AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿತ್ ಶರ್ಮಾ CSK ತಂಡದ ಮುಂದಿನ ನಾಯಕ? ಮಾಜಿ ಕ್ರಿಕೆಟಿಗನ ಅಭಿಲಾಷೆ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ಮಾರ್ಚ್ 22 ರಿಂದ ಶುರುವಾಗಲಿದೆ. ಈ ಬಾರಿಯ ಐಪಿಎಲ್​ನ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್​ ತಂಡಗಳು ಮುಖಾಮುಖಿಯಾಗುತ್ತಿರುವುದು ವಿಶೇಷ. ಅಲ್ಲದೆ ಇದು ಧೋನಿಯ ಕೊನೆಯ ಐಪಿಎಲ್ ಆಗಿರಲಿದೆ ಎಂಬ ಮಾತು ಕೂಡ ಕೇಳಿ ಬರುತ್ತಿದೆ. ಇದೇ ಕಾರಣದಿಂದಾಗಿ ಇದೀಗ ರೋಹಿತ್ ಶರ್ಮಾ ಮುಂದಿನ ವರ್ಷ ಸಿಎಸ್​ಕೆ ಪರ ಆಡಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

TV9 Web
| Edited By: |

Updated on: Mar 11, 2024 | 3:08 PM

Share
ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ (Rohit Sharma) ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ನಾಯಕರಾಗಲಿದ್ದಾರಾ? ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಮಾಜಿ ಆಟಗಾರ ಅಂಬಾಟಿ ರಾಯುಡು ಅವರ ಹೇಳಿಕೆ. ಏಕೆಂದರೆ ಮುಂಬೈ ಇಂಡಿಯನ್ಸ್​ ತಂಡದ ನಾಯಕತ್ವದಿಂದ ಕೆಳಗಿಳಿದಿರುವ ಹಿಟ್​ಮ್ಯಾನ್ ಈ ಬಾರಿಯ ಐಪಿಎಲ್​ನಲ್ಲಿ ಕೇವಲ ಬ್ಯಾಟರ್ ಆಗಿ ಕಣಕ್ಕಿಳಿಯಲಿದ್ದಾರೆ.

ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ (Rohit Sharma) ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ನಾಯಕರಾಗಲಿದ್ದಾರಾ? ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಮಾಜಿ ಆಟಗಾರ ಅಂಬಾಟಿ ರಾಯುಡು ಅವರ ಹೇಳಿಕೆ. ಏಕೆಂದರೆ ಮುಂಬೈ ಇಂಡಿಯನ್ಸ್​ ತಂಡದ ನಾಯಕತ್ವದಿಂದ ಕೆಳಗಿಳಿದಿರುವ ಹಿಟ್​ಮ್ಯಾನ್ ಈ ಬಾರಿಯ ಐಪಿಎಲ್​ನಲ್ಲಿ ಕೇವಲ ಬ್ಯಾಟರ್ ಆಗಿ ಕಣಕ್ಕಿಳಿಯಲಿದ್ದಾರೆ.

1 / 5
ಇದಾಗ್ಯೂ ರೋಹಿತ್ ಶರ್ಮಾ ಮುಂದಿನ ವರ್ಷ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುವುದು ಅನುಮಾನ. ಏಕೆಂದರೆ 2025 ರಲ್ಲಿ ಐಪಿಎಲ್ ಮೆಗಾ ಹರಾಜು ನಡೆಯಲಿದ್ದು, ಈ ವೇಳೆ ಹಿಟ್​ಮ್ಯಾನ್ ಆಕ್ಷನ್​ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚು. ಹೀಗೆ ಹರಾಜಿನಲ್ಲಿ ಕಾಣಿಸಿಕೊಳ್ಳುವ ರೋಹಿತ್ ಶರ್ಮಾ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್​ ಖರೀದಿಸಲಿ ಎಂಬ ಅಭಿಲಾಷೆಯನ್ನು ವ್ಯಕ್ತಪಡಿಸಿದ್ದಾರೆ ಅಂಬಾಟಿ ರಾಯುಡು.

ಇದಾಗ್ಯೂ ರೋಹಿತ್ ಶರ್ಮಾ ಮುಂದಿನ ವರ್ಷ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುವುದು ಅನುಮಾನ. ಏಕೆಂದರೆ 2025 ರಲ್ಲಿ ಐಪಿಎಲ್ ಮೆಗಾ ಹರಾಜು ನಡೆಯಲಿದ್ದು, ಈ ವೇಳೆ ಹಿಟ್​ಮ್ಯಾನ್ ಆಕ್ಷನ್​ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚು. ಹೀಗೆ ಹರಾಜಿನಲ್ಲಿ ಕಾಣಿಸಿಕೊಳ್ಳುವ ರೋಹಿತ್ ಶರ್ಮಾ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್​ ಖರೀದಿಸಲಿ ಎಂಬ ಅಭಿಲಾಷೆಯನ್ನು ವ್ಯಕ್ತಪಡಿಸಿದ್ದಾರೆ ಅಂಬಾಟಿ ರಾಯುಡು.

