AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

147 ವರ್ಷಗಳ ಟೆಸ್ಟ್ ಇತಿಹಾಸದಲ್ಲೇ ಅತ್ಯಂತ ಕಳಪೆ ದಾಖಲೆ ಬರೆದ ಟೀಮ್ ಇಂಡಿಯಾ

India vs South Africa 2nd Test: ಕೇಪ್​ಟೌನ್​ನ ನ್ಯೂಲ್ಯಾಂಡ್ಸ್​ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದ ಮೊದಲ ದಿನದಾಟದಲ್ಲಿ ಪ್ರಥಮ ಇನಿಂಗ್ಸ್​ನಲ್ಲಿ ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು ಮೊಹಮ್ಮದ್ ಸಿರಾಜ್ (6 ವಿಕೆಟ್ಸ್​) ದಾಳಿಗೆ ತತ್ತರಿಸಿತು. ಪರಿಣಾಮ ಸೌತ್ ಆಫ್ರಿಕಾ ತಂಡವು ಕೇವಲ 55 ರನ್​ಗಳಿಗೆ ಆಲೌಟ್ ಆಗಿದೆ.

TV9 Web
| Edited By: |

Updated on: Jan 04, 2024 | 8:29 AM

Share
ಸೌತ್ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಬೌಲರ್​ಗಳು ಭರ್ಜರಿ ಪ್ರದರ್ಶನ ನೀಡಿದ್ದಾರೆ. ಆದರೆ ಬ್ಯಾಟ್ಸ್​ಮನ್​ಗಳು ಮುಗ್ಗರಿಸುವ ಮೂಲಕ ಅತ್ಯಂತ ಹೀನಾಯ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.

ಸೌತ್ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಬೌಲರ್​ಗಳು ಭರ್ಜರಿ ಪ್ರದರ್ಶನ ನೀಡಿದ್ದಾರೆ. ಆದರೆ ಬ್ಯಾಟ್ಸ್​ಮನ್​ಗಳು ಮುಗ್ಗರಿಸುವ ಮೂಲಕ ಅತ್ಯಂತ ಹೀನಾಯ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.

1 / 6
ಕೇಪ್​ಟೌನ್​ನ ನ್ಯೂಲ್ಯಾಂಡ್ಸ್​ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದ ಮೊದಲ ದಿನದಾಟದಲ್ಲಿ ಪ್ರಥಮ ಇನಿಂಗ್ಸ್​ನಲ್ಲಿ ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು ಮೊಹಮ್ಮದ್ ಸಿರಾಜ್ (6 ವಿಕೆಟ್ಸ್​) ದಾಳಿಗೆ ತತ್ತರಿಸಿತು. ಪರಿಣಾಮ ಸೌತ್ ಆಫ್ರಿಕಾ ತಂಡವು ಕೇವಲ 55 ರನ್​ಗಳಿಗೆ ಆಲೌಟ್ ಆಗಿದೆ.

ಕೇಪ್​ಟೌನ್​ನ ನ್ಯೂಲ್ಯಾಂಡ್ಸ್​ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದ ಮೊದಲ ದಿನದಾಟದಲ್ಲಿ ಪ್ರಥಮ ಇನಿಂಗ್ಸ್​ನಲ್ಲಿ ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು ಮೊಹಮ್ಮದ್ ಸಿರಾಜ್ (6 ವಿಕೆಟ್ಸ್​) ದಾಳಿಗೆ ತತ್ತರಿಸಿತು. ಪರಿಣಾಮ ಸೌತ್ ಆಫ್ರಿಕಾ ತಂಡವು ಕೇವಲ 55 ರನ್​ಗಳಿಗೆ ಆಲೌಟ್ ಆಗಿದೆ.

2 / 6
ಇದರ ಬೆನ್ನಲ್ಲೇ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ 4 ವಿಕೆಟ್ ಕಳೆದುಕೊಂಡು 153 ರನ್​ ಕಲೆಹಾಕಿ ಉತ್ತಮ ಸ್ಥಿತಿಯಲ್ಲಿತ್ತು. ಆದರೆ ಕೆಎಲ್ ರಾಹುಲ್ ಔಟಾಗುತ್ತಿದ್ದಂತೆ ಟೀಮ್ ಇಂಡಿಯಾ ದಿಢೀರ್ ಕುಸಿತಕ್ಕೊಳಗಾಗಿದೆ. ಪರಿಣಾಮ 11 ಎಸೆತಗಳಲ್ಲಿ ಯಾವುದೇ ರನ್ ಕಲೆಹಾಕದೆ 6 ವಿಕೆಟ್ ಕಳೆದುಕೊಂಡು 153 ರನ್​ಗಳಿಗೆ ಆಲೌಟ್ ಆಯಿತು.

ಇದರ ಬೆನ್ನಲ್ಲೇ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ 4 ವಿಕೆಟ್ ಕಳೆದುಕೊಂಡು 153 ರನ್​ ಕಲೆಹಾಕಿ ಉತ್ತಮ ಸ್ಥಿತಿಯಲ್ಲಿತ್ತು. ಆದರೆ ಕೆಎಲ್ ರಾಹುಲ್ ಔಟಾಗುತ್ತಿದ್ದಂತೆ ಟೀಮ್ ಇಂಡಿಯಾ ದಿಢೀರ್ ಕುಸಿತಕ್ಕೊಳಗಾಗಿದೆ. ಪರಿಣಾಮ 11 ಎಸೆತಗಳಲ್ಲಿ ಯಾವುದೇ ರನ್ ಕಲೆಹಾಕದೆ 6 ವಿಕೆಟ್ ಕಳೆದುಕೊಂಡು 153 ರನ್​ಗಳಿಗೆ ಆಲೌಟ್ ಆಯಿತು.

