AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಐಪಿಎಲ್​ಗೆ ಗುಡ್ ಬೈ ಹೇಳಿದ ಆ್ಯಂಡ್ರೆ ರಸೆಲ್..!

Andre Russell: ಆ್ಯಂಡ್ರೆ ರಸೆಲ್ ಐಪಿಎಲ್​ನಿಂದ ನಿವೃತ್ತಿ ಘೋಷಿಸಿದ್ದಾರೆ. 2012 ರಿಂದ ಇಂಡಿಯನ್ ಪ್ರೀಮಿಯರ್ ಲೀಗ್​ನ ಭಾಗವಾಗಿದ್ದ ರಸೆಲ್ ಅವರನ್ನು ಈ ಬಾರಿ ಕೆಕೆಆರ್ ಫ್ರಾಂಚೈಸಿ ಬಿಡುಗಡೆ ಮಾಡಿತ್ತು. ಇದರ ಬೆನ್ನಲ್ಲೇ ಐಪಿಎಲ್​ಗೆ ವಿದಾಯ ಹೇಳಿದ್ದಾರೆ. ಇದಾಗ್ಯೂ ಅವರು ಕೋಚ್ ಸ್ಥಾನದೊಂದಿಗೆ ಮುಂದಿನ ಸೀಸನ್​ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 30, 2025 | 1:40 PM

Share
ವೆಸ್ಟ್ ಇಂಡೀಸ್ ದಿಗ್ಗಜ ಆ್ಯಂಡ್ರೆ ರಸೆಲ್ (Andre Russell) ಇಂಡಿಯನ್ ಪ್ರೀಮಿಯರ್ ಲೀಗ್​ಗೆ ವಿದಾಯ ಹೇಳಿದ್ದಾರೆ. ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಿಂದ ಹೊರಬಿದ್ದಿರುವ ರಸೆಲ್ ಮುಂದಿನ ಸೀಸನ್​ನಲ್ಲಿ ಬೇರೊಂದು ತಂಡದ ಪರ ಆಡಲು ಇಚ್ಛಿಸುತ್ತಿಲ್ಲ. ಹೀಗಾಗಿ ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದೇನೆ ಎಂದು ತಿಳಿಸಿದ್ದಾರೆ.

ವೆಸ್ಟ್ ಇಂಡೀಸ್ ದಿಗ್ಗಜ ಆ್ಯಂಡ್ರೆ ರಸೆಲ್ (Andre Russell) ಇಂಡಿಯನ್ ಪ್ರೀಮಿಯರ್ ಲೀಗ್​ಗೆ ವಿದಾಯ ಹೇಳಿದ್ದಾರೆ. ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಿಂದ ಹೊರಬಿದ್ದಿರುವ ರಸೆಲ್ ಮುಂದಿನ ಸೀಸನ್​ನಲ್ಲಿ ಬೇರೊಂದು ತಂಡದ ಪರ ಆಡಲು ಇಚ್ಛಿಸುತ್ತಿಲ್ಲ. ಹೀಗಾಗಿ ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದೇನೆ ಎಂದು ತಿಳಿಸಿದ್ದಾರೆ.

1 / 5
ನನ್ನ ಐಪಿಎಲ್ ಬೂಟುಗಳನ್ನು ನೇತುಹಾಕುತ್ತಿದ್ದೇನೆ... ಆದರೆ ಇದು ಸೊಕ್ಕಿನ ನಡೆಯಲ್ಲ. ಬದಲಾಗಿ ಕಳೆದ 12 ಸೀಸನ್​ನಲ್ಲಿನ ನೆನಪುಗಳು ಮತ್ತು ಕೆಕೆಆರ್ ಕುಟುಂಬದೊಂದಿಗಿನ ಅಪಾರ ಪ್ರೀತಿ. ನಾನು ಇನ್ನೂ ಪ್ರಪಂಚದಾದ್ಯಂತದ ಪ್ರತಿಯೊಂದು ಲೀಗ್‌ನಲ್ಲಿ ಸಿಕ್ಸರ್‌ಗಳನ್ನು ಸಿಡಿಸುತ್ತೇನೆ ಮತ್ತು ವಿಕೆಟ್‌ಗಳನ್ನು ಪಡೆಯುತ್ತೇನೆ. ಆದರೆ ಖುಷಿಯ ವಿಚಾರ ಎಂದರೆ ನಾನು ಕೆಕೆಆರ್​ ಅನ್ನು ಬಿಟ್ಟು ಹೋಗುತ್ತಿಲ್ಲ ಎಂದು ರಸೆಲ್ ತಿಳಿಸಿದ್ದಾರೆ.

