T20 World Cup 2024: ಟಿ20 ವಿಶ್ವಕಪ್​ನಲ್ಲಿ ಸೆಮಿ ಫೈನಲ್​ಗೇರುವ 4 ತಂಡಗಳನ್ನು ಹೆಸರಿಸಿದ ಅಂಬಾಟಿ ರಾಯುಡು

T20 World Cup 2024: ಟಿ20 ವಿಶ್ವಕಪ್​ನ 9ನೇ ಆವೃತ್ತಿ ಜೂನ್ 2 ರಿಂದ ಶುರುವಾಗಲಿದೆ. ಯುಎಸ್​ಎ ಮತ್ತು ವೆಸ್ಟ್ ಇಂಡೀಸ್ ಜಂಟಿಯಾಗಿ ಆಯೋಜಿಸುತ್ತಿರುವ ಈ ಟೂರ್ನಿಯಲ್ಲಿ ಭಾರತ ತಂಡವು ಜೂನ್ 5 ರಂದು ಕಣಕ್ಕಿಳಿಯಲಿದೆ. ಮೊದಲ ಪಂದ್ಯದಲ್ಲಿ ಐರ್ಲೆಂಡ್ ತಂಡವನ್ನು ಎದುರಿಸಿದರೆ, ಜೂನ್ 9 ರಂದು ನಡೆಯಲಿರುವ ತನ್ನ 2ನೇ ಪಂದ್ಯಲ್ಲಿ ಪಾಕಿಸ್ತಾನ್ ವಿರುದ್ಧ ಸೆಣಸಲಿದೆ.

|

Updated on: May 29, 2024 | 11:07 AM

T20 World Cup 2024: ಟಿ20 ವಿಶ್ವಕಪ್ 2024 ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ವೆಸ್ಟ್ ಇಂಡೀಸ್-ಯುಎಸ್​ಎ ಜಂಟಿಯಾಗಿ ಆಯೋಜಿಸಲಿರುವ 9ನೇ ಆವೃತ್ತಿಯಲ್ಲಿ ಈ ಟೂರ್ನಿಯಲ್ಲಿ ಈ ಬಾರಿ 20 ತಂಡಗಳು ಕಣಕ್ಕಿಳಿಯಲಿರುವುದು ವಿಶೇಷ. ಹೀಗಾಗಿ ಮೊದಲ ಸುತ್ತಿನಲ್ಲೇ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

T20 World Cup 2024: ಟಿ20 ವಿಶ್ವಕಪ್ 2024 ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ವೆಸ್ಟ್ ಇಂಡೀಸ್-ಯುಎಸ್​ಎ ಜಂಟಿಯಾಗಿ ಆಯೋಜಿಸಲಿರುವ 9ನೇ ಆವೃತ್ತಿಯಲ್ಲಿ ಈ ಟೂರ್ನಿಯಲ್ಲಿ ಈ ಬಾರಿ 20 ತಂಡಗಳು ಕಣಕ್ಕಿಳಿಯಲಿರುವುದು ವಿಶೇಷ. ಹೀಗಾಗಿ ಮೊದಲ ಸುತ್ತಿನಲ್ಲೇ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

1 / 7
ಈ ಪೈಪೋಟಿ ನಡುವೆ ಎಲ್ಲಾ ಸವಾಲುಗಳನ್ನು ಮೆಟ್ಟಿ ನಿಲ್ಲುವ ತಂಡ ಸೂಪರ್-8 ಹಂತಕ್ಕೇರಲಿದೆ. ಈ ಹಂತದಲ್ಲಿ ಎಂಟು ತಂಡಗಳು ಸೆಣಸಲಿದ್ದು, ಇದರಲ್ಲಿ ಗೆದ್ದು ಸೆಮಿಫೈನಲ್​ಗೇರುವ ನಾಲ್ಕು ತಂಡಗಳನ್ನು ಹೆಸರಿಸಿದ್ದಾರೆ ಟೀಮ್ ಇಂಡಿಯಾದ ಮಾಜಿ ಆಟಗಾರ ಅಂಬಾಟಿ ರಾಯುಡು.

ಈ ಪೈಪೋಟಿ ನಡುವೆ ಎಲ್ಲಾ ಸವಾಲುಗಳನ್ನು ಮೆಟ್ಟಿ ನಿಲ್ಲುವ ತಂಡ ಸೂಪರ್-8 ಹಂತಕ್ಕೇರಲಿದೆ. ಈ ಹಂತದಲ್ಲಿ ಎಂಟು ತಂಡಗಳು ಸೆಣಸಲಿದ್ದು, ಇದರಲ್ಲಿ ಗೆದ್ದು ಸೆಮಿಫೈನಲ್​ಗೇರುವ ನಾಲ್ಕು ತಂಡಗಳನ್ನು ಹೆಸರಿಸಿದ್ದಾರೆ ಟೀಮ್ ಇಂಡಿಯಾದ ಮಾಜಿ ಆಟಗಾರ ಅಂಬಾಟಿ ರಾಯುಡು.

