AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ ಟೀಮ್ ಇಂಡಿಯಾ ಆಟಗಾರ

Amit Mishra Retirement: ಅಮಿತ್ ಮಿಶ್ರಾ ಭಾರತ ಪರ 22 ಟೆಸ್ಟ್, 36 ಏಕದಿನ ಹಾಗೂ 10 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ತಮ್ಮ ಸ್ಪಿನ್ ಮೋಡಿಯೊಂದಿಗೆ 156 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಭಾರತ ಪರ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 150 ಕ್ಕಿಂತ ಹೆಚ್ಚು ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಝಾಹಿರ್ ಯೂಸುಫ್
|

Updated on: Sep 04, 2025 | 1:39 PM

Share
ಟೀಮ್ ಇಂಡಿಯಾ ಆಟಗಾರ ಅಮಿತ್ ಮಿಶ್ರಾ (Amit Mishra) ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಇದರೊಂದಿಗೆ 15 ವರ್ಷಗಳ ಸುದೀರ್ಘ ವೃತ್ತಿಜೀವನ ಅಂತ್ಯಗೊಂಡಂತಾಗಿದೆ. 2010 ರಲ್ಲಿ ಭಾರತದ ಪರ ಸ್ಪಿನ್ನರ್ ಆಗಿ ಪಾದಾರ್ಪಣೆ ಮಾಡಿದ ಅಮಿತ್ ಮಿಶ್ರಾ 2017 ರವರೆಗೆ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ್ದರು.

ಟೀಮ್ ಇಂಡಿಯಾ ಆಟಗಾರ ಅಮಿತ್ ಮಿಶ್ರಾ (Amit Mishra) ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಇದರೊಂದಿಗೆ 15 ವರ್ಷಗಳ ಸುದೀರ್ಘ ವೃತ್ತಿಜೀವನ ಅಂತ್ಯಗೊಂಡಂತಾಗಿದೆ. 2010 ರಲ್ಲಿ ಭಾರತದ ಪರ ಸ್ಪಿನ್ನರ್ ಆಗಿ ಪಾದಾರ್ಪಣೆ ಮಾಡಿದ ಅಮಿತ್ ಮಿಶ್ರಾ 2017 ರವರೆಗೆ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ್ದರು.

1 / 5
2017 ರಲ್ಲಿ ಟೀಮ್ ಇಂಡಿಯಾದಿಂದ ಹೊರಬಿದ್ದರೂ ಅಮಿತ್ ಮಿಶ್ರಾ ದೇಶೀಯ ಕ್ರಿಕೆಟ್ ಹಾಗೂ ಇಂಡಿಯನ್ ಪ್ರೀಮಿಯರ್ ಲೀಗ್​ಗಳಲ್ಲಿ ತೊಡಗಿಸಿಕೊಂಡಿದ್ದರು. ಇದೀಗ 42ನೇ ವಯಸ್ಸಿನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್​ಗೆ ಗುಡ್ ಬೈ ಹೇಳಲು ನಿರ್ಧರಿಸಿದ್ದಾರೆ.

2017 ರಲ್ಲಿ ಟೀಮ್ ಇಂಡಿಯಾದಿಂದ ಹೊರಬಿದ್ದರೂ ಅಮಿತ್ ಮಿಶ್ರಾ ದೇಶೀಯ ಕ್ರಿಕೆಟ್ ಹಾಗೂ ಇಂಡಿಯನ್ ಪ್ರೀಮಿಯರ್ ಲೀಗ್​ಗಳಲ್ಲಿ ತೊಡಗಿಸಿಕೊಂಡಿದ್ದರು. ಇದೀಗ 42ನೇ ವಯಸ್ಸಿನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್​ಗೆ ಗುಡ್ ಬೈ ಹೇಳಲು ನಿರ್ಧರಿಸಿದ್ದಾರೆ.

2 / 5
ಈ ಬಗ್ಗೆ ಸೋಷಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿರುವ ಅಮಿತ್ ಮಿಶ್ರಾ,  ನನ್ನ ಕ್ರಿಕೆಟ್ ಜೀವನದ ಈ 25 ವರ್ಷಗಳು ಸ್ಮರಣೀಯ. ಇಷ್ಟು ದಿನ ನನ್ನೊಂದಿಗಿದ್ದ ಬಿಸಿಸಿಐ, ಆಡಳಿತ, ಹರಿಯಾಣ ಕ್ರಿಕೆಟ್ ಸಂಘ, ಸಹಾಯಕ ಸಿಬ್ಬಂದಿ, ನನ್ನ ಸಹೋದ್ಯೋಗಿಗಳು ಮತ್ತು ನನ್ನ ಕುಟುಂಬ ಸದಸ್ಯರಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ. ಇಷ್ಟು ವರ್ಷಗಳ ಸ್ಮರಣೀಯ ನೆನಪುಗಳೊಂದಿಗೆ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳುತ್ತಿರುವುದಾಗಿ ಅಮಿತ್ ಮಿಶ್ರಾ ತಿಳಿಸಿದ್ದಾರೆ.