ನನ್ನ ಐಪಿಎಲ್ ಬೂಟುಗಳನ್ನು ನೇತುಹಾಕುತ್ತಿದ್ದೇನೆ... ಆದರೆ ಇದು ಸೊಕ್ಕಿನ ನಡೆಯಲ್ಲ. ಬದಲಾಗಿ ಕಳೆದ 12 ಸೀಸನ್​ನಲ್ಲಿನ ನೆನಪುಗಳು ಮತ್ತು ಕೆಕೆಆರ್ ಕುಟುಂಬದೊಂದಿಗಿನ ಅಪಾರ ಪ್ರೀತಿ. ನಾನು ಇನ್ನೂ ಪ್ರಪಂಚದಾದ್ಯಂತದ ಪ್ರತಿಯೊಂದು ಲೀಗ್‌ನಲ್ಲಿ ಸಿಕ್ಸರ್‌ಗಳನ್ನು ಸಿಡಿಸುತ್ತೇನೆ ಮತ್ತು ವಿಕೆಟ್‌ಗಳನ್ನು ಪಡೆಯುತ್ತೇನೆ. ಆದರೆ ಖುಷಿಯ ವಿಚಾರ ಎಂದರೆ ನಾನು ಕೆಕೆಆರ್​ ಅನ್ನು ಬಿಟ್ಟು ಹೋಗುತ್ತಿಲ್ಲ ಎಂದು ರಸೆಲ್ ತಿಳಿಸಿದ್ದಾರೆ.

2 / 5
ಹೌದು, ಐಪಿಎಲ್​ಗೆ ವಿದಾಯ ಹೇಳಿರುವ ಆ್ಯಂಡ್ರೆ ರಸೆಲ್ ಮುಂದಿನ ಸೀಸನ್​ನಿಂದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ 'ಪವರ್ ಕೋಚ್' ಆಗಿ ಕಾರ್ಯ ನಿರ್ವಹಿಸಲಿದ್ದಾರೆ. ಈ ಮೂಲಕ ಕೆಕೆಆರ್ ಪರ ಹೊಸ ಇನಿಂಗ್ಸ್ ಆರಂಭಿಸುವುದನ್ನು ಸಹ ಐಪಿಎಲ್ ವಿದಾಯದ ವೇಳೆಯೇ ರಸೆಲ್ ಖಚಿತಪಡಿಸಿದ್ದಾರೆ.

ಹೌದು, ಐಪಿಎಲ್​ಗೆ ವಿದಾಯ ಹೇಳಿರುವ ಆ್ಯಂಡ್ರೆ ರಸೆಲ್ ಮುಂದಿನ ಸೀಸನ್​ನಿಂದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ 'ಪವರ್ ಕೋಚ್' ಆಗಿ ಕಾರ್ಯ ನಿರ್ವಹಿಸಲಿದ್ದಾರೆ. ಈ ಮೂಲಕ ಕೆಕೆಆರ್ ಪರ ಹೊಸ ಇನಿಂಗ್ಸ್ ಆರಂಭಿಸುವುದನ್ನು ಸಹ ಐಪಿಎಲ್ ವಿದಾಯದ ವೇಳೆಯೇ ರಸೆಲ್ ಖಚಿತಪಡಿಸಿದ್ದಾರೆ.

3 / 5
2012 ರಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ (ಈಗಿನ ಡೆಲ್ಲಿ ಕ್ಯಾಪಿಟಲ್ಸ್) ಪರ ಕಣಕ್ಕಿಳಿಯುವ ಮೂಲಕ ಐಪಿಎಲ್ ಕೆರಿಯರ್ ಆರಂಭಿಸಿದ್ದ ಆ್ಯಂಡ್ರೆ ರಸೆಲ್ 2014 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಎಂಟ್ರಿ ಕೊಟ್ಟಿದ್ದರು. ಆ ಬಳಿಕ ಸತತ 12 ಸೀಸನ್​ಗಳಲ್ಲಿ ಕೆಕೆಆರ್ ಪರ ಕಣಕ್ಕಿಳಿದಿದ್ದರು. ಇದಾಗ್ಯೂ 37 ವರ್ಷದ ರಸೆಲ್ ಅವರನ್ನು ಈ ಬಾರಿ ಕೆಕೆಆರ್ ಬಿಡುಗಡೆ ಮಾಡಿತ್ತು. ಇತ್ತ ರಿಲೀಸ್ ಆದ ಬೆನ್ನಲ್ಲೇ ರಸೆಲ್ ಐಪಿಎಲ್​ಗೆ ವಿದಾಯ ಹೇಳಿದ್ದಾರೆ. ಇದರ ಬೆನ್ನಲ್ಲೇ ಕೆಕೆಆರ್ ಅವರನ್ನು ಪವರ್ ಕೋಚ್ ಆಗಿ ನೇಮಿಸಿರುವುದು ವಿಶೇಷ.

