Anrich Nortje: 18 ಡಾಟ್ ಬಾಲ್, 4 ವಿಕೆಟ್: ವಿಶ್ವ ದಾಖಲೆ ಬರೆದ ಅನ್ರಿಕ್ ನೋಕಿಯಾ

T20 World Cup 2024: ಟಿ20 ವಿಶ್ವಕಪ್​ನ 4ನೇ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ಭರ್ಜರಿ ಜಯ ಸಾಧಿಸಿದೆ. ನ್ಯೂಯಾರ್ಕ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು ಕೇವಲ 77 ರನ್​ಗಳಿಗೆ ಆಲೌಟ್ ಆಗಿತ್ತು. ಈ ಗುರಿಯನ್ನು 16.4 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ಸೌತ್ ಆಫ್ರಿಕಾ ತಂಡವು 6 ವಿಕೆಟ್​ಗಳ ಗೆಲುವು ದಾಖಲಿಸಿದೆ.

|

Updated on: Jun 04, 2024 | 10:25 AM

T20 World Cup 2024: ಈ ಬಾರಿಯ ಐಪಿಎಲ್​ನಲ್ಲಿ ಪ್ರತಿ ಓವರ್​ನಲ್ಲಿ 13.36 ರನ್ ನೀಡಿದ್ದ ಸೌತ್ ಆಫ್ರಿಕಾ ವೇಗಿ ಅನ್ರಿಕ್ ನೋಕಿಯಾ (Anrich Nortje) ಇದೀಗ ಭರ್ಜರಿ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದಾರೆ. ಅದು ಕೂಡ ವಿಶ್ವ ದಾಖಲೆ ಬರೆಯುವ ಮೂಲಕ ಎಂಬುದು ವಿಶೇಷ.

T20 World Cup 2024: ಈ ಬಾರಿಯ ಐಪಿಎಲ್​ನಲ್ಲಿ ಪ್ರತಿ ಓವರ್​ನಲ್ಲಿ 13.36 ರನ್ ನೀಡಿದ್ದ ಸೌತ್ ಆಫ್ರಿಕಾ ವೇಗಿ ಅನ್ರಿಕ್ ನೋಕಿಯಾ (Anrich Nortje) ಇದೀಗ ಭರ್ಜರಿ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದಾರೆ. ಅದು ಕೂಡ ವಿಶ್ವ ದಾಖಲೆ ಬರೆಯುವ ಮೂಲಕ ಎಂಬುದು ವಿಶೇಷ.

1 / 6
ನ್ಯೂಯಾರ್ಕ್​ನ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ 3ನೇ ಪಂದ್ಯದಲ್ಲಿ ಶ್ರೀಲಂಕಾ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಕರಾರುವಾಕ್ ದಾಳಿ ಸಂಘಟಿಸಿದ ಅನ್ರಿಕ್ ನೋಕಿಯಾ 4 ಓವರ್​​ಗಳಲ್ಲಿ ಕೇವಲ 7 ರನ್ ನೀಡಿ 4 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

ನ್ಯೂಯಾರ್ಕ್​ನ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ 3ನೇ ಪಂದ್ಯದಲ್ಲಿ ಶ್ರೀಲಂಕಾ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಕರಾರುವಾಕ್ ದಾಳಿ ಸಂಘಟಿಸಿದ ಅನ್ರಿಕ್ ನೋಕಿಯಾ 4 ಓವರ್​​ಗಳಲ್ಲಿ ಕೇವಲ 7 ರನ್ ನೀಡಿ 4 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

