Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashes 2023: ಔಟಾ ಅಥವಾ ನಾಟೌಟಾ? ವಿವಾದಕ್ಕೆ ಕಾರಣವಾದ ಕ್ಯಾಚ್..!

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ವೇಳೆಯೂ ಮೂರನೇ ಅಂಪೈರ್ ನೀಡಿದ ತೀರ್ಪು ವಿವಾದಕ್ಕೀಡಾಗಿತ್ತು. ಕ್ಯಾಮರೋನ್ ಗ್ರೀನ್ ಹಿಡಿದ ಶುಭ್​ಮನ್ ಗಿಲ್ ಅವರ ಕ್ಯಾಚ್ ನೆಲಕ್ಕೆ ತಾಗಿದ್ದರೂ ಅಂಪೈರ್ ಔಟ್ ನೀಡಿದ್ದರು.

TV9 Web
| Updated By: ಝಾಹಿರ್ ಯೂಸುಫ್

Updated on: Jul 01, 2023 | 4:08 PM

Ashes 2023: ಕ್ರಿಕೆಟ್ ಕಾಶಿ ಲಾರ್ಡ್ಸ್​ ಮೈದಾನದಲ್ಲಿ ನಡೆಯುತ್ತಿರುವ ಆ್ಯಶಸ್ ಸರಣಿಯ 2ನೇ ಪಂದ್ಯದಲ್ಲಿ ಸ್ಟೀವ್ ಸ್ಮಿತ್ (Steve Smith) ಹಿಡಿದ ಕ್ಯಾಚ್​ವೊಂದು ಇದೀಗ ವಿವಾದಕ್ಕೀಡಾಗಿದೆ.

Ashes 2023: ಕ್ರಿಕೆಟ್ ಕಾಶಿ ಲಾರ್ಡ್ಸ್​ ಮೈದಾನದಲ್ಲಿ ನಡೆಯುತ್ತಿರುವ ಆ್ಯಶಸ್ ಸರಣಿಯ 2ನೇ ಪಂದ್ಯದಲ್ಲಿ ಸ್ಟೀವ್ ಸ್ಮಿತ್ (Steve Smith) ಹಿಡಿದ ಕ್ಯಾಚ್​ವೊಂದು ಇದೀಗ ವಿವಾದಕ್ಕೀಡಾಗಿದೆ.

1 / 6
ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡವು ಫೀಲ್ಡಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡ 416 ರನ್​ಗಳಿಸಿ ಆಲೌಟ್ ಆಯಿತು. ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಇಂಗ್ಲೆಂಡ್ ಆರಂಭದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿತು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡವು ಫೀಲ್ಡಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡ 416 ರನ್​ಗಳಿಸಿ ಆಲೌಟ್ ಆಯಿತು. ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಇಂಗ್ಲೆಂಡ್ ಆರಂಭದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿತು.

2 / 6
ಆದರೆ ಮಧ್ಯಮ ಕ್ರಮಾಂಕದಲ್ಲಿ ಜೋ ರೂಟ್ ವಿಕೆಟ್ ಪತನದೊಂದಿಗೆ ಕುಸಿತಕ್ಕೊಳಗಾಯಿತು. ಇಲ್ಲಿ ರೂಟ್ ವಿರುದ್ಧ ಅಂಪೈರ್ ನೀಡಿದ ತೀರ್ಪೇ ಈಗ ವಿವಾದಕ್ಕೆ ಕಾರಣವಾಗಿದೆ.

ಆದರೆ ಮಧ್ಯಮ ಕ್ರಮಾಂಕದಲ್ಲಿ ಜೋ ರೂಟ್ ವಿಕೆಟ್ ಪತನದೊಂದಿಗೆ ಕುಸಿತಕ್ಕೊಳಗಾಯಿತು. ಇಲ್ಲಿ ರೂಟ್ ವಿರುದ್ಧ ಅಂಪೈರ್ ನೀಡಿದ ತೀರ್ಪೇ ಈಗ ವಿವಾದಕ್ಕೆ ಕಾರಣವಾಗಿದೆ.

3 / 6
ಇಂಗ್ಲೆಂಡ್ ತಂಡವು 3 ವಿಕೆಟ್ ನಷ್ಟಕ್ಕೆ 222 ರನ್​ಗಳಿಸಿದ್ದ ವೇಳೆ ಮಿಚೆಲ್ ಸ್ಟಾರ್ಕ್​ ದಾಳಿಗಿಳಿದರು. ಈ ವೇಳೆ ಕ್ರೀಸ್​ನಲ್ಲಿದ್ದ ಜೋ ರೂಟ್ ಪುಲ್ ಶಾಟ್ ಹೊಡೆಯಲು ಮುಂದಾದರು. ಅತ್ತ ಬ್ಯಾಕ್​ವರ್ಡ್​ ಸ್ಕ್ವೇರ್​ನತ್ತ ಫೀಲ್ಡಿಂಗ್​ನಲ್ಲಿದ್ದ ಸ್ಟೀವ್ ಸ್ಮಿತ್ ಓಡಿ ಬಂದು ಡೈವಿಂಗ್​ ಕ್ಯಾಚ್ ಹಿಡಿದರು.

