AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Andre Russell: ನಿವೃತ್ತಿ ಘೋಷಿಸಿದ ಆ್ಯಂಡ್ರೆ ರಸೆಲ್

Andre Russell: ಆ್ಯಂಡ್ರೆ ರಸೆಲ್ ವೆಸ್ಟ್ ಇಂಡೀಸ್ ಪರ 56 ಏಕದಿನ, 84 ಟಿ20 ಹಾಗೂ ಒಂದು ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ ಟಿ20 ಕ್ರಿಕೆಟ್​ನಲ್ಲಿ 1074 ರನ್ ಕಲೆಹಾಕಿದರೆ, ಏಕದಿನ ಕ್ರಿಕೆಟ್​ನಲ್ಲಿ 1034 ರನ್​ ಗಳಿಸಿದ್ದರು. ಇನ್ನು ಏಕೈಕ ಟೆಸ್ಟ್ ಪಂದ್ಯದಲ್ಲಿ ಅವರು 2 ರನ್ ಹಾಗೂ 1 ವಿಕೆಟ್ ಪಡೆದಿದ್ದರು. ಇದೀಗ 14 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಗುಡ್ ಬೈ ಹೇಳಲು ರಸೆಲ್ ನಿರ್ಧರಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Jul 17, 2025 | 7:59 AM

Share
ವೆಸ್ಟ್ ಇಂಡೀಸ್ ತಂಡದ ಸ್ಟಾರ್ ಆಲ್​ರೌಂಡರ್ ಆ್ಯಂಡ್ರೆ ರಸೆಲ್ (Andre Russell) ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ್ದಾರೆ. ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಕಣಕ್ಕಿಳಿಯುವ ಮೂಲಕ ಇಂಟರ್​ನ್ಯಾಷನಲ್ ಕೆರಿಯರ್​ಗೆ ವಿದಾಯ ಹೇಳುವುದಾಗಿ 37 ವರ್ಷದ ರಸೆಲ್ ತಿಳಿಸಿದ್ದಾರೆ.

ವೆಸ್ಟ್ ಇಂಡೀಸ್ ತಂಡದ ಸ್ಟಾರ್ ಆಲ್​ರೌಂಡರ್ ಆ್ಯಂಡ್ರೆ ರಸೆಲ್ (Andre Russell) ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ್ದಾರೆ. ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಕಣಕ್ಕಿಳಿಯುವ ಮೂಲಕ ಇಂಟರ್​ನ್ಯಾಷನಲ್ ಕೆರಿಯರ್​ಗೆ ವಿದಾಯ ಹೇಳುವುದಾಗಿ 37 ವರ್ಷದ ರಸೆಲ್ ತಿಳಿಸಿದ್ದಾರೆ.

1 / 5
2026 ರ ಟಿ20 ವಿಶ್ವಕಪ್​ಗೂ ಮುನ್ನ ನಿವೃತ್ತಿ ನೀಡಲು ನಿರ್ಧರಿಸಿದ್ದು, ಅದರಂತೆ ಜಮೈಕಾದ ಸಬೀನಾ ಪಾರ್ಕ್​ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳುತ್ತಿರುವುದಾಗಿ ರಸೆಲ್ ತಿಳಿಸಿದ್ದಾರೆ. ಸಬೀನಾ ಪಾರ್ಕ್ ರಸೆಲ್ ಅವರ ತವರು ಮೈದಾನವಾಗಿದ್ದು, ಹೀಗಾಗಿ ಮೈದಾನದಲ್ಲಿ ನಡೆಯಲಿರುವ ಪಂದ್ಯದ ಮೂಲಕ ವಿದಾಯ ಹೇಳಲು ಅವರು ಬಯಸಿದ್ದಾರೆ.

2026 ರ ಟಿ20 ವಿಶ್ವಕಪ್​ಗೂ ಮುನ್ನ ನಿವೃತ್ತಿ ನೀಡಲು ನಿರ್ಧರಿಸಿದ್ದು, ಅದರಂತೆ ಜಮೈಕಾದ ಸಬೀನಾ ಪಾರ್ಕ್​ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳುತ್ತಿರುವುದಾಗಿ ರಸೆಲ್ ತಿಳಿಸಿದ್ದಾರೆ. ಸಬೀನಾ ಪಾರ್ಕ್ ರಸೆಲ್ ಅವರ ತವರು ಮೈದಾನವಾಗಿದ್ದು, ಹೀಗಾಗಿ ಮೈದಾನದಲ್ಲಿ ನಡೆಯಲಿರುವ ಪಂದ್ಯದ ಮೂಲಕ ವಿದಾಯ ಹೇಳಲು ಅವರು ಬಯಸಿದ್ದಾರೆ.

