AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಚಾನ್ಸ್ ಸಿಕ್ಕಿಲ್ಲವೆಂದು ಅರ್ಧದಲ್ಲೇ ತವರಿಗೆ ಮರಳಿದ ಆಸ್ಟ್ರೇಲಿಯಾ ಆಟಗಾರ..!

Indiua vs Australia Test: ಭಾರತದ ವಿರುದ್ಧದ ಟೆಸ್ಟ್ ಸರಣಿಯಿಂದ ಈಗಾಗಲೇ ಆಸ್ಟ್ರೇಲಿಯಾ ತಂಡದ ಪ್ರಮುಖ ಆಟಗಾರರಾದ ಡೇವಿಡ್ ವಾರ್ನರ್ ಹಾಗೂ ಜೋಶ್ ಹ್ಯಾಝಲ್​ವುಡ್ ಹೊರಗುಳಿದಿದ್ದಾರೆ.

TV9 Web
| Edited By: |

Updated on: Feb 22, 2023 | 9:43 PM

Share
ಭಾರತ-ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯು ಏಕಮುಖದತ್ತ ಸಾಗುತ್ತಿದೆ. ಮೊದಲೆರಡು ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಟೀಮ್ ಇಂಡಿಯಾ 2-0 ಅಂತರದಿಂದ ಮುನ್ನಡೆ ಸಾಧಿಸಿದೆ. ಮತ್ತೊಂದೆಡೆ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಆಸ್ಟ್ರೇಲಿಯಾ ತಂಡಕ್ಕೆ ಇದೀಗ ಪ್ರಮುಖ ಆಲ್​ರೌಂಡರ್ ಆಟಗಾರ ಕೈಕೊಟ್ಟಿದ್ದಾರೆ.

ಭಾರತ-ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯು ಏಕಮುಖದತ್ತ ಸಾಗುತ್ತಿದೆ. ಮೊದಲೆರಡು ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಟೀಮ್ ಇಂಡಿಯಾ 2-0 ಅಂತರದಿಂದ ಮುನ್ನಡೆ ಸಾಧಿಸಿದೆ. ಮತ್ತೊಂದೆಡೆ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಆಸ್ಟ್ರೇಲಿಯಾ ತಂಡಕ್ಕೆ ಇದೀಗ ಪ್ರಮುಖ ಆಲ್​ರೌಂಡರ್ ಆಟಗಾರ ಕೈಕೊಟ್ಟಿದ್ದಾರೆ.

1 / 7
ಹೌದು, ಮೊದಲ ಎರಡು ಪಂದ್ಯಗಳ ವೇಳೆ ತಂಡದಲ್ಲಿ ಪ್ರಮುಖ ಸ್ಪಿನ್ ಆಲ್​ರೌಂಡರ್​ ಅಷ್ಟನ್ ಅಗರ್ ಆಸ್ಟ್ರೇಲಿಯಾಗೆ ಮರಳಿದ್ದಾರೆ. ಇದಕ್ಕೆ ಮುಖ್ಯ ಕಾರಣ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ಸಿಗದಿರುವುದು ಎಂಬ ವಿಷಯ ಇದೀಗ ಬಹಿರಂಗವಾಗಿದೆ.

ಹೌದು, ಮೊದಲ ಎರಡು ಪಂದ್ಯಗಳ ವೇಳೆ ತಂಡದಲ್ಲಿ ಪ್ರಮುಖ ಸ್ಪಿನ್ ಆಲ್​ರೌಂಡರ್​ ಅಷ್ಟನ್ ಅಗರ್ ಆಸ್ಟ್ರೇಲಿಯಾಗೆ ಮರಳಿದ್ದಾರೆ. ಇದಕ್ಕೆ ಮುಖ್ಯ ಕಾರಣ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ಸಿಗದಿರುವುದು ಎಂಬ ವಿಷಯ ಇದೀಗ ಬಹಿರಂಗವಾಗಿದೆ.

