AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಐಪಿಎಲ್​ಗೆ ಗುಡ್ ಬೈ ಹೇಳಿದ ಆ್ಯಂಡ್ರೆ ರಸೆಲ್..!

Andre Russell: ಆ್ಯಂಡ್ರೆ ರಸೆಲ್ ಐಪಿಎಲ್​ನಿಂದ ನಿವೃತ್ತಿ ಘೋಷಿಸಿದ್ದಾರೆ. 2012 ರಿಂದ ಇಂಡಿಯನ್ ಪ್ರೀಮಿಯರ್ ಲೀಗ್​ನ ಭಾಗವಾಗಿದ್ದ ರಸೆಲ್ ಅವರನ್ನು ಈ ಬಾರಿ ಕೆಕೆಆರ್ ಫ್ರಾಂಚೈಸಿ ಬಿಡುಗಡೆ ಮಾಡಿತ್ತು. ಇದರ ಬೆನ್ನಲ್ಲೇ ಐಪಿಎಲ್​ಗೆ ವಿದಾಯ ಹೇಳಿದ್ದಾರೆ. ಇದಾಗ್ಯೂ ಅವರು ಕೋಚ್ ಸ್ಥಾನದೊಂದಿಗೆ ಮುಂದಿನ ಸೀಸನ್​ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 30, 2025 | 1:40 PM

Share
ವೆಸ್ಟ್ ಇಂಡೀಸ್ ದಿಗ್ಗಜ ಆ್ಯಂಡ್ರೆ ರಸೆಲ್ (Andre Russell) ಇಂಡಿಯನ್ ಪ್ರೀಮಿಯರ್ ಲೀಗ್​ಗೆ ವಿದಾಯ ಹೇಳಿದ್ದಾರೆ. ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಿಂದ ಹೊರಬಿದ್ದಿರುವ ರಸೆಲ್ ಮುಂದಿನ ಸೀಸನ್​ನಲ್ಲಿ ಬೇರೊಂದು ತಂಡದ ಪರ ಆಡಲು ಇಚ್ಛಿಸುತ್ತಿಲ್ಲ. ಹೀಗಾಗಿ ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದೇನೆ ಎಂದು ತಿಳಿಸಿದ್ದಾರೆ.

ವೆಸ್ಟ್ ಇಂಡೀಸ್ ದಿಗ್ಗಜ ಆ್ಯಂಡ್ರೆ ರಸೆಲ್ (Andre Russell) ಇಂಡಿಯನ್ ಪ್ರೀಮಿಯರ್ ಲೀಗ್​ಗೆ ವಿದಾಯ ಹೇಳಿದ್ದಾರೆ. ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಿಂದ ಹೊರಬಿದ್ದಿರುವ ರಸೆಲ್ ಮುಂದಿನ ಸೀಸನ್​ನಲ್ಲಿ ಬೇರೊಂದು ತಂಡದ ಪರ ಆಡಲು ಇಚ್ಛಿಸುತ್ತಿಲ್ಲ. ಹೀಗಾಗಿ ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದೇನೆ ಎಂದು ತಿಳಿಸಿದ್ದಾರೆ.

1 / 5
ನನ್ನ ಐಪಿಎಲ್ ಬೂಟುಗಳನ್ನು ನೇತುಹಾಕುತ್ತಿದ್ದೇನೆ... ಆದರೆ ಇದು ಸೊಕ್ಕಿನ ನಡೆಯಲ್ಲ. ಬದಲಾಗಿ ಕಳೆದ 12 ಸೀಸನ್​ನಲ್ಲಿನ ನೆನಪುಗಳು ಮತ್ತು ಕೆಕೆಆರ್ ಕುಟುಂಬದೊಂದಿಗಿನ ಅಪಾರ ಪ್ರೀತಿ. ನಾನು ಇನ್ನೂ ಪ್ರಪಂಚದಾದ್ಯಂತದ ಪ್ರತಿಯೊಂದು ಲೀಗ್‌ನಲ್ಲಿ ಸಿಕ್ಸರ್‌ಗಳನ್ನು ಸಿಡಿಸುತ್ತೇನೆ ಮತ್ತು ವಿಕೆಟ್‌ಗಳನ್ನು ಪಡೆಯುತ್ತೇನೆ. ಆದರೆ ಖುಷಿಯ ವಿಚಾರ ಎಂದರೆ ನಾನು ಕೆಕೆಆರ್​ ಅನ್ನು ಬಿಟ್ಟು ಹೋಗುತ್ತಿಲ್ಲ ಎಂದು ರಸೆಲ್ ತಿಳಿಸಿದ್ದಾರೆ.