3 / 6
ಅಚ್ಚರಿ ಎಂದರೆ ಕೊನೆಯ ನಾಲ್ವರು ಬ್ಯಾಟರ್​​ಗಳು ಖಾತೆ ತೆರೆಯದೇ ಔಟಾದರೆ, ಒಬ್ಬರು ಶೂನ್ಯದೊಂದಿಗೆ ಅಜೇಯರಾಗಿ ಉಳಿದರು. ಅಂದರೆ ಕೊನೆಯ ಐವರು ಬ್ಯಾಟರ್​ಗಳಿಂದ ಯಾವುದೇ ರನ್​ ಮೂಡಿ ಬಂದಿರಲಿಲ್ಲ. ಇದಕ್ಕೂ ಮುನ್ನ ಇಬ್ಬರು ದಾಂಡಿಗರು ಶೂನ್ಯಕ್ಕೆ ಔಟಾಗಿದ್ದರು.

ಅಚ್ಚರಿ ಎಂದರೆ ಕೊನೆಯ ನಾಲ್ವರು ಬ್ಯಾಟರ್​​ಗಳು ಖಾತೆ ತೆರೆಯದೇ ಔಟಾದರೆ, ಒಬ್ಬರು ಶೂನ್ಯದೊಂದಿಗೆ ಅಜೇಯರಾಗಿ ಉಳಿದರು. ಅಂದರೆ ಕೊನೆಯ ಐವರು ಬ್ಯಾಟರ್​ಗಳಿಂದ ಯಾವುದೇ ರನ್​ ಮೂಡಿ ಬಂದಿರಲಿಲ್ಲ. ಇದಕ್ಕೂ ಮುನ್ನ ಇಬ್ಬರು ದಾಂಡಿಗರು ಶೂನ್ಯಕ್ಕೆ ಔಟಾಗಿದ್ದರು.

4 / 6
ಅಂದರೆ ಟೀಮ್ ಇಂಡಿಯಾ ಇನಿಂಗ್ಸ್​ನಲ್ಲಿ 7 ಬ್ಯಾಟರ್​ಗಳು ಶೂನ್ಯದೊಂದಿಗೆ ಕಾಣಿಸಿಕೊಂಡಿದ್ದರು. ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ ಹಾಗೂ ಮುಕೇಶ್ ಕುಮಾರ್ ಖಾತೆ ತೆರೆಯದೇ ಪೆವಿಲಿಯನ್​ಗೆ ಹಿಂತಿರುಗಿದ್ದರು.

ಅಂದರೆ ಟೀಮ್ ಇಂಡಿಯಾ ಇನಿಂಗ್ಸ್​ನಲ್ಲಿ 7 ಬ್ಯಾಟರ್​ಗಳು ಶೂನ್ಯದೊಂದಿಗೆ ಕಾಣಿಸಿಕೊಂಡಿದ್ದರು. ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ ಹಾಗೂ ಮುಕೇಶ್ ಕುಮಾರ್ ಖಾತೆ ತೆರೆಯದೇ ಪೆವಿಲಿಯನ್​ಗೆ ಹಿಂತಿರುಗಿದ್ದರು.

5 / 6
ಇದು ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಮೂಡಿಬಂದ ಅತ್ಯಂತ ಕಳಪೆ ದಾಖಲೆಗಳಲ್ಲಿ ಒಂದು. ಅಂದರೆ 147 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಯಾವುದೇ ತಂಡದ 7 ಬ್ಯಾಟರ್​ಗಳು ಸೊನ್ನೆಯೊಂದಿಗೆ ಪೆವಿಲಿಯನ್​ಗೆ ಮರಳಿರಲಿಲ್ಲ. ಇದೀಗ 2522 ಟೆಸ್ಟ್​ ಪಂದ್ಯಗಳ ಬಳಿಕ ಟೀಮ್ ಇಂಡಿಯಾದ 7 ಬ್ಯಾಟರ್​ಗಳು ಸೊನ್ನೆ ಸುತ್ತುವ ಮೂಲಕ ಅತ್ಯಂತ ಕಳಪೆ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇದು ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಮೂಡಿಬಂದ ಅತ್ಯಂತ ಕಳಪೆ ದಾಖಲೆಗಳಲ್ಲಿ ಒಂದು. ಅಂದರೆ 147 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಯಾವುದೇ ತಂಡದ 7 ಬ್ಯಾಟರ್​ಗಳು ಸೊನ್ನೆಯೊಂದಿಗೆ ಪೆವಿಲಿಯನ್​ಗೆ ಮರಳಿರಲಿಲ್ಲ. ಇದೀಗ 2522 ಟೆಸ್ಟ್​ ಪಂದ್ಯಗಳ ಬಳಿಕ ಟೀಮ್ ಇಂಡಿಯಾದ 7 ಬ್ಯಾಟರ್​ಗಳು ಸೊನ್ನೆ ಸುತ್ತುವ ಮೂಲಕ ಅತ್ಯಂತ ಕಳಪೆ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

6 / 6
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