AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಟಿ20 ವಿಶ್ವಕಪ್​ನಲ್ಲಿ ಸೆಮಿ ಫೈನಲ್​ಗೇರುವ 4 ತಂಡಗಳನ್ನು ಹೆಸರಿಸಿದ ಅಂಬಾಟಿ ರಾಯುಡು

T20 World Cup 2024: ಟಿ20 ವಿಶ್ವಕಪ್​ನ 9ನೇ ಆವೃತ್ತಿ ಜೂನ್ 2 ರಿಂದ ಶುರುವಾಗಲಿದೆ. ಯುಎಸ್​ಎ ಮತ್ತು ವೆಸ್ಟ್ ಇಂಡೀಸ್ ಜಂಟಿಯಾಗಿ ಆಯೋಜಿಸುತ್ತಿರುವ ಈ ಟೂರ್ನಿಯಲ್ಲಿ ಭಾರತ ತಂಡವು ಜೂನ್ 5 ರಂದು ಕಣಕ್ಕಿಳಿಯಲಿದೆ. ಮೊದಲ ಪಂದ್ಯದಲ್ಲಿ ಐರ್ಲೆಂಡ್ ತಂಡವನ್ನು ಎದುರಿಸಿದರೆ, ಜೂನ್ 9 ರಂದು ನಡೆಯಲಿರುವ ತನ್ನ 2ನೇ ಪಂದ್ಯಲ್ಲಿ ಪಾಕಿಸ್ತಾನ್ ವಿರುದ್ಧ ಸೆಣಸಲಿದೆ.

ಝಾಹಿರ್ ಯೂಸುಫ್
|

Updated on: May 29, 2024 | 11:07 AM

Share
T20 World Cup 2024: ಟಿ20 ವಿಶ್ವಕಪ್ 2024 ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ವೆಸ್ಟ್ ಇಂಡೀಸ್-ಯುಎಸ್​ಎ ಜಂಟಿಯಾಗಿ ಆಯೋಜಿಸಲಿರುವ 9ನೇ ಆವೃತ್ತಿಯಲ್ಲಿ ಈ ಟೂರ್ನಿಯಲ್ಲಿ ಈ ಬಾರಿ 20 ತಂಡಗಳು ಕಣಕ್ಕಿಳಿಯಲಿರುವುದು ವಿಶೇಷ. ಹೀಗಾಗಿ ಮೊದಲ ಸುತ್ತಿನಲ್ಲೇ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

T20 World Cup 2024: ಟಿ20 ವಿಶ್ವಕಪ್ 2024 ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ವೆಸ್ಟ್ ಇಂಡೀಸ್-ಯುಎಸ್​ಎ ಜಂಟಿಯಾಗಿ ಆಯೋಜಿಸಲಿರುವ 9ನೇ ಆವೃತ್ತಿಯಲ್ಲಿ ಈ ಟೂರ್ನಿಯಲ್ಲಿ ಈ ಬಾರಿ 20 ತಂಡಗಳು ಕಣಕ್ಕಿಳಿಯಲಿರುವುದು ವಿಶೇಷ. ಹೀಗಾಗಿ ಮೊದಲ ಸುತ್ತಿನಲ್ಲೇ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

1 / 7
ಈ ಪೈಪೋಟಿ ನಡುವೆ ಎಲ್ಲಾ ಸವಾಲುಗಳನ್ನು ಮೆಟ್ಟಿ ನಿಲ್ಲುವ ತಂಡ ಸೂಪರ್-8 ಹಂತಕ್ಕೇರಲಿದೆ. ಈ ಹಂತದಲ್ಲಿ ಎಂಟು ತಂಡಗಳು ಸೆಣಸಲಿದ್ದು, ಇದರಲ್ಲಿ ಗೆದ್ದು ಸೆಮಿಫೈನಲ್​ಗೇರುವ ನಾಲ್ಕು ತಂಡಗಳನ್ನು ಹೆಸರಿಸಿದ್ದಾರೆ ಟೀಮ್ ಇಂಡಿಯಾದ ಮಾಜಿ ಆಟಗಾರ ಅಂಬಾಟಿ ರಾಯುಡು.

ಈ ಪೈಪೋಟಿ ನಡುವೆ ಎಲ್ಲಾ ಸವಾಲುಗಳನ್ನು ಮೆಟ್ಟಿ ನಿಲ್ಲುವ ತಂಡ ಸೂಪರ್-8 ಹಂತಕ್ಕೇರಲಿದೆ. ಈ ಹಂತದಲ್ಲಿ ಎಂಟು ತಂಡಗಳು ಸೆಣಸಲಿದ್ದು, ಇದರಲ್ಲಿ ಗೆದ್ದು ಸೆಮಿಫೈನಲ್​ಗೇರುವ ನಾಲ್ಕು ತಂಡಗಳನ್ನು ಹೆಸರಿಸಿದ್ದಾರೆ ಟೀಮ್ ಇಂಡಿಯಾದ ಮಾಜಿ ಆಟಗಾರ ಅಂಬಾಟಿ ರಾಯುಡು.

