MS Dhoni: ಎಂಎಸ್ ಧೋನಿ ಕಾಲು ಮುಟ್ಟಿ ನಮಸ್ಕರಿಸಿದ ಅರಿಜಿತ್ ಸಿಂಗ್: ಚೆನ್ನೈ-ಗುಜರಾತ್ ಪಂದ್ಯದ ರೋಚಕ ಫೊಟೋ ಇಲ್ಲಿದೆ

GT vs CSK, IPL 2023: ಸಿಎಸ್​ಕೆ ನಾಯಕ ಎಂಎಸ್ ಧೋನಿ ವೇದಿಕೆ ಮೇಲೆ ಬರುತ್ತಿದ್ದಂತೆ ಬಾಲಿವುಡ್ ಗಾಯಕ ಅರಿಜಿತ್ ಸಿಂಗ್ ಎಂಎಸ್​ಡಿ ಕಾಲು ಮುಟ್ಟಿ ನಮಸ್ಕರಿಸಿದರು. ಇದರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

|

Updated on:Apr 01, 2023 | 7:19 AM

ಇಂಡಿಯನ್ ಪ್ರೀಮಿಯರ್ ಲೀಗ್ 16ನೇ ಆವೃತ್ತಿಗೆ ಅದ್ಧೂರಿ ಚಾಲನೆ ಸಿಕ್ಕಿದೆ. ಶುಕ್ರವಾರ ಸಂಜೆ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆಯೋಜಿಸಿದ್ದ ಉದ್ಘಾಟನಾ ಸಮಾರಂಭ ಅಭಿಮಾನಿಗಳನ್ನು ಖುಷಿ ಪಡಿಸಿತು. ಬಳಿಕ ನಡೆದ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ತಂಡ 5 ವಿಕೆಟ್​ಗಳ ರೋಚಕ ಜಯ ಸಾಧಿಸಿತು.

ಇಂಡಿಯನ್ ಪ್ರೀಮಿಯರ್ ಲೀಗ್ 16ನೇ ಆವೃತ್ತಿಗೆ ಅದ್ಧೂರಿ ಚಾಲನೆ ಸಿಕ್ಕಿದೆ. ಶುಕ್ರವಾರ ಸಂಜೆ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆಯೋಜಿಸಿದ್ದ ಉದ್ಘಾಟನಾ ಸಮಾರಂಭ ಅಭಿಮಾನಿಗಳನ್ನು ಖುಷಿ ಪಡಿಸಿತು. ಬಳಿಕ ನಡೆದ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ತಂಡ 5 ವಿಕೆಟ್​ಗಳ ರೋಚಕ ಜಯ ಸಾಧಿಸಿತು.

1 / 9
ಮೊದಲ ಪಂದ್ಯ ಆರಂಭಕ್ಕೂ ಮುನ್ನ ನಡೆದ ಉದ್ಘಾಟನಾ ಸಮಾರಂಭದಲ್ಲಿ ನಟಿಯರಾದ ತಮನ್ನಾ ಭಾಟಿಯಾ ಹಾಗೂ ರಶ್ಮಿಕಾ ಮಂದಣ್ಣ ಹೆಜ್ಜೆ ಹಾಕಿದರು. ಜೊತೆಗೆ ಅರಿಜಿತ್ ಸಿಂಗ್ ಗಾಯನಕ್ಕೆ ಫ್ಯಾನ್ಸ್ ಮನಸೋತರು.

ಮೊದಲ ಪಂದ್ಯ ಆರಂಭಕ್ಕೂ ಮುನ್ನ ನಡೆದ ಉದ್ಘಾಟನಾ ಸಮಾರಂಭದಲ್ಲಿ ನಟಿಯರಾದ ತಮನ್ನಾ ಭಾಟಿಯಾ ಹಾಗೂ ರಶ್ಮಿಕಾ ಮಂದಣ್ಣ ಹೆಜ್ಜೆ ಹಾಕಿದರು. ಜೊತೆಗೆ ಅರಿಜಿತ್ ಸಿಂಗ್ ಗಾಯನಕ್ಕೆ ಫ್ಯಾನ್ಸ್ ಮನಸೋತರು.

2 / 9
ಇದರ ನಡುವೆ ಸಿಎಸ್​ಕೆ ನಾಯಕ ಎಂಎಸ್ ಧೋನಿ ವೇದಿಕೆ ಮೇಲೆ ಬರುತ್ತಿದ್ದಂತೆ ಬಾಲಿವುಡ್ ಗಾಯಕ ಅರಿಜಿತ್ ಸಿಂಗ್ ಎಂಎಸ್​ಡಿ ಕಾಲು ಮುಟ್ಟಿ ನಮಸ್ಕರಿಸಿದರು. ಇದರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ಇದರ ನಡುವೆ ಸಿಎಸ್​ಕೆ ನಾಯಕ ಎಂಎಸ್ ಧೋನಿ ವೇದಿಕೆ ಮೇಲೆ ಬರುತ್ತಿದ್ದಂತೆ ಬಾಲಿವುಡ್ ಗಾಯಕ ಅರಿಜಿತ್ ಸಿಂಗ್ ಎಂಎಸ್​ಡಿ ಕಾಲು ಮುಟ್ಟಿ ನಮಸ್ಕರಿಸಿದರು. ಇದರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

