AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ಎಂಎಸ್ ಧೋನಿ ಕಾಲು ಮುಟ್ಟಿ ನಮಸ್ಕರಿಸಿದ ಅರಿಜಿತ್ ಸಿಂಗ್: ಚೆನ್ನೈ-ಗುಜರಾತ್ ಪಂದ್ಯದ ರೋಚಕ ಫೊಟೋ ಇಲ್ಲಿದೆ

GT vs CSK, IPL 2023: ಸಿಎಸ್​ಕೆ ನಾಯಕ ಎಂಎಸ್ ಧೋನಿ ವೇದಿಕೆ ಮೇಲೆ ಬರುತ್ತಿದ್ದಂತೆ ಬಾಲಿವುಡ್ ಗಾಯಕ ಅರಿಜಿತ್ ಸಿಂಗ್ ಎಂಎಸ್​ಡಿ ಕಾಲು ಮುಟ್ಟಿ ನಮಸ್ಕರಿಸಿದರು. ಇದರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

Vinay Bhat
|

Updated on:Apr 01, 2023 | 7:19 AM

Share
ಇಂಡಿಯನ್ ಪ್ರೀಮಿಯರ್ ಲೀಗ್ 16ನೇ ಆವೃತ್ತಿಗೆ ಅದ್ಧೂರಿ ಚಾಲನೆ ಸಿಕ್ಕಿದೆ. ಶುಕ್ರವಾರ ಸಂಜೆ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆಯೋಜಿಸಿದ್ದ ಉದ್ಘಾಟನಾ ಸಮಾರಂಭ ಅಭಿಮಾನಿಗಳನ್ನು ಖುಷಿ ಪಡಿಸಿತು. ಬಳಿಕ ನಡೆದ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ತಂಡ 5 ವಿಕೆಟ್​ಗಳ ರೋಚಕ ಜಯ ಸಾಧಿಸಿತು.

ಇಂಡಿಯನ್ ಪ್ರೀಮಿಯರ್ ಲೀಗ್ 16ನೇ ಆವೃತ್ತಿಗೆ ಅದ್ಧೂರಿ ಚಾಲನೆ ಸಿಕ್ಕಿದೆ. ಶುಕ್ರವಾರ ಸಂಜೆ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆಯೋಜಿಸಿದ್ದ ಉದ್ಘಾಟನಾ ಸಮಾರಂಭ ಅಭಿಮಾನಿಗಳನ್ನು ಖುಷಿ ಪಡಿಸಿತು. ಬಳಿಕ ನಡೆದ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ತಂಡ 5 ವಿಕೆಟ್​ಗಳ ರೋಚಕ ಜಯ ಸಾಧಿಸಿತು.

1 / 9
ಮೊದಲ ಪಂದ್ಯ ಆರಂಭಕ್ಕೂ ಮುನ್ನ ನಡೆದ ಉದ್ಘಾಟನಾ ಸಮಾರಂಭದಲ್ಲಿ ನಟಿಯರಾದ ತಮನ್ನಾ ಭಾಟಿಯಾ ಹಾಗೂ ರಶ್ಮಿಕಾ ಮಂದಣ್ಣ ಹೆಜ್ಜೆ ಹಾಕಿದರು. ಜೊತೆಗೆ ಅರಿಜಿತ್ ಸಿಂಗ್ ಗಾಯನಕ್ಕೆ ಫ್ಯಾನ್ಸ್ ಮನಸೋತರು.

ಮೊದಲ ಪಂದ್ಯ ಆರಂಭಕ್ಕೂ ಮುನ್ನ ನಡೆದ ಉದ್ಘಾಟನಾ ಸಮಾರಂಭದಲ್ಲಿ ನಟಿಯರಾದ ತಮನ್ನಾ ಭಾಟಿಯಾ ಹಾಗೂ ರಶ್ಮಿಕಾ ಮಂದಣ್ಣ ಹೆಜ್ಜೆ ಹಾಕಿದರು. ಜೊತೆಗೆ ಅರಿಜಿತ್ ಸಿಂಗ್ ಗಾಯನಕ್ಕೆ ಫ್ಯಾನ್ಸ್ ಮನಸೋತರು.