ನನ್ನ ಐಪಿಎಲ್ ಬೂಟುಗಳನ್ನು ನೇತುಹಾಕುತ್ತಿದ್ದೇನೆ... ಆದರೆ ಇದು ಸೊಕ್ಕಿನ ನಡೆಯಲ್ಲ. ಬದಲಾಗಿ ಕಳೆದ 12 ಸೀಸನ್​ನಲ್ಲಿನ ನೆನಪುಗಳು ಮತ್ತು ಕೆಕೆಆರ್ ಕುಟುಂಬದೊಂದಿಗಿನ ಅಪಾರ ಪ್ರೀತಿ. ನಾನು ಇನ್ನೂ ಪ್ರಪಂಚದಾದ್ಯಂತದ ಪ್ರತಿಯೊಂದು ಲೀಗ್‌ನಲ್ಲಿ ಸಿಕ್ಸರ್‌ಗಳನ್ನು ಸಿಡಿಸುತ್ತೇನೆ ಮತ್ತು ವಿಕೆಟ್‌ಗಳನ್ನು ಪಡೆಯುತ್ತೇನೆ. ಆದರೆ ಖುಷಿಯ ವಿಚಾರ ಎಂದರೆ ನಾನು ಕೆಕೆಆರ್​ ಅನ್ನು ಬಿಟ್ಟು ಹೋಗುತ್ತಿಲ್ಲ ಎಂದು ರಸೆಲ್ ತಿಳಿಸಿದ್ದಾರೆ.

2 / 5
ಹೌದು, ಐಪಿಎಲ್​ಗೆ ವಿದಾಯ ಹೇಳಿರುವ ಆ್ಯಂಡ್ರೆ ರಸೆಲ್ ಮುಂದಿನ ಸೀಸನ್​ನಿಂದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ 'ಪವರ್ ಕೋಚ್' ಆಗಿ ಕಾರ್ಯ ನಿರ್ವಹಿಸಲಿದ್ದಾರೆ. ಈ ಮೂಲಕ ಕೆಕೆಆರ್ ಪರ ಹೊಸ ಇನಿಂಗ್ಸ್ ಆರಂಭಿಸುವುದನ್ನು ಸಹ ಐಪಿಎಲ್ ವಿದಾಯದ ವೇಳೆಯೇ ರಸೆಲ್ ಖಚಿತಪಡಿಸಿದ್ದಾರೆ.

ಹೌದು, ಐಪಿಎಲ್​ಗೆ ವಿದಾಯ ಹೇಳಿರುವ ಆ್ಯಂಡ್ರೆ ರಸೆಲ್ ಮುಂದಿನ ಸೀಸನ್​ನಿಂದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ 'ಪವರ್ ಕೋಚ್' ಆಗಿ ಕಾರ್ಯ ನಿರ್ವಹಿಸಲಿದ್ದಾರೆ. ಈ ಮೂಲಕ ಕೆಕೆಆರ್ ಪರ ಹೊಸ ಇನಿಂಗ್ಸ್ ಆರಂಭಿಸುವುದನ್ನು ಸಹ ಐಪಿಎಲ್ ವಿದಾಯದ ವೇಳೆಯೇ ರಸೆಲ್ ಖಚಿತಪಡಿಸಿದ್ದಾರೆ.

