Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಚಾನ್ಸ್ ಸಿಕ್ಕಿಲ್ಲವೆಂದು ಅರ್ಧದಲ್ಲೇ ತವರಿಗೆ ಮರಳಿದ ಆಸ್ಟ್ರೇಲಿಯಾ ಆಟಗಾರ..!

Indiua vs Australia Test: ಭಾರತದ ವಿರುದ್ಧದ ಟೆಸ್ಟ್ ಸರಣಿಯಿಂದ ಈಗಾಗಲೇ ಆಸ್ಟ್ರೇಲಿಯಾ ತಂಡದ ಪ್ರಮುಖ ಆಟಗಾರರಾದ ಡೇವಿಡ್ ವಾರ್ನರ್ ಹಾಗೂ ಜೋಶ್ ಹ್ಯಾಝಲ್​ವುಡ್ ಹೊರಗುಳಿದಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Feb 22, 2023 | 9:43 PM

ಭಾರತ-ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯು ಏಕಮುಖದತ್ತ ಸಾಗುತ್ತಿದೆ. ಮೊದಲೆರಡು ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಟೀಮ್ ಇಂಡಿಯಾ 2-0 ಅಂತರದಿಂದ ಮುನ್ನಡೆ ಸಾಧಿಸಿದೆ. ಮತ್ತೊಂದೆಡೆ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಆಸ್ಟ್ರೇಲಿಯಾ ತಂಡಕ್ಕೆ ಇದೀಗ ಪ್ರಮುಖ ಆಲ್​ರೌಂಡರ್ ಆಟಗಾರ ಕೈಕೊಟ್ಟಿದ್ದಾರೆ.

ಭಾರತ-ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯು ಏಕಮುಖದತ್ತ ಸಾಗುತ್ತಿದೆ. ಮೊದಲೆರಡು ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಟೀಮ್ ಇಂಡಿಯಾ 2-0 ಅಂತರದಿಂದ ಮುನ್ನಡೆ ಸಾಧಿಸಿದೆ. ಮತ್ತೊಂದೆಡೆ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಆಸ್ಟ್ರೇಲಿಯಾ ತಂಡಕ್ಕೆ ಇದೀಗ ಪ್ರಮುಖ ಆಲ್​ರೌಂಡರ್ ಆಟಗಾರ ಕೈಕೊಟ್ಟಿದ್ದಾರೆ.

1 / 7
ಹೌದು, ಮೊದಲ ಎರಡು ಪಂದ್ಯಗಳ ವೇಳೆ ತಂಡದಲ್ಲಿ ಪ್ರಮುಖ ಸ್ಪಿನ್ ಆಲ್​ರೌಂಡರ್​ ಅಷ್ಟನ್ ಅಗರ್ ಆಸ್ಟ್ರೇಲಿಯಾಗೆ ಮರಳಿದ್ದಾರೆ. ಇದಕ್ಕೆ ಮುಖ್ಯ ಕಾರಣ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ಸಿಗದಿರುವುದು ಎಂಬ ವಿಷಯ ಇದೀಗ ಬಹಿರಂಗವಾಗಿದೆ.

ಹೌದು, ಮೊದಲ ಎರಡು ಪಂದ್ಯಗಳ ವೇಳೆ ತಂಡದಲ್ಲಿ ಪ್ರಮುಖ ಸ್ಪಿನ್ ಆಲ್​ರೌಂಡರ್​ ಅಷ್ಟನ್ ಅಗರ್ ಆಸ್ಟ್ರೇಲಿಯಾಗೆ ಮರಳಿದ್ದಾರೆ. ಇದಕ್ಕೆ ಮುಖ್ಯ ಕಾರಣ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ಸಿಗದಿರುವುದು ಎಂಬ ವಿಷಯ ಇದೀಗ ಬಹಿರಂಗವಾಗಿದೆ.