2 / 9
ಇದರ ನಡುವೆ ಸಿಎಸ್​ಕೆ ನಾಯಕ ಎಂಎಸ್ ಧೋನಿ ವೇದಿಕೆ ಮೇಲೆ ಬರುತ್ತಿದ್ದಂತೆ ಬಾಲಿವುಡ್ ಗಾಯಕ ಅರಿಜಿತ್ ಸಿಂಗ್ ಎಂಎಸ್​ಡಿ ಕಾಲು ಮುಟ್ಟಿ ನಮಸ್ಕರಿಸಿದರು. ಇದರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ಇದರ ನಡುವೆ ಸಿಎಸ್​ಕೆ ನಾಯಕ ಎಂಎಸ್ ಧೋನಿ ವೇದಿಕೆ ಮೇಲೆ ಬರುತ್ತಿದ್ದಂತೆ ಬಾಲಿವುಡ್ ಗಾಯಕ ಅರಿಜಿತ್ ಸಿಂಗ್ ಎಂಎಸ್​ಡಿ ಕಾಲು ಮುಟ್ಟಿ ನಮಸ್ಕರಿಸಿದರು. ಇದರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

3 / 9
ಈ ಪಂದ್ಯದಲ್ಲಿ ಟಾಸ್ ಸೋತ ಚೆನ್ನೈ ಮೊದಲು ಬ್ಯಾಟಿಂಗ್ ಮಾಡಿತು. ಆರಂಭದಲ್ಲೇ ಡೆವೋನ್ ಕಾನ್ವೆ (1) ವಿಕೆಟ್ ಕಳೆದುಕೊಂಡರೂ ರುತುರಾಜ್ ಗಾಯಕ್ವಾಡ್ ಮತ್ತು ಮೊಯಿನ್ ಅಲಿ (23) ಪವರ್ ಪ್ಲೇ ಅನ್ನು ಚೆನ್ನಾಗಿ ಉಪಯೋಗಿಸಿಕೊಂಡರು. ಆದರೆ, ಬೆನ್ ಸ್ಟೋಕ್ಸ್ (7) ಆಟ ನಡೆಯಲಿಲ್ಲ.

ಈ ಪಂದ್ಯದಲ್ಲಿ ಟಾಸ್ ಸೋತ ಚೆನ್ನೈ ಮೊದಲು ಬ್ಯಾಟಿಂಗ್ ಮಾಡಿತು. ಆರಂಭದಲ್ಲೇ ಡೆವೋನ್ ಕಾನ್ವೆ (1) ವಿಕೆಟ್ ಕಳೆದುಕೊಂಡರೂ ರುತುರಾಜ್ ಗಾಯಕ್ವಾಡ್ ಮತ್ತು ಮೊಯಿನ್ ಅಲಿ (23) ಪವರ್ ಪ್ಲೇ ಅನ್ನು ಚೆನ್ನಾಗಿ ಉಪಯೋಗಿಸಿಕೊಂಡರು. ಆದರೆ, ಬೆನ್ ಸ್ಟೋಕ್ಸ್ (7) ಆಟ ನಡೆಯಲಿಲ್ಲ.

4 / 9
ಅಂಬಟಿ ರಾಯುಡು (12) ಕೂಡ ಬೇಗನೆ ನಿರ್ಗಮಿಸಿದರು. ಇದರ ನಡುವೆ ಗಾಯಕ್ವಾಡ್​ ಸ್ಫೋಟಕ ಆಟವಾಡಿ ತಂಡಕ್ಕೆ ಆಧಾರವಾದದರು. 50 ಎಸೆತಗಳಲ್ಲಿ 41ಫೋರ್​ ಹಾಗೂ ಬರೋಬ್ಬರಿ 9 ಸಿಕ್ಸರ್ ಸಿಡಿಸಿ 92 ರನ್ ಚಚ್ಚಿದರು.

ಅಂಬಟಿ ರಾಯುಡು (12) ಕೂಡ ಬೇಗನೆ ನಿರ್ಗಮಿಸಿದರು. ಇದರ ನಡುವೆ ಗಾಯಕ್ವಾಡ್​ ಸ್ಫೋಟಕ ಆಟವಾಡಿ ತಂಡಕ್ಕೆ ಆಧಾರವಾದದರು. 50 ಎಸೆತಗಳಲ್ಲಿ 41ಫೋರ್​ ಹಾಗೂ ಬರೋಬ್ಬರಿ 9 ಸಿಕ್ಸರ್ ಸಿಡಿಸಿ 92 ರನ್ ಚಚ್ಚಿದರು.

5 / 9
ಶಿವಂ ದುಬೆ 19 ರನ್ ಗಳಿಸಿದರೆ ಎಂಎಸ್ ಧೋನಿ ಅಜೇಯ 14 ರನ್ ಬಾರಿಸಿದರು. ಚೆನ್ನೈ 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 178 ರನ್ ಕಲೆಹಾಕಿತು. ಗುಜರಾತ್ ಪರ ಶಮಿ, ರಶೀದ್ ಖಾನ್ ಮತ್ತು ಅಲ್ಜರಿ ಜೋಸೆಫ್ ತಲಾ 2 ವಿಕೆಟ್ ಪಡೆದರು.

ಶಿವಂ ದುಬೆ 19 ರನ್ ಗಳಿಸಿದರೆ ಎಂಎಸ್ ಧೋನಿ ಅಜೇಯ 14 ರನ್ ಬಾರಿಸಿದರು. ಚೆನ್ನೈ 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 178 ರನ್ ಕಲೆಹಾಕಿತು. ಗುಜರಾತ್ ಪರ ಶಮಿ, ರಶೀದ್ ಖಾನ್ ಮತ್ತು ಅಲ್ಜರಿ ಜೋಸೆಫ್ ತಲಾ 2 ವಿಕೆಟ್ ಪಡೆದರು.