ಇಂಗ್ಲೆಂಡ್ ತಂಡವು 3 ವಿಕೆಟ್ ನಷ್ಟಕ್ಕೆ 222 ರನ್​ಗಳಿಸಿದ್ದ ವೇಳೆ ಮಿಚೆಲ್ ಸ್ಟಾರ್ಕ್​ ದಾಳಿಗಿಳಿದರು. ಈ ವೇಳೆ ಕ್ರೀಸ್​ನಲ್ಲಿದ್ದ ಜೋ ರೂಟ್ ಪುಲ್ ಶಾಟ್ ಹೊಡೆಯಲು ಮುಂದಾದರು. ಅತ್ತ ಬ್ಯಾಕ್​ವರ್ಡ್​ ಸ್ಕ್ವೇರ್​ನತ್ತ ಫೀಲ್ಡಿಂಗ್​ನಲ್ಲಿದ್ದ ಸ್ಟೀವ್ ಸ್ಮಿತ್ ಓಡಿ ಬಂದು ಡೈವಿಂಗ್​ ಕ್ಯಾಚ್ ಹಿಡಿದರು.

4 / 6
ಇತ್ತ ಮೂರನೇ ಅಂಪೈರ್ ಮರುಪರಿಶೀಲನೆ ವೇಳೆ ಚೆಂಡು ನೆಲಕ್ಕೆ ತಾಗಿರುವುದು ಸ್ಪಷ್ಟವಾಗಿ ಗೋಚರಿಸುತ್ತಿತ್ತು. ಇದಾಗ್ಯೂ ಅಂಪೈರ್ ಔಟ್ ನೀಡಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. ಅಲ್ಲದೆ ಚೆಂಡು ನೆಲಕ್ಕೆ ತಾಗಿರುವುದಕ್ಕೆ ಸಾಕ್ಷಿಯಾಗಿ ಸೋಷಿಯಲ್ ಮೀಡಿಯಾದಲ್ಲಿ ಫೋಟೋಗಳು ಹರಿದಾಡುತ್ತಿದೆ.

ಇತ್ತ ಮೂರನೇ ಅಂಪೈರ್ ಮರುಪರಿಶೀಲನೆ ವೇಳೆ ಚೆಂಡು ನೆಲಕ್ಕೆ ತಾಗಿರುವುದು ಸ್ಪಷ್ಟವಾಗಿ ಗೋಚರಿಸುತ್ತಿತ್ತು. ಇದಾಗ್ಯೂ ಅಂಪೈರ್ ಔಟ್ ನೀಡಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. ಅಲ್ಲದೆ ಚೆಂಡು ನೆಲಕ್ಕೆ ತಾಗಿರುವುದಕ್ಕೆ ಸಾಕ್ಷಿಯಾಗಿ ಸೋಷಿಯಲ್ ಮೀಡಿಯಾದಲ್ಲಿ ಫೋಟೋಗಳು ಹರಿದಾಡುತ್ತಿದೆ.

5 / 6
ಅಂದಹಾಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ವೇಳೆಯೂ ಮೂರನೇ ಅಂಪೈರ್ ನೀಡಿದ ತೀರ್ಪು ವಿವಾದಕ್ಕೀಡಾಗಿತ್ತು. ಕ್ಯಾಮರೋನ್ ಗ್ರೀನ್ ಹಿಡಿದ ಶುಭ್​ಮನ್ ಗಿಲ್ ಅವರ ಕ್ಯಾಚ್ ನೆಲಕ್ಕೆ ತಾಗಿದ್ದರೂ ಅಂಪೈರ್ ಔಟ್ ನೀಡಿದ್ದರು. ಇದೀಗ  ಅದೇ ಮಾದರಿಯಲ್ಲೇ ಮತ್ತೊಂದು ಕ್ಯಾಚ್ ಔಟ್ ತೀರ್ಪು ನೀಡಲಾಗಿದೆ.

ಅಂದಹಾಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ವೇಳೆಯೂ ಮೂರನೇ ಅಂಪೈರ್ ನೀಡಿದ ತೀರ್ಪು ವಿವಾದಕ್ಕೀಡಾಗಿತ್ತು. ಕ್ಯಾಮರೋನ್ ಗ್ರೀನ್ ಹಿಡಿದ ಶುಭ್​ಮನ್ ಗಿಲ್ ಅವರ ಕ್ಯಾಚ್ ನೆಲಕ್ಕೆ ತಾಗಿದ್ದರೂ ಅಂಪೈರ್ ಔಟ್ ನೀಡಿದ್ದರು. ಇದೀಗ ಅದೇ ಮಾದರಿಯಲ್ಲೇ ಮತ್ತೊಂದು ಕ್ಯಾಚ್ ಔಟ್ ತೀರ್ಪು ನೀಡಲಾಗಿದೆ.

