AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ಇತಿಹಾಸದಲ್ಲೇ ಯಾರೂ ಮಾಡದ ವಿಶ್ವ ದಾಖಲೆ ಬರೆದ ರಸೆಲ್

Andre Russell World Recod: ಇಂಡಿಯನ್ ಪ್ರೀಮಿಯರ್ ಲೀಗ್​​ಗೆ ಗುಡ್ ಬೈ ಹೇಳಿರುವ ಆ್ಯಂಡ್ರೆ ರಸೆಲ್ ಇದೀಗ ಯುಎಇನಲ್ಲಿ ನಡೆಯುತ್ತಿರುವ ಇಂಟರ್​​ನ್ಯಾಷನಲ್ ಟಿ20 ಲೀಗ್​​ನಲ್ಲಿ ಕಾಣಿಸಿಕೊಂಡಿದ್ದಾರೆ. ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯ ಒಡೆತನದಲ್ಲಿರುವ ಅಬುಧಾಬಿ ನೈಟ್ ರೈಡರ್ಸ್ ಪರ ಕಣಕ್ಕಿಳಿಯುತ್ತಿರುವ ರಸೆಲ್ ಇದೀಗ ವಿಶೇಷ ವಿಶ್ವ ದಾಖಲೆ ನಿರ್ಮಿಸಿ ಎಲ್ಲರ ಗಮನ ಸೆಳೆದಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 07, 2025 | 8:23 AM

Share
ಟಿ20 ಕ್ರಿಕೆಟ್​ನಲ್ಲಿ ವೆಸ್ಟ್ ಇಂಡೀಸ್ ಆಲ್​​ರೌಂಡರ್ ಆ್ಯಂಡ್ರೆ ರಸೆಲ್ (Andre Russell) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಈವರೆಗೆ ಯಾರಿಂದಲೂ ಸಾಧ್ಯವಾಗದ ವರ್ಲ್ಡ್​ ರೆಕಾರ್ಡ್ ಎಂಬುದು ವಿಶೇಷ. ಅಂದರೆ ಚುಟುಕು ಕ್ರಿಕೆಟ್​​ನಲ್ಲಿ ರಸೆಲ್ ಮೂರು ವಿಭಾಗಗಳಲ್ಲಿ ವಿಶೇಷ ಮೈಲುಗಲ್ಲು ದಾಟಿದ್ದಾರೆ.

ಟಿ20 ಕ್ರಿಕೆಟ್​ನಲ್ಲಿ ವೆಸ್ಟ್ ಇಂಡೀಸ್ ಆಲ್​​ರೌಂಡರ್ ಆ್ಯಂಡ್ರೆ ರಸೆಲ್ (Andre Russell) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಈವರೆಗೆ ಯಾರಿಂದಲೂ ಸಾಧ್ಯವಾಗದ ವರ್ಲ್ಡ್​ ರೆಕಾರ್ಡ್ ಎಂಬುದು ವಿಶೇಷ. ಅಂದರೆ ಚುಟುಕು ಕ್ರಿಕೆಟ್​​ನಲ್ಲಿ ರಸೆಲ್ ಮೂರು ವಿಭಾಗಗಳಲ್ಲಿ ವಿಶೇಷ ಮೈಲುಗಲ್ಲು ದಾಟಿದ್ದಾರೆ.

1 / 5
ಶಾರ್ಜಾದಲ್ಲಿ ನಡೆಯುತ್ತಿರುವ ಇಂಟರ್​​ನ್ಯಾಷನಲ್ ಟಿ20 ಲೀಗ್​​ನಲ್ಲಿ ಅಬುಧಾಬಿ ಪರ ಕಣಕ್ಕಿಳಿಯುತ್ತಿರುವ ರಸೆಲ್ ಡೆಸರ್ಟ್ ವೈಪರ್ಸ್ ವಿರುದ್ಧದ ಪಂದ್ಯದಲ್ಲಿ 3 ಓವರ್​​​ಗಳನ್ನು ಎಸೆದಿದ್ದರು. ಈ ವೇಳೆ 1 ವಿಕೆಟ್ ಕಬಳಿಸಿದ್ದಾರೆ. ಈ ಒಂದು ವಿಕೆಟ್​​ನೊಂದಿಗೆ ಆ್ಯಂಡ್ರೆ ರಸೆಲ್ ಟಿ20 ಕ್ರಿಕೆಟ್​​ನಲ್ಲಿ 500 ವಿಕೆಟ್​​ಗಳ ಸಾಧನೆ ಮಾಡಿದ್ದಾರೆ.

ಶಾರ್ಜಾದಲ್ಲಿ ನಡೆಯುತ್ತಿರುವ ಇಂಟರ್​​ನ್ಯಾಷನಲ್ ಟಿ20 ಲೀಗ್​​ನಲ್ಲಿ ಅಬುಧಾಬಿ ಪರ ಕಣಕ್ಕಿಳಿಯುತ್ತಿರುವ ರಸೆಲ್ ಡೆಸರ್ಟ್ ವೈಪರ್ಸ್ ವಿರುದ್ಧದ ಪಂದ್ಯದಲ್ಲಿ 3 ಓವರ್​​​ಗಳನ್ನು ಎಸೆದಿದ್ದರು. ಈ ವೇಳೆ 1 ವಿಕೆಟ್ ಕಬಳಿಸಿದ್ದಾರೆ. ಈ ಒಂದು ವಿಕೆಟ್​​ನೊಂದಿಗೆ ಆ್ಯಂಡ್ರೆ ರಸೆಲ್ ಟಿ20 ಕ್ರಿಕೆಟ್​​ನಲ್ಲಿ 500 ವಿಕೆಟ್​​ಗಳ ಸಾಧನೆ ಮಾಡಿದ್ದಾರೆ.