2 / 7
ಭಾರತ ಪ್ರವಾಸಕ್ಕೂ ಮುನ್ನ ಸಿಡ್ನಿಯಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ನಾಥನ್ ಲಿಯಾನ್ ಜೊತೆ 2ನೇ ಸ್ಪಿನ್ನರ್ ಆಗಿ ಅಷ್ಟನ್ ಅಗರ್ ಕಣಕ್ಕಿಳಿದಿದ್ದರು. ಅಲ್ಲದೆ ಉತ್ತಮ ಪ್ರದರ್ಶನವನ್ನೂ ಸಹ ನೀಡಿದ್ದರು. ಆದರೆ ನಾಗ್ಪುರ ಟೆಸ್ಟ್​ನಲ್ಲಿ ಅಗರ್ ಅವರನ್ನು ಹೊರಗಿಟ್ಟು, ಟಾಡ್ ಮರ್ಫಿಗೆ ಚಾನ್ಸ್​ ನೀಡಲಾಯಿತು.

ಭಾರತ ಪ್ರವಾಸಕ್ಕೂ ಮುನ್ನ ಸಿಡ್ನಿಯಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ನಾಥನ್ ಲಿಯಾನ್ ಜೊತೆ 2ನೇ ಸ್ಪಿನ್ನರ್ ಆಗಿ ಅಷ್ಟನ್ ಅಗರ್ ಕಣಕ್ಕಿಳಿದಿದ್ದರು. ಅಲ್ಲದೆ ಉತ್ತಮ ಪ್ರದರ್ಶನವನ್ನೂ ಸಹ ನೀಡಿದ್ದರು. ಆದರೆ ನಾಗ್ಪುರ ಟೆಸ್ಟ್​ನಲ್ಲಿ ಅಗರ್ ಅವರನ್ನು ಹೊರಗಿಟ್ಟು, ಟಾಡ್ ಮರ್ಫಿಗೆ ಚಾನ್ಸ್​ ನೀಡಲಾಯಿತು.

3 / 7
ಇನ್ನು ದೆಹಲಿ ಟೆಸ್ಟ್ ಪಂದ್ಯದಿಂದಲೂ ಅಗರ್ ಅವರನ್ನು ಕೈ ಬಿಡಲಾಯಿತು. ಬದಲಾಗಿ ಮ್ಯಾಥ್ಯೂ ಕುಹ್ನೆಮನ್​ಗೆ ಅವಕಾಶ ನೀಡಲಾಗಿತ್ತು. ಇದರಿಂದ ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಷ್ಟನ್ ಅಗರ್ ಅಸಮಾಧಾನ ಹೊರಹಾಕಿದ್ದಾರೆ.

ಇನ್ನು ದೆಹಲಿ ಟೆಸ್ಟ್ ಪಂದ್ಯದಿಂದಲೂ ಅಗರ್ ಅವರನ್ನು ಕೈ ಬಿಡಲಾಯಿತು. ಬದಲಾಗಿ ಮ್ಯಾಥ್ಯೂ ಕುಹ್ನೆಮನ್​ಗೆ ಅವಕಾಶ ನೀಡಲಾಗಿತ್ತು. ಇದರಿಂದ ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಷ್ಟನ್ ಅಗರ್ ಅಸಮಾಧಾನ ಹೊರಹಾಕಿದ್ದಾರೆ.

4 / 7
ಈ ಬಗ್ಗೆ ಆಸ್ಟ್ರೇಲಿಯಾದ ಆಯ್ಕೆಗಾರ ಟೋನಿ ಡೊಡೆಮೈಡ್ ಅವರೊಂದಿಗೆ ಚರ್ಚಿಸಿರುವ ಅಷ್ಟನ್ ಅಗರ್ ತಮ್ಮ ತಂಡದಿಂದ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ಅವರ ಕೋರಿಕೆಯಂತೆ ಇದೀಗ ಆಸ್ಟ್ರೇಲಿಯಾ ತಂಡದಿಂದ ಅನುಭವಿ ಆಲ್​ರೌಂಡರ್ ಅನ್ನು ಕೈ ಬಿಡಲಾಗಿದೆ.

ಈ ಬಗ್ಗೆ ಆಸ್ಟ್ರೇಲಿಯಾದ ಆಯ್ಕೆಗಾರ ಟೋನಿ ಡೊಡೆಮೈಡ್ ಅವರೊಂದಿಗೆ ಚರ್ಚಿಸಿರುವ ಅಷ್ಟನ್ ಅಗರ್ ತಮ್ಮ ತಂಡದಿಂದ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ಅವರ ಕೋರಿಕೆಯಂತೆ ಇದೀಗ ಆಸ್ಟ್ರೇಲಿಯಾ ತಂಡದಿಂದ ಅನುಭವಿ ಆಲ್​ರೌಂಡರ್ ಅನ್ನು ಕೈ ಬಿಡಲಾಗಿದೆ.