3 / 9
ಈ ಪಂದ್ಯದಲ್ಲಿ ಟಾಸ್ ಸೋತ ಚೆನ್ನೈ ಮೊದಲು ಬ್ಯಾಟಿಂಗ್ ಮಾಡಿತು. ಆರಂಭದಲ್ಲೇ ಡೆವೋನ್ ಕಾನ್ವೆ (1) ವಿಕೆಟ್ ಕಳೆದುಕೊಂಡರೂ ರುತುರಾಜ್ ಗಾಯಕ್ವಾಡ್ ಮತ್ತು ಮೊಯಿನ್ ಅಲಿ (23) ಪವರ್ ಪ್ಲೇ ಅನ್ನು ಚೆನ್ನಾಗಿ ಉಪಯೋಗಿಸಿಕೊಂಡರು. ಆದರೆ, ಬೆನ್ ಸ್ಟೋಕ್ಸ್ (7) ಆಟ ನಡೆಯಲಿಲ್ಲ.

ಈ ಪಂದ್ಯದಲ್ಲಿ ಟಾಸ್ ಸೋತ ಚೆನ್ನೈ ಮೊದಲು ಬ್ಯಾಟಿಂಗ್ ಮಾಡಿತು. ಆರಂಭದಲ್ಲೇ ಡೆವೋನ್ ಕಾನ್ವೆ (1) ವಿಕೆಟ್ ಕಳೆದುಕೊಂಡರೂ ರುತುರಾಜ್ ಗಾಯಕ್ವಾಡ್ ಮತ್ತು ಮೊಯಿನ್ ಅಲಿ (23) ಪವರ್ ಪ್ಲೇ ಅನ್ನು ಚೆನ್ನಾಗಿ ಉಪಯೋಗಿಸಿಕೊಂಡರು. ಆದರೆ, ಬೆನ್ ಸ್ಟೋಕ್ಸ್ (7) ಆಟ ನಡೆಯಲಿಲ್ಲ.

4 / 9
ಅಂಬಟಿ ರಾಯುಡು (12) ಕೂಡ ಬೇಗನೆ ನಿರ್ಗಮಿಸಿದರು. ಇದರ ನಡುವೆ ಗಾಯಕ್ವಾಡ್​ ಸ್ಫೋಟಕ ಆಟವಾಡಿ ತಂಡಕ್ಕೆ ಆಧಾರವಾದದರು. 50 ಎಸೆತಗಳಲ್ಲಿ 41ಫೋರ್​ ಹಾಗೂ ಬರೋಬ್ಬರಿ 9 ಸಿಕ್ಸರ್ ಸಿಡಿಸಿ 92 ರನ್ ಚಚ್ಚಿದರು.

ಅಂಬಟಿ ರಾಯುಡು (12) ಕೂಡ ಬೇಗನೆ ನಿರ್ಗಮಿಸಿದರು. ಇದರ ನಡುವೆ ಗಾಯಕ್ವಾಡ್​ ಸ್ಫೋಟಕ ಆಟವಾಡಿ ತಂಡಕ್ಕೆ ಆಧಾರವಾದದರು. 50 ಎಸೆತಗಳಲ್ಲಿ 41ಫೋರ್​ ಹಾಗೂ ಬರೋಬ್ಬರಿ 9 ಸಿಕ್ಸರ್ ಸಿಡಿಸಿ 92 ರನ್ ಚಚ್ಚಿದರು.

5 / 9
ಶಿವಂ ದುಬೆ 19 ರನ್ ಗಳಿಸಿದರೆ ಎಂಎಸ್ ಧೋನಿ ಅಜೇಯ 14 ರನ್ ಬಾರಿಸಿದರು. ಚೆನ್ನೈ 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 178 ರನ್ ಕಲೆಹಾಕಿತು. ಗುಜರಾತ್ ಪರ ಶಮಿ, ರಶೀದ್ ಖಾನ್ ಮತ್ತು ಅಲ್ಜರಿ ಜೋಸೆಫ್ ತಲಾ 2 ವಿಕೆಟ್ ಪಡೆದರು.

ಶಿವಂ ದುಬೆ 19 ರನ್ ಗಳಿಸಿದರೆ ಎಂಎಸ್ ಧೋನಿ ಅಜೇಯ 14 ರನ್ ಬಾರಿಸಿದರು. ಚೆನ್ನೈ 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 178 ರನ್ ಕಲೆಹಾಕಿತು. ಗುಜರಾತ್ ಪರ ಶಮಿ, ರಶೀದ್ ಖಾನ್ ಮತ್ತು ಅಲ್ಜರಿ ಜೋಸೆಫ್ ತಲಾ 2 ವಿಕೆಟ್ ಪಡೆದರು.