2 / 7
ಭಾರತ ಪ್ರವಾಸಕ್ಕೂ ಮುನ್ನ ಸಿಡ್ನಿಯಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ನಾಥನ್ ಲಿಯಾನ್ ಜೊತೆ 2ನೇ ಸ್ಪಿನ್ನರ್ ಆಗಿ ಅಷ್ಟನ್ ಅಗರ್ ಕಣಕ್ಕಿಳಿದಿದ್ದರು. ಅಲ್ಲದೆ ಉತ್ತಮ ಪ್ರದರ್ಶನವನ್ನೂ ಸಹ ನೀಡಿದ್ದರು. ಆದರೆ ನಾಗ್ಪುರ ಟೆಸ್ಟ್​ನಲ್ಲಿ ಅಗರ್ ಅವರನ್ನು ಹೊರಗಿಟ್ಟು, ಟಾಡ್ ಮರ್ಫಿಗೆ ಚಾನ್ಸ್​ ನೀಡಲಾಯಿತು.

ಭಾರತ ಪ್ರವಾಸಕ್ಕೂ ಮುನ್ನ ಸಿಡ್ನಿಯಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ನಾಥನ್ ಲಿಯಾನ್ ಜೊತೆ 2ನೇ ಸ್ಪಿನ್ನರ್ ಆಗಿ ಅಷ್ಟನ್ ಅಗರ್ ಕಣಕ್ಕಿಳಿದಿದ್ದರು. ಅಲ್ಲದೆ ಉತ್ತಮ ಪ್ರದರ್ಶನವನ್ನೂ ಸಹ ನೀಡಿದ್ದರು. ಆದರೆ ನಾಗ್ಪುರ ಟೆಸ್ಟ್​ನಲ್ಲಿ ಅಗರ್ ಅವರನ್ನು ಹೊರಗಿಟ್ಟು, ಟಾಡ್ ಮರ್ಫಿಗೆ ಚಾನ್ಸ್​ ನೀಡಲಾಯಿತು.

3 / 7
ಇನ್ನು ದೆಹಲಿ ಟೆಸ್ಟ್ ಪಂದ್ಯದಿಂದಲೂ ಅಗರ್ ಅವರನ್ನು ಕೈ ಬಿಡಲಾಯಿತು. ಬದಲಾಗಿ ಮ್ಯಾಥ್ಯೂ ಕುಹ್ನೆಮನ್​ಗೆ ಅವಕಾಶ ನೀಡಲಾಗಿತ್ತು. ಇದರಿಂದ ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಷ್ಟನ್ ಅಗರ್ ಅಸಮಾಧಾನ ಹೊರಹಾಕಿದ್ದಾರೆ.

ಇನ್ನು ದೆಹಲಿ ಟೆಸ್ಟ್ ಪಂದ್ಯದಿಂದಲೂ ಅಗರ್ ಅವರನ್ನು ಕೈ ಬಿಡಲಾಯಿತು. ಬದಲಾಗಿ ಮ್ಯಾಥ್ಯೂ ಕುಹ್ನೆಮನ್​ಗೆ ಅವಕಾಶ ನೀಡಲಾಗಿತ್ತು. ಇದರಿಂದ ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಷ್ಟನ್ ಅಗರ್ ಅಸಮಾಧಾನ ಹೊರಹಾಕಿದ್ದಾರೆ.

4 / 7
ಈ ಬಗ್ಗೆ ಆಸ್ಟ್ರೇಲಿಯಾದ ಆಯ್ಕೆಗಾರ ಟೋನಿ ಡೊಡೆಮೈಡ್ ಅವರೊಂದಿಗೆ ಚರ್ಚಿಸಿರುವ ಅಷ್ಟನ್ ಅಗರ್ ತಮ್ಮ ತಂಡದಿಂದ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ಅವರ ಕೋರಿಕೆಯಂತೆ ಇದೀಗ ಆಸ್ಟ್ರೇಲಿಯಾ ತಂಡದಿಂದ ಅನುಭವಿ ಆಲ್​ರೌಂಡರ್ ಅನ್ನು ಕೈ ಬಿಡಲಾಗಿದೆ.

ಈ ಬಗ್ಗೆ ಆಸ್ಟ್ರೇಲಿಯಾದ ಆಯ್ಕೆಗಾರ ಟೋನಿ ಡೊಡೆಮೈಡ್ ಅವರೊಂದಿಗೆ ಚರ್ಚಿಸಿರುವ ಅಷ್ಟನ್ ಅಗರ್ ತಮ್ಮ ತಂಡದಿಂದ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ಅವರ ಕೋರಿಕೆಯಂತೆ ಇದೀಗ ಆಸ್ಟ್ರೇಲಿಯಾ ತಂಡದಿಂದ ಅನುಭವಿ ಆಲ್​ರೌಂಡರ್ ಅನ್ನು ಕೈ ಬಿಡಲಾಗಿದೆ.