ಈ ಬಗ್ಗೆ ಸೋಷಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿರುವ ಅಮಿತ್ ಮಿಶ್ರಾ,  ನನ್ನ ಕ್ರಿಕೆಟ್ ಜೀವನದ ಈ 25 ವರ್ಷಗಳು ಸ್ಮರಣೀಯ. ಇಷ್ಟು ದಿನ ನನ್ನೊಂದಿಗಿದ್ದ ಬಿಸಿಸಿಐ, ಆಡಳಿತ, ಹರಿಯಾಣ ಕ್ರಿಕೆಟ್ ಸಂಘ, ಸಹಾಯಕ ಸಿಬ್ಬಂದಿ, ನನ್ನ ಸಹೋದ್ಯೋಗಿಗಳು ಮತ್ತು ನನ್ನ ಕುಟುಂಬ ಸದಸ್ಯರಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ. ಇಷ್ಟು ವರ್ಷಗಳ ಸ್ಮರಣೀಯ ನೆನಪುಗಳೊಂದಿಗೆ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳುತ್ತಿರುವುದಾಗಿ ಅಮಿತ್ ಮಿಶ್ರಾ ತಿಳಿಸಿದ್ದಾರೆ.

3 / 5
ಅಮಿತ್ ಮಿಶ್ರಾ ಭಾರತದ ಪರ 22 ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು. ಈ ವೇಳೆ 40 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅವರು 76 ವಿಕೆಟ್ ಪಡೆದಿದ್ದಾರೆ. ಇನ್ನು ಏಕದಿನ ಕ್ರಿಕೆಟ್​ನಲ್ಲಿ 36 ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಅವರು 34 ಇನಿಂಗ್ಸ್​ಗಳ ಮೂಲಕ 64 ವಿಕೆಟ್ ಕಬಳಿಸಿದ್ದಾರೆ.

ಅಮಿತ್ ಮಿಶ್ರಾ ಭಾರತದ ಪರ 22 ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು. ಈ ವೇಳೆ 40 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅವರು 76 ವಿಕೆಟ್ ಪಡೆದಿದ್ದಾರೆ. ಇನ್ನು ಏಕದಿನ ಕ್ರಿಕೆಟ್​ನಲ್ಲಿ 36 ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಅವರು 34 ಇನಿಂಗ್ಸ್​ಗಳ ಮೂಲಕ 64 ವಿಕೆಟ್ ಕಬಳಿಸಿದ್ದಾರೆ.

4 / 5
ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ 10 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 16 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಹಾಗೆಯೇ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್, ಡೆಕ್ಕನ್ ಚಾರ್ಜರ್ಸ್, ಸನ್​ರೈಸರ್ಸ್ ಹೈದರಾಬಾದ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಪರ ಕಣಕ್ಕಿಳಿದಿದ್ದ ಅಮಿತ್ ಮಿಶ್ರಾ 162 ಪಂದ್ಯಗಳಿಂದ 174 ವಿಕೆಟ್ ಕಬಳಿಸಿದ್ದಾರೆ. ಇದೀಗ ಎಲ್ಲಾ ಮಾದರಿಯ ಕ್ರಿಕೆಟ್​​ಗೆ ವಿದಾಯ ಹೇಳುವ ಮೂಲಕ ಅಮಿತ್ ಮಿಶ್ರಾ ಕಾಮೆಂಟೇಟರ್ ಆಗಿ ಹೊಸ ಇನಿಂಗ್ಸ್ ಆರಂಭಿಸುವ ನಿರೀಕ್ಷೆಯಲ್ಲಿದ್ದಾರೆ.

ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ 10 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 16 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಹಾಗೆಯೇ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್, ಡೆಕ್ಕನ್ ಚಾರ್ಜರ್ಸ್, ಸನ್​ರೈಸರ್ಸ್ ಹೈದರಾಬಾದ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಪರ ಕಣಕ್ಕಿಳಿದಿದ್ದ ಅಮಿತ್ ಮಿಶ್ರಾ 162 ಪಂದ್ಯಗಳಿಂದ 174 ವಿಕೆಟ್ ಕಬಳಿಸಿದ್ದಾರೆ. ಇದೀಗ ಎಲ್ಲಾ ಮಾದರಿಯ ಕ್ರಿಕೆಟ್​​ಗೆ ವಿದಾಯ ಹೇಳುವ ಮೂಲಕ ಅಮಿತ್ ಮಿಶ್ರಾ ಕಾಮೆಂಟೇಟರ್ ಆಗಿ ಹೊಸ ಇನಿಂಗ್ಸ್ ಆರಂಭಿಸುವ ನಿರೀಕ್ಷೆಯಲ್ಲಿದ್ದಾರೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