2 / 5
ಈ ಮೂಲಕ ಟಿ20 ಕ್ರಿಕೆಟ್​ ಇತಿಹಾಸದಲ್ಲೇ 500+ ವಿಕೆಟ್, 5000+ ರನ್​ ಹಾಗೂ 500+ ಸಿಕ್ಸ್​​ ಸಿಡಿಸಿದ ವಿಶ್ವದ ಏಕೈಕ ಆಟಗಾರ ಎನಿಸಿಕೊಂಡಿದ್ದಾರೆ. ಅಂದರೆ ರಸೆಲ್ ಅವರನ್ನು ಹೊರತುಪಡಿಸಿ ಟಿ20 ಕ್ರಿಕೆಟ್​​ನಲ್ಲಿ ಯಾರಿಗೂ ಈ ಸಾಧನೆ ಮಾಡಲು ಸಾಧ್ಯವಾಗಿಲ್ಲ.

ಈ ಮೂಲಕ ಟಿ20 ಕ್ರಿಕೆಟ್​ ಇತಿಹಾಸದಲ್ಲೇ 500+ ವಿಕೆಟ್, 5000+ ರನ್​ ಹಾಗೂ 500+ ಸಿಕ್ಸ್​​ ಸಿಡಿಸಿದ ವಿಶ್ವದ ಏಕೈಕ ಆಟಗಾರ ಎನಿಸಿಕೊಂಡಿದ್ದಾರೆ. ಅಂದರೆ ರಸೆಲ್ ಅವರನ್ನು ಹೊರತುಪಡಿಸಿ ಟಿ20 ಕ್ರಿಕೆಟ್​​ನಲ್ಲಿ ಯಾರಿಗೂ ಈ ಸಾಧನೆ ಮಾಡಲು ಸಾಧ್ಯವಾಗಿಲ್ಲ.

3 / 5
20 ಓವರ್‌ಗಳ ಕ್ರಿಕೆಟ್‌ನಲ್ಲಿ ಒಟ್ಟು 126 ಆಟಗಾರರು 5000 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಇನ್ನು 6 ಬೌಲರ್‌ಗಳು 500 ಕ್ಕೂ ಹೆಚ್ಚು ವಿಕೆಟ್‌ಗಳನ್ನು ಪಡೆದಿದ್ದಾರೆ. ಹಾಗೆಯೇ 10 ಬ್ಯಾಟ್ಸ್‌ಮನ್‌ಗಳು 500 ಕ್ಕೂ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಆದರೆ ಮೂರು ಪಟ್ಟಿಗಳಲ್ಲಿ ಸ್ಥಾನ ಪಡೆದ ಏಕೈಕ ಆಟಗಾರ ರಸೆಲ್.

20 ಓವರ್‌ಗಳ ಕ್ರಿಕೆಟ್‌ನಲ್ಲಿ ಒಟ್ಟು 126 ಆಟಗಾರರು 5000 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಇನ್ನು 6 ಬೌಲರ್‌ಗಳು 500 ಕ್ಕೂ ಹೆಚ್ಚು ವಿಕೆಟ್‌ಗಳನ್ನು ಪಡೆದಿದ್ದಾರೆ. ಹಾಗೆಯೇ 10 ಬ್ಯಾಟ್ಸ್‌ಮನ್‌ಗಳು 500 ಕ್ಕೂ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಆದರೆ ಮೂರು ಪಟ್ಟಿಗಳಲ್ಲಿ ಸ್ಥಾನ ಪಡೆದ ಏಕೈಕ ಆಟಗಾರ ರಸೆಲ್.

4 / 5
ಟಿ20 ಕ್ರಿಕೆಟ್​​ನಲ್ಲಿ ಈವರೆಗೆ 576 ಪಂದ್ಯಗಳನ್ನಾಡಿರುವ ಆ್ಯಂಡ್ರೆ ರಸೆಲ್ ಒಟ್ಟು 9496 ರನ್ ಕಲೆಹಾಕಿದ್ದಾರೆ. ಅಲ್ಲದೆ ಬರೋಬ್ಬರಿ 500 ವಿಕೆಟ್​​ಗಳನ್ನು ಸಹ ಪಡೆದಿದ್ದಾರೆ. ಇನ್ನು 772 ಸಿಕ್ಸರ್​​ಗಳನ್ನು ಸಿಡಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​​ನಲ್ಲಿ ಯಾರಿಗೂ ಸಾಧ್ಯವಾಗದ ದಾಖಲೆ ಬರೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಟಿ20 ಕ್ರಿಕೆಟ್​​ನಲ್ಲಿ ಈವರೆಗೆ 576 ಪಂದ್ಯಗಳನ್ನಾಡಿರುವ ಆ್ಯಂಡ್ರೆ ರಸೆಲ್ ಒಟ್ಟು 9496 ರನ್ ಕಲೆಹಾಕಿದ್ದಾರೆ. ಅಲ್ಲದೆ ಬರೋಬ್ಬರಿ 500 ವಿಕೆಟ್​​ಗಳನ್ನು ಸಹ ಪಡೆದಿದ್ದಾರೆ. ಇನ್ನು 772 ಸಿಕ್ಸರ್​​ಗಳನ್ನು ಸಿಡಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​​ನಲ್ಲಿ ಯಾರಿಗೂ ಸಾಧ್ಯವಾಗದ ದಾಖಲೆ ಬರೆಯುವಲ್ಲಿ ಯಶಸ್ವಿಯಾಗಿದ್ದಾರೆ.

5 / 5
Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!