5 / 7
ಭಾರತದಲ್ಲಿ ಬೆಂಚ್ ಕಾಯುವ ಬದಲು ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಶೆಫೀಲ್ಡ್ ಶೀಲ್ಡ್ ಮತ್ತು ಮಾರ್ಷ್ ಕಪ್​ನಲ್ಲಿ ಭಾಗವಹಿಸಲು ಅಷ್ಟನ್ ಅಗರ್ ನಿರ್ಧರಿಸಿದ್ದಾರೆ. ಅದರಂತೆ ಇಂದೋರ್ ಟೆಸ್ಟ್​ಗೂ ಮುನ್ನ ಆಸೀಸ್ ತಂಡದ ಪ್ರಮುಖ ಸ್ಪಿನ್ನರ್ ತಂಡದಿಂದ ಹೊರನಡೆದಿರುವುದು ಖಚಿತವಾಗಿದೆ.

ಭಾರತದಲ್ಲಿ ಬೆಂಚ್ ಕಾಯುವ ಬದಲು ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಶೆಫೀಲ್ಡ್ ಶೀಲ್ಡ್ ಮತ್ತು ಮಾರ್ಷ್ ಕಪ್​ನಲ್ಲಿ ಭಾಗವಹಿಸಲು ಅಷ್ಟನ್ ಅಗರ್ ನಿರ್ಧರಿಸಿದ್ದಾರೆ. ಅದರಂತೆ ಇಂದೋರ್ ಟೆಸ್ಟ್​ಗೂ ಮುನ್ನ ಆಸೀಸ್ ತಂಡದ ಪ್ರಮುಖ ಸ್ಪಿನ್ನರ್ ತಂಡದಿಂದ ಹೊರನಡೆದಿರುವುದು ಖಚಿತವಾಗಿದೆ.

6 / 7
ಭಾರತದ ವಿರುದ್ಧದ ಟೆಸ್ಟ್ ಸರಣಿಯಿಂದ ಈಗಾಗಲೇ ಆಸ್ಟ್ರೇಲಿಯಾ ತಂಡದ ಪ್ರಮುಖ ಆಟಗಾರರಾದ ಡೇವಿಡ್ ವಾರ್ನರ್ ಹಾಗೂ ಜೋಶ್ ಹ್ಯಾಝಲ್​ವುಡ್ ಹೊರಗುಳಿದಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಈ ಇಬ್ಬರು ಆಟಗಾರರು ತವರಿಗೆ ಮರಳಿದ್ದು, ಹೀಗಾಗಿ ಮುಂದಿನ 2 ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಇದೀಗ ಅಗರ್ ಕೂಡ ಹೊರನಡೆದಿರುವುದು ಆಸ್ಟ್ರೇಲಿಯಾ ತಂಡಕ್ಕೆ ಹಿನ್ನಡೆಯನ್ನುಂಟು ಮಾಡಲಿದೆ.

ಭಾರತದ ವಿರುದ್ಧದ ಟೆಸ್ಟ್ ಸರಣಿಯಿಂದ ಈಗಾಗಲೇ ಆಸ್ಟ್ರೇಲಿಯಾ ತಂಡದ ಪ್ರಮುಖ ಆಟಗಾರರಾದ ಡೇವಿಡ್ ವಾರ್ನರ್ ಹಾಗೂ ಜೋಶ್ ಹ್ಯಾಝಲ್​ವುಡ್ ಹೊರಗುಳಿದಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಈ ಇಬ್ಬರು ಆಟಗಾರರು ತವರಿಗೆ ಮರಳಿದ್ದು, ಹೀಗಾಗಿ ಮುಂದಿನ 2 ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಇದೀಗ ಅಗರ್ ಕೂಡ ಹೊರನಡೆದಿರುವುದು ಆಸ್ಟ್ರೇಲಿಯಾ ತಂಡಕ್ಕೆ ಹಿನ್ನಡೆಯನ್ನುಂಟು ಮಾಡಲಿದೆ.

7 / 7
Follow us
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