2012 ರಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ (ಈಗಿನ ಡೆಲ್ಲಿ ಕ್ಯಾಪಿಟಲ್ಸ್) ಪರ ಕಣಕ್ಕಿಳಿಯುವ ಮೂಲಕ ಐಪಿಎಲ್ ಕೆರಿಯರ್ ಆರಂಭಿಸಿದ್ದ ಆ್ಯಂಡ್ರೆ ರಸೆಲ್ 2014 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಎಂಟ್ರಿ ಕೊಟ್ಟಿದ್ದರು. ಆ ಬಳಿಕ ಸತತ 12 ಸೀಸನ್​ಗಳಲ್ಲಿ ಕೆಕೆಆರ್ ಪರ ಕಣಕ್ಕಿಳಿದಿದ್ದರು. ಇದಾಗ್ಯೂ 37 ವರ್ಷದ ರಸೆಲ್ ಅವರನ್ನು ಈ ಬಾರಿ ಕೆಕೆಆರ್ ಬಿಡುಗಡೆ ಮಾಡಿತ್ತು. ಇತ್ತ ರಿಲೀಸ್ ಆದ ಬೆನ್ನಲ್ಲೇ ರಸೆಲ್ ಐಪಿಎಲ್​ಗೆ ವಿದಾಯ ಹೇಳಿದ್ದಾರೆ. ಇದರ ಬೆನ್ನಲ್ಲೇ ಕೆಕೆಆರ್ ಅವರನ್ನು ಪವರ್ ಕೋಚ್ ಆಗಿ ನೇಮಿಸಿರುವುದು ವಿಶೇಷ.

4 / 5
ಇನ್ನು ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ 139 ಪಂದ್ಯಗಳನ್ನಾಡಿರುವ ರಸೆಲ್ 115 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 12 ಅರ್ಧಶತಕಗಳೊಂದಿಗೆ 2651 ರನ್ ಕಲೆಹಾಕಿದ್ದಾರೆ. ಹಾಗೆಯೇ 123 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಅಷ್ಟೇ ಅಲ್ಲದೆ 2014 ಮತ್ತು 2024 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಆ್ಯಂಡ್ರೆ ರಸೆಲ್ ಪ್ರಮುಖ ಪಾತ್ರವಹಿಸಿದ್ದರು. ಇದೀಗ ಕೆಕೆಆರ್ ಪರ 'ಪವರ್ ಕೋಚ್' ಆಗಿ ಹೊಸ ಇನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ.

ಇನ್ನು ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ 139 ಪಂದ್ಯಗಳನ್ನಾಡಿರುವ ರಸೆಲ್ 115 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 12 ಅರ್ಧಶತಕಗಳೊಂದಿಗೆ 2651 ರನ್ ಕಲೆಹಾಕಿದ್ದಾರೆ. ಹಾಗೆಯೇ 123 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಅಷ್ಟೇ ಅಲ್ಲದೆ 2014 ಮತ್ತು 2024 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಆ್ಯಂಡ್ರೆ ರಸೆಲ್ ಪ್ರಮುಖ ಪಾತ್ರವಹಿಸಿದ್ದರು. ಇದೀಗ ಕೆಕೆಆರ್ ಪರ 'ಪವರ್ ಕೋಚ್' ಆಗಿ ಹೊಸ ಇನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ.