2 / 7
ಅಂಬಾಟಿ ರಾಯುಡು ಪ್ರಕಾರ, ಈ ಬಾರಿ ಟೀಮ್ ಇಂಡಿಯಾ ಸೆಮಿಫೈನಲ್​ಗೇರುವುದು ಖಚಿತ. ಭಾರತೀಯ ಆಟಗಾರರು ಇತ್ತೀಚೆಗೆ ಐಪಿಎಲ್​ ಆಡಿರುವುದರಿಂದ ಎಲ್ಲರೂ ಉತ್ತಮ ಫಾರ್ಮ್​ನಲ್ಲಿದ್ದಾರೆ. ಹೀಗಾಗಿ ರೋಹಿತ್ ಶರ್ಮಾ ಪಡೆ ಸೆಮಿಫೈನಲ್​ಗೆ​ ಪ್ರವೇಶಿಸುವುದು ಖಚಿತ ಎಂದಿದ್ದಾರೆ.

ಅಂಬಾಟಿ ರಾಯುಡು ಪ್ರಕಾರ, ಈ ಬಾರಿ ಟೀಮ್ ಇಂಡಿಯಾ ಸೆಮಿಫೈನಲ್​ಗೇರುವುದು ಖಚಿತ. ಭಾರತೀಯ ಆಟಗಾರರು ಇತ್ತೀಚೆಗೆ ಐಪಿಎಲ್​ ಆಡಿರುವುದರಿಂದ ಎಲ್ಲರೂ ಉತ್ತಮ ಫಾರ್ಮ್​ನಲ್ಲಿದ್ದಾರೆ. ಹೀಗಾಗಿ ರೋಹಿತ್ ಶರ್ಮಾ ಪಡೆ ಸೆಮಿಫೈನಲ್​ಗೆ​ ಪ್ರವೇಶಿಸುವುದು ಖಚಿತ ಎಂದಿದ್ದಾರೆ.

3 / 7
ಇನ್ನು ಇಂಗ್ಲೆಂಡ್ ತಂಡ ಕೂಡ ಬಲಿಷ್ಠವಾಗಿದೆ. ತಂಡದಲ್ಲಿರುವ ಜೋಸ್ ಬಟ್ಲರ್, ಫಿಲ್ ಸಾಲ್ಟ್, ವಿಲ್ ಜಾಕ್ಸ್ ಸೇರಿದಂತೆ ಪ್ರಮುಖರು ಉತ್ತಮ ಲಯದಲ್ಲಿದ್ದಾರೆ. ಹೀಗಾಗಿ ಇಂಗ್ಲೆಂಡ್ ತಂಡವನ್ನು ಕೂಡ ಸೆಮಿಫೈನಲ್​ನಲ್ಲಿ ನಿರೀಕ್ಷಿಸಬಹುದು ಎಂದು ಅಂಬಾಟಿ ರಾಹುಡು ತಿಳಿಸಿದ್ದಾರೆ.

ಇನ್ನು ಇಂಗ್ಲೆಂಡ್ ತಂಡ ಕೂಡ ಬಲಿಷ್ಠವಾಗಿದೆ. ತಂಡದಲ್ಲಿರುವ ಜೋಸ್ ಬಟ್ಲರ್, ಫಿಲ್ ಸಾಲ್ಟ್, ವಿಲ್ ಜಾಕ್ಸ್ ಸೇರಿದಂತೆ ಪ್ರಮುಖರು ಉತ್ತಮ ಲಯದಲ್ಲಿದ್ದಾರೆ. ಹೀಗಾಗಿ ಇಂಗ್ಲೆಂಡ್ ತಂಡವನ್ನು ಕೂಡ ಸೆಮಿಫೈನಲ್​ನಲ್ಲಿ ನಿರೀಕ್ಷಿಸಬಹುದು ಎಂದು ಅಂಬಾಟಿ ರಾಹುಡು ತಿಳಿಸಿದ್ದಾರೆ.

4 / 7
ಹಾಗೆಯೇ ಕೇನ್ ವಿಲಿಯಮ್ಸನ್ ಮುಂದಾಳತ್ವದ ನ್ಯೂಝಿಲೆಂಡ್ ತಂಡವನ್ನು ಸೆಮಿಫೈನಲ್​ನಲ್ಲಿ ಎದುರು ನೋಡಬಹುದು. ಏಕೆಂದರೆ ಐಸಿಸಿ ಟೂರ್ನಿಗಳಲ್ಲಿ ಕಿವೀಸ್ ಪಡೆ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದೆ. ಹೀಗಾಗಿ ನ್ಯೂಝಿಲೆಂಡ್ ಕೂಡ ಸೆಮಿಫೈನಲ್ ಹಂತಕ್ಕೇರಲಿದೆ ಎಂದು ರಾಯುಡು ಅಭಿಪ್ರಾಯಪಟ್ಟಿದ್ದಾರೆ.

