AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡೇ ಎರಡು ವರ್ಷಗಳಲ್ಲಿ ಎಲ್ಲರನ್ನು ಹಿಂದಿಕ್ಕಿದ ಅರ್ಷದೀಪ್ ಸಿಂಗ್

Arshdeep Singh: ಸೌತ್ ಆಫ್ರಿಕಾ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದ ಅರ್ಷದೀಪ್ ಸಿಂಗ್ 37 ರನ್ ನೀಡಿ 3 ವಿಕೆಟ್ ಕಬಳಿಸಿದ್ದರು. ಈ ಮೂರು ವಿಕೆಟ್​ಗಳೊಂದಿಗೆ ಟೀಮ್ ಇಂಡಿಯಾ ವೇಗಿ ವಿಶೇಷ ದಾಖಲೆ ಬರೆದಿದ್ದಾರೆ. ಆ ದಾಖಲೆಯ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

ಝಾಹಿರ್ ಯೂಸುಫ್
|

Updated on: Nov 14, 2024 | 10:53 AM

Share
ಅರ್ಷದೀಪ್ ಸಿಂಗ್ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿ  2 ವರ್ಷಗಳಾಗಿವೆ. ಈ ಎರಡು ವರ್ಷಗಳಲ್ಲಿ 92 ವಿಕೆಟ್​ ಉರುಳಿಸುವ ಮೂಲಕ, ಭಾರತದ ಪರ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ವೇಗದ ಬೌಲರ್ ಎನಿಸಿಕೊಂಡಿದ್ದಾರೆ. ಅದು ಕೂಡ ಭುವನೇಶ್ವರ್ ಕುಮಾರ್ ಹಾಗೂ ಜಸ್​ಪ್ರೀತ್ ಬುಮ್ರಾರಂತಹ ಖ್ಯಾತನಾಮರನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ.

ಅರ್ಷದೀಪ್ ಸಿಂಗ್ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿ 2 ವರ್ಷಗಳಾಗಿವೆ. ಈ ಎರಡು ವರ್ಷಗಳಲ್ಲಿ 92 ವಿಕೆಟ್​ ಉರುಳಿಸುವ ಮೂಲಕ, ಭಾರತದ ಪರ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ವೇಗದ ಬೌಲರ್ ಎನಿಸಿಕೊಂಡಿದ್ದಾರೆ. ಅದು ಕೂಡ ಭುವನೇಶ್ವರ್ ಕುಮಾರ್ ಹಾಗೂ ಜಸ್​ಪ್ರೀತ್ ಬುಮ್ರಾರಂತಹ ಖ್ಯಾತನಾಮರನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ.

1 / 6
2022 ರಲ್ಲಿ ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕೆರಿಯರ್ ಆರಂಭಿಸಿದ್ದ ಅರ್ಷದೀಪ್ ಸಿಂಗ್ ಈವರೆಗೆ 59 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 1222 ಎಸೆತಗಳನ್ನು ಎಸೆದಿರುವ ಅವರು ಒಟ್ಟು 92 ವಿಕೆಟ್ ಕಬಳಿಸುವಲ್ಲಿ ಸಫಲರಾಗಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನ ಭಾರತದ ಅತ್ಯಂತ ಯಶಸ್ವಿ ವೇಗಿ ಎನಿಸಿಕೊಂಡಿದ್ದಾರೆ.

2022 ರಲ್ಲಿ ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕೆರಿಯರ್ ಆರಂಭಿಸಿದ್ದ ಅರ್ಷದೀಪ್ ಸಿಂಗ್ ಈವರೆಗೆ 59 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 1222 ಎಸೆತಗಳನ್ನು ಎಸೆದಿರುವ ಅವರು ಒಟ್ಟು 92 ವಿಕೆಟ್ ಕಬಳಿಸುವಲ್ಲಿ ಸಫಲರಾಗಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನ ಭಾರತದ ಅತ್ಯಂತ ಯಶಸ್ವಿ ವೇಗಿ ಎನಿಸಿಕೊಂಡಿದ್ದಾರೆ.

2 / 6
ಇದಕ್ಕೂ ಮುನ್ನ ಈ ಪಟ್ಟಿಯಲ್ಲಿ ಭುವನೇಶ್ವರ್ ಕುಮಾರ್ ಅಗ್ರಸ್ಥಾನದಲ್ಲಿದ್ದರು. ಟೀಮ್ ಇಂಡಿಯಾ ಪರ 87 ಟಿ20 ಪಂದ್ಯಗಳನ್ನಾಡಿರುವ ಭುವಿ 1791	ಎಸೆತಗಳಲ್ಲಿ ಒಟ್ಟು 90 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