5 / 5
Follow Us
ಆ ವಿಡಿಯೋ ಮಾಡಿದ ಕೆಲವೇ ನಿಮಿಷಗಳಲ್ಲಿ ಶ್ರೀನಂದಾ ನಾಪತ್ತೆ!
ಆ ವಿಡಿಯೋ ಮಾಡಿದ ಕೆಲವೇ ನಿಮಿಷಗಳಲ್ಲಿ ಶ್ರೀನಂದಾ ನಾಪತ್ತೆ!
ಮತದಾನಕ್ಕೆ ಸಿದ್ಧತೆ ಜೋರು, ಮತಗಟ್ಟೆಲೇ ಸಿಬ್ಬಂದಿಗೆ ಹೆಲ್ತ್ ಚೆಕಪ್
ಮತದಾನಕ್ಕೆ ಸಿದ್ಧತೆ ಜೋರು, ಮತಗಟ್ಟೆಲೇ ಸಿಬ್ಬಂದಿಗೆ ಹೆಲ್ತ್ ಚೆಕಪ್
ಪ್ರಯಾಣಿಕರೆದುರೇ ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸಿದ ಟ್ರಾನ್ಸ್‌ಜೆಂಡರ್
ಪ್ರಯಾಣಿಕರೆದುರೇ ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸಿದ ಟ್ರಾನ್ಸ್‌ಜೆಂಡರ್
ಊಬರ್ ಕಂಪನಿ ಚಾಲಕರಿಗೆ ಮಾಡೋ ಮೋಸ ಎಂಥದ್ದು ಅಂತ ಬಿಚ್ಚಿಟ್ಟ ಚಾಲಕರು!
ಊಬರ್ ಕಂಪನಿ ಚಾಲಕರಿಗೆ ಮಾಡೋ ಮೋಸ ಎಂಥದ್ದು ಅಂತ ಬಿಚ್ಚಿಟ್ಟ ಚಾಲಕರು!
ಕಾಲುಂಗರ ಹಾಕಿಕೊಳ್ತಾರೆ ನಟಿ ರಜಿನಿ ಪತಿ ಅರುಣ್ 
ಕಾಲುಂಗರ ಹಾಕಿಕೊಳ್ತಾರೆ ನಟಿ ರಜಿನಿ ಪತಿ ಅರುಣ್ 
ಪೂಜೆ ವೇಳೆ ಪಾದರಕ್ಷೆ ಬಿಡಲು ವೈಷ್ಣೋದೇವಿ ಮಂಡಳಿ ಹೆಚ್ಚುವರಿ ಸಿಇಒ ನಿರಾಕರಣೆ
ಪೂಜೆ ವೇಳೆ ಪಾದರಕ್ಷೆ ಬಿಡಲು ವೈಷ್ಣೋದೇವಿ ಮಂಡಳಿ ಹೆಚ್ಚುವರಿ ಸಿಇಒ ನಿರಾಕರಣೆ
ಕೇವಲ ಫೋಟೊಗಾಗಿ ತಿಲಕವೇ? ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ನಡೆ
ಕೇವಲ ಫೋಟೊಗಾಗಿ ತಿಲಕವೇ? ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ನಡೆ
ಬಾಗಲಕೋಟೆ ಬೈ ಎಲೆಕ್ಷನ್: ಕೊನೇ ಹಂತದ ಸಿದ್ಧತೆ ಹೇಗಿದೆ ಗೊತ್ತಾ?
ಬಾಗಲಕೋಟೆ ಬೈ ಎಲೆಕ್ಷನ್: ಕೊನೇ ಹಂತದ ಸಿದ್ಧತೆ ಹೇಗಿದೆ ಗೊತ್ತಾ?
ಪ್ರವಾಸಿಗರನ್ನೇ ದಿಟ್ಟಿಸಿ ನೋಡುತ್ತಾ ಸಾಗಿದ ಹುಲಿರಾಯನ ಖದರ್ ನೋಡಿ!
ಪ್ರವಾಸಿಗರನ್ನೇ ದಿಟ್ಟಿಸಿ ನೋಡುತ್ತಾ ಸಾಗಿದ ಹುಲಿರಾಯನ ಖದರ್ ನೋಡಿ!
ಈರುಳ್ಳಿ ಖರೀದಿಗೆಂದು ರೈತ ಸ್ಕೂಟಿಯಲ್ಲಿಟ್ಟಿದ್ದ 5 ಲಕ್ಷ ರೂ. ಕದ್ದ ಕಳ್ಳ
ಈರುಳ್ಳಿ ಖರೀದಿಗೆಂದು ರೈತ ಸ್ಕೂಟಿಯಲ್ಲಿಟ್ಟಿದ್ದ 5 ಲಕ್ಷ ರೂ. ಕದ್ದ ಕಳ್ಳ