2 / 5
2011 ರಲ್ಲಿ ಪಾಕಿಸ್ತಾನ್ ವಿರುದ್ದ ಕಣಕ್ಕಿಳಿಯುವ ಮೂಲಕ ವೆಸ್ಟ್ ಇಂಡೀಸ್​ ಪರ ಟಿ20 ಕೆರಿಯರ್ ಆರಂಭಿಸಿದ್ದ ಆ್ಯಂಡ್ರೆ ರಸೆಲ್ 86 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 75 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಅವರು 3 ಅರ್ಧಶತಕಗೊಂದಿಗೆ 1122 ರನ್ ಕಲೆಹಾಕಿದ್ದಾರೆ. ಹಾಗೆಯೇ ಬೌಲಿಂಗ್​ನಲ್ಲಿ 61 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

2011 ರಲ್ಲಿ ಪಾಕಿಸ್ತಾನ್ ವಿರುದ್ದ ಕಣಕ್ಕಿಳಿಯುವ ಮೂಲಕ ವೆಸ್ಟ್ ಇಂಡೀಸ್​ ಪರ ಟಿ20 ಕೆರಿಯರ್ ಆರಂಭಿಸಿದ್ದ ಆ್ಯಂಡ್ರೆ ರಸೆಲ್ 86 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 75 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಅವರು 3 ಅರ್ಧಶತಕಗೊಂದಿಗೆ 1122 ರನ್ ಕಲೆಹಾಕಿದ್ದಾರೆ. ಹಾಗೆಯೇ ಬೌಲಿಂಗ್​ನಲ್ಲಿ 61 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

3 / 5
ಇನ್ನು 2011 ರಲ್ಲಿ ಐರ್ಲೆಂಡ್ ವಿರುದ್ಧದ ಪಂದ್ಯದ ಮೂಲಕ ಏಕದಿನ ಕ್ರಿಕೆಟ್ ಕೆರಿಯರ್ ಆರಂಭಿಸಿದ್ದ ಆ್ಯಂಡ್ರೆ ರಸೆಲ್ ಈವರೆಗೆ ಆಡಿರುವುದು 56 ಪಂದ್ಯಗಳನ್ನು ಮಾತ್ರ. ಈ ವೇಳೆ 4 ಅರ್ಧಶತಕಗಳೊಂದಿಗೆ 1034 ರನ್ ಕಲೆಹಾಕಿದ್ದಾರೆ. ಇನ್ನು 55 ಏಕದಿನ ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅವರು ಒಟ್ಟು 70 ವಿಕೆಟ್​ಗಳನ್ನು ಸಹ ಕಬಳಿಸಿದ್ದಾರೆ.

ಇನ್ನು 2011 ರಲ್ಲಿ ಐರ್ಲೆಂಡ್ ವಿರುದ್ಧದ ಪಂದ್ಯದ ಮೂಲಕ ಏಕದಿನ ಕ್ರಿಕೆಟ್ ಕೆರಿಯರ್ ಆರಂಭಿಸಿದ್ದ ಆ್ಯಂಡ್ರೆ ರಸೆಲ್ ಈವರೆಗೆ ಆಡಿರುವುದು 56 ಪಂದ್ಯಗಳನ್ನು ಮಾತ್ರ. ಈ ವೇಳೆ 4 ಅರ್ಧಶತಕಗಳೊಂದಿಗೆ 1034 ರನ್ ಕಲೆಹಾಕಿದ್ದಾರೆ. ಇನ್ನು 55 ಏಕದಿನ ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅವರು ಒಟ್ಟು 70 ವಿಕೆಟ್​ಗಳನ್ನು ಸಹ ಕಬಳಿಸಿದ್ದಾರೆ.

4 / 5
ಇದೀಗ 14 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್​ ಕೆರಿಯರ್​ಗೆ ಆ್ಯಂಡ್ರೆ ರಸೆಲ್ ಗುಡ್ ಬೈ ಹೇಳಿದ್ದಾರೆ. ಇದಾಗ್ಯೂ ಮುಂಬರುವ ದಿನಗಳಲ್ಲಿ ಟಿ20 ಲೀಗ್​ಗಳಲ್ಲಿ ಮುಂದುವರೆಯುವುದಾಗಿ ಅವರು ತಿಳಿಸಿದ್ದಾರೆ. ಅದರಂತೆ ಐಪಿಎಲ್. ಸಿಪಿಎಲ್, ಎಂಸಿಎಲ್ ಸೇರಿದಂತೆ ವಿಶ್ವದ ಪ್ರಮುಖ ಟಿ20 ಲೀಗ್​ನಲ್ಲಿ ಆ್ಯಂಡ್ರೆ ರಸೆಲ್ ಅವರ ಟಿ20 ಆಟ ಮುಂದುವರೆಯಲಿದೆ.

ಇದೀಗ 14 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್​ ಕೆರಿಯರ್​ಗೆ ಆ್ಯಂಡ್ರೆ ರಸೆಲ್ ಗುಡ್ ಬೈ ಹೇಳಿದ್ದಾರೆ. ಇದಾಗ್ಯೂ ಮುಂಬರುವ ದಿನಗಳಲ್ಲಿ ಟಿ20 ಲೀಗ್​ಗಳಲ್ಲಿ ಮುಂದುವರೆಯುವುದಾಗಿ ಅವರು ತಿಳಿಸಿದ್ದಾರೆ. ಅದರಂತೆ ಐಪಿಎಲ್. ಸಿಪಿಎಲ್, ಎಂಸಿಎಲ್ ಸೇರಿದಂತೆ ವಿಶ್ವದ ಪ್ರಮುಖ ಟಿ20 ಲೀಗ್​ನಲ್ಲಿ ಆ್ಯಂಡ್ರೆ ರಸೆಲ್ ಅವರ ಟಿ20 ಆಟ ಮುಂದುವರೆಯಲಿದೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