5 / 7
ಭಾರತದಲ್ಲಿ ಬೆಂಚ್ ಕಾಯುವ ಬದಲು ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಶೆಫೀಲ್ಡ್ ಶೀಲ್ಡ್ ಮತ್ತು ಮಾರ್ಷ್ ಕಪ್​ನಲ್ಲಿ ಭಾಗವಹಿಸಲು ಅಷ್ಟನ್ ಅಗರ್ ನಿರ್ಧರಿಸಿದ್ದಾರೆ. ಅದರಂತೆ ಇಂದೋರ್ ಟೆಸ್ಟ್​ಗೂ ಮುನ್ನ ಆಸೀಸ್ ತಂಡದ ಪ್ರಮುಖ ಸ್ಪಿನ್ನರ್ ತಂಡದಿಂದ ಹೊರನಡೆದಿರುವುದು ಖಚಿತವಾಗಿದೆ.

ಭಾರತದಲ್ಲಿ ಬೆಂಚ್ ಕಾಯುವ ಬದಲು ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಶೆಫೀಲ್ಡ್ ಶೀಲ್ಡ್ ಮತ್ತು ಮಾರ್ಷ್ ಕಪ್​ನಲ್ಲಿ ಭಾಗವಹಿಸಲು ಅಷ್ಟನ್ ಅಗರ್ ನಿರ್ಧರಿಸಿದ್ದಾರೆ. ಅದರಂತೆ ಇಂದೋರ್ ಟೆಸ್ಟ್​ಗೂ ಮುನ್ನ ಆಸೀಸ್ ತಂಡದ ಪ್ರಮುಖ ಸ್ಪಿನ್ನರ್ ತಂಡದಿಂದ ಹೊರನಡೆದಿರುವುದು ಖಚಿತವಾಗಿದೆ.

6 / 7
ಭಾರತದ ವಿರುದ್ಧದ ಟೆಸ್ಟ್ ಸರಣಿಯಿಂದ ಈಗಾಗಲೇ ಆಸ್ಟ್ರೇಲಿಯಾ ತಂಡದ ಪ್ರಮುಖ ಆಟಗಾರರಾದ ಡೇವಿಡ್ ವಾರ್ನರ್ ಹಾಗೂ ಜೋಶ್ ಹ್ಯಾಝಲ್​ವುಡ್ ಹೊರಗುಳಿದಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಈ ಇಬ್ಬರು ಆಟಗಾರರು ತವರಿಗೆ ಮರಳಿದ್ದು, ಹೀಗಾಗಿ ಮುಂದಿನ 2 ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಇದೀಗ ಅಗರ್ ಕೂಡ ಹೊರನಡೆದಿರುವುದು ಆಸ್ಟ್ರೇಲಿಯಾ ತಂಡಕ್ಕೆ ಹಿನ್ನಡೆಯನ್ನುಂಟು ಮಾಡಲಿದೆ.

ಭಾರತದ ವಿರುದ್ಧದ ಟೆಸ್ಟ್ ಸರಣಿಯಿಂದ ಈಗಾಗಲೇ ಆಸ್ಟ್ರೇಲಿಯಾ ತಂಡದ ಪ್ರಮುಖ ಆಟಗಾರರಾದ ಡೇವಿಡ್ ವಾರ್ನರ್ ಹಾಗೂ ಜೋಶ್ ಹ್ಯಾಝಲ್​ವುಡ್ ಹೊರಗುಳಿದಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಈ ಇಬ್ಬರು ಆಟಗಾರರು ತವರಿಗೆ ಮರಳಿದ್ದು, ಹೀಗಾಗಿ ಮುಂದಿನ 2 ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಇದೀಗ ಅಗರ್ ಕೂಡ ಹೊರನಡೆದಿರುವುದು ಆಸ್ಟ್ರೇಲಿಯಾ ತಂಡಕ್ಕೆ ಹಿನ್ನಡೆಯನ್ನುಂಟು ಮಾಡಲಿದೆ.

7 / 7
Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್