ಹಾಗೆಯೇ ಕೇನ್ ವಿಲಿಯಮ್ಸನ್ ಮುಂದಾಳತ್ವದ ನ್ಯೂಝಿಲೆಂಡ್ ತಂಡವನ್ನು ಸೆಮಿಫೈನಲ್​ನಲ್ಲಿ ಎದುರು ನೋಡಬಹುದು. ಏಕೆಂದರೆ ಐಸಿಸಿ ಟೂರ್ನಿಗಳಲ್ಲಿ ಕಿವೀಸ್ ಪಡೆ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದೆ. ಹೀಗಾಗಿ ನ್ಯೂಝಿಲೆಂಡ್ ಕೂಡ ಸೆಮಿಫೈನಲ್ ಹಂತಕ್ಕೇರಲಿದೆ ಎಂದು ರಾಯುಡು ಅಭಿಪ್ರಾಯಪಟ್ಟಿದ್ದಾರೆ.

5 / 7
ಇನ್ನು ಸೌತ್ ಆಫ್ರಿಕಾ ತಂಡದಲ್ಲಿ ಬಲಿಷ್ಠ ದಾಂಡಿಗರ ದಂಡೇ ಇದ್ದು, ಅವರಲ್ಲಿ ಬಹುತೇಕರು ಉತ್ತಮ ಫಾರ್ಮ್​ನಲ್ಲಿದ್ದಾರೆ. ಹೀಗಾಗಿ ಸೌತ್ ಆಫ್ರಿಕಾ ತಂಡ ಕೂಡ ಈ ಬಾರಿ ಫೈನಲ್​ಗೆ ಪ್ರವೇಶಿಸಲಿದೆ ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.

ಇನ್ನು ಸೌತ್ ಆಫ್ರಿಕಾ ತಂಡದಲ್ಲಿ ಬಲಿಷ್ಠ ದಾಂಡಿಗರ ದಂಡೇ ಇದ್ದು, ಅವರಲ್ಲಿ ಬಹುತೇಕರು ಉತ್ತಮ ಫಾರ್ಮ್​ನಲ್ಲಿದ್ದಾರೆ. ಹೀಗಾಗಿ ಸೌತ್ ಆಫ್ರಿಕಾ ತಂಡ ಕೂಡ ಈ ಬಾರಿ ಫೈನಲ್​ಗೆ ಪ್ರವೇಶಿಸಲಿದೆ ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.

6 / 7
ಅಂಬಾಟಿ ರಾಯುಡು ಪ್ರಕಾರ, ಈ ಬಾರಿ ಭಾರತ, ಇಂಗ್ಲೆಂಡ್, ನ್ಯೂಝಿಲೆಂಡ್ ಮತ್ತು ಸೌತ್ ಆಫ್ರಿಕಾ ತಂಡಗಳು ಸೆಮಿಫೈನಲ್ ಆಡಲಿದೆ. ಅದರಂತೆ ಜೂನ್ 27 ರಂದು ನಡೆಯಲಿರುವ ಸೆಮಿ ಫೈನಲ್ ಪಂದ್ಯಗಳಲ್ಲಿ ಈ ನಾಲ್ಕು ತಂಡಗಳು ಕಣಕ್ಕಿಳಿಯಲಿದೆಯಾ? ರಾಯುಡು ಅವರ ಭವಿಷ್ಯ ನಿಜವಾಗಲಿದೆಯಾ ಕಾದು ನೋಡಬೇಕಿದೆ.

ಅಂಬಾಟಿ ರಾಯುಡು ಪ್ರಕಾರ, ಈ ಬಾರಿ ಭಾರತ, ಇಂಗ್ಲೆಂಡ್, ನ್ಯೂಝಿಲೆಂಡ್ ಮತ್ತು ಸೌತ್ ಆಫ್ರಿಕಾ ತಂಡಗಳು ಸೆಮಿಫೈನಲ್ ಆಡಲಿದೆ. ಅದರಂತೆ ಜೂನ್ 27 ರಂದು ನಡೆಯಲಿರುವ ಸೆಮಿ ಫೈನಲ್ ಪಂದ್ಯಗಳಲ್ಲಿ ಈ ನಾಲ್ಕು ತಂಡಗಳು ಕಣಕ್ಕಿಳಿಯಲಿದೆಯಾ? ರಾಯುಡು ಅವರ ಭವಿಷ್ಯ ನಿಜವಾಗಲಿದೆಯಾ ಕಾದು ನೋಡಬೇಕಿದೆ.

7 / 7
Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್