6 / 9
ಸವಾಲಿನ ಟಾರ್ಗೆಟ್ ಬೆನ್ನಟ್ಟಿದ ಜಿಟಿ ತಂಡ ಸ್ಫೋಟಕ ಆರಂಭ ಪಡೆದುಕೊಳ್ಳುವ ಜೊತೆಗೆ ವೃದ್ದಿಮಾನ್ ಸಾಹ (25) ವಿಕೆಟ್ ಕಳೆದುಕೊಂಡಿತು. ಸಾಯಿ ಸುದರ್ಶನ್ 22 ಹಾಗೂ ನಾಯಕ ಹಾರ್ದಿಕ್ ಪಾಂಡ್ಯ 8 ರನ್​ಗೆ ನಿರ್ಗಮಿಸಿದರು.

ಸವಾಲಿನ ಟಾರ್ಗೆಟ್ ಬೆನ್ನಟ್ಟಿದ ಜಿಟಿ ತಂಡ ಸ್ಫೋಟಕ ಆರಂಭ ಪಡೆದುಕೊಳ್ಳುವ ಜೊತೆಗೆ ವೃದ್ದಿಮಾನ್ ಸಾಹ (25) ವಿಕೆಟ್ ಕಳೆದುಕೊಂಡಿತು. ಸಾಯಿ ಸುದರ್ಶನ್ 22 ಹಾಗೂ ನಾಯಕ ಹಾರ್ದಿಕ್ ಪಾಂಡ್ಯ 8 ರನ್​ಗೆ ನಿರ್ಗಮಿಸಿದರು.

7 / 9
ಆದರೆ, ಗಿಲ್ ಭರ್ಜರಿ ಬ್ಯಾಟಿಂಗ್ ನಡೆಸಿ ತಂಡಕ್ಕೆ ಗೆಲುವು ಹತ್ತಿರ ಮಾಡಿದರು. 36 ಎಸೆತಗಳಲ್ಲಿ 6 ಫೋರ್, 3 ಸಿಕ್ಸರ್​ನೊಂದಿಗೆ 63 ರನ್ ಗಳಿಸಿದರು.

ಆದರೆ, ಗಿಲ್ ಭರ್ಜರಿ ಬ್ಯಾಟಿಂಗ್ ನಡೆಸಿ ತಂಡಕ್ಕೆ ಗೆಲುವು ಹತ್ತಿರ ಮಾಡಿದರು. 36 ಎಸೆತಗಳಲ್ಲಿ 6 ಫೋರ್, 3 ಸಿಕ್ಸರ್​ನೊಂದಿಗೆ 63 ರನ್ ಗಳಿಸಿದರು.

8 / 9
ಕೊನೆಯಲ್ಲಿ ವಿಜಯ್ ಶಂಕರ್ (27), ರಾಹುಲ್ ತೇವಾಟಿಯ (15*) ಹಾಗೂ ರಶೀದ್ ಖಾನ್ (10*) ಬ್ಯಾಟ್ ಬೀಸಿ ತಂಡಕ್ಕೆ ಗೆಲುವು ತಂದಿಟ್ಟರು. ಜಿಟಿ 19.2 ಓವರ್​ನಲ್ಲಿ 5 ವಿಕೆಟ್ ನಷ್ಟಕ್ಕೆ 182 ರನ್ ಬಾರಿಸಿ ಜಯ 5 ವಿಕೆಟ್​ಗಳ ಜಯ ಸಾಧಿಸಿತು. ರಶೀದ್ ಖಾನ್ ಪಂದ್ಯಶ್ರೇಷ್ಠ ಬಾಚಿಕೊಂಡರು.

ಕೊನೆಯಲ್ಲಿ ವಿಜಯ್ ಶಂಕರ್ (27), ರಾಹುಲ್ ತೇವಾಟಿಯ (15*) ಹಾಗೂ ರಶೀದ್ ಖಾನ್ (10*) ಬ್ಯಾಟ್ ಬೀಸಿ ತಂಡಕ್ಕೆ ಗೆಲುವು ತಂದಿಟ್ಟರು. ಜಿಟಿ 19.2 ಓವರ್​ನಲ್ಲಿ 5 ವಿಕೆಟ್ ನಷ್ಟಕ್ಕೆ 182 ರನ್ ಬಾರಿಸಿ ಜಯ 5 ವಿಕೆಟ್​ಗಳ ಜಯ ಸಾಧಿಸಿತು. ರಶೀದ್ ಖಾನ್ ಪಂದ್ಯಶ್ರೇಷ್ಠ ಬಾಚಿಕೊಂಡರು.

9 / 9

Published On - 7:19 am, Sat, 1 April 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