6 / 9
ಸವಾಲಿನ ಟಾರ್ಗೆಟ್ ಬೆನ್ನಟ್ಟಿದ ಜಿಟಿ ತಂಡ ಸ್ಫೋಟಕ ಆರಂಭ ಪಡೆದುಕೊಳ್ಳುವ ಜೊತೆಗೆ ವೃದ್ದಿಮಾನ್ ಸಾಹ (25) ವಿಕೆಟ್ ಕಳೆದುಕೊಂಡಿತು. ಸಾಯಿ ಸುದರ್ಶನ್ 22 ಹಾಗೂ ನಾಯಕ ಹಾರ್ದಿಕ್ ಪಾಂಡ್ಯ 8 ರನ್​ಗೆ ನಿರ್ಗಮಿಸಿದರು.

ಸವಾಲಿನ ಟಾರ್ಗೆಟ್ ಬೆನ್ನಟ್ಟಿದ ಜಿಟಿ ತಂಡ ಸ್ಫೋಟಕ ಆರಂಭ ಪಡೆದುಕೊಳ್ಳುವ ಜೊತೆಗೆ ವೃದ್ದಿಮಾನ್ ಸಾಹ (25) ವಿಕೆಟ್ ಕಳೆದುಕೊಂಡಿತು. ಸಾಯಿ ಸುದರ್ಶನ್ 22 ಹಾಗೂ ನಾಯಕ ಹಾರ್ದಿಕ್ ಪಾಂಡ್ಯ 8 ರನ್​ಗೆ ನಿರ್ಗಮಿಸಿದರು.

7 / 9
ಆದರೆ, ಗಿಲ್ ಭರ್ಜರಿ ಬ್ಯಾಟಿಂಗ್ ನಡೆಸಿ ತಂಡಕ್ಕೆ ಗೆಲುವು ಹತ್ತಿರ ಮಾಡಿದರು. 36 ಎಸೆತಗಳಲ್ಲಿ 6 ಫೋರ್, 3 ಸಿಕ್ಸರ್​ನೊಂದಿಗೆ 63 ರನ್ ಗಳಿಸಿದರು.

ಆದರೆ, ಗಿಲ್ ಭರ್ಜರಿ ಬ್ಯಾಟಿಂಗ್ ನಡೆಸಿ ತಂಡಕ್ಕೆ ಗೆಲುವು ಹತ್ತಿರ ಮಾಡಿದರು. 36 ಎಸೆತಗಳಲ್ಲಿ 6 ಫೋರ್, 3 ಸಿಕ್ಸರ್​ನೊಂದಿಗೆ 63 ರನ್ ಗಳಿಸಿದರು.

8 / 9
ಕೊನೆಯಲ್ಲಿ ವಿಜಯ್ ಶಂಕರ್ (27), ರಾಹುಲ್ ತೇವಾಟಿಯ (15*) ಹಾಗೂ ರಶೀದ್ ಖಾನ್ (10*) ಬ್ಯಾಟ್ ಬೀಸಿ ತಂಡಕ್ಕೆ ಗೆಲುವು ತಂದಿಟ್ಟರು. ಜಿಟಿ 19.2 ಓವರ್​ನಲ್ಲಿ 5 ವಿಕೆಟ್ ನಷ್ಟಕ್ಕೆ 182 ರನ್ ಬಾರಿಸಿ ಜಯ 5 ವಿಕೆಟ್​ಗಳ ಜಯ ಸಾಧಿಸಿತು. ರಶೀದ್ ಖಾನ್ ಪಂದ್ಯಶ್ರೇಷ್ಠ ಬಾಚಿಕೊಂಡರು.

ಕೊನೆಯಲ್ಲಿ ವಿಜಯ್ ಶಂಕರ್ (27), ರಾಹುಲ್ ತೇವಾಟಿಯ (15*) ಹಾಗೂ ರಶೀದ್ ಖಾನ್ (10*) ಬ್ಯಾಟ್ ಬೀಸಿ ತಂಡಕ್ಕೆ ಗೆಲುವು ತಂದಿಟ್ಟರು. ಜಿಟಿ 19.2 ಓವರ್​ನಲ್ಲಿ 5 ವಿಕೆಟ್ ನಷ್ಟಕ್ಕೆ 182 ರನ್ ಬಾರಿಸಿ ಜಯ 5 ವಿಕೆಟ್​ಗಳ ಜಯ ಸಾಧಿಸಿತು. ರಶೀದ್ ಖಾನ್ ಪಂದ್ಯಶ್ರೇಷ್ಠ ಬಾಚಿಕೊಂಡರು.

9 / 9

Published On - 7:19 am, Sat, 1 April 23

Follow us
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್