6 / 6
Follow us
ಕುಟುಂಬ, ಮಕ್ಕಳು, ಸಿನಿಮಾ ಇತ್ಯಾದಿ.. ಮಗಳೊಟ್ಟಿಗೆ ಮಾತಿಗೆ ಕೂತ ಶಿವಣ್ಣ
ಕುಟುಂಬ, ಮಕ್ಕಳು, ಸಿನಿಮಾ ಇತ್ಯಾದಿ.. ಮಗಳೊಟ್ಟಿಗೆ ಮಾತಿಗೆ ಕೂತ ಶಿವಣ್ಣ
ಜೆಡಿಎಸ್ ಈಗಲೂ ಕರ್ನಾಟಕದಲ್ಲಿ ಸಾಕಷ್ಟು ಬಲಾಢ್ಯ: ನಿಖಿಲ್ ಕುಮಾರಸ್ವಾಮಿ
ಜೆಡಿಎಸ್ ಈಗಲೂ ಕರ್ನಾಟಕದಲ್ಲಿ ಸಾಕಷ್ಟು ಬಲಾಢ್ಯ: ನಿಖಿಲ್ ಕುಮಾರಸ್ವಾಮಿ
ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ಜಮ್ಮು ಕಾಶ್ಮೀರದ ವಿಧಾನಸಭೆಯಲ್ಲಿ ಗಲಾಟೆ
ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ಜಮ್ಮು ಕಾಶ್ಮೀರದ ವಿಧಾನಸಭೆಯಲ್ಲಿ ಗಲಾಟೆ
Video: ಕಚ್ಚಿದ್ದಕ್ಕೆ ಬೀದಿ ನಾಯಿಯನ್ನು ಗುಂಡಿಕ್ಕಿ ಕೊಂದ ವ್ಯಕ್ತಿ
Video: ಕಚ್ಚಿದ್ದಕ್ಕೆ ಬೀದಿ ನಾಯಿಯನ್ನು ಗುಂಡಿಕ್ಕಿ ಕೊಂದ ವ್ಯಕ್ತಿ
ಬೀದರ್ ಮತ್ತು ಕಲಬುರಗಿ ದರೋಡೆ ಪ್ರಕರಣಗಳ ನಡುವೆ ಲಿಂಕ್ ಇರೋ ಸಾಧ್ಯತೆ
ಬೀದರ್ ಮತ್ತು ಕಲಬುರಗಿ ದರೋಡೆ ಪ್ರಕರಣಗಳ ನಡುವೆ ಲಿಂಕ್ ಇರೋ ಸಾಧ್ಯತೆ
ಸಮಾಜ ಸ್ವಾಮೀಜಿಯನ್ನು ಕಡೆಗಣಿಸಿಲಾರಂಭಿಸಿದರೆ ಅಚ್ಚರಿಯಿಲ್ಲ: ವಿಜುಗೌಡ
ಸಮಾಜ ಸ್ವಾಮೀಜಿಯನ್ನು ಕಡೆಗಣಿಸಿಲಾರಂಭಿಸಿದರೆ ಅಚ್ಚರಿಯಿಲ್ಲ: ವಿಜುಗೌಡ
2 ಬಾರಿ ಫೈನ್ ಕಟ್ಟಿದ ಬಳಿಕ ಹೊಸ ಸೆಲೆಬ್ರೇಷನ್ ಪರಿಚಯಿಸಿದ ದಿಗ್ವೇಶ್ ರಾಠಿ
2 ಬಾರಿ ಫೈನ್ ಕಟ್ಟಿದ ಬಳಿಕ ಹೊಸ ಸೆಲೆಬ್ರೇಷನ್ ಪರಿಚಯಿಸಿದ ದಿಗ್ವೇಶ್ ರಾಠಿ
ಅಧಿವೇಶನದ ಬಗ್ಗೆ ಬೆಂಗಳೂರಲ್ಲಿ ಬ್ರೀಫ್ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ
ಅಧಿವೇಶನದ ಬಗ್ಗೆ ಬೆಂಗಳೂರಲ್ಲಿ ಬ್ರೀಫ್ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ
ದಾಳಿಗೆ ಬಂದ ಚಿರತೆಯಿಂದ ಬಾಲಕನನ್ನು ರಕ್ಷಿಸಿದ ಶ್ವಾನಗಳು
ದಾಳಿಗೆ ಬಂದ ಚಿರತೆಯಿಂದ ಬಾಲಕನನ್ನು ರಕ್ಷಿಸಿದ ಶ್ವಾನಗಳು
ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ
ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