2 / 6
ಈ ನಾಲ್ಕು ವಿಕೆಟ್​ಗಳೊಂದಿಗೆ ನೋಕಿಯಾ ಟಿ20 ವಿಶ್ವಕಪ್​ನ ಹಲವು ದಾಖಲೆಗಳನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ. ಕೇವಲ 7 ರನ್​ಗಳಿಗೆ 4 ವಿಕೆಟ್ ಕಬಳಿಸುವ ಮೂಲಕ ಟಿ20 ವಿಶ್ವಕಪ್​ನಲ್ಲಿ ಅತ್ಯುತ್ತಮ ಬೌಲಿಂಗ್ ಮಾಡಿದ ಸೌತ್ ಆಫ್ರಿಕಾ ಬೌಲರ್ ಎನಿಸಿಕೊಂಡರು. ವಿಶೇಷ ಎಂದರೆ ಇದಕ್ಕೂ ಮುನ್ನ ಈ ದಾಖಲೆ ನೋಕಿಯಾ ಅವರ ಹೆಸರಿನಲ್ಲಿಯೇ ಇತ್ತು. 2021 ರಲ್ಲಿ 10 ರನ್ ನೀಡಿ 4 ವಿಕೆಟ್ ಕಬಳಿಸಿ ಈ ದಾಖಲೆ ಬರೆದಿದ್ದರು.

ಈ ನಾಲ್ಕು ವಿಕೆಟ್​ಗಳೊಂದಿಗೆ ನೋಕಿಯಾ ಟಿ20 ವಿಶ್ವಕಪ್​ನ ಹಲವು ದಾಖಲೆಗಳನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ. ಕೇವಲ 7 ರನ್​ಗಳಿಗೆ 4 ವಿಕೆಟ್ ಕಬಳಿಸುವ ಮೂಲಕ ಟಿ20 ವಿಶ್ವಕಪ್​ನಲ್ಲಿ ಅತ್ಯುತ್ತಮ ಬೌಲಿಂಗ್ ಮಾಡಿದ ಸೌತ್ ಆಫ್ರಿಕಾ ಬೌಲರ್ ಎನಿಸಿಕೊಂಡರು. ವಿಶೇಷ ಎಂದರೆ ಇದಕ್ಕೂ ಮುನ್ನ ಈ ದಾಖಲೆ ನೋಕಿಯಾ ಅವರ ಹೆಸರಿನಲ್ಲಿಯೇ ಇತ್ತು. 2021 ರಲ್ಲಿ 10 ರನ್ ನೀಡಿ 4 ವಿಕೆಟ್ ಕಬಳಿಸಿ ಈ ದಾಖಲೆ ಬರೆದಿದ್ದರು.

3 / 6
ಇನ್ನು ಈ 4 ವಿಕೆಟ್​ಗಳೊಂದಿಗೆ ಟಿ20 ವಿಶ್ವಕಪ್‌ನಲ್ಲಿ ಮೂರನೇ ಬಾರಿಗೆ 4 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಈ ಸಾಧನೆ ಮಾಡಿದ ವಿಶ್ವದ ಮೊದಲ ವೇಗದ ಬೌಲರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಮೊರ್ನೆ ಮೊರ್ಕೆಲ್ ಮತ್ತು ಮುಸ್ತಾಫಿಜುರ್ ರೆಹಮಾನ್ ಮತ್ತು ಉಮರ್ ಗುಲ್ ಮಾತ್ರ 3 ಬಾರಿ 4 ವಿಕೆಟ್ ಕಬಳಿಸಿ ಮಿಂಚಿದ್ದರು. ಇದೀಗ 4ನೇ ಬಾರಿಗೆ 4 ವಿಕೆಟ್ ಕಬಳಿಸಿ ಅನ್ರಿಕ್ ನೋಕಿಯಾ ಹೊಸ ದಾಖಲೆ ಬರೆದಿದ್ದಾರೆ.