3 / 5
2012 ರಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ (ಈಗಿನ ಡೆಲ್ಲಿ ಕ್ಯಾಪಿಟಲ್ಸ್) ಪರ ಕಣಕ್ಕಿಳಿಯುವ ಮೂಲಕ ಐಪಿಎಲ್ ಕೆರಿಯರ್ ಆರಂಭಿಸಿದ್ದ ಆ್ಯಂಡ್ರೆ ರಸೆಲ್ 2014 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಎಂಟ್ರಿ ಕೊಟ್ಟಿದ್ದರು. ಆ ಬಳಿಕ ಸತತ 12 ಸೀಸನ್​ಗಳಲ್ಲಿ ಕೆಕೆಆರ್ ಪರ ಕಣಕ್ಕಿಳಿದಿದ್ದರು. ಇದಾಗ್ಯೂ 37 ವರ್ಷದ ರಸೆಲ್ ಅವರನ್ನು ಈ ಬಾರಿ ಕೆಕೆಆರ್ ಬಿಡುಗಡೆ ಮಾಡಿತ್ತು. ಇತ್ತ ರಿಲೀಸ್ ಆದ ಬೆನ್ನಲ್ಲೇ ರಸೆಲ್ ಐಪಿಎಲ್​ಗೆ ವಿದಾಯ ಹೇಳಿದ್ದಾರೆ. ಇದರ ಬೆನ್ನಲ್ಲೇ ಕೆಕೆಆರ್ ಅವರನ್ನು ಪವರ್ ಕೋಚ್ ಆಗಿ ನೇಮಿಸಿರುವುದು ವಿಶೇಷ.

2012 ರಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ (ಈಗಿನ ಡೆಲ್ಲಿ ಕ್ಯಾಪಿಟಲ್ಸ್) ಪರ ಕಣಕ್ಕಿಳಿಯುವ ಮೂಲಕ ಐಪಿಎಲ್ ಕೆರಿಯರ್ ಆರಂಭಿಸಿದ್ದ ಆ್ಯಂಡ್ರೆ ರಸೆಲ್ 2014 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಎಂಟ್ರಿ ಕೊಟ್ಟಿದ್ದರು. ಆ ಬಳಿಕ ಸತತ 12 ಸೀಸನ್​ಗಳಲ್ಲಿ ಕೆಕೆಆರ್ ಪರ ಕಣಕ್ಕಿಳಿದಿದ್ದರು. ಇದಾಗ್ಯೂ 37 ವರ್ಷದ ರಸೆಲ್ ಅವರನ್ನು ಈ ಬಾರಿ ಕೆಕೆಆರ್ ಬಿಡುಗಡೆ ಮಾಡಿತ್ತು. ಇತ್ತ ರಿಲೀಸ್ ಆದ ಬೆನ್ನಲ್ಲೇ ರಸೆಲ್ ಐಪಿಎಲ್​ಗೆ ವಿದಾಯ ಹೇಳಿದ್ದಾರೆ. ಇದರ ಬೆನ್ನಲ್ಲೇ ಕೆಕೆಆರ್ ಅವರನ್ನು ಪವರ್ ಕೋಚ್ ಆಗಿ ನೇಮಿಸಿರುವುದು ವಿಶೇಷ.

4 / 5
ಇನ್ನು ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ 139 ಪಂದ್ಯಗಳನ್ನಾಡಿರುವ ರಸೆಲ್ 115 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 12 ಅರ್ಧಶತಕಗಳೊಂದಿಗೆ 2651 ರನ್ ಕಲೆಹಾಕಿದ್ದಾರೆ. ಹಾಗೆಯೇ 123 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಅಷ್ಟೇ ಅಲ್ಲದೆ 2014 ಮತ್ತು 2024 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಆ್ಯಂಡ್ರೆ ರಸೆಲ್ ಪ್ರಮುಖ ಪಾತ್ರವಹಿಸಿದ್ದರು. ಇದೀಗ ಕೆಕೆಆರ್ ಪರ 'ಪವರ್ ಕೋಚ್' ಆಗಿ ಹೊಸ ಇನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ.

ಇನ್ನು ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ 139 ಪಂದ್ಯಗಳನ್ನಾಡಿರುವ ರಸೆಲ್ 115 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 12 ಅರ್ಧಶತಕಗಳೊಂದಿಗೆ 2651 ರನ್ ಕಲೆಹಾಕಿದ್ದಾರೆ. ಹಾಗೆಯೇ 123 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಅಷ್ಟೇ ಅಲ್ಲದೆ 2014 ಮತ್ತು 2024 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಆ್ಯಂಡ್ರೆ ರಸೆಲ್ ಪ್ರಮುಖ ಪಾತ್ರವಹಿಸಿದ್ದರು. ಇದೀಗ ಕೆಕೆಆರ್ ಪರ 'ಪವರ್ ಕೋಚ್' ಆಗಿ ಹೊಸ ಇನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ.

5 / 5
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