2 / 5
ಖಾಸಗಿ ಚಾನೆಲ್​ವೊಂದರ ಸಂದರ್ಶನದಲ್ಲಿ ಮಾತನಾಡಿದ ಅಂಬಾಟಿ ರಾಯುಡು, ರೋಹಿತ್ ಶರ್ಮಾ ಇನ್ನೂ ಐದಾರು ವರ್ಷಗಳವರೆಗೆ ಐಪಿಎಲ್ ಆಡುತ್ತಾರೆಂಬ ನಂಬಿಕೆಯಿದೆ. ಅವರು ನಾಯಕರಾಗಿ ಮುಂದುವರೆಯಲು ಬಯಸಿದರೆ, ಖಂಡಿತವಾಗಿಯೂ ಹಲವು ಫ್ರಾಂಚೈಸಿಗಳು ಅವರ ಖರೀದಿಗೆ ಮುಂದಾಗಲಿದೆ.

ಖಾಸಗಿ ಚಾನೆಲ್​ವೊಂದರ ಸಂದರ್ಶನದಲ್ಲಿ ಮಾತನಾಡಿದ ಅಂಬಾಟಿ ರಾಯುಡು, ರೋಹಿತ್ ಶರ್ಮಾ ಇನ್ನೂ ಐದಾರು ವರ್ಷಗಳವರೆಗೆ ಐಪಿಎಲ್ ಆಡುತ್ತಾರೆಂಬ ನಂಬಿಕೆಯಿದೆ. ಅವರು ನಾಯಕರಾಗಿ ಮುಂದುವರೆಯಲು ಬಯಸಿದರೆ, ಖಂಡಿತವಾಗಿಯೂ ಹಲವು ಫ್ರಾಂಚೈಸಿಗಳು ಅವರ ಖರೀದಿಗೆ ಮುಂದಾಗಲಿದೆ.

3 / 5
ನಾನಂತು ರೋಹಿತ್ ಶರ್ಮಾ ಐಪಿಎಲ್ 2025 ರಲ್ಲಿ CSK ಗಾಗಿ ಆಡಬೇಕೆಂದು ಬಯಸುತ್ತೇನೆ. ಇತ್ತ ಎಂಸ್ ಧೋನಿ ನಿವೃತ್ತರಾದರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಬಹುದು. ಇದೇ ಕಾರಣದಿಂದಾಗಿ ನಾನು ಹಿಟ್​ಮ್ಯಾನ್ ಸಿಎಸ್​ಕೆ ತಂಡದ ನಾಯಕರಾಗುವುದನ್ನು ಎದುರು ನೋಡುತ್ತಿದ್ದೇನೆ ಎಂದು ಅಂಬಾಟಿ ರಾಯುಡು ತಿಳಿಸಿದ್ದಾರೆ.

ನಾನಂತು ರೋಹಿತ್ ಶರ್ಮಾ ಐಪಿಎಲ್ 2025 ರಲ್ಲಿ CSK ಗಾಗಿ ಆಡಬೇಕೆಂದು ಬಯಸುತ್ತೇನೆ. ಇತ್ತ ಎಂಸ್ ಧೋನಿ ನಿವೃತ್ತರಾದರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಬಹುದು. ಇದೇ ಕಾರಣದಿಂದಾಗಿ ನಾನು ಹಿಟ್​ಮ್ಯಾನ್ ಸಿಎಸ್​ಕೆ ತಂಡದ ನಾಯಕರಾಗುವುದನ್ನು ಎದುರು ನೋಡುತ್ತಿದ್ದೇನೆ ಎಂದು ಅಂಬಾಟಿ ರಾಯುಡು ತಿಳಿಸಿದ್ದಾರೆ.

4 / 5
ಅದರಂತೆ ಐಪಿಎಲ್ 2025 ರ ಮೆಗಾ ಹರಾಜಿನಲ್ಲಿ ರೋಹಿತ್ ಶರ್ಮಾ ಕಾಣಿಸಿಕೊಂಡರೆ ಚೆನ್ನೈ ಸೂಪರ್ ಕಿಂಗ್ಸ್​ ಅವರನ್ನು ಖರೀದಿಸಲಿದೆಯಾ ಕಾದು ನೋಡಬೇಕಿದೆ. ಒಟ್ಟಿನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಯಶಸ್ವಿ ನಾಯಕನಾಗಿ ಮೆರೆದಿದ್ದ ರೋಹಿತ್ ಶರ್ಮಾ ಈ ಬಾರಿ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಆಡಲಿರುವುದು ವಿಶೇಷ.

ಅದರಂತೆ ಐಪಿಎಲ್ 2025 ರ ಮೆಗಾ ಹರಾಜಿನಲ್ಲಿ ರೋಹಿತ್ ಶರ್ಮಾ ಕಾಣಿಸಿಕೊಂಡರೆ ಚೆನ್ನೈ ಸೂಪರ್ ಕಿಂಗ್ಸ್​ ಅವರನ್ನು ಖರೀದಿಸಲಿದೆಯಾ ಕಾದು ನೋಡಬೇಕಿದೆ. ಒಟ್ಟಿನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಯಶಸ್ವಿ ನಾಯಕನಾಗಿ ಮೆರೆದಿದ್ದ ರೋಹಿತ್ ಶರ್ಮಾ ಈ ಬಾರಿ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಆಡಲಿರುವುದು ವಿಶೇಷ.

5 / 5
Web contact
Web contact

TV9 Kannada

Read More
Follow Us
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?