ಇನ್ನು ಈ 4 ವಿಕೆಟ್​ಗಳೊಂದಿಗೆ ಟಿ20 ವಿಶ್ವಕಪ್‌ನಲ್ಲಿ ಮೂರನೇ ಬಾರಿಗೆ 4 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಈ ಸಾಧನೆ ಮಾಡಿದ ವಿಶ್ವದ ಮೊದಲ ವೇಗದ ಬೌಲರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಮೊರ್ನೆ ಮೊರ್ಕೆಲ್ ಮತ್ತು ಮುಸ್ತಾಫಿಜುರ್ ರೆಹಮಾನ್ ಮತ್ತು ಉಮರ್ ಗುಲ್ ಮಾತ್ರ 3 ಬಾರಿ 4 ವಿಕೆಟ್ ಕಬಳಿಸಿ ಮಿಂಚಿದ್ದರು. ಇದೀಗ 4ನೇ ಬಾರಿಗೆ 4 ವಿಕೆಟ್ ಕಬಳಿಸಿ ಅನ್ರಿಕ್ ನೋಕಿಯಾ ಹೊಸ ದಾಖಲೆ ಬರೆದಿದ್ದಾರೆ.

4 / 6
ಟಿ20 ವಿಶ್ವಕಪ್‌ನಲ್ಲಿ 4 ಓವರ್‌ಗಳಲ್ಲಿ ಅತೀ ಕಡಿಮೆ ರನ್ ನೀಡಿದ ಬೌಲರ್ ಎಂಬ ಹೆಗ್ಗಳಿಕೆಗೂ ಅನ್ರಿಕ್ ನೋಕಿಯಾ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಶ್ರೀಲಂಕಾದ ಅಜಂತಾ ಮೆಂಡಿಸ್, ವನಿಂದು ಹಸರಂಗ ಮತ್ತು ಬಾಂಗ್ಲಾದೇಶದ ಮಹಮ್ಮದುಲ್ಲಾ 4 ಓವರ್‌ಗಳಲ್ಲಿ 8 ರನ್ ನೀಡಿ ಈ ದಾಖಲೆ ನಿರ್ಮಿಸಿದ್ದರು.

ಟಿ20 ವಿಶ್ವಕಪ್‌ನಲ್ಲಿ 4 ಓವರ್‌ಗಳಲ್ಲಿ ಅತೀ ಕಡಿಮೆ ರನ್ ನೀಡಿದ ಬೌಲರ್ ಎಂಬ ಹೆಗ್ಗಳಿಕೆಗೂ ಅನ್ರಿಕ್ ನೋಕಿಯಾ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಶ್ರೀಲಂಕಾದ ಅಜಂತಾ ಮೆಂಡಿಸ್, ವನಿಂದು ಹಸರಂಗ ಮತ್ತು ಬಾಂಗ್ಲಾದೇಶದ ಮಹಮ್ಮದುಲ್ಲಾ 4 ಓವರ್‌ಗಳಲ್ಲಿ 8 ರನ್ ನೀಡಿ ಈ ದಾಖಲೆ ನಿರ್ಮಿಸಿದ್ದರು.

5 / 6
ಇದೀಗ 4 ಓವರ್​ಗಳಲ್ಲಿ 18 ಡಾಟ್ ಬಾಲ್​ಗಳನ್ನು ಎಸೆಯುವ ಮೂಲಕ ಅನ್ರಿಕ್ ನೋಕಿಯಾ 7 ರನ್ ಮಾತ್ರ ಬಿಟ್ಟು ಕೊಟ್ಟಿದ್ದಾರೆ. ಅಲ್ಲದೆ 4 ವಿಕೆಟ್​ಗಳನ್ನು ಕಬಳಿಸುವ ಮೂಲಕ ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ.

ಇದೀಗ 4 ಓವರ್​ಗಳಲ್ಲಿ 18 ಡಾಟ್ ಬಾಲ್​ಗಳನ್ನು ಎಸೆಯುವ ಮೂಲಕ ಅನ್ರಿಕ್ ನೋಕಿಯಾ 7 ರನ್ ಮಾತ್ರ ಬಿಟ್ಟು ಕೊಟ್ಟಿದ್ದಾರೆ. ಅಲ್ಲದೆ 4 ವಿಕೆಟ್​ಗಳನ್ನು ಕಬಳಿಸುವ ಮೂಲಕ ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ.

6 / 6
Follow us
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್