ಇದಕ್ಕೂ ಮುನ್ನ ಈ ಪಟ್ಟಿಯಲ್ಲಿ ಭುವನೇಶ್ವರ್ ಕುಮಾರ್ ಅಗ್ರಸ್ಥಾನದಲ್ಲಿದ್ದರು. ಟೀಮ್ ಇಂಡಿಯಾ ಪರ 87 ಟಿ20 ಪಂದ್ಯಗಳನ್ನಾಡಿರುವ ಭುವಿ 1791 ಎಸೆತಗಳಲ್ಲಿ ಒಟ್ಟು 90 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

3 / 6
ಇನ್ನು ಜಸ್​ಪ್ರೀತ್ ಬುಮ್ರಾ ಟೀಮ್ ಇಂಡಿಯಾ ಪರ ಈವರೆಗೆ 70 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 1509 ಎಸೆತಗಳನ್ನು ಎಸೆದಿರುವ ಬುಮ್ರಾ ಒಟ್ಟು 89 ವಿಕೆಟ್ ಕಬಳಿಸಿದ್ದಾರೆ.

ಇನ್ನು ಜಸ್​ಪ್ರೀತ್ ಬುಮ್ರಾ ಟೀಮ್ ಇಂಡಿಯಾ ಪರ ಈವರೆಗೆ 70 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 1509 ಎಸೆತಗಳನ್ನು ಎಸೆದಿರುವ ಬುಮ್ರಾ ಒಟ್ಟು 89 ವಿಕೆಟ್ ಕಬಳಿಸಿದ್ದಾರೆ.

4 / 6
ಇದೀಗ ಭುವನೇಶ್ವರ್ ಕುಮಾರ್ ಹಾಗೂ ಜಸ್​ಪ್ರೀತ್ ಬುಮ್ರಾ ಅವರನ್ನು ಹಿಂದಿಕ್ಕಿರುವ ಅರ್ಷದೀಪ್ ಸಿಂಗ್, 92 ವಿಕೆಟ್​ಗಳೊಂದಿಗೆ ಭಾರತದ ಪರ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ವೇಗಿ​ ಎನಿಸಿಕೊಂಡಿದ್ದಾರೆ.

ಇದೀಗ ಭುವನೇಶ್ವರ್ ಕುಮಾರ್ ಹಾಗೂ ಜಸ್​ಪ್ರೀತ್ ಬುಮ್ರಾ ಅವರನ್ನು ಹಿಂದಿಕ್ಕಿರುವ ಅರ್ಷದೀಪ್ ಸಿಂಗ್, 92 ವಿಕೆಟ್​ಗಳೊಂದಿಗೆ ಭಾರತದ ಪರ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ವೇಗಿ​ ಎನಿಸಿಕೊಂಡಿದ್ದಾರೆ.

5 / 6
ಇನ್ನು ಭಾರತದ ಪರ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ವಿಕೆಟ್ ಕಬಳಿಸಿದ ದಾಖಲೆ ಯುಜ್ವೇಂದ್ರ ಚಹಲ್ ಹೆಸರಿನಲ್ಲಿದೆ. ಟೀಮ್ ಇಂಡಿಯಾ ಪರ 79 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಚಹಲ್ ಒಟ್ಟು 96 ವಿಕೆಟ್ ಕಬಳಿಸಿದ್ದಾರೆ. ಇದೀಗ ಚಹಲ್ ಅವರನ್ನು ಹಿಂದಿಕ್ಕಲು ಅರ್ಷದೀಪ್ ಸಿಂಗ್​ಗೆ ಕೇವಲ 5 ವಿಕೆಟ್​ಗಳ ಅವಶ್ಯಕತೆಯಿದೆ. ಹೀಗಾಗಿ ಮುಂಬರುವ ದಿನಗಳಲ್ಲಿ ಯುವ ಎಡಗೈ ವೇಗಿಯಿಂದ ಭರ್ಜರಿ ದಾಖಲೆ ನಿರೀಕ್ಷಿಸಬಹುದು.

ಇನ್ನು ಭಾರತದ ಪರ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ವಿಕೆಟ್ ಕಬಳಿಸಿದ ದಾಖಲೆ ಯುಜ್ವೇಂದ್ರ ಚಹಲ್ ಹೆಸರಿನಲ್ಲಿದೆ. ಟೀಮ್ ಇಂಡಿಯಾ ಪರ 79 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಚಹಲ್ ಒಟ್ಟು 96 ವಿಕೆಟ್ ಕಬಳಿಸಿದ್ದಾರೆ. ಇದೀಗ ಚಹಲ್ ಅವರನ್ನು ಹಿಂದಿಕ್ಕಲು ಅರ್ಷದೀಪ್ ಸಿಂಗ್​ಗೆ ಕೇವಲ 5 ವಿಕೆಟ್​ಗಳ ಅವಶ್ಯಕತೆಯಿದೆ. ಹೀಗಾಗಿ ಮುಂಬರುವ ದಿನಗಳಲ್ಲಿ ಯುವ ಎಡಗೈ ವೇಗಿಯಿಂದ ಭರ್ಜರಿ ದಾಖಲೆ ನಿರೀಕ್ಷಿಸಬಹುದು.

6 / 6
Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