2 / 7
ಅಂಬಾಟಿ ರಾಯುಡು ಪ್ರಕಾರ, ಈ ಬಾರಿ ಟೀಮ್ ಇಂಡಿಯಾ ಸೆಮಿಫೈನಲ್​ಗೇರುವುದು ಖಚಿತ. ಭಾರತೀಯ ಆಟಗಾರರು ಇತ್ತೀಚೆಗೆ ಐಪಿಎಲ್​ ಆಡಿರುವುದರಿಂದ ಎಲ್ಲರೂ ಉತ್ತಮ ಫಾರ್ಮ್​ನಲ್ಲಿದ್ದಾರೆ. ಹೀಗಾಗಿ ರೋಹಿತ್ ಶರ್ಮಾ ಪಡೆ ಸೆಮಿಫೈನಲ್​ಗೆ​ ಪ್ರವೇಶಿಸುವುದು ಖಚಿತ ಎಂದಿದ್ದಾರೆ.

ಅಂಬಾಟಿ ರಾಯುಡು ಪ್ರಕಾರ, ಈ ಬಾರಿ ಟೀಮ್ ಇಂಡಿಯಾ ಸೆಮಿಫೈನಲ್​ಗೇರುವುದು ಖಚಿತ. ಭಾರತೀಯ ಆಟಗಾರರು ಇತ್ತೀಚೆಗೆ ಐಪಿಎಲ್​ ಆಡಿರುವುದರಿಂದ ಎಲ್ಲರೂ ಉತ್ತಮ ಫಾರ್ಮ್​ನಲ್ಲಿದ್ದಾರೆ. ಹೀಗಾಗಿ ರೋಹಿತ್ ಶರ್ಮಾ ಪಡೆ ಸೆಮಿಫೈನಲ್​ಗೆ​ ಪ್ರವೇಶಿಸುವುದು ಖಚಿತ ಎಂದಿದ್ದಾರೆ.

3 / 7
ಇನ್ನು ಇಂಗ್ಲೆಂಡ್ ತಂಡ ಕೂಡ ಬಲಿಷ್ಠವಾಗಿದೆ. ತಂಡದಲ್ಲಿರುವ ಜೋಸ್ ಬಟ್ಲರ್, ಫಿಲ್ ಸಾಲ್ಟ್, ವಿಲ್ ಜಾಕ್ಸ್ ಸೇರಿದಂತೆ ಪ್ರಮುಖರು ಉತ್ತಮ ಲಯದಲ್ಲಿದ್ದಾರೆ. ಹೀಗಾಗಿ ಇಂಗ್ಲೆಂಡ್ ತಂಡವನ್ನು ಕೂಡ ಸೆಮಿಫೈನಲ್​ನಲ್ಲಿ ನಿರೀಕ್ಷಿಸಬಹುದು ಎಂದು ಅಂಬಾಟಿ ರಾಹುಡು ತಿಳಿಸಿದ್ದಾರೆ.

ಇನ್ನು ಇಂಗ್ಲೆಂಡ್ ತಂಡ ಕೂಡ ಬಲಿಷ್ಠವಾಗಿದೆ. ತಂಡದಲ್ಲಿರುವ ಜೋಸ್ ಬಟ್ಲರ್, ಫಿಲ್ ಸಾಲ್ಟ್, ವಿಲ್ ಜಾಕ್ಸ್ ಸೇರಿದಂತೆ ಪ್ರಮುಖರು ಉತ್ತಮ ಲಯದಲ್ಲಿದ್ದಾರೆ. ಹೀಗಾಗಿ ಇಂಗ್ಲೆಂಡ್ ತಂಡವನ್ನು ಕೂಡ ಸೆಮಿಫೈನಲ್​ನಲ್ಲಿ ನಿರೀಕ್ಷಿಸಬಹುದು ಎಂದು ಅಂಬಾಟಿ ರಾಹುಡು ತಿಳಿಸಿದ್ದಾರೆ.

4 / 7
ಹಾಗೆಯೇ ಕೇನ್ ವಿಲಿಯಮ್ಸನ್ ಮುಂದಾಳತ್ವದ ನ್ಯೂಝಿಲೆಂಡ್ ತಂಡವನ್ನು ಸೆಮಿಫೈನಲ್​ನಲ್ಲಿ ಎದುರು ನೋಡಬಹುದು. ಏಕೆಂದರೆ ಐಸಿಸಿ ಟೂರ್ನಿಗಳಲ್ಲಿ ಕಿವೀಸ್ ಪಡೆ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದೆ. ಹೀಗಾಗಿ ನ್ಯೂಝಿಲೆಂಡ್ ಕೂಡ ಸೆಮಿಫೈನಲ್ ಹಂತಕ್ಕೇರಲಿದೆ ಎಂದು ರಾಯುಡು ಅಭಿಪ್ರಾಯಪಟ್ಟಿದ್ದಾರೆ.

ಹಾಗೆಯೇ ಕೇನ್ ವಿಲಿಯಮ್ಸನ್ ಮುಂದಾಳತ್ವದ ನ್ಯೂಝಿಲೆಂಡ್ ತಂಡವನ್ನು ಸೆಮಿಫೈನಲ್​ನಲ್ಲಿ ಎದುರು ನೋಡಬಹುದು. ಏಕೆಂದರೆ ಐಸಿಸಿ ಟೂರ್ನಿಗಳಲ್ಲಿ ಕಿವೀಸ್ ಪಡೆ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದೆ. ಹೀಗಾಗಿ ನ್ಯೂಝಿಲೆಂಡ್ ಕೂಡ ಸೆಮಿಫೈನಲ್ ಹಂತಕ್ಕೇರಲಿದೆ ಎಂದು ರಾಯುಡು ಅಭಿಪ್ರಾಯಪಟ್ಟಿದ್ದಾರೆ.

5 / 7
ಇನ್ನು ಸೌತ್ ಆಫ್ರಿಕಾ ತಂಡದಲ್ಲಿ ಬಲಿಷ್ಠ ದಾಂಡಿಗರ ದಂಡೇ ಇದ್ದು, ಅವರಲ್ಲಿ ಬಹುತೇಕರು ಉತ್ತಮ ಫಾರ್ಮ್​ನಲ್ಲಿದ್ದಾರೆ. ಹೀಗಾಗಿ ಸೌತ್ ಆಫ್ರಿಕಾ ತಂಡ ಕೂಡ ಈ ಬಾರಿ ಫೈನಲ್​ಗೆ ಪ್ರವೇಶಿಸಲಿದೆ ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.

ಇನ್ನು ಸೌತ್ ಆಫ್ರಿಕಾ ತಂಡದಲ್ಲಿ ಬಲಿಷ್ಠ ದಾಂಡಿಗರ ದಂಡೇ ಇದ್ದು, ಅವರಲ್ಲಿ ಬಹುತೇಕರು ಉತ್ತಮ ಫಾರ್ಮ್​ನಲ್ಲಿದ್ದಾರೆ. ಹೀಗಾಗಿ ಸೌತ್ ಆಫ್ರಿಕಾ ತಂಡ ಕೂಡ ಈ ಬಾರಿ ಫೈನಲ್​ಗೆ ಪ್ರವೇಶಿಸಲಿದೆ ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.

6 / 7
ಅಂಬಾಟಿ ರಾಯುಡು ಪ್ರಕಾರ, ಈ ಬಾರಿ ಭಾರತ, ಇಂಗ್ಲೆಂಡ್, ನ್ಯೂಝಿಲೆಂಡ್ ಮತ್ತು ಸೌತ್ ಆಫ್ರಿಕಾ ತಂಡಗಳು ಸೆಮಿಫೈನಲ್ ಆಡಲಿದೆ. ಅದರಂತೆ ಜೂನ್ 27 ರಂದು ನಡೆಯಲಿರುವ ಸೆಮಿ ಫೈನಲ್ ಪಂದ್ಯಗಳಲ್ಲಿ ಈ ನಾಲ್ಕು ತಂಡಗಳು ಕಣಕ್ಕಿಳಿಯಲಿದೆಯಾ? ರಾಯುಡು ಅವರ ಭವಿಷ್ಯ ನಿಜವಾಗಲಿದೆಯಾ ಕಾದು ನೋಡಬೇಕಿದೆ.

ಅಂಬಾಟಿ ರಾಯುಡು ಪ್ರಕಾರ, ಈ ಬಾರಿ ಭಾರತ, ಇಂಗ್ಲೆಂಡ್, ನ್ಯೂಝಿಲೆಂಡ್ ಮತ್ತು ಸೌತ್ ಆಫ್ರಿಕಾ ತಂಡಗಳು ಸೆಮಿಫೈನಲ್ ಆಡಲಿದೆ. ಅದರಂತೆ ಜೂನ್ 27 ರಂದು ನಡೆಯಲಿರುವ ಸೆಮಿ ಫೈನಲ್ ಪಂದ್ಯಗಳಲ್ಲಿ ಈ ನಾಲ್ಕು ತಂಡಗಳು ಕಣಕ್ಕಿಳಿಯಲಿದೆಯಾ? ರಾಯುಡು ಅವರ ಭವಿಷ್ಯ ನಿಜವಾಗಲಿದೆಯಾ ಕಾದು ನೋಡಬೇಕಿದೆ.

7 / 7
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್