಾಲಿಡಲಿದ್ದಾರೆ ಎಂದು ಸುದ್ದಿಯಾಗಿತ್ತು. ಈ ನಡುವೆ ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಹೊಸ ಇನ್ನಿಂಗ್ಸ್ ಆರಂಭಿಸಿರುವ ರಾಯುಡುಗೆ ನಿರೀಕ್ಷಿತ ಆರಂಭ ಸಿಕ್ಕಿಲ್ಲ.

2 / 7
ಸಿಪಿಎಲ್‌ನಲ್ಲಿ ರಾಯುಡು ಸೇಂಟ್ ಕಿಟ್ಸ್ ಮತ್ತು ನೆವಿಸ್ ಪೇಟ್ರಿಯಾಟ್ಸ್ ಪರ ಆಡುತ್ತಿದ್ದಾರೆ. ಆದರೆ ಅವರ ಬ್ಯಾಟ್ ಇನ್ನೂ ಮಿಂಚಿಲ್ಲ. ಅವರು ಇಲ್ಲಿಯವರೆಗೆ ಮೂರು ಪಂದ್ಯಗಳನ್ನು ಆಡಿದ್ದು ಇದರಲ್ಲಿ ಕೇವಲ 32 ರನ್ ಗಳಿಸಿದ್ದಾರೆ.

ಸಿಪಿಎಲ್‌ನಲ್ಲಿ ರಾಯುಡು ಸೇಂಟ್ ಕಿಟ್ಸ್ ಮತ್ತು ನೆವಿಸ್ ಪೇಟ್ರಿಯಾಟ್ಸ್ ಪರ ಆಡುತ್ತಿದ್ದಾರೆ. ಆದರೆ ಅವರ ಬ್ಯಾಟ್ ಇನ್ನೂ ಮಿಂಚಿಲ್ಲ. ಅವರು ಇಲ್ಲಿಯವರೆಗೆ ಮೂರು ಪಂದ್ಯಗಳನ್ನು ಆಡಿದ್ದು ಇದರಲ್ಲಿ ಕೇವಲ 32 ರನ್ ಗಳಿಸಿದ್ದಾರೆ.

3 / 7
ಸೇಂಟ್ ಕಿಟ್ಸ್ ಮತ್ತು ಅಮೆಜಾನ್ ವಾರಿಯರ್ಸ್ ನಡುವೆ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಮೆಜಾನ್ ವಾರಿಯರ್ಸ್ ಏಳು ವಿಕೆಟ್ ಕಳೆದುಕೊಂಡು 197 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಸೇಂಟ್ ಕಿಟ್ಸ್ ತಂಡ 16.5 ಓವರ್​ಗಳಲ್ಲಿ ಕೇವಲ 132 ರನ್ ಗಳಿಸಲಷ್ಟೇ ಶಕ್ತವಾಯಿತು.

ಸೇಂಟ್ ಕಿಟ್ಸ್ ಮತ್ತು ಅಮೆಜಾನ್ ವಾರಿಯರ್ಸ್ ನಡುವೆ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಮೆಜಾನ್ ವಾರಿಯರ್ಸ್ ಏಳು ವಿಕೆಟ್ ಕಳೆದುಕೊಂಡು 197 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಸೇಂಟ್ ಕಿಟ್ಸ್ ತಂಡ 16.5 ಓವರ್​ಗಳಲ್ಲಿ ಕೇವಲ 132 ರನ್ ಗಳಿಸಲಷ್ಟೇ ಶಕ್ತವಾಯಿತು.

4 / 7
ಈ ಪಂದ್ಯದಲ್ಲಿ ರಾಯುಡು ಅವರಿಂದ ಉತ್ತಮ ಇನ್ನಿಂಗ್ಸ್ ನಿರೀಕ್ಷಿಸಲಾಗಿತ್ತು. ಆದರೆ ನಿರೀಕ್ಷೆಗೆ ತಕ್ಕಂತೆ ಬ್ಯಾಟ್ ಬೀಸಲು ರಾಯುಡುಗೆ ಸಾಧ್ಯವಾಗಲಿಲ್ಲ. ತಂಡದ ಇನ್ನಿಂಗ್ಸ್ ಸಂಕಷ್ಟದಲ್ಲಿದ್ದಾಗ ಬ್ಯಾಟಿಂಗ್​ಗೆ ಬಂದ ರಾಯುಡು, ಇನ್ನಿಂಗ್ಸ್ ನಿಭಾಯಿಸುತ್ತಾರೆ ಎಂದು ನಿರೀಕ್ಷಿಸಲಾಗಿತ್ತು ಆದರೆ ಅವರು ಗುಡ್ಕೇಶ್ ಮೋತಿ ಅವರ ಸ್ಪಿನ್‌ಗೆ ಸಿಲುಕಿ, 24 ಎಸೆತಗಳಲ್ಲಿ ಎರಡು ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 32 ರನ್ ಗಳಿಸಿ ಔಟಾದರು.

ಈ ಪಂದ್ಯದಲ್ಲಿ ರಾಯುಡು ಅವರಿಂದ ಉತ್ತಮ ಇನ್ನಿಂಗ್ಸ್ ನಿರೀಕ್ಷಿಸಲಾಗಿತ್ತು. ಆದರೆ ನಿರೀಕ್ಷೆಗೆ ತಕ್ಕಂತೆ ಬ್ಯಾಟ್ ಬೀಸಲು ರಾಯುಡುಗೆ ಸಾಧ್ಯವಾಗಲಿಲ್ಲ. ತಂಡದ ಇನ್ನಿಂಗ್ಸ್ ಸಂಕಷ್ಟದಲ್ಲಿದ್ದಾಗ ಬ್ಯಾಟಿಂಗ್​ಗೆ ಬಂದ ರಾಯುಡು, ಇನ್ನಿಂಗ್ಸ್ ನಿಭಾಯಿಸುತ್ತಾರೆ ಎಂದು ನಿರೀಕ್ಷಿಸಲಾಗಿತ್ತು ಆದರೆ ಅವರು ಗುಡ್ಕೇಶ್ ಮೋತಿ ಅವರ ಸ್ಪಿನ್‌ಗೆ ಸಿಲುಕಿ, 24 ಎಸೆತಗಳಲ್ಲಿ ಎರಡು ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 32 ರನ್ ಗಳಿಸಿ ಔಟಾದರು.

5 / 7
ಇದಕ್ಕೂ ಮುನ್ನ ಸೇಂಟ್ ಕಿಟ್ಸ್ ತಂಡ, ಜಮೈಕಾ ತಲ್ಲವಾಸ್ ತಂಡವನ್ನು ಎದುರಿಸಿದಾಗ ಆ ಪಂದ್ಯದಲ್ಲೂ ರಾಯುಡು ವಿಫಲರಾಗಿದ್ದರು. ಈ ಪಂದ್ಯದಲ್ಲಿ ಸೇಂಟ್ ಕಿಟ್ಸ್ ತಂಡ ಮೊದಲು ಬ್ಯಾಟ್ ಮಾಡಿತು. ಈ ಪಂದ್ಯದಲ್ಲಿ ರಾಯುಡು ಸಂಪೂರ್ಣ ವಿಫಲರಾಗಿ ಖಾತೆ ತೆರೆಯದೆ ಔಟಾಗಿದ್ದರು.

ಇದಕ್ಕೂ ಮುನ್ನ ಸೇಂಟ್ ಕಿಟ್ಸ್ ತಂಡ, ಜಮೈಕಾ ತಲ್ಲವಾಸ್ ತಂಡವನ್ನು ಎದುರಿಸಿದಾಗ ಆ ಪಂದ್ಯದಲ್ಲೂ ರಾಯುಡು ವಿಫಲರಾಗಿದ್ದರು. ಈ ಪಂದ್ಯದಲ್ಲಿ ಸೇಂಟ್ ಕಿಟ್ಸ್ ತಂಡ ಮೊದಲು ಬ್ಯಾಟ್ ಮಾಡಿತು. ಈ ಪಂದ್ಯದಲ್ಲಿ ರಾಯುಡು ಸಂಪೂರ್ಣ ವಿಫಲರಾಗಿ ಖಾತೆ ತೆರೆಯದೆ ಔಟಾಗಿದ್ದರು.

6 / 7
ಇದಕ್ಕೂ ಮುನ್ನ ಅವರು ಟ್ರಿನ್‌ಬಾಗೊ ನೈಟ್ ರೈಡರ್ಸ್ ವಿರುದ್ಧ ಚೊಚ್ಚಲ ಪಂದ್ಯವನ್ನಾಡಿದ್ದರು. ಆದರೆ ಈ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಅದೇನೆಂದರೆ, ರಾಯುಡು ಇದುವರೆಗೆ ಸಿಪಿಎಲ್‌ನಲ್ಲಿ ಆಡಿರುವ ಮೂರು ಪಂದ್ಯಗಳಲ್ಲಿ ಕೇವಲ 32 ರನ್ ಗಳಿಸಿದ್ದಾರೆ .

ಇದಕ್ಕೂ ಮುನ್ನ ಅವರು ಟ್ರಿನ್‌ಬಾಗೊ ನೈಟ್ ರೈಡರ್ಸ್ ವಿರುದ್ಧ ಚೊಚ್ಚಲ ಪಂದ್ಯವನ್ನಾಡಿದ್ದರು. ಆದರೆ ಈ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಅದೇನೆಂದರೆ, ರಾಯುಡು ಇದುವರೆಗೆ ಸಿಪಿಎಲ್‌ನಲ್ಲಿ ಆಡಿರುವ ಮೂರು ಪಂದ್ಯಗಳಲ್ಲಿ ಕೇವಲ 32 ರನ್ ಗಳಿಸಿದ್ದಾರೆ .

7 